Homeಕರ್ನಾಟಕಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿಯಾಗಿದ್ದ, ಅಂತವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶಾಲೆಗಳಲ್ಲಿ ಮಕ್ಕಳಿಗೆ ಶಸ್ತ್ರಾಭ್ಯಾಸವನ್ನು ನೀಡಲು ಬಜರಂಗದಳ ಮುಖಂಡರು ಮುಂದಾಗಿದ್ದು, ಏರ್‌ಗನ್ ಶಸ್ತ್ರಾಭ್ಯಾಸ ಎಂದು ಹೇಳಿದ್ದಾರೆ. ಇವರು ಮಕ್ಕಳನ್ನು ಸಹ ಉಗ್ರಗಾಮಿಗಳ ಗುಂಪುಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? ಅಥವಾ ಸಮಾಜದಲ್ಲಿ ಶಾಂತಿ ಮೂಡಿಸುವ ನಿಟ್ಟಿನಲ್ಲಿ ಉತ್ತೇಜಿಸಲು ಹೊರಟಿದ್ದಾರಾ? ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವರು ಹಾಸನದ ಅರಕಲಗೂಡು ತಾಲ್ಲೂಕಿನ, ಮಲ್ಲಿತಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಒಂದು ಕಡೆ ಸಮಾಜದ ಭಾವೈಕ್ಯತೆ ಹಾಗೂ ಸಾಮರಸ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ ಸಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇದನ್ನೇ ಗಾಂಧೀಜಿ ಸಹ ಬಯಸಿದ್ದರು. ಶಸ್ತ್ರದಿಂದ ನಮ್ಮ ಹೋರಾಟ ಅಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಹೋರಾಟ ಹಾಗೂ ಜಯಗಳು ನಮ್ಮ ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತದ್ದಾಗಬೇಕು. ಶಾಂತಿಯುತ ಹೋರಾಟದಿಂದ ನಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬೇಕೆ ಹೊರತು ಶಸ್ತ್ರಾಭ್ಯಾಸ ಗಳನ್ನು ಮಾಡಿ ಅಥವಾ ಶಸ್ತ್ರಗಳನ್ನು ಇಟ್ಟುಕೊಂಡು ಪರಿಹಾರ ಪಡೆಯಲು ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು: ಭಗತ್‌‌ ಸಿಂಗ್

ಪಠ್ಯಕ್ರಮದ ಬದಲಾವಣೆ ಕುರಿತು ಮಾತನಾಡಿದ ಅವರು, “ಯಾವುದೇ ವಿಚಾರವಿರಲಿ ಮಕ್ಕಳಿಗೆ ಅನುಕೂಲವಾಗುವ ವಿಚಾರಗಳನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಬೇಕು. ಗುಣಾತ್ಮಕವಾದ ಶಿಕ್ಷಣ ಬೇಕು. ಮಕ್ಕಳಿಗೆ ಮೊದಲು ಕಲಿಸಬೇಕಾದ್ದು ಮನುಷ್ಯತ್ವವೇ ಹೊರತು ಯಾವುದೇ ವ್ಯಕ್ತಿಯ ಬಗ್ಗೆ ಅಲ್ಲ. ಹೃದಯ ವೈಶಾಲ್ಯತೆ ಹಾಗೂ ಬದುಕು ಕಲ್ಪಿಸಿಕೊಳ್ಳುವ ಕಲಿಕೆಯನ್ನು ನೀಡಬೇಕು ಎನ್ನುವುದು ನನ್ನ ಆಶಯ” ಎಂದು ಅವರು ಹೇಳಿದ್ದಾರೆ.

“ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿ. ಅಂತಹವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ. ಗೋಡ್ಸೆ, ಸಾವರ್ಕರ್ ಅಂಥವರ ಪಠ್ಯವನ್ನು ತರುತ್ತಾರೋ ಎಂಬ ಬಿಜೆಪಿಯ ಅಜೆಂಡಾ ನನಗೂ ಗೊತ್ತಿಲ್ಲ. ಇದರಿಂದ ಈ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಆಗುವ ವಾತಾವರಣ ಬಿಜೆಪಿಯವರಿಗೆ ಬೇಕಾಗಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ‘ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!’- ‘ಭಗತ್‌ ಸಿಂಗ್ ಜೈಲ್ ಡೈರಿ’

“ದಿ ಕಾಶ್ಮೀರ ಪೈಲ್ಸ್ ಚಿತ್ರ ನಿರ್ಮಿಸಿದಿರಿ. ಇದರಿಂದ ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಅವಕಾಶ ನೀಡಿದ್ದೀರಾ? ಅಲ್ಲಿನ ರಾಜಕಾರಣಿಗಳು ಯಾವ ರೀತಿ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗಮನಿಸಿದ್ದೇನೆ. ಇಲ್ಲಿ ದ್ವೇಷದ ವಾತಾವರಣ ಬಿತ್ತುವ ಕಾರ್ಯವನ್ನು ಮಾಡಬೇಡಿ. ಪ್ರತಿಯೊಬ್ಬರಲ್ಲೂ ಸಹೋದರತ್ವ ಸಾಮರಸ್ಯ ಹಾಗೂ ಭಾವೈಕ್ಯತೆ ಹೇಗಿರಬೇಕು ಎಂಬ ಬಗ್ಗೆ ಗಮನ ನೀಡಿ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...