Homeಕರ್ನಾಟಕಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿಯಾಗಿದ್ದ, ಅಂತವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶಾಲೆಗಳಲ್ಲಿ ಮಕ್ಕಳಿಗೆ ಶಸ್ತ್ರಾಭ್ಯಾಸವನ್ನು ನೀಡಲು ಬಜರಂಗದಳ ಮುಖಂಡರು ಮುಂದಾಗಿದ್ದು, ಏರ್‌ಗನ್ ಶಸ್ತ್ರಾಭ್ಯಾಸ ಎಂದು ಹೇಳಿದ್ದಾರೆ. ಇವರು ಮಕ್ಕಳನ್ನು ಸಹ ಉಗ್ರಗಾಮಿಗಳ ಗುಂಪುಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? ಅಥವಾ ಸಮಾಜದಲ್ಲಿ ಶಾಂತಿ ಮೂಡಿಸುವ ನಿಟ್ಟಿನಲ್ಲಿ ಉತ್ತೇಜಿಸಲು ಹೊರಟಿದ್ದಾರಾ? ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವರು ಹಾಸನದ ಅರಕಲಗೂಡು ತಾಲ್ಲೂಕಿನ, ಮಲ್ಲಿತಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಒಂದು ಕಡೆ ಸಮಾಜದ ಭಾವೈಕ್ಯತೆ ಹಾಗೂ ಸಾಮರಸ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ ಸಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇದನ್ನೇ ಗಾಂಧೀಜಿ ಸಹ ಬಯಸಿದ್ದರು. ಶಸ್ತ್ರದಿಂದ ನಮ್ಮ ಹೋರಾಟ ಅಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಹೋರಾಟ ಹಾಗೂ ಜಯಗಳು ನಮ್ಮ ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತದ್ದಾಗಬೇಕು. ಶಾಂತಿಯುತ ಹೋರಾಟದಿಂದ ನಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬೇಕೆ ಹೊರತು ಶಸ್ತ್ರಾಭ್ಯಾಸ ಗಳನ್ನು ಮಾಡಿ ಅಥವಾ ಶಸ್ತ್ರಗಳನ್ನು ಇಟ್ಟುಕೊಂಡು ಪರಿಹಾರ ಪಡೆಯಲು ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು: ಭಗತ್‌‌ ಸಿಂಗ್

ಪಠ್ಯಕ್ರಮದ ಬದಲಾವಣೆ ಕುರಿತು ಮಾತನಾಡಿದ ಅವರು, “ಯಾವುದೇ ವಿಚಾರವಿರಲಿ ಮಕ್ಕಳಿಗೆ ಅನುಕೂಲವಾಗುವ ವಿಚಾರಗಳನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಬೇಕು. ಗುಣಾತ್ಮಕವಾದ ಶಿಕ್ಷಣ ಬೇಕು. ಮಕ್ಕಳಿಗೆ ಮೊದಲು ಕಲಿಸಬೇಕಾದ್ದು ಮನುಷ್ಯತ್ವವೇ ಹೊರತು ಯಾವುದೇ ವ್ಯಕ್ತಿಯ ಬಗ್ಗೆ ಅಲ್ಲ. ಹೃದಯ ವೈಶಾಲ್ಯತೆ ಹಾಗೂ ಬದುಕು ಕಲ್ಪಿಸಿಕೊಳ್ಳುವ ಕಲಿಕೆಯನ್ನು ನೀಡಬೇಕು ಎನ್ನುವುದು ನನ್ನ ಆಶಯ” ಎಂದು ಅವರು ಹೇಳಿದ್ದಾರೆ.

“ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿ. ಅಂತಹವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ. ಗೋಡ್ಸೆ, ಸಾವರ್ಕರ್ ಅಂಥವರ ಪಠ್ಯವನ್ನು ತರುತ್ತಾರೋ ಎಂಬ ಬಿಜೆಪಿಯ ಅಜೆಂಡಾ ನನಗೂ ಗೊತ್ತಿಲ್ಲ. ಇದರಿಂದ ಈ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಆಗುವ ವಾತಾವರಣ ಬಿಜೆಪಿಯವರಿಗೆ ಬೇಕಾಗಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ‘ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!’- ‘ಭಗತ್‌ ಸಿಂಗ್ ಜೈಲ್ ಡೈರಿ’

“ದಿ ಕಾಶ್ಮೀರ ಪೈಲ್ಸ್ ಚಿತ್ರ ನಿರ್ಮಿಸಿದಿರಿ. ಇದರಿಂದ ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಅವಕಾಶ ನೀಡಿದ್ದೀರಾ? ಅಲ್ಲಿನ ರಾಜಕಾರಣಿಗಳು ಯಾವ ರೀತಿ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗಮನಿಸಿದ್ದೇನೆ. ಇಲ್ಲಿ ದ್ವೇಷದ ವಾತಾವರಣ ಬಿತ್ತುವ ಕಾರ್ಯವನ್ನು ಮಾಡಬೇಡಿ. ಪ್ರತಿಯೊಬ್ಬರಲ್ಲೂ ಸಹೋದರತ್ವ ಸಾಮರಸ್ಯ ಹಾಗೂ ಭಾವೈಕ್ಯತೆ ಹೇಗಿರಬೇಕು ಎಂಬ ಬಗ್ಗೆ ಗಮನ ನೀಡಿ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...