Homeಕರ್ನಾಟಕಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿಯಾಗಿದ್ದ, ಅಂತವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶಾಲೆಗಳಲ್ಲಿ ಮಕ್ಕಳಿಗೆ ಶಸ್ತ್ರಾಭ್ಯಾಸವನ್ನು ನೀಡಲು ಬಜರಂಗದಳ ಮುಖಂಡರು ಮುಂದಾಗಿದ್ದು, ಏರ್‌ಗನ್ ಶಸ್ತ್ರಾಭ್ಯಾಸ ಎಂದು ಹೇಳಿದ್ದಾರೆ. ಇವರು ಮಕ್ಕಳನ್ನು ಸಹ ಉಗ್ರಗಾಮಿಗಳ ಗುಂಪುಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? ಅಥವಾ ಸಮಾಜದಲ್ಲಿ ಶಾಂತಿ ಮೂಡಿಸುವ ನಿಟ್ಟಿನಲ್ಲಿ ಉತ್ತೇಜಿಸಲು ಹೊರಟಿದ್ದಾರಾ? ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವರು ಹಾಸನದ ಅರಕಲಗೂಡು ತಾಲ್ಲೂಕಿನ, ಮಲ್ಲಿತಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಒಂದು ಕಡೆ ಸಮಾಜದ ಭಾವೈಕ್ಯತೆ ಹಾಗೂ ಸಾಮರಸ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ ಸಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇದನ್ನೇ ಗಾಂಧೀಜಿ ಸಹ ಬಯಸಿದ್ದರು. ಶಸ್ತ್ರದಿಂದ ನಮ್ಮ ಹೋರಾಟ ಅಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಹೋರಾಟ ಹಾಗೂ ಜಯಗಳು ನಮ್ಮ ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತದ್ದಾಗಬೇಕು. ಶಾಂತಿಯುತ ಹೋರಾಟದಿಂದ ನಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬೇಕೆ ಹೊರತು ಶಸ್ತ್ರಾಭ್ಯಾಸ ಗಳನ್ನು ಮಾಡಿ ಅಥವಾ ಶಸ್ತ್ರಗಳನ್ನು ಇಟ್ಟುಕೊಂಡು ಪರಿಹಾರ ಪಡೆಯಲು ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು: ಭಗತ್‌‌ ಸಿಂಗ್

ಪಠ್ಯಕ್ರಮದ ಬದಲಾವಣೆ ಕುರಿತು ಮಾತನಾಡಿದ ಅವರು, “ಯಾವುದೇ ವಿಚಾರವಿರಲಿ ಮಕ್ಕಳಿಗೆ ಅನುಕೂಲವಾಗುವ ವಿಚಾರಗಳನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಬೇಕು. ಗುಣಾತ್ಮಕವಾದ ಶಿಕ್ಷಣ ಬೇಕು. ಮಕ್ಕಳಿಗೆ ಮೊದಲು ಕಲಿಸಬೇಕಾದ್ದು ಮನುಷ್ಯತ್ವವೇ ಹೊರತು ಯಾವುದೇ ವ್ಯಕ್ತಿಯ ಬಗ್ಗೆ ಅಲ್ಲ. ಹೃದಯ ವೈಶಾಲ್ಯತೆ ಹಾಗೂ ಬದುಕು ಕಲ್ಪಿಸಿಕೊಳ್ಳುವ ಕಲಿಕೆಯನ್ನು ನೀಡಬೇಕು ಎನ್ನುವುದು ನನ್ನ ಆಶಯ” ಎಂದು ಅವರು ಹೇಳಿದ್ದಾರೆ.

“ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿ. ಅಂತಹವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ. ಗೋಡ್ಸೆ, ಸಾವರ್ಕರ್ ಅಂಥವರ ಪಠ್ಯವನ್ನು ತರುತ್ತಾರೋ ಎಂಬ ಬಿಜೆಪಿಯ ಅಜೆಂಡಾ ನನಗೂ ಗೊತ್ತಿಲ್ಲ. ಇದರಿಂದ ಈ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಆಗುವ ವಾತಾವರಣ ಬಿಜೆಪಿಯವರಿಗೆ ಬೇಕಾಗಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ‘ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!’- ‘ಭಗತ್‌ ಸಿಂಗ್ ಜೈಲ್ ಡೈರಿ’

“ದಿ ಕಾಶ್ಮೀರ ಪೈಲ್ಸ್ ಚಿತ್ರ ನಿರ್ಮಿಸಿದಿರಿ. ಇದರಿಂದ ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಅವಕಾಶ ನೀಡಿದ್ದೀರಾ? ಅಲ್ಲಿನ ರಾಜಕಾರಣಿಗಳು ಯಾವ ರೀತಿ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗಮನಿಸಿದ್ದೇನೆ. ಇಲ್ಲಿ ದ್ವೇಷದ ವಾತಾವರಣ ಬಿತ್ತುವ ಕಾರ್ಯವನ್ನು ಮಾಡಬೇಡಿ. ಪ್ರತಿಯೊಬ್ಬರಲ್ಲೂ ಸಹೋದರತ್ವ ಸಾಮರಸ್ಯ ಹಾಗೂ ಭಾವೈಕ್ಯತೆ ಹೇಗಿರಬೇಕು ಎಂಬ ಬಗ್ಗೆ ಗಮನ ನೀಡಿ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....