Homeಕರ್ನಾಟಕಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿಯಾಗಿದ್ದ, ಅಂತವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶಾಲೆಗಳಲ್ಲಿ ಮಕ್ಕಳಿಗೆ ಶಸ್ತ್ರಾಭ್ಯಾಸವನ್ನು ನೀಡಲು ಬಜರಂಗದಳ ಮುಖಂಡರು ಮುಂದಾಗಿದ್ದು, ಏರ್‌ಗನ್ ಶಸ್ತ್ರಾಭ್ಯಾಸ ಎಂದು ಹೇಳಿದ್ದಾರೆ. ಇವರು ಮಕ್ಕಳನ್ನು ಸಹ ಉಗ್ರಗಾಮಿಗಳ ಗುಂಪುಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? ಅಥವಾ ಸಮಾಜದಲ್ಲಿ ಶಾಂತಿ ಮೂಡಿಸುವ ನಿಟ್ಟಿನಲ್ಲಿ ಉತ್ತೇಜಿಸಲು ಹೊರಟಿದ್ದಾರಾ? ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವರು ಹಾಸನದ ಅರಕಲಗೂಡು ತಾಲ್ಲೂಕಿನ, ಮಲ್ಲಿತಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಒಂದು ಕಡೆ ಸಮಾಜದ ಭಾವೈಕ್ಯತೆ ಹಾಗೂ ಸಾಮರಸ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ ಸಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇದನ್ನೇ ಗಾಂಧೀಜಿ ಸಹ ಬಯಸಿದ್ದರು. ಶಸ್ತ್ರದಿಂದ ನಮ್ಮ ಹೋರಾಟ ಅಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಹೋರಾಟ ಹಾಗೂ ಜಯಗಳು ನಮ್ಮ ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತದ್ದಾಗಬೇಕು. ಶಾಂತಿಯುತ ಹೋರಾಟದಿಂದ ನಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬೇಕೆ ಹೊರತು ಶಸ್ತ್ರಾಭ್ಯಾಸ ಗಳನ್ನು ಮಾಡಿ ಅಥವಾ ಶಸ್ತ್ರಗಳನ್ನು ಇಟ್ಟುಕೊಂಡು ಪರಿಹಾರ ಪಡೆಯಲು ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು: ಭಗತ್‌‌ ಸಿಂಗ್

ಪಠ್ಯಕ್ರಮದ ಬದಲಾವಣೆ ಕುರಿತು ಮಾತನಾಡಿದ ಅವರು, “ಯಾವುದೇ ವಿಚಾರವಿರಲಿ ಮಕ್ಕಳಿಗೆ ಅನುಕೂಲವಾಗುವ ವಿಚಾರಗಳನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಬೇಕು. ಗುಣಾತ್ಮಕವಾದ ಶಿಕ್ಷಣ ಬೇಕು. ಮಕ್ಕಳಿಗೆ ಮೊದಲು ಕಲಿಸಬೇಕಾದ್ದು ಮನುಷ್ಯತ್ವವೇ ಹೊರತು ಯಾವುದೇ ವ್ಯಕ್ತಿಯ ಬಗ್ಗೆ ಅಲ್ಲ. ಹೃದಯ ವೈಶಾಲ್ಯತೆ ಹಾಗೂ ಬದುಕು ಕಲ್ಪಿಸಿಕೊಳ್ಳುವ ಕಲಿಕೆಯನ್ನು ನೀಡಬೇಕು ಎನ್ನುವುದು ನನ್ನ ಆಶಯ” ಎಂದು ಅವರು ಹೇಳಿದ್ದಾರೆ.

“ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿ. ಅಂತಹವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ. ಗೋಡ್ಸೆ, ಸಾವರ್ಕರ್ ಅಂಥವರ ಪಠ್ಯವನ್ನು ತರುತ್ತಾರೋ ಎಂಬ ಬಿಜೆಪಿಯ ಅಜೆಂಡಾ ನನಗೂ ಗೊತ್ತಿಲ್ಲ. ಇದರಿಂದ ಈ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಆಗುವ ವಾತಾವರಣ ಬಿಜೆಪಿಯವರಿಗೆ ಬೇಕಾಗಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ‘ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!’- ‘ಭಗತ್‌ ಸಿಂಗ್ ಜೈಲ್ ಡೈರಿ’

“ದಿ ಕಾಶ್ಮೀರ ಪೈಲ್ಸ್ ಚಿತ್ರ ನಿರ್ಮಿಸಿದಿರಿ. ಇದರಿಂದ ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಅವಕಾಶ ನೀಡಿದ್ದೀರಾ? ಅಲ್ಲಿನ ರಾಜಕಾರಣಿಗಳು ಯಾವ ರೀತಿ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗಮನಿಸಿದ್ದೇನೆ. ಇಲ್ಲಿ ದ್ವೇಷದ ವಾತಾವರಣ ಬಿತ್ತುವ ಕಾರ್ಯವನ್ನು ಮಾಡಬೇಡಿ. ಪ್ರತಿಯೊಬ್ಬರಲ್ಲೂ ಸಹೋದರತ್ವ ಸಾಮರಸ್ಯ ಹಾಗೂ ಭಾವೈಕ್ಯತೆ ಹೇಗಿರಬೇಕು ಎಂಬ ಬಗ್ಗೆ ಗಮನ ನೀಡಿ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...