Homeಫ್ಯಾಕ್ಟ್‌ಚೆಕ್Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ...

Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಧನ್ಯವಾದ ಹೇಳಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ರಾಹುಲ್ ಗಾಂಧಿ ಭಾರತ ಆಕ್ರಮಿತ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಮೂಲಕ ಚೀನಾದ ಸಾರ್ವಭೌಮತ್ವವನ್ನು ಗೌರವಿಸಿದ್ದಾರೆ. ಇದಕ್ಕೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಧನ್ಯವಾದ ತಿಳಿಸಿದ್ದಾರೆ” ಎಂದು ಚೀನಾದ ಗ್ಲೋಬಲ್ ಟೈಮ್ಸ್ ಎಂಬ ಪತ್ರಿಕೆ ಎಕ್ಸ್ ಖಾತೆಯಲ್ಲಿ ಸುದ್ದಿ ಪೋಸ್ಟ್ ಮಾಡಿರುವುದಾಗಿ ಹಲವರು ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾರೆ.

ಅರುಣಾಚಲ ಪ್ರದೇಶ ಚೀನಾದ ಭಾಗವಾಗಿದೆ. ಅದನ್ನು ಭಾರತ ಆಕ್ರಮಿಸಿದೆ ಎಂದು ಚೀನಾ ಪ್ರತಿಪಾದಿಸುತ್ತಾ ಬಂದಿದೆ. ರಾಹುಲ್ ಗಾಂಧಿ ಚೀನಾದ ಸಾರ್ವಭೌಮತ್ವ ಗೌರವಿಸುವ ಸಲುವಾಗಿ, ಅಂದರೆ ಚೀನಾ ಪರವಾಗಿ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ಯಾತ್ರೆ ಆರಂಭಿಸಿದ್ದಾರೆ ಎಂಬ ಅರ್ಥದಲ್ಲಿ ಗ್ಲೋಬಲ್ ಟೈಮ್ಸ್ ಸುದ್ದಿ ಪ್ರಕಟಿಸಿರುವುದಾಗಿ ಹೇಳಲಾಗಿದೆ.

ಬರೋಬ್ಬರಿ 1ಲಕ್ಷದ 4 ಸಾವಿರ ಫಾಲೋವರ್ಸ್ ಹೊಂದಿರುವ ‘Pradhan Gaurav’ ಎಂಬವರ ಫೇಸ್‌ಬುಕ್‌ ಖಾತೆಯಲ್ಲಿ ಗ್ಲೋಬಲ್ ಟೈಮ್ಸ್ ಪ್ರಕಟಿಸಿರುವುದು ಎನ್ನಲಾದ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ನಾನು ನಿಮಗೆ ಈ ಹಿಂದೆ ಏನು ಹೇಳಿದ್ದೆ, ನೋಡಿ ಅರುಣಾಚಲವನ್ನು ಹೊರಗಿಡಲಾಗಿದೆ. ಕಾಂಗ್ರೆಸ್ ಎಂದರೆ ಚೈನೀಸ್ ಫ್ರಾಂಚೈಸಿ” ಎಂದು ಬರೆಯಲಾಗಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

‘Minni Razdan’ ಎಂಬ ಎಕ್ಸ್ ಖಾತೆಯಲ್ಲೂ ಗ್ಲೋಬಲ್ ಟೈಮ್ಸ್ ಸುದ್ದಿಯದ್ದು ಎನ್ನಲಾದ ಸ್ಕ್ರೀನ್ ಶಾಟ್ ಹಂಚಿಕೊಂಡು ” ಭಾರತ ಆಕ್ರಮಿತ ಅರುಣಾಚಲದ (ಚೀನಾ ಪ್ರಕಾರ) ಬದಲಾಗಿ ಮಣಿಪುರದಿಂದ ನ್ಯಾಯ್ ಯಾತ್ರೆಯನ್ನು ಆರಂಭಿಸಿದ್ದಕ್ಕಾಗಿ ರಾಹುಲ್ ಗಾಂಧಿಗೆ ಚೀನಾ ಧನ್ಯವಾದಗಳನ್ನು ಅರ್ಪಿಸಿದೆ?. ಬೇರೆ ರೀತಿಯಲ್ಲಿ ಹೇಳುವುದಾದರೆ ಕಾಂಗ್ರೆಸ್ ಚೀನಾ ಒಂದೇ ಪುಟದಲ್ಲಿದೆ” ಎಂದು ಬರೆಯಲಾಗಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಈ ವೇಳೆ ಗ್ಲೋಬಲ್ ಟೈಮ್ಸ್ ತನ್ನ ಎಕ್ಸ್ ಖಾತೆಯಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿರುವುದರ ಕುರಿತು ಯಾವುದೇ ಸುದ್ದಿಯನ್ನು ಪ್ರಕಟಿಸಿರುವುದು ಕಂಡು ಬಂದಿಲ್ಲ.

“ನಾವು ಎಕ್ಸ್ ಅಡ್ವಾನ್ಸ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಕ್ಸಿ ಜಿನ್‌ಪಿಂಗ್ ಅವರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿರುವುದರ ಕುರಿತು ಗ್ಲೋಬಲ್ ಟೈಮ್ಸ್ ಯಾವುದೇ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿರುವುದಿಲ್ಲ. ಗ್ಲೋಬಲ್ ಟೈಮ್ಸ್ ಇಂತಹ ಸುದ್ದಿಯ ಪೋಸ್ಟ್ ಅನ್ನು ಪ್ರಕಟಿಸಿ ಡಿಲಿಟ್ ಮಾಡಿಯೂ ಇಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆಯ ಬಗ್ಗೆ ಕ್ಸಿ ಜಿನ್‌ಪಿಂಗ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರುವ ಕುರಿತು ಸುದ್ದಿ ದೊರೆತಿಲ್ಲ” ಎಂದು ಖ್ಯಾತ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ಬೂಮ್ ಹೇಳಿದೆ.

“ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಗ್ಲೋಬಲ್ ಟೈಮ್ಸ್ ಸುದ್ದಿ ಪ್ರಕಟಿಸಿರುವುದಾಗಿ ಸ್ಕ್ರೀನ್ ಶಾಟ್ ಹರಿದಾಡುತ್ತಿದೆ. ಭಾರತದ ಯಾವುದೇ ಮುಖ್ಯವಾಹಿನಿ ಸುದ್ದಿ ಮಾಧ್ಯಮಗಳು ರಾಹುಲ್ ಗಾಂಧಿಗೆ ಕ್ಸಿ ಜಿನ್‌ಪಿಂಗ್ ಧನ್ಯವಾದ ಹೇಳಿರುವ ಕುರಿತು ಇದುವರೆಗೆ ಸುದ್ದಿ ಪ್ರಕಟಿಸಿಲ್ಲ” ಎಂದು ಬೂಮ್ ತಿಳಿಸಿದೆ.

ಒಟ್ಟಿನಲ್ಲಿ, ನಾನು ಗೌರಿ.ಕಾಂ ಪರಿಶೀಲನೆಯ ಪ್ರಕಾರ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಧನ್ಯವಾದ ಹೇಳಿದ್ದಾರೆ ಎಂಬುವುದು ಸತ್ಯಕ್ಕೆ ದೂರವಾದದ್ದು. ಗ್ಲೋಬಲ್ ಟೈಮ್ಸ್ ಪತ್ರಿಕೆ ಹೆಸರಿನಲ್ಲಿ ಹರಿದಾಡುತ್ತಿರುವ ಸ್ಕ್ರೀನ್ ಶಾಟ್ ಕೂಡ ಸುಳ್ಳು ಎಂಬುವುದು ತಿಳಿದು ಬಂದಿದೆ.

ಇದನ್ನೂ ಓದಿ : Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...