Homeಫ್ಯಾಕ್ಟ್‌ಚೆಕ್Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ...

Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಧನ್ಯವಾದ ಹೇಳಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ರಾಹುಲ್ ಗಾಂಧಿ ಭಾರತ ಆಕ್ರಮಿತ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಮೂಲಕ ಚೀನಾದ ಸಾರ್ವಭೌಮತ್ವವನ್ನು ಗೌರವಿಸಿದ್ದಾರೆ. ಇದಕ್ಕೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಧನ್ಯವಾದ ತಿಳಿಸಿದ್ದಾರೆ” ಎಂದು ಚೀನಾದ ಗ್ಲೋಬಲ್ ಟೈಮ್ಸ್ ಎಂಬ ಪತ್ರಿಕೆ ಎಕ್ಸ್ ಖಾತೆಯಲ್ಲಿ ಸುದ್ದಿ ಪೋಸ್ಟ್ ಮಾಡಿರುವುದಾಗಿ ಹಲವರು ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾರೆ.

ಅರುಣಾಚಲ ಪ್ರದೇಶ ಚೀನಾದ ಭಾಗವಾಗಿದೆ. ಅದನ್ನು ಭಾರತ ಆಕ್ರಮಿಸಿದೆ ಎಂದು ಚೀನಾ ಪ್ರತಿಪಾದಿಸುತ್ತಾ ಬಂದಿದೆ. ರಾಹುಲ್ ಗಾಂಧಿ ಚೀನಾದ ಸಾರ್ವಭೌಮತ್ವ ಗೌರವಿಸುವ ಸಲುವಾಗಿ, ಅಂದರೆ ಚೀನಾ ಪರವಾಗಿ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ಯಾತ್ರೆ ಆರಂಭಿಸಿದ್ದಾರೆ ಎಂಬ ಅರ್ಥದಲ್ಲಿ ಗ್ಲೋಬಲ್ ಟೈಮ್ಸ್ ಸುದ್ದಿ ಪ್ರಕಟಿಸಿರುವುದಾಗಿ ಹೇಳಲಾಗಿದೆ.

ಬರೋಬ್ಬರಿ 1ಲಕ್ಷದ 4 ಸಾವಿರ ಫಾಲೋವರ್ಸ್ ಹೊಂದಿರುವ ‘Pradhan Gaurav’ ಎಂಬವರ ಫೇಸ್‌ಬುಕ್‌ ಖಾತೆಯಲ್ಲಿ ಗ್ಲೋಬಲ್ ಟೈಮ್ಸ್ ಪ್ರಕಟಿಸಿರುವುದು ಎನ್ನಲಾದ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ನಾನು ನಿಮಗೆ ಈ ಹಿಂದೆ ಏನು ಹೇಳಿದ್ದೆ, ನೋಡಿ ಅರುಣಾಚಲವನ್ನು ಹೊರಗಿಡಲಾಗಿದೆ. ಕಾಂಗ್ರೆಸ್ ಎಂದರೆ ಚೈನೀಸ್ ಫ್ರಾಂಚೈಸಿ” ಎಂದು ಬರೆಯಲಾಗಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

‘Minni Razdan’ ಎಂಬ ಎಕ್ಸ್ ಖಾತೆಯಲ್ಲೂ ಗ್ಲೋಬಲ್ ಟೈಮ್ಸ್ ಸುದ್ದಿಯದ್ದು ಎನ್ನಲಾದ ಸ್ಕ್ರೀನ್ ಶಾಟ್ ಹಂಚಿಕೊಂಡು ” ಭಾರತ ಆಕ್ರಮಿತ ಅರುಣಾಚಲದ (ಚೀನಾ ಪ್ರಕಾರ) ಬದಲಾಗಿ ಮಣಿಪುರದಿಂದ ನ್ಯಾಯ್ ಯಾತ್ರೆಯನ್ನು ಆರಂಭಿಸಿದ್ದಕ್ಕಾಗಿ ರಾಹುಲ್ ಗಾಂಧಿಗೆ ಚೀನಾ ಧನ್ಯವಾದಗಳನ್ನು ಅರ್ಪಿಸಿದೆ?. ಬೇರೆ ರೀತಿಯಲ್ಲಿ ಹೇಳುವುದಾದರೆ ಕಾಂಗ್ರೆಸ್ ಚೀನಾ ಒಂದೇ ಪುಟದಲ್ಲಿದೆ” ಎಂದು ಬರೆಯಲಾಗಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಈ ವೇಳೆ ಗ್ಲೋಬಲ್ ಟೈಮ್ಸ್ ತನ್ನ ಎಕ್ಸ್ ಖಾತೆಯಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿರುವುದರ ಕುರಿತು ಯಾವುದೇ ಸುದ್ದಿಯನ್ನು ಪ್ರಕಟಿಸಿರುವುದು ಕಂಡು ಬಂದಿಲ್ಲ.

“ನಾವು ಎಕ್ಸ್ ಅಡ್ವಾನ್ಸ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಕ್ಸಿ ಜಿನ್‌ಪಿಂಗ್ ಅವರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿರುವುದರ ಕುರಿತು ಗ್ಲೋಬಲ್ ಟೈಮ್ಸ್ ಯಾವುದೇ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿರುವುದಿಲ್ಲ. ಗ್ಲೋಬಲ್ ಟೈಮ್ಸ್ ಇಂತಹ ಸುದ್ದಿಯ ಪೋಸ್ಟ್ ಅನ್ನು ಪ್ರಕಟಿಸಿ ಡಿಲಿಟ್ ಮಾಡಿಯೂ ಇಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆಯ ಬಗ್ಗೆ ಕ್ಸಿ ಜಿನ್‌ಪಿಂಗ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರುವ ಕುರಿತು ಸುದ್ದಿ ದೊರೆತಿಲ್ಲ” ಎಂದು ಖ್ಯಾತ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ಬೂಮ್ ಹೇಳಿದೆ.

“ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಗ್ಲೋಬಲ್ ಟೈಮ್ಸ್ ಸುದ್ದಿ ಪ್ರಕಟಿಸಿರುವುದಾಗಿ ಸ್ಕ್ರೀನ್ ಶಾಟ್ ಹರಿದಾಡುತ್ತಿದೆ. ಭಾರತದ ಯಾವುದೇ ಮುಖ್ಯವಾಹಿನಿ ಸುದ್ದಿ ಮಾಧ್ಯಮಗಳು ರಾಹುಲ್ ಗಾಂಧಿಗೆ ಕ್ಸಿ ಜಿನ್‌ಪಿಂಗ್ ಧನ್ಯವಾದ ಹೇಳಿರುವ ಕುರಿತು ಇದುವರೆಗೆ ಸುದ್ದಿ ಪ್ರಕಟಿಸಿಲ್ಲ” ಎಂದು ಬೂಮ್ ತಿಳಿಸಿದೆ.

ಒಟ್ಟಿನಲ್ಲಿ, ನಾನು ಗೌರಿ.ಕಾಂ ಪರಿಶೀಲನೆಯ ಪ್ರಕಾರ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಧನ್ಯವಾದ ಹೇಳಿದ್ದಾರೆ ಎಂಬುವುದು ಸತ್ಯಕ್ಕೆ ದೂರವಾದದ್ದು. ಗ್ಲೋಬಲ್ ಟೈಮ್ಸ್ ಪತ್ರಿಕೆ ಹೆಸರಿನಲ್ಲಿ ಹರಿದಾಡುತ್ತಿರುವ ಸ್ಕ್ರೀನ್ ಶಾಟ್ ಕೂಡ ಸುಳ್ಳು ಎಂಬುವುದು ತಿಳಿದು ಬಂದಿದೆ.

ಇದನ್ನೂ ಓದಿ : Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...