HomeಮುಖಪುಟPFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

175 ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಿಮಗೆ ಅಗತ್ಯವಿದ್ದರೆ ಗೃಹ ಇಲಾಖೆಯನ್ನು ಸಂಪರ್ಕಿಸಿ ತೆಗೆದುಕೊಳ್ಳಬಹುದು ಎಂದು ಬಿಜೆಪಿ ಮುಖಂಡರಾದ ಪುಟ್ಟಸ್ವಾಮಿ.ಬಿ.ಜೆ ತಿಳಿಸಿದ್ದಾರೆ.

- Advertisement -
- Advertisement -

ಪಿ.ಎಫ್.ಐ/ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಅವಾಗಾವಾಗ ಆರೋಪಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧದ 62 ಪ್ರಕರಣಗಳನ್ನು ರಾಜ್ಯ ಬಿಜೆಪಿ ಸರ್ಕಾರ ಹಿಂಪಡೆದ ಹಿನ್ನೆಲೆಯಲ್ಲಿ ಈ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಬಿಜೆಪಿ ಸರ್ಕಾರ 62 ಪ್ರಕರಣಗಳನ್ನು ಹಿಂಪಡೆದ ವಿಷಯದ ಮೇಲೆ ನಾನುಗೌರಿ.ಕಾಂ ವಿಶೇಷ ವರದಿಯೊಂದನ್ನು ತಯಾರಿಸುತ್ತಿತ್ತು. ಇದರ ಸಲುವಾಗಿ ರಾಜ್ಯ ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ಅವರ ಪ್ರತಿಕ್ರಿಯೆಯನ್ನು ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್.ಡಿ.ಪಿ.ಐ ಅಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು” ಎಂದು ಆರೋಪಿಸಿದ್ದರು.

“ವಿವಿಧ ಸಂದರ್ಭಗಳಲ್ಲಿ, ರೈತರ ಪರ, ಸಾರ್ವಜನಿಕರ ಪರ ಹೋರಾಟ ಮಾಡಿರುವ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ಅಧಿಕಾರ ಸರ್ಕಾರಕ್ಕಿದೆ. ಹಾಗಾಗಿ ಇಂತಹ ಕೆಲವು ಹೋರಾಟಗಳಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನು ನಮ್ಮ ಸರ್ಕಾರ ಹಿಂಪಡೆದಿದೆ. ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್.ಡಿ.ಪಿ.ಐ ನಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು. ನಾವು ಅಂತಹ ಪ್ರಕರಣಗಳನ್ನು ಹಿಂಪಡೆದಿಲ್ಲವಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ಈ ಕುರಿತು ಬಿಜೆಪಿ ಮತ್ತು ಎಸ್‌ಡಿಪಿಐ ಎರಡೂ ಸಂಘಟನೆಗಳ ಮುಖಂಡರ ಅಭಿಪ್ರಾಯ ಮತ್ತು ದಾಖಲೆ ಪಡೆದು ಪರಿಶೀಲಿಸಲು ನಾನುಗೌರಿ.ಕಾಂ ಪ್ರಯತ್ನಿಸಿದೆ.

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾದ ಇಲ್ಯಾಸ್ ಮಹಮ್ಮದ್ ತುಂಬೆಯವರನ್ನು ಸಂಪರ್ಕಿಸಿದಾಗ “ಬಿಜೆಪಿಯವರು ತಮ್ಮ ಲೋಪವನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ನಮ್ಮ ಸಂಘಟನೆಯ ಕೇವಲ 3 ಪ್ರಕರಣಗಳನ್ನು ಮಾತ್ರ ಹಿಂಪಡೆಯಲಾಗಿತ್ತು. ಆದರೆ ಅದೇ ಸಮಯದಲ್ಲಿ ಶ್ರೀರಾಮಸೇನೆಯಂತಹ ಇತರ ಹಿಂದೂ ಸಂಘಟನೆಗಳ ಹಲವು ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರವೇ ಹಿಂಪಡೆದಿತ್ತು” ಎಂದು ಹೇಳಿದರು.

2013 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2009-10 ನೇ ಸಾಲಿನಲ್ಲಿ, ಮೈಸೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಪಿ.ಎಫ್.ಐ ನ 175 ಕೇಸುಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂಬ ಸಂಘಪರಿವಾರದ ಆರೋಪಗಳ ಕುರಿತ ವಾಸ್ತವಾಂಶಗಳನ್ನು ಈ ಕೆಳಗೆ ನೀಡಲಾಗಿದೆ.

ಇದು ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳ ವಿವರ. ಮೈಸೂರು-40, ಹಾಸನ-21 ಮತ್ತು ಶಿವಮೊಗ್ಗ-114 ಸೇರಿ, ಒಟ್ಟು 175 ಪ್ರಕರಣಗಳನ್ನು ಅಂದಿನ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಇದರಲ್ಲಿ 3 ಪ್ರಕರಣಗಳು ಪಿ.ಎಫ್.ಐ ಮೇಲೆ ದಾಖಲಿಸಿದವುಗಳಾಗಿವೆ.

ಎಸ್‌ಡಿಪಿಐ ಮೇಲಿನ ಹಿಂಪಡೆದ ಕೇಸುಗಳಾವುವು?

ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ 2009 ಜುಲೈ 2ರಂದು ಹಲೀಮ್ ಶಾದಿಯ ಮದರಸದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಹಂದಿಯ ರುಂಡವನ್ನು ಹಾಕಿ ಕೋಮುಗಲಭೆಯನ್ನು ಹುಟ್ಟಹಾಕಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ನಿರ್ದೇಶನದಂತೆ, ಸುತ್ತಮುತ್ತಲಿನ ಹಿಂದೂ-ಮುಸ್ಲಿಂ ಮನೆಗಳಿಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು ಅಮಾಯಕರನ್ನು ಬಂಧಿಸಿದ್ದರು. ಮೈಸೂರು ಜಿಲ್ಲೆಯ ಪಿ.ಎಫ್.ಐ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಪೊಲೀಸರ ಈ ನಡವಳಿಕೆಯನ್ನು ಖಂಡಿಸಿದ್ದು, ಉಸ್ತುವಾರಿ ಸಚಿವರು, ಗೃಹ ಸಚಿವರು ಹಾಗೂ ಪೊಲೀಸರ ವಿರುದ್ಧ ನೇರವಾಗಿ ಆಕ್ಷೇಪಿಸಿದ್ದರು. ನಂತರ ಪತ್ರಿಕಾ ಭವನದ ಮುಂಭಾಗದಲ್ಲಿಯೇ ಎಸಿಪಿ ಪೂಜಾರ್ ಅವರ ತಂಡವು ಪಿ.ಎಫ್.ಐ ಪದಾಧಿಕಾರಿಗಳನ್ನು ಬಂಧಿಸಿದ್ದರು. ಇದನ್ನು ವಿರೋಧಿಸಿ ಜುಲೈ 7, 2009 ರಂದು ಪಿ.ಎಫ್.ಐ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದರು.

ಈ ಬಗ್ಗೆ ವಕೀಲರಾದ ಎ.ಕೆ.ಸುಬ್ಬಯ್ಯನವರ ಮುಖಾಂತರ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದಾಗ ‘ಪಿ.ಎಫ್.ಐ ಕಾರ್ಯಕರ್ತರ ಬಂಧನ ಅಕ್ರಮ ಹಾಗೂ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು, WP ನಂ. 122/2009, 123/2009 ರಲ್ಲಿ ಬಂಧಿಸಲ್ಪಟ್ಟ ಜನರನ್ನು ಬಿಡುಗಡೆಗೊಳಿಸುವಂತೆ’ ಕೋರ್ಟ್ ಆದೇಶಿಸಿತ್ತು. ಅಕ್ರಮ ಬಂಧನಕ್ಕೊಳಪಡಿಸಿದ ಅಧಿಕಾರಿಗಳ ವಿರುದ್ಧ ರಿಟ್ ಸಲ್ಲಿಸಿದಾಗ, ಅಂದಿನ ಉದಯಗಿರಿ ಮತ್ತು ನರಸಿಂಹರಾಜ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ 50,000 ರೂ.ಗಳನ್ನು ದಂಡವನ್ನು ಕೋರ್ಟ್ ವಿಧಿಸಲಾಗಿತ್ತು.

ಕಾಂಗ್ರೆಸ್ ಸರ್ಕಾರ ಹಿಂಪಡೆದ ಮೈಸೂರಿನ 40 ಪ್ರಕರಣಗಳಲ್ಲಿ 3 ಪ್ರಕರಣಗಳು ಪಿ.ಎಫ್.ಐ ಮೇಲೆ ದಾಖಲಿಸಿದ ಕೇಸುಗಳಾಗಿದ್ದು, ಉಳಿದ ಎಲ್ಲಾ 37 ಕೇಸುಗಳೂ ಶ್ರೀರಾಮಸೇನೆ, ಭಜರಂಗದಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸ್ಥಳೀಯರ ಮೇಲೆ ದಾಖಲಾದ ಕೇಸುಗಳಾಗಿವೆ.

ಮೈಸೂರಿನಲ್ಲಿ ಪಿ.ಎಫ್.ಐ ವಿರುದ್ಧ ದಾಖಲಾದ ಕೇಸುಗಳನ್ನು ಅಲ್ಲಿನ ಸರ್ಕಾರಿ ಅಭಿಯೋಜಕರು ‘ಇದರಲ್ಲಿ ಯಾವುದೇ ಪ್ರಾಥಮಿಕ ಸಾಕ್ಷಿ ಇಲ್ಲವೆಂದು ಹೇಳಿ ಹಿಂದಕ್ಕೆ ಪಡೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಅಂದಿನ ಕ್ಯಾತಮಾರನಳ್ಳಿ ಗಲಭೆಗೆ ಶ್ರೀರಾಮಸೇನೆ ನೇರಹೊಣೆ ಎಂದು ಪಿಯುಸಿಎಲ್ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ನಡೆಸಿದ ಸತ್ಯಶೋಧನಾ ವರದಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಡಿ.ಜೆ ಹಳ್ಳಿಯಲ್ಲಿ ಗಲಭೆಯಾಗುತ್ತಿದ್ದಾಗ ಮುಸ್ಲಿಂ ಮುಖಂಡರು ಏನು ಮಾಡುತ್ತಿದ್ದರು?

ಫೆಬ್ರವರಿ 20, 2010 ರಂದು ಕನ್ನಡ ಪ್ರಭ ದಿನಪತ್ರಿಕೆಯ ಸಾಪ್ತಾಹಿಕ ಪುಟದಲ್ಲಿ, ‘ಬನ್ನೀ ಬುರ್ಖಾ ಬಗ್ಗೆ ಮತ್ತೊಮ್ಮೆ ಚಿಂತಿಸೋಣ’ ಎಂಬ ವಿವಾದಾತ್ಮಕ ಲೇಖನ (ಲೇಖಕಿ ತಸ್ಲೀಮಾ ನಸ್ರಿನ್, ಪ್ರವಾದಿ ಮಹಮ್ಮದ್ ಅವರನ್ನು ಅವಮಾನಿಸಿ ಬರೆದಂತಹ “ಪರ್ದಾ ಹೈ ಪರ್ದಾ”) ಪ್ರಕಟವಾದ ಹಿನ್ನೆಲೆಯಲ್ಲಿ ಪತ್ರಿಕೆಯ ವಿರುದ್ಧ ಶಿವಮೊಗ್ಗ ಮತ್ತು ಹಾಸನದಲ್ಲಿ ನಡೆದ ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಗೋಲೀಬಾರ್ ನಡೆಸಿದ್ದು, ಇದರಲ್ಲಿ ಪ್ರಾಣಹಾನಿ ಸಂಭವಿಸಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ನಷ್ಟವಾಗಿತ್ತು.

ಈ ಗಲಭೆಗೆ ಸಂಬಂಧಿಸಿದಂತೆ ಹಾಸನದಲ್ಲಿ 21 ಹಾಗೂ ಶಿವಮೊಗ್ಗದಲ್ಲಿ 114 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಪಿ.ಎಫ್.ಐ ಕಾರ್ಯಕರ್ತರ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ.

ಹೀಗೆ ಒಟ್ಟು 175 ಪ್ರಕರಣಗಳಲ್ಲಿ 3 ಪ್ರಕರಣಗಳು (ಒಂದು ಪ್ರಕರಣವನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರೇ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು) ಮಾತ್ರ ಪಿ.ಎಫ್.ಐ/ಎಸ್.ಡಿ.ಪಿ.ಐ ಮೇಲಿನ ಪ್ರಕರಣಗಳಾಗಿವೆ.

“ಪಿ.ಎಫ್.ಐ/ಎಸ್.ಡಿ.ಪಿ.ಐ ಮೇಲಿನ 175 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಸುಳ್ಳು ಆರೋಪ ಮಾಡಿ ತಮ್ಮ ರಾಜಕೀಯ ಬೇಳೆ ಬೆಯಿಸಿಕೊಳ್ಳಲು ಬಿಜೆಪಿ ಮತ್ತು ಸಂಘ ಪರಿವಾರ ಬಯಸುತ್ತಿದೆ. ರಾಜ್ಯ ಬಿಜೆಪಿ ಸರ್ಕಾರವು ಈಗ ತಮ್ಮ ಬೆಂಬಲಿಗರು ಮತ್ತು ಪಕ್ಷದ ವರಿಷ್ಟರ ವಿರುದ್ಧದ 62 ಪ್ರಕರಣಗಳನ್ನು ಹಿಂಪಡೆದಿರುವುದನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಇಂತಹ ಆರೋಪಗಳನ್ನು ಮಾಡುತ್ತಿದೆ” ಎಂದು ಎಸ್.ಡಿ.ಪಿ.ಐ ಮುಖಂಡ ಇಲ್ಯಾಸ್ ತುಂಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಬಿಜೆಪಿಯ ಮಾಜಿ ಎಂ.ಎಲ್.ಸಿ.ಯಾಗಿದ್ದ, ಪ್ರಸ್ತುತ ಬಿಜೆಪಿ ಪ್ಲಾನಿಂಗ್ ವಿಭಾಗದ ಉಪ ನಿರ್ದೇಶಕರಾಗಿರುವ ಪುಟ್ಟಸ್ವಾಮಿ.ಬಿ.ಜೆ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಹೌದು ಕಾಂಗ್ರೆಸ್ ಇಂತಹ ಕ್ರಮ ತೆಗೆದುಕೊಂಡಿರುವುದರ ಪರಿಣಾಮವೇ ಇಂದಿನ ಡಿ.ಜೆ.ಹಳ್ಳಿ ಗಲಭೆಗೆ ಕಾರಣವಾಗಿದೆ. ಕಾಂಗ್ರೆಸ್ ಮೊದಲಿನಿಂದಲೂ ಅವರ ಪರವಾಗಿಯೇ ಕೆಲಸ ಮಾಡಿಕೊಂಡುಬಂದಿದೆ” ಎಂದರು.

“175 ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಿಮಗೆ ಅಗತ್ಯವಿದ್ದರೆ ಗೃಹ ಇಲಾಖೆಯನ್ನು ಸಂಪರ್ಕಿಸಿ ತೆಗೆದುಕೊಳ್ಳಬಹುದು” ಎಂದರು.

ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ಮತ್ತು ವಾಮನಾಚಾರ್ಯ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ್ಯೂ ಸಂಪರ್ಕಕ್ಕೆ ಅವರು ಸಿಗಲಿಲ್ಲ. ಹಾಗಾಗಿ ಅವರು ಸಂಪರ್ಕಕ್ಕೆ ಬಂದ ನಂತರ ಅವರ ಹೇಳಿಕೆಯನ್ನು ಅಥವಾ ಅವರು ನೀಡುವ ದಾಖಲೆಯನ್ನು ಅಪ್ಡೇಟ್ ಮಾಡಲಾಗುವುದು.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...