HomeಮುಖಪುಟPFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

175 ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಿಮಗೆ ಅಗತ್ಯವಿದ್ದರೆ ಗೃಹ ಇಲಾಖೆಯನ್ನು ಸಂಪರ್ಕಿಸಿ ತೆಗೆದುಕೊಳ್ಳಬಹುದು ಎಂದು ಬಿಜೆಪಿ ಮುಖಂಡರಾದ ಪುಟ್ಟಸ್ವಾಮಿ.ಬಿ.ಜೆ ತಿಳಿಸಿದ್ದಾರೆ.

- Advertisement -
- Advertisement -

ಪಿ.ಎಫ್.ಐ/ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಅವಾಗಾವಾಗ ಆರೋಪಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧದ 62 ಪ್ರಕರಣಗಳನ್ನು ರಾಜ್ಯ ಬಿಜೆಪಿ ಸರ್ಕಾರ ಹಿಂಪಡೆದ ಹಿನ್ನೆಲೆಯಲ್ಲಿ ಈ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಬಿಜೆಪಿ ಸರ್ಕಾರ 62 ಪ್ರಕರಣಗಳನ್ನು ಹಿಂಪಡೆದ ವಿಷಯದ ಮೇಲೆ ನಾನುಗೌರಿ.ಕಾಂ ವಿಶೇಷ ವರದಿಯೊಂದನ್ನು ತಯಾರಿಸುತ್ತಿತ್ತು. ಇದರ ಸಲುವಾಗಿ ರಾಜ್ಯ ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ಅವರ ಪ್ರತಿಕ್ರಿಯೆಯನ್ನು ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್.ಡಿ.ಪಿ.ಐ ಅಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು” ಎಂದು ಆರೋಪಿಸಿದ್ದರು.

“ವಿವಿಧ ಸಂದರ್ಭಗಳಲ್ಲಿ, ರೈತರ ಪರ, ಸಾರ್ವಜನಿಕರ ಪರ ಹೋರಾಟ ಮಾಡಿರುವ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ಅಧಿಕಾರ ಸರ್ಕಾರಕ್ಕಿದೆ. ಹಾಗಾಗಿ ಇಂತಹ ಕೆಲವು ಹೋರಾಟಗಳಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನು ನಮ್ಮ ಸರ್ಕಾರ ಹಿಂಪಡೆದಿದೆ. ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್.ಡಿ.ಪಿ.ಐ ನಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು. ನಾವು ಅಂತಹ ಪ್ರಕರಣಗಳನ್ನು ಹಿಂಪಡೆದಿಲ್ಲವಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ಈ ಕುರಿತು ಬಿಜೆಪಿ ಮತ್ತು ಎಸ್‌ಡಿಪಿಐ ಎರಡೂ ಸಂಘಟನೆಗಳ ಮುಖಂಡರ ಅಭಿಪ್ರಾಯ ಮತ್ತು ದಾಖಲೆ ಪಡೆದು ಪರಿಶೀಲಿಸಲು ನಾನುಗೌರಿ.ಕಾಂ ಪ್ರಯತ್ನಿಸಿದೆ.

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾದ ಇಲ್ಯಾಸ್ ಮಹಮ್ಮದ್ ತುಂಬೆಯವರನ್ನು ಸಂಪರ್ಕಿಸಿದಾಗ “ಬಿಜೆಪಿಯವರು ತಮ್ಮ ಲೋಪವನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ನಮ್ಮ ಸಂಘಟನೆಯ ಕೇವಲ 3 ಪ್ರಕರಣಗಳನ್ನು ಮಾತ್ರ ಹಿಂಪಡೆಯಲಾಗಿತ್ತು. ಆದರೆ ಅದೇ ಸಮಯದಲ್ಲಿ ಶ್ರೀರಾಮಸೇನೆಯಂತಹ ಇತರ ಹಿಂದೂ ಸಂಘಟನೆಗಳ ಹಲವು ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರವೇ ಹಿಂಪಡೆದಿತ್ತು” ಎಂದು ಹೇಳಿದರು.

2013 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2009-10 ನೇ ಸಾಲಿನಲ್ಲಿ, ಮೈಸೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಪಿ.ಎಫ್.ಐ ನ 175 ಕೇಸುಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂಬ ಸಂಘಪರಿವಾರದ ಆರೋಪಗಳ ಕುರಿತ ವಾಸ್ತವಾಂಶಗಳನ್ನು ಈ ಕೆಳಗೆ ನೀಡಲಾಗಿದೆ.

ಇದು ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳ ವಿವರ. ಮೈಸೂರು-40, ಹಾಸನ-21 ಮತ್ತು ಶಿವಮೊಗ್ಗ-114 ಸೇರಿ, ಒಟ್ಟು 175 ಪ್ರಕರಣಗಳನ್ನು ಅಂದಿನ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಇದರಲ್ಲಿ 3 ಪ್ರಕರಣಗಳು ಪಿ.ಎಫ್.ಐ ಮೇಲೆ ದಾಖಲಿಸಿದವುಗಳಾಗಿವೆ.

ಎಸ್‌ಡಿಪಿಐ ಮೇಲಿನ ಹಿಂಪಡೆದ ಕೇಸುಗಳಾವುವು?

ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ 2009 ಜುಲೈ 2ರಂದು ಹಲೀಮ್ ಶಾದಿಯ ಮದರಸದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಹಂದಿಯ ರುಂಡವನ್ನು ಹಾಕಿ ಕೋಮುಗಲಭೆಯನ್ನು ಹುಟ್ಟಹಾಕಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ನಿರ್ದೇಶನದಂತೆ, ಸುತ್ತಮುತ್ತಲಿನ ಹಿಂದೂ-ಮುಸ್ಲಿಂ ಮನೆಗಳಿಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು ಅಮಾಯಕರನ್ನು ಬಂಧಿಸಿದ್ದರು. ಮೈಸೂರು ಜಿಲ್ಲೆಯ ಪಿ.ಎಫ್.ಐ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಪೊಲೀಸರ ಈ ನಡವಳಿಕೆಯನ್ನು ಖಂಡಿಸಿದ್ದು, ಉಸ್ತುವಾರಿ ಸಚಿವರು, ಗೃಹ ಸಚಿವರು ಹಾಗೂ ಪೊಲೀಸರ ವಿರುದ್ಧ ನೇರವಾಗಿ ಆಕ್ಷೇಪಿಸಿದ್ದರು. ನಂತರ ಪತ್ರಿಕಾ ಭವನದ ಮುಂಭಾಗದಲ್ಲಿಯೇ ಎಸಿಪಿ ಪೂಜಾರ್ ಅವರ ತಂಡವು ಪಿ.ಎಫ್.ಐ ಪದಾಧಿಕಾರಿಗಳನ್ನು ಬಂಧಿಸಿದ್ದರು. ಇದನ್ನು ವಿರೋಧಿಸಿ ಜುಲೈ 7, 2009 ರಂದು ಪಿ.ಎಫ್.ಐ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದರು.

ಈ ಬಗ್ಗೆ ವಕೀಲರಾದ ಎ.ಕೆ.ಸುಬ್ಬಯ್ಯನವರ ಮುಖಾಂತರ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದಾಗ ‘ಪಿ.ಎಫ್.ಐ ಕಾರ್ಯಕರ್ತರ ಬಂಧನ ಅಕ್ರಮ ಹಾಗೂ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು, WP ನಂ. 122/2009, 123/2009 ರಲ್ಲಿ ಬಂಧಿಸಲ್ಪಟ್ಟ ಜನರನ್ನು ಬಿಡುಗಡೆಗೊಳಿಸುವಂತೆ’ ಕೋರ್ಟ್ ಆದೇಶಿಸಿತ್ತು. ಅಕ್ರಮ ಬಂಧನಕ್ಕೊಳಪಡಿಸಿದ ಅಧಿಕಾರಿಗಳ ವಿರುದ್ಧ ರಿಟ್ ಸಲ್ಲಿಸಿದಾಗ, ಅಂದಿನ ಉದಯಗಿರಿ ಮತ್ತು ನರಸಿಂಹರಾಜ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ 50,000 ರೂ.ಗಳನ್ನು ದಂಡವನ್ನು ಕೋರ್ಟ್ ವಿಧಿಸಲಾಗಿತ್ತು.

ಕಾಂಗ್ರೆಸ್ ಸರ್ಕಾರ ಹಿಂಪಡೆದ ಮೈಸೂರಿನ 40 ಪ್ರಕರಣಗಳಲ್ಲಿ 3 ಪ್ರಕರಣಗಳು ಪಿ.ಎಫ್.ಐ ಮೇಲೆ ದಾಖಲಿಸಿದ ಕೇಸುಗಳಾಗಿದ್ದು, ಉಳಿದ ಎಲ್ಲಾ 37 ಕೇಸುಗಳೂ ಶ್ರೀರಾಮಸೇನೆ, ಭಜರಂಗದಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸ್ಥಳೀಯರ ಮೇಲೆ ದಾಖಲಾದ ಕೇಸುಗಳಾಗಿವೆ.

ಮೈಸೂರಿನಲ್ಲಿ ಪಿ.ಎಫ್.ಐ ವಿರುದ್ಧ ದಾಖಲಾದ ಕೇಸುಗಳನ್ನು ಅಲ್ಲಿನ ಸರ್ಕಾರಿ ಅಭಿಯೋಜಕರು ‘ಇದರಲ್ಲಿ ಯಾವುದೇ ಪ್ರಾಥಮಿಕ ಸಾಕ್ಷಿ ಇಲ್ಲವೆಂದು ಹೇಳಿ ಹಿಂದಕ್ಕೆ ಪಡೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಅಂದಿನ ಕ್ಯಾತಮಾರನಳ್ಳಿ ಗಲಭೆಗೆ ಶ್ರೀರಾಮಸೇನೆ ನೇರಹೊಣೆ ಎಂದು ಪಿಯುಸಿಎಲ್ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ನಡೆಸಿದ ಸತ್ಯಶೋಧನಾ ವರದಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಡಿ.ಜೆ ಹಳ್ಳಿಯಲ್ಲಿ ಗಲಭೆಯಾಗುತ್ತಿದ್ದಾಗ ಮುಸ್ಲಿಂ ಮುಖಂಡರು ಏನು ಮಾಡುತ್ತಿದ್ದರು?

ಫೆಬ್ರವರಿ 20, 2010 ರಂದು ಕನ್ನಡ ಪ್ರಭ ದಿನಪತ್ರಿಕೆಯ ಸಾಪ್ತಾಹಿಕ ಪುಟದಲ್ಲಿ, ‘ಬನ್ನೀ ಬುರ್ಖಾ ಬಗ್ಗೆ ಮತ್ತೊಮ್ಮೆ ಚಿಂತಿಸೋಣ’ ಎಂಬ ವಿವಾದಾತ್ಮಕ ಲೇಖನ (ಲೇಖಕಿ ತಸ್ಲೀಮಾ ನಸ್ರಿನ್, ಪ್ರವಾದಿ ಮಹಮ್ಮದ್ ಅವರನ್ನು ಅವಮಾನಿಸಿ ಬರೆದಂತಹ “ಪರ್ದಾ ಹೈ ಪರ್ದಾ”) ಪ್ರಕಟವಾದ ಹಿನ್ನೆಲೆಯಲ್ಲಿ ಪತ್ರಿಕೆಯ ವಿರುದ್ಧ ಶಿವಮೊಗ್ಗ ಮತ್ತು ಹಾಸನದಲ್ಲಿ ನಡೆದ ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಗೋಲೀಬಾರ್ ನಡೆಸಿದ್ದು, ಇದರಲ್ಲಿ ಪ್ರಾಣಹಾನಿ ಸಂಭವಿಸಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ನಷ್ಟವಾಗಿತ್ತು.

ಈ ಗಲಭೆಗೆ ಸಂಬಂಧಿಸಿದಂತೆ ಹಾಸನದಲ್ಲಿ 21 ಹಾಗೂ ಶಿವಮೊಗ್ಗದಲ್ಲಿ 114 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಪಿ.ಎಫ್.ಐ ಕಾರ್ಯಕರ್ತರ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ.

ಹೀಗೆ ಒಟ್ಟು 175 ಪ್ರಕರಣಗಳಲ್ಲಿ 3 ಪ್ರಕರಣಗಳು (ಒಂದು ಪ್ರಕರಣವನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರೇ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು) ಮಾತ್ರ ಪಿ.ಎಫ್.ಐ/ಎಸ್.ಡಿ.ಪಿ.ಐ ಮೇಲಿನ ಪ್ರಕರಣಗಳಾಗಿವೆ.

“ಪಿ.ಎಫ್.ಐ/ಎಸ್.ಡಿ.ಪಿ.ಐ ಮೇಲಿನ 175 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಸುಳ್ಳು ಆರೋಪ ಮಾಡಿ ತಮ್ಮ ರಾಜಕೀಯ ಬೇಳೆ ಬೆಯಿಸಿಕೊಳ್ಳಲು ಬಿಜೆಪಿ ಮತ್ತು ಸಂಘ ಪರಿವಾರ ಬಯಸುತ್ತಿದೆ. ರಾಜ್ಯ ಬಿಜೆಪಿ ಸರ್ಕಾರವು ಈಗ ತಮ್ಮ ಬೆಂಬಲಿಗರು ಮತ್ತು ಪಕ್ಷದ ವರಿಷ್ಟರ ವಿರುದ್ಧದ 62 ಪ್ರಕರಣಗಳನ್ನು ಹಿಂಪಡೆದಿರುವುದನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಇಂತಹ ಆರೋಪಗಳನ್ನು ಮಾಡುತ್ತಿದೆ” ಎಂದು ಎಸ್.ಡಿ.ಪಿ.ಐ ಮುಖಂಡ ಇಲ್ಯಾಸ್ ತುಂಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಬಿಜೆಪಿಯ ಮಾಜಿ ಎಂ.ಎಲ್.ಸಿ.ಯಾಗಿದ್ದ, ಪ್ರಸ್ತುತ ಬಿಜೆಪಿ ಪ್ಲಾನಿಂಗ್ ವಿಭಾಗದ ಉಪ ನಿರ್ದೇಶಕರಾಗಿರುವ ಪುಟ್ಟಸ್ವಾಮಿ.ಬಿ.ಜೆ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಹೌದು ಕಾಂಗ್ರೆಸ್ ಇಂತಹ ಕ್ರಮ ತೆಗೆದುಕೊಂಡಿರುವುದರ ಪರಿಣಾಮವೇ ಇಂದಿನ ಡಿ.ಜೆ.ಹಳ್ಳಿ ಗಲಭೆಗೆ ಕಾರಣವಾಗಿದೆ. ಕಾಂಗ್ರೆಸ್ ಮೊದಲಿನಿಂದಲೂ ಅವರ ಪರವಾಗಿಯೇ ಕೆಲಸ ಮಾಡಿಕೊಂಡುಬಂದಿದೆ” ಎಂದರು.

“175 ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಿಮಗೆ ಅಗತ್ಯವಿದ್ದರೆ ಗೃಹ ಇಲಾಖೆಯನ್ನು ಸಂಪರ್ಕಿಸಿ ತೆಗೆದುಕೊಳ್ಳಬಹುದು” ಎಂದರು.

ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ಮತ್ತು ವಾಮನಾಚಾರ್ಯ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ್ಯೂ ಸಂಪರ್ಕಕ್ಕೆ ಅವರು ಸಿಗಲಿಲ್ಲ. ಹಾಗಾಗಿ ಅವರು ಸಂಪರ್ಕಕ್ಕೆ ಬಂದ ನಂತರ ಅವರ ಹೇಳಿಕೆಯನ್ನು ಅಥವಾ ಅವರು ನೀಡುವ ದಾಖಲೆಯನ್ನು ಅಪ್ಡೇಟ್ ಮಾಡಲಾಗುವುದು.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...