HomeಮುಖಪುಟPFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

175 ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಿಮಗೆ ಅಗತ್ಯವಿದ್ದರೆ ಗೃಹ ಇಲಾಖೆಯನ್ನು ಸಂಪರ್ಕಿಸಿ ತೆಗೆದುಕೊಳ್ಳಬಹುದು ಎಂದು ಬಿಜೆಪಿ ಮುಖಂಡರಾದ ಪುಟ್ಟಸ್ವಾಮಿ.ಬಿ.ಜೆ ತಿಳಿಸಿದ್ದಾರೆ.

- Advertisement -
- Advertisement -

ಪಿ.ಎಫ್.ಐ/ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಅವಾಗಾವಾಗ ಆರೋಪಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧದ 62 ಪ್ರಕರಣಗಳನ್ನು ರಾಜ್ಯ ಬಿಜೆಪಿ ಸರ್ಕಾರ ಹಿಂಪಡೆದ ಹಿನ್ನೆಲೆಯಲ್ಲಿ ಈ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಬಿಜೆಪಿ ಸರ್ಕಾರ 62 ಪ್ರಕರಣಗಳನ್ನು ಹಿಂಪಡೆದ ವಿಷಯದ ಮೇಲೆ ನಾನುಗೌರಿ.ಕಾಂ ವಿಶೇಷ ವರದಿಯೊಂದನ್ನು ತಯಾರಿಸುತ್ತಿತ್ತು. ಇದರ ಸಲುವಾಗಿ ರಾಜ್ಯ ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ಅವರ ಪ್ರತಿಕ್ರಿಯೆಯನ್ನು ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್.ಡಿ.ಪಿ.ಐ ಅಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು” ಎಂದು ಆರೋಪಿಸಿದ್ದರು.

“ವಿವಿಧ ಸಂದರ್ಭಗಳಲ್ಲಿ, ರೈತರ ಪರ, ಸಾರ್ವಜನಿಕರ ಪರ ಹೋರಾಟ ಮಾಡಿರುವ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವ ಅಧಿಕಾರ ಸರ್ಕಾರಕ್ಕಿದೆ. ಹಾಗಾಗಿ ಇಂತಹ ಕೆಲವು ಹೋರಾಟಗಳಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನು ನಮ್ಮ ಸರ್ಕಾರ ಹಿಂಪಡೆದಿದೆ. ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಎಸ್.ಡಿ.ಪಿ.ಐ ನಂತಹ ಸಂಘಟನೆಯ ವಿರುದ್ಧದ ಸುಮಾರು 175 ಪ್ರಕರಣಗಳನ್ನು ಹಿಂಪಡೆದಿತ್ತು. ನಾವು ಅಂತಹ ಪ್ರಕರಣಗಳನ್ನು ಹಿಂಪಡೆದಿಲ್ಲವಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ಈ ಕುರಿತು ಬಿಜೆಪಿ ಮತ್ತು ಎಸ್‌ಡಿಪಿಐ ಎರಡೂ ಸಂಘಟನೆಗಳ ಮುಖಂಡರ ಅಭಿಪ್ರಾಯ ಮತ್ತು ದಾಖಲೆ ಪಡೆದು ಪರಿಶೀಲಿಸಲು ನಾನುಗೌರಿ.ಕಾಂ ಪ್ರಯತ್ನಿಸಿದೆ.

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾದ ಇಲ್ಯಾಸ್ ಮಹಮ್ಮದ್ ತುಂಬೆಯವರನ್ನು ಸಂಪರ್ಕಿಸಿದಾಗ “ಬಿಜೆಪಿಯವರು ತಮ್ಮ ಲೋಪವನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ನಮ್ಮ ಸಂಘಟನೆಯ ಕೇವಲ 3 ಪ್ರಕರಣಗಳನ್ನು ಮಾತ್ರ ಹಿಂಪಡೆಯಲಾಗಿತ್ತು. ಆದರೆ ಅದೇ ಸಮಯದಲ್ಲಿ ಶ್ರೀರಾಮಸೇನೆಯಂತಹ ಇತರ ಹಿಂದೂ ಸಂಘಟನೆಗಳ ಹಲವು ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರವೇ ಹಿಂಪಡೆದಿತ್ತು” ಎಂದು ಹೇಳಿದರು.

2013 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2009-10 ನೇ ಸಾಲಿನಲ್ಲಿ, ಮೈಸೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಪಿ.ಎಫ್.ಐ ನ 175 ಕೇಸುಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂಬ ಸಂಘಪರಿವಾರದ ಆರೋಪಗಳ ಕುರಿತ ವಾಸ್ತವಾಂಶಗಳನ್ನು ಈ ಕೆಳಗೆ ನೀಡಲಾಗಿದೆ.

ಇದು ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳ ವಿವರ. ಮೈಸೂರು-40, ಹಾಸನ-21 ಮತ್ತು ಶಿವಮೊಗ್ಗ-114 ಸೇರಿ, ಒಟ್ಟು 175 ಪ್ರಕರಣಗಳನ್ನು ಅಂದಿನ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಇದರಲ್ಲಿ 3 ಪ್ರಕರಣಗಳು ಪಿ.ಎಫ್.ಐ ಮೇಲೆ ದಾಖಲಿಸಿದವುಗಳಾಗಿವೆ.

ಎಸ್‌ಡಿಪಿಐ ಮೇಲಿನ ಹಿಂಪಡೆದ ಕೇಸುಗಳಾವುವು?

ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ 2009 ಜುಲೈ 2ರಂದು ಹಲೀಮ್ ಶಾದಿಯ ಮದರಸದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಹಂದಿಯ ರುಂಡವನ್ನು ಹಾಕಿ ಕೋಮುಗಲಭೆಯನ್ನು ಹುಟ್ಟಹಾಕಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ನಿರ್ದೇಶನದಂತೆ, ಸುತ್ತಮುತ್ತಲಿನ ಹಿಂದೂ-ಮುಸ್ಲಿಂ ಮನೆಗಳಿಗೆ ರಾತ್ರೋರಾತ್ರಿ ನುಗ್ಗಿದ ಪೊಲೀಸರು ಅಮಾಯಕರನ್ನು ಬಂಧಿಸಿದ್ದರು. ಮೈಸೂರು ಜಿಲ್ಲೆಯ ಪಿ.ಎಫ್.ಐ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಪೊಲೀಸರ ಈ ನಡವಳಿಕೆಯನ್ನು ಖಂಡಿಸಿದ್ದು, ಉಸ್ತುವಾರಿ ಸಚಿವರು, ಗೃಹ ಸಚಿವರು ಹಾಗೂ ಪೊಲೀಸರ ವಿರುದ್ಧ ನೇರವಾಗಿ ಆಕ್ಷೇಪಿಸಿದ್ದರು. ನಂತರ ಪತ್ರಿಕಾ ಭವನದ ಮುಂಭಾಗದಲ್ಲಿಯೇ ಎಸಿಪಿ ಪೂಜಾರ್ ಅವರ ತಂಡವು ಪಿ.ಎಫ್.ಐ ಪದಾಧಿಕಾರಿಗಳನ್ನು ಬಂಧಿಸಿದ್ದರು. ಇದನ್ನು ವಿರೋಧಿಸಿ ಜುಲೈ 7, 2009 ರಂದು ಪಿ.ಎಫ್.ಐ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದರು.

ಈ ಬಗ್ಗೆ ವಕೀಲರಾದ ಎ.ಕೆ.ಸುಬ್ಬಯ್ಯನವರ ಮುಖಾಂತರ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದಾಗ ‘ಪಿ.ಎಫ್.ಐ ಕಾರ್ಯಕರ್ತರ ಬಂಧನ ಅಕ್ರಮ ಹಾಗೂ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು, WP ನಂ. 122/2009, 123/2009 ರಲ್ಲಿ ಬಂಧಿಸಲ್ಪಟ್ಟ ಜನರನ್ನು ಬಿಡುಗಡೆಗೊಳಿಸುವಂತೆ’ ಕೋರ್ಟ್ ಆದೇಶಿಸಿತ್ತು. ಅಕ್ರಮ ಬಂಧನಕ್ಕೊಳಪಡಿಸಿದ ಅಧಿಕಾರಿಗಳ ವಿರುದ್ಧ ರಿಟ್ ಸಲ್ಲಿಸಿದಾಗ, ಅಂದಿನ ಉದಯಗಿರಿ ಮತ್ತು ನರಸಿಂಹರಾಜ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ 50,000 ರೂ.ಗಳನ್ನು ದಂಡವನ್ನು ಕೋರ್ಟ್ ವಿಧಿಸಲಾಗಿತ್ತು.

ಕಾಂಗ್ರೆಸ್ ಸರ್ಕಾರ ಹಿಂಪಡೆದ ಮೈಸೂರಿನ 40 ಪ್ರಕರಣಗಳಲ್ಲಿ 3 ಪ್ರಕರಣಗಳು ಪಿ.ಎಫ್.ಐ ಮೇಲೆ ದಾಖಲಿಸಿದ ಕೇಸುಗಳಾಗಿದ್ದು, ಉಳಿದ ಎಲ್ಲಾ 37 ಕೇಸುಗಳೂ ಶ್ರೀರಾಮಸೇನೆ, ಭಜರಂಗದಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸ್ಥಳೀಯರ ಮೇಲೆ ದಾಖಲಾದ ಕೇಸುಗಳಾಗಿವೆ.

ಮೈಸೂರಿನಲ್ಲಿ ಪಿ.ಎಫ್.ಐ ವಿರುದ್ಧ ದಾಖಲಾದ ಕೇಸುಗಳನ್ನು ಅಲ್ಲಿನ ಸರ್ಕಾರಿ ಅಭಿಯೋಜಕರು ‘ಇದರಲ್ಲಿ ಯಾವುದೇ ಪ್ರಾಥಮಿಕ ಸಾಕ್ಷಿ ಇಲ್ಲವೆಂದು ಹೇಳಿ ಹಿಂದಕ್ಕೆ ಪಡೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಅಂದಿನ ಕ್ಯಾತಮಾರನಳ್ಳಿ ಗಲಭೆಗೆ ಶ್ರೀರಾಮಸೇನೆ ನೇರಹೊಣೆ ಎಂದು ಪಿಯುಸಿಎಲ್ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ನಡೆಸಿದ ಸತ್ಯಶೋಧನಾ ವರದಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಡಿ.ಜೆ ಹಳ್ಳಿಯಲ್ಲಿ ಗಲಭೆಯಾಗುತ್ತಿದ್ದಾಗ ಮುಸ್ಲಿಂ ಮುಖಂಡರು ಏನು ಮಾಡುತ್ತಿದ್ದರು?

ಫೆಬ್ರವರಿ 20, 2010 ರಂದು ಕನ್ನಡ ಪ್ರಭ ದಿನಪತ್ರಿಕೆಯ ಸಾಪ್ತಾಹಿಕ ಪುಟದಲ್ಲಿ, ‘ಬನ್ನೀ ಬುರ್ಖಾ ಬಗ್ಗೆ ಮತ್ತೊಮ್ಮೆ ಚಿಂತಿಸೋಣ’ ಎಂಬ ವಿವಾದಾತ್ಮಕ ಲೇಖನ (ಲೇಖಕಿ ತಸ್ಲೀಮಾ ನಸ್ರಿನ್, ಪ್ರವಾದಿ ಮಹಮ್ಮದ್ ಅವರನ್ನು ಅವಮಾನಿಸಿ ಬರೆದಂತಹ “ಪರ್ದಾ ಹೈ ಪರ್ದಾ”) ಪ್ರಕಟವಾದ ಹಿನ್ನೆಲೆಯಲ್ಲಿ ಪತ್ರಿಕೆಯ ವಿರುದ್ಧ ಶಿವಮೊಗ್ಗ ಮತ್ತು ಹಾಸನದಲ್ಲಿ ನಡೆದ ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಗೋಲೀಬಾರ್ ನಡೆಸಿದ್ದು, ಇದರಲ್ಲಿ ಪ್ರಾಣಹಾನಿ ಸಂಭವಿಸಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ನಷ್ಟವಾಗಿತ್ತು.

ಈ ಗಲಭೆಗೆ ಸಂಬಂಧಿಸಿದಂತೆ ಹಾಸನದಲ್ಲಿ 21 ಹಾಗೂ ಶಿವಮೊಗ್ಗದಲ್ಲಿ 114 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಪಿ.ಎಫ್.ಐ ಕಾರ್ಯಕರ್ತರ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ.

ಹೀಗೆ ಒಟ್ಟು 175 ಪ್ರಕರಣಗಳಲ್ಲಿ 3 ಪ್ರಕರಣಗಳು (ಒಂದು ಪ್ರಕರಣವನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರೇ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು) ಮಾತ್ರ ಪಿ.ಎಫ್.ಐ/ಎಸ್.ಡಿ.ಪಿ.ಐ ಮೇಲಿನ ಪ್ರಕರಣಗಳಾಗಿವೆ.

“ಪಿ.ಎಫ್.ಐ/ಎಸ್.ಡಿ.ಪಿ.ಐ ಮೇಲಿನ 175 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಸುಳ್ಳು ಆರೋಪ ಮಾಡಿ ತಮ್ಮ ರಾಜಕೀಯ ಬೇಳೆ ಬೆಯಿಸಿಕೊಳ್ಳಲು ಬಿಜೆಪಿ ಮತ್ತು ಸಂಘ ಪರಿವಾರ ಬಯಸುತ್ತಿದೆ. ರಾಜ್ಯ ಬಿಜೆಪಿ ಸರ್ಕಾರವು ಈಗ ತಮ್ಮ ಬೆಂಬಲಿಗರು ಮತ್ತು ಪಕ್ಷದ ವರಿಷ್ಟರ ವಿರುದ್ಧದ 62 ಪ್ರಕರಣಗಳನ್ನು ಹಿಂಪಡೆದಿರುವುದನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಇಂತಹ ಆರೋಪಗಳನ್ನು ಮಾಡುತ್ತಿದೆ” ಎಂದು ಎಸ್.ಡಿ.ಪಿ.ಐ ಮುಖಂಡ ಇಲ್ಯಾಸ್ ತುಂಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಬಿಜೆಪಿಯ ಮಾಜಿ ಎಂ.ಎಲ್.ಸಿ.ಯಾಗಿದ್ದ, ಪ್ರಸ್ತುತ ಬಿಜೆಪಿ ಪ್ಲಾನಿಂಗ್ ವಿಭಾಗದ ಉಪ ನಿರ್ದೇಶಕರಾಗಿರುವ ಪುಟ್ಟಸ್ವಾಮಿ.ಬಿ.ಜೆ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಹೌದು ಕಾಂಗ್ರೆಸ್ ಇಂತಹ ಕ್ರಮ ತೆಗೆದುಕೊಂಡಿರುವುದರ ಪರಿಣಾಮವೇ ಇಂದಿನ ಡಿ.ಜೆ.ಹಳ್ಳಿ ಗಲಭೆಗೆ ಕಾರಣವಾಗಿದೆ. ಕಾಂಗ್ರೆಸ್ ಮೊದಲಿನಿಂದಲೂ ಅವರ ಪರವಾಗಿಯೇ ಕೆಲಸ ಮಾಡಿಕೊಂಡುಬಂದಿದೆ” ಎಂದರು.

“175 ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ. ನಿಮಗೆ ಅಗತ್ಯವಿದ್ದರೆ ಗೃಹ ಇಲಾಖೆಯನ್ನು ಸಂಪರ್ಕಿಸಿ ತೆಗೆದುಕೊಳ್ಳಬಹುದು” ಎಂದರು.

ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ಮತ್ತು ವಾಮನಾಚಾರ್ಯ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ್ಯೂ ಸಂಪರ್ಕಕ್ಕೆ ಅವರು ಸಿಗಲಿಲ್ಲ. ಹಾಗಾಗಿ ಅವರು ಸಂಪರ್ಕಕ್ಕೆ ಬಂದ ನಂತರ ಅವರ ಹೇಳಿಕೆಯನ್ನು ಅಥವಾ ಅವರು ನೀಡುವ ದಾಖಲೆಯನ್ನು ಅಪ್ಡೇಟ್ ಮಾಡಲಾಗುವುದು.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...