Homeಕರ್ನಾಟಕ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ - ಡಿ.ಕೆ. ಶಿವಕುಮಾರ್‌‌

‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

- Advertisement -
- Advertisement -

ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಲ್ಲಿರುವ ಲೈಂಗಿಕ ಹಗರಣ ಮತ್ತು ಸಿಡಿ ವಿಚಾರವಾಗಿ ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ “ರಾಜಕಾರಣದಲ್ಲಿ ಷಡ್ಯಂತ್ರ ಸಹಜ. ಇವರಿಗೆ ಶರ್ಟು, ಪ್ಯಾಂಟ್ ಬಿಚ್ಚಲು ಯಾರಾದರೂ ಹೇಳಿ ಕೊಟ್ಟಿದ್ರಾ? ಅವರು ಆಡಿರುವ ಮಾತುಗಳಿಗೆ ಸ್ಕ್ರಿಪ್ಟ್ ನಾವು ಬರೆದು ಕೊಟ್ಟಿದ್ವಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಸುಮ್ಮನೆ ಏನೂ ಕುಳಿತಿಲ್ಲ. ಯಡಿಯೂರಪ್ಪ ವಿರುದ್ಧ ಸೆಡ್ಡು ಹೊಡೆದ ಶಾಸಕರು ಸಿಡಿ ಬಿಡುಗಡೆ ಮಾಡಿದ್ದಾರೆ. ವಿಶ್ವನಾಥ್ ಅವರು ಮುಖ್ಯಮಂತ್ರಿಗೆ ಸಿಡಿ ಗುಮ್ಮಾ ಅಂತಾ ಹೇಳಿದ್ದಾರೆ. ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ ಅಂತಾ ಯತ್ನಾಳ್ ಅವರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎಲ್ಲರನ್ನು ಒಗ್ಗೂಡಿಸಲು ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿಕೊಂಡಿದ್ದರು ಎಂದು ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಹಿಂದೆ ಶ್ರೀನಿವಾಸ ಗೌಡರು ಭ್ರಷ್ಟಾಚಾರ ಕುರಿತು ಸದನದಲ್ಲೇ ಕೊಟ್ಟ ಹೇಳಿಕೆ ಬಗ್ಗೆ ತನಿಖೆ ಮಾಡಲು ಆಗಲಿಲ್ಲ. ಭ್ರಷ್ಟಾಚಾರದ ಬಗ್ಗೆ ಕೊಟ್ಟ ಹೇಳಿಕೆ ವಿರುದ್ಧದ ತನಿಖೆ ಏನಾದವು?” ಎಂದು ಹೇಳಿದ್ದಾರೆ.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

“ಸಿ.ಡಿ.ಯಲ್ಲಿ ಯಡಿಯೂರಪ್ಪ ಭ್ರಷ್ಟಾಚಾರಿ ಅಂತ ಹೇಳಿದ್ದಾರೆ, ಮಾಧ್ಯಮಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕನ್ನಡಿಗರನ್ನು ಅವಹೇಳನ ಮಾಡಿದ್ದಾರೆ. ಕನ್ನಡಿಗನಾಗಿ ನಾನು ಆ ಮಾತು ಹೇಳಬಾರದು. ಬೆಳಗಾವಿಯನ್ನು ಪ್ರತ್ಯೇಕ ರಾಜ್ಯ ಎಂದಿದ್ದಾರೆ. ಕನ್ನಡ ಹೋರಾಟಗಾರರು ಯಾಕೆ ಇನ್ನೂ ಸುಮ್ನೆ ಇದ್ದಾರೋ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಸರ್ಕಾರವೇ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಯಾಕೆ ಇನ್ನೂ ಕೇಸು ಹಾಕಿಲ್ಲ, ಕೇಸು ತೆಗೆದುಕೊಂಡಿಲ್ಲ” ಎಂದು ಅವರು ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

“ಈ ವಿಚಾರವಾಗಿ ಕೆಲವರು ಕೋರ್ಟ್ ಗೆ ಹೋಗಿ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸಿ.ಡಿ. ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿದ್ದಾರೆ. ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಆ ಬಗ್ಗೆ ಅವರಿಗೇ ಗೊತ್ತಿದೆ. ನಮಗೇನು ಗೊತ್ತು? ಈ ಸಿ.ಡಿ. ಪ್ರಸಂಗ ಬಾಂಬೆಯಲ್ಲಿ ನಡೆಯಿತೋ? ಬೆಂಗಳೂರಿನಲ್ಲಿ ನಡೆಯಿತೋ? ಪೂನಾದಲ್ಲಿ ನಡಿತೋ? ಬಿಜೆಪಿ ಸರ್ಕಾರ ಇತ್ತೋ? ಶಿವಸೇನೆ ಸರ್ಕಾರ ಇತ್ತೋ? ಯಾರು, ಏನು, ಎತ್ತಾ ಅಂತಾ ಅವರೇ ಹೇಳಬೇಕು? ಇದರಲ್ಲಿ ತಿರುಚುವುದು ಏನಿದೆ? ಒಂದೋ ಎರಡೋ ತಿರುಚಬಹುದು. 19 ಸಿ.ಡಿ.ಗಳನ್ನೂ ತಿರುಚಲು ಆಗುತ್ತಾ?” ಎಂದು ಡಿಕೆಶಿ ಕೇಳಿದ್ದಾರೆ.

ಸಿ.ಡಿ.ಯನ್ನು ಕಾಂಗ್ರೆಸ್‌‌ನವರು ಬಿಡುಗಡೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ,  “ಕಾಂಗ್ರೆಸ್‌ನವರು ಮಾಡಿದ್ದಾರೆ ಅಂದ್ರೆ, ಕಾಂಗ್ರೆಸ್ ಅವರು ಬಂದು ನಿಮ್ಮ ಶರ್ಟು, ಪ್ಯಾಂಟ್ ಬಿಚ್ಚಿ ಅಂತಾ ಹೇಳಿ ಕೊಟ್ಟಿದ್ರಾ? ಸಿಎಂ ಭ್ರಷ್ಟ ಎಂದು ಹೇಳಲು ಸ್ಕ್ರಿಪ್ಟ್ ಬರೆದು ಕೊಟ್ಟಿದ್ರಾ? ಕನ್ನಡಿಗರ ವಿರುದ್ಧ ಮಾತಾಡಿ ಎಂದು ಹೇಳಿಕೊಟ್ವಾ? ನಾವೇನು ಸ್ಕ್ರಿಪ್ಟ್ ಕೊಟ್ವಾ? ಇದೇನು ಸಿನಿಮಾನಾ? ಇವೆಲ್ಲಾ ಅವರ ಬಾಯಿಲ್ಲಿ ಬಂದಂತಹ ನುಡಿಮುತ್ತುಗಳು..!” ಎಂದು ಹೇಳಿದ್ದಾರೆ.

ಯಾವ ತನಿಖೆ ಬೇಕಾದರೂ ಮಾಡಲಿ, ಯಾವ ಪಕ್ಷದ ಮೇಲಾದರೂ ಹೇಳಲಿ. ವಿರೋಧ ಪಕ್ಷವಾಗಿ ನಾವು ಭ್ರಷ್ಟಾಚಾರ ಆರೋಪ ಮಾಡುವುದು ಬೇರೆ ವಿಚಾರ. ಆದರೆ ಹಾಲಿ ಮಂತ್ರಿ ಅವರು ಮುಖ್ಯಮಂತ್ರಿ ಭ್ರಷ್ಟ ಎಂದಾಗ ಈ ಬಗ್ಗೆ ತನಿಖೆ ನಡೆಯಬೇಕು ಅಲ್ಲವೇ? ಇದನ್ನು ಮುಖ್ಯಮಂತ್ರಿಗಳು ಹೇಗೆ ಸಹಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಹಾಲು ಕುಡಿಸಿ, ಇಂತಹ ಮಾತು ಹೇಳಿಸಲು ಅವರೇನು ಚಿಕ್ಕ ಮಕ್ಕಳಾ? ಇದನ್ನೆಲ್ಲಾ ಹೇಗೆ ನಿಭಾಯಿಸಬೇಕು ಅಂತಾ ಕಾಂಗ್ರೆಸ್‌ಗೆ ಗೊತ್ತಿದೆ. ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...