Homeಕರ್ನಾಟಕ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ - ಡಿ.ಕೆ. ಶಿವಕುಮಾರ್‌‌

‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

- Advertisement -
- Advertisement -

ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಲ್ಲಿರುವ ಲೈಂಗಿಕ ಹಗರಣ ಮತ್ತು ಸಿಡಿ ವಿಚಾರವಾಗಿ ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ “ರಾಜಕಾರಣದಲ್ಲಿ ಷಡ್ಯಂತ್ರ ಸಹಜ. ಇವರಿಗೆ ಶರ್ಟು, ಪ್ಯಾಂಟ್ ಬಿಚ್ಚಲು ಯಾರಾದರೂ ಹೇಳಿ ಕೊಟ್ಟಿದ್ರಾ? ಅವರು ಆಡಿರುವ ಮಾತುಗಳಿಗೆ ಸ್ಕ್ರಿಪ್ಟ್ ನಾವು ಬರೆದು ಕೊಟ್ಟಿದ್ವಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಸುಮ್ಮನೆ ಏನೂ ಕುಳಿತಿಲ್ಲ. ಯಡಿಯೂರಪ್ಪ ವಿರುದ್ಧ ಸೆಡ್ಡು ಹೊಡೆದ ಶಾಸಕರು ಸಿಡಿ ಬಿಡುಗಡೆ ಮಾಡಿದ್ದಾರೆ. ವಿಶ್ವನಾಥ್ ಅವರು ಮುಖ್ಯಮಂತ್ರಿಗೆ ಸಿಡಿ ಗುಮ್ಮಾ ಅಂತಾ ಹೇಳಿದ್ದಾರೆ. ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ ಅಂತಾ ಯತ್ನಾಳ್ ಅವರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎಲ್ಲರನ್ನು ಒಗ್ಗೂಡಿಸಲು ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿಕೊಂಡಿದ್ದರು ಎಂದು ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಹಿಂದೆ ಶ್ರೀನಿವಾಸ ಗೌಡರು ಭ್ರಷ್ಟಾಚಾರ ಕುರಿತು ಸದನದಲ್ಲೇ ಕೊಟ್ಟ ಹೇಳಿಕೆ ಬಗ್ಗೆ ತನಿಖೆ ಮಾಡಲು ಆಗಲಿಲ್ಲ. ಭ್ರಷ್ಟಾಚಾರದ ಬಗ್ಗೆ ಕೊಟ್ಟ ಹೇಳಿಕೆ ವಿರುದ್ಧದ ತನಿಖೆ ಏನಾದವು?” ಎಂದು ಹೇಳಿದ್ದಾರೆ.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

“ಸಿ.ಡಿ.ಯಲ್ಲಿ ಯಡಿಯೂರಪ್ಪ ಭ್ರಷ್ಟಾಚಾರಿ ಅಂತ ಹೇಳಿದ್ದಾರೆ, ಮಾಧ್ಯಮಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕನ್ನಡಿಗರನ್ನು ಅವಹೇಳನ ಮಾಡಿದ್ದಾರೆ. ಕನ್ನಡಿಗನಾಗಿ ನಾನು ಆ ಮಾತು ಹೇಳಬಾರದು. ಬೆಳಗಾವಿಯನ್ನು ಪ್ರತ್ಯೇಕ ರಾಜ್ಯ ಎಂದಿದ್ದಾರೆ. ಕನ್ನಡ ಹೋರಾಟಗಾರರು ಯಾಕೆ ಇನ್ನೂ ಸುಮ್ನೆ ಇದ್ದಾರೋ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಸರ್ಕಾರವೇ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಯಾಕೆ ಇನ್ನೂ ಕೇಸು ಹಾಕಿಲ್ಲ, ಕೇಸು ತೆಗೆದುಕೊಂಡಿಲ್ಲ” ಎಂದು ಅವರು ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

“ಈ ವಿಚಾರವಾಗಿ ಕೆಲವರು ಕೋರ್ಟ್ ಗೆ ಹೋಗಿ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸಿ.ಡಿ. ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿದ್ದಾರೆ. ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಆ ಬಗ್ಗೆ ಅವರಿಗೇ ಗೊತ್ತಿದೆ. ನಮಗೇನು ಗೊತ್ತು? ಈ ಸಿ.ಡಿ. ಪ್ರಸಂಗ ಬಾಂಬೆಯಲ್ಲಿ ನಡೆಯಿತೋ? ಬೆಂಗಳೂರಿನಲ್ಲಿ ನಡೆಯಿತೋ? ಪೂನಾದಲ್ಲಿ ನಡಿತೋ? ಬಿಜೆಪಿ ಸರ್ಕಾರ ಇತ್ತೋ? ಶಿವಸೇನೆ ಸರ್ಕಾರ ಇತ್ತೋ? ಯಾರು, ಏನು, ಎತ್ತಾ ಅಂತಾ ಅವರೇ ಹೇಳಬೇಕು? ಇದರಲ್ಲಿ ತಿರುಚುವುದು ಏನಿದೆ? ಒಂದೋ ಎರಡೋ ತಿರುಚಬಹುದು. 19 ಸಿ.ಡಿ.ಗಳನ್ನೂ ತಿರುಚಲು ಆಗುತ್ತಾ?” ಎಂದು ಡಿಕೆಶಿ ಕೇಳಿದ್ದಾರೆ.

ಸಿ.ಡಿ.ಯನ್ನು ಕಾಂಗ್ರೆಸ್‌‌ನವರು ಬಿಡುಗಡೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ,  “ಕಾಂಗ್ರೆಸ್‌ನವರು ಮಾಡಿದ್ದಾರೆ ಅಂದ್ರೆ, ಕಾಂಗ್ರೆಸ್ ಅವರು ಬಂದು ನಿಮ್ಮ ಶರ್ಟು, ಪ್ಯಾಂಟ್ ಬಿಚ್ಚಿ ಅಂತಾ ಹೇಳಿ ಕೊಟ್ಟಿದ್ರಾ? ಸಿಎಂ ಭ್ರಷ್ಟ ಎಂದು ಹೇಳಲು ಸ್ಕ್ರಿಪ್ಟ್ ಬರೆದು ಕೊಟ್ಟಿದ್ರಾ? ಕನ್ನಡಿಗರ ವಿರುದ್ಧ ಮಾತಾಡಿ ಎಂದು ಹೇಳಿಕೊಟ್ವಾ? ನಾವೇನು ಸ್ಕ್ರಿಪ್ಟ್ ಕೊಟ್ವಾ? ಇದೇನು ಸಿನಿಮಾನಾ? ಇವೆಲ್ಲಾ ಅವರ ಬಾಯಿಲ್ಲಿ ಬಂದಂತಹ ನುಡಿಮುತ್ತುಗಳು..!” ಎಂದು ಹೇಳಿದ್ದಾರೆ.

ಯಾವ ತನಿಖೆ ಬೇಕಾದರೂ ಮಾಡಲಿ, ಯಾವ ಪಕ್ಷದ ಮೇಲಾದರೂ ಹೇಳಲಿ. ವಿರೋಧ ಪಕ್ಷವಾಗಿ ನಾವು ಭ್ರಷ್ಟಾಚಾರ ಆರೋಪ ಮಾಡುವುದು ಬೇರೆ ವಿಚಾರ. ಆದರೆ ಹಾಲಿ ಮಂತ್ರಿ ಅವರು ಮುಖ್ಯಮಂತ್ರಿ ಭ್ರಷ್ಟ ಎಂದಾಗ ಈ ಬಗ್ಗೆ ತನಿಖೆ ನಡೆಯಬೇಕು ಅಲ್ಲವೇ? ಇದನ್ನು ಮುಖ್ಯಮಂತ್ರಿಗಳು ಹೇಗೆ ಸಹಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಹಾಲು ಕುಡಿಸಿ, ಇಂತಹ ಮಾತು ಹೇಳಿಸಲು ಅವರೇನು ಚಿಕ್ಕ ಮಕ್ಕಳಾ? ಇದನ್ನೆಲ್ಲಾ ಹೇಗೆ ನಿಭಾಯಿಸಬೇಕು ಅಂತಾ ಕಾಂಗ್ರೆಸ್‌ಗೆ ಗೊತ್ತಿದೆ. ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...