Homeಕರ್ನಾಟಕ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ - ಡಿ.ಕೆ. ಶಿವಕುಮಾರ್‌‌

‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

- Advertisement -
- Advertisement -

ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಲ್ಲಿರುವ ಲೈಂಗಿಕ ಹಗರಣ ಮತ್ತು ಸಿಡಿ ವಿಚಾರವಾಗಿ ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ “ರಾಜಕಾರಣದಲ್ಲಿ ಷಡ್ಯಂತ್ರ ಸಹಜ. ಇವರಿಗೆ ಶರ್ಟು, ಪ್ಯಾಂಟ್ ಬಿಚ್ಚಲು ಯಾರಾದರೂ ಹೇಳಿ ಕೊಟ್ಟಿದ್ರಾ? ಅವರು ಆಡಿರುವ ಮಾತುಗಳಿಗೆ ಸ್ಕ್ರಿಪ್ಟ್ ನಾವು ಬರೆದು ಕೊಟ್ಟಿದ್ವಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಸುಮ್ಮನೆ ಏನೂ ಕುಳಿತಿಲ್ಲ. ಯಡಿಯೂರಪ್ಪ ವಿರುದ್ಧ ಸೆಡ್ಡು ಹೊಡೆದ ಶಾಸಕರು ಸಿಡಿ ಬಿಡುಗಡೆ ಮಾಡಿದ್ದಾರೆ. ವಿಶ್ವನಾಥ್ ಅವರು ಮುಖ್ಯಮಂತ್ರಿಗೆ ಸಿಡಿ ಗುಮ್ಮಾ ಅಂತಾ ಹೇಳಿದ್ದಾರೆ. ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ ಅಂತಾ ಯತ್ನಾಳ್ ಅವರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎಲ್ಲರನ್ನು ಒಗ್ಗೂಡಿಸಲು ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿಕೊಂಡಿದ್ದರು ಎಂದು ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಹಿಂದೆ ಶ್ರೀನಿವಾಸ ಗೌಡರು ಭ್ರಷ್ಟಾಚಾರ ಕುರಿತು ಸದನದಲ್ಲೇ ಕೊಟ್ಟ ಹೇಳಿಕೆ ಬಗ್ಗೆ ತನಿಖೆ ಮಾಡಲು ಆಗಲಿಲ್ಲ. ಭ್ರಷ್ಟಾಚಾರದ ಬಗ್ಗೆ ಕೊಟ್ಟ ಹೇಳಿಕೆ ವಿರುದ್ಧದ ತನಿಖೆ ಏನಾದವು?” ಎಂದು ಹೇಳಿದ್ದಾರೆ.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

“ಸಿ.ಡಿ.ಯಲ್ಲಿ ಯಡಿಯೂರಪ್ಪ ಭ್ರಷ್ಟಾಚಾರಿ ಅಂತ ಹೇಳಿದ್ದಾರೆ, ಮಾಧ್ಯಮಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕನ್ನಡಿಗರನ್ನು ಅವಹೇಳನ ಮಾಡಿದ್ದಾರೆ. ಕನ್ನಡಿಗನಾಗಿ ನಾನು ಆ ಮಾತು ಹೇಳಬಾರದು. ಬೆಳಗಾವಿಯನ್ನು ಪ್ರತ್ಯೇಕ ರಾಜ್ಯ ಎಂದಿದ್ದಾರೆ. ಕನ್ನಡ ಹೋರಾಟಗಾರರು ಯಾಕೆ ಇನ್ನೂ ಸುಮ್ನೆ ಇದ್ದಾರೋ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಸರ್ಕಾರವೇ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಯಾಕೆ ಇನ್ನೂ ಕೇಸು ಹಾಕಿಲ್ಲ, ಕೇಸು ತೆಗೆದುಕೊಂಡಿಲ್ಲ” ಎಂದು ಅವರು ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

“ಈ ವಿಚಾರವಾಗಿ ಕೆಲವರು ಕೋರ್ಟ್ ಗೆ ಹೋಗಿ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸಿ.ಡಿ. ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿದ್ದಾರೆ. ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಆ ಬಗ್ಗೆ ಅವರಿಗೇ ಗೊತ್ತಿದೆ. ನಮಗೇನು ಗೊತ್ತು? ಈ ಸಿ.ಡಿ. ಪ್ರಸಂಗ ಬಾಂಬೆಯಲ್ಲಿ ನಡೆಯಿತೋ? ಬೆಂಗಳೂರಿನಲ್ಲಿ ನಡೆಯಿತೋ? ಪೂನಾದಲ್ಲಿ ನಡಿತೋ? ಬಿಜೆಪಿ ಸರ್ಕಾರ ಇತ್ತೋ? ಶಿವಸೇನೆ ಸರ್ಕಾರ ಇತ್ತೋ? ಯಾರು, ಏನು, ಎತ್ತಾ ಅಂತಾ ಅವರೇ ಹೇಳಬೇಕು? ಇದರಲ್ಲಿ ತಿರುಚುವುದು ಏನಿದೆ? ಒಂದೋ ಎರಡೋ ತಿರುಚಬಹುದು. 19 ಸಿ.ಡಿ.ಗಳನ್ನೂ ತಿರುಚಲು ಆಗುತ್ತಾ?” ಎಂದು ಡಿಕೆಶಿ ಕೇಳಿದ್ದಾರೆ.

ಸಿ.ಡಿ.ಯನ್ನು ಕಾಂಗ್ರೆಸ್‌‌ನವರು ಬಿಡುಗಡೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ,  “ಕಾಂಗ್ರೆಸ್‌ನವರು ಮಾಡಿದ್ದಾರೆ ಅಂದ್ರೆ, ಕಾಂಗ್ರೆಸ್ ಅವರು ಬಂದು ನಿಮ್ಮ ಶರ್ಟು, ಪ್ಯಾಂಟ್ ಬಿಚ್ಚಿ ಅಂತಾ ಹೇಳಿ ಕೊಟ್ಟಿದ್ರಾ? ಸಿಎಂ ಭ್ರಷ್ಟ ಎಂದು ಹೇಳಲು ಸ್ಕ್ರಿಪ್ಟ್ ಬರೆದು ಕೊಟ್ಟಿದ್ರಾ? ಕನ್ನಡಿಗರ ವಿರುದ್ಧ ಮಾತಾಡಿ ಎಂದು ಹೇಳಿಕೊಟ್ವಾ? ನಾವೇನು ಸ್ಕ್ರಿಪ್ಟ್ ಕೊಟ್ವಾ? ಇದೇನು ಸಿನಿಮಾನಾ? ಇವೆಲ್ಲಾ ಅವರ ಬಾಯಿಲ್ಲಿ ಬಂದಂತಹ ನುಡಿಮುತ್ತುಗಳು..!” ಎಂದು ಹೇಳಿದ್ದಾರೆ.

ಯಾವ ತನಿಖೆ ಬೇಕಾದರೂ ಮಾಡಲಿ, ಯಾವ ಪಕ್ಷದ ಮೇಲಾದರೂ ಹೇಳಲಿ. ವಿರೋಧ ಪಕ್ಷವಾಗಿ ನಾವು ಭ್ರಷ್ಟಾಚಾರ ಆರೋಪ ಮಾಡುವುದು ಬೇರೆ ವಿಚಾರ. ಆದರೆ ಹಾಲಿ ಮಂತ್ರಿ ಅವರು ಮುಖ್ಯಮಂತ್ರಿ ಭ್ರಷ್ಟ ಎಂದಾಗ ಈ ಬಗ್ಗೆ ತನಿಖೆ ನಡೆಯಬೇಕು ಅಲ್ಲವೇ? ಇದನ್ನು ಮುಖ್ಯಮಂತ್ರಿಗಳು ಹೇಗೆ ಸಹಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಹಾಲು ಕುಡಿಸಿ, ಇಂತಹ ಮಾತು ಹೇಳಿಸಲು ಅವರೇನು ಚಿಕ್ಕ ಮಕ್ಕಳಾ? ಇದನ್ನೆಲ್ಲಾ ಹೇಗೆ ನಿಭಾಯಿಸಬೇಕು ಅಂತಾ ಕಾಂಗ್ರೆಸ್‌ಗೆ ಗೊತ್ತಿದೆ. ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...