Homeಕರ್ನಾಟಕ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ - ಡಿ.ಕೆ. ಶಿವಕುಮಾರ್‌‌

‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

- Advertisement -
- Advertisement -

ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಲ್ಲಿರುವ ಲೈಂಗಿಕ ಹಗರಣ ಮತ್ತು ಸಿಡಿ ವಿಚಾರವಾಗಿ ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ “ರಾಜಕಾರಣದಲ್ಲಿ ಷಡ್ಯಂತ್ರ ಸಹಜ. ಇವರಿಗೆ ಶರ್ಟು, ಪ್ಯಾಂಟ್ ಬಿಚ್ಚಲು ಯಾರಾದರೂ ಹೇಳಿ ಕೊಟ್ಟಿದ್ರಾ? ಅವರು ಆಡಿರುವ ಮಾತುಗಳಿಗೆ ಸ್ಕ್ರಿಪ್ಟ್ ನಾವು ಬರೆದು ಕೊಟ್ಟಿದ್ವಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಸುಮ್ಮನೆ ಏನೂ ಕುಳಿತಿಲ್ಲ. ಯಡಿಯೂರಪ್ಪ ವಿರುದ್ಧ ಸೆಡ್ಡು ಹೊಡೆದ ಶಾಸಕರು ಸಿಡಿ ಬಿಡುಗಡೆ ಮಾಡಿದ್ದಾರೆ. ವಿಶ್ವನಾಥ್ ಅವರು ಮುಖ್ಯಮಂತ್ರಿಗೆ ಸಿಡಿ ಗುಮ್ಮಾ ಅಂತಾ ಹೇಳಿದ್ದಾರೆ. ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ ಅಂತಾ ಯತ್ನಾಳ್ ಅವರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎಲ್ಲರನ್ನು ಒಗ್ಗೂಡಿಸಲು ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿಕೊಂಡಿದ್ದರು ಎಂದು ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಹಿಂದೆ ಶ್ರೀನಿವಾಸ ಗೌಡರು ಭ್ರಷ್ಟಾಚಾರ ಕುರಿತು ಸದನದಲ್ಲೇ ಕೊಟ್ಟ ಹೇಳಿಕೆ ಬಗ್ಗೆ ತನಿಖೆ ಮಾಡಲು ಆಗಲಿಲ್ಲ. ಭ್ರಷ್ಟಾಚಾರದ ಬಗ್ಗೆ ಕೊಟ್ಟ ಹೇಳಿಕೆ ವಿರುದ್ಧದ ತನಿಖೆ ಏನಾದವು?” ಎಂದು ಹೇಳಿದ್ದಾರೆ.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

“ಸಿ.ಡಿ.ಯಲ್ಲಿ ಯಡಿಯೂರಪ್ಪ ಭ್ರಷ್ಟಾಚಾರಿ ಅಂತ ಹೇಳಿದ್ದಾರೆ, ಮಾಧ್ಯಮಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕನ್ನಡಿಗರನ್ನು ಅವಹೇಳನ ಮಾಡಿದ್ದಾರೆ. ಕನ್ನಡಿಗನಾಗಿ ನಾನು ಆ ಮಾತು ಹೇಳಬಾರದು. ಬೆಳಗಾವಿಯನ್ನು ಪ್ರತ್ಯೇಕ ರಾಜ್ಯ ಎಂದಿದ್ದಾರೆ. ಕನ್ನಡ ಹೋರಾಟಗಾರರು ಯಾಕೆ ಇನ್ನೂ ಸುಮ್ನೆ ಇದ್ದಾರೋ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಸರ್ಕಾರವೇ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಯಾಕೆ ಇನ್ನೂ ಕೇಸು ಹಾಕಿಲ್ಲ, ಕೇಸು ತೆಗೆದುಕೊಂಡಿಲ್ಲ” ಎಂದು ಅವರು ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

“ಈ ವಿಚಾರವಾಗಿ ಕೆಲವರು ಕೋರ್ಟ್ ಗೆ ಹೋಗಿ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸಿ.ಡಿ. ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿದ್ದಾರೆ. ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಆ ಬಗ್ಗೆ ಅವರಿಗೇ ಗೊತ್ತಿದೆ. ನಮಗೇನು ಗೊತ್ತು? ಈ ಸಿ.ಡಿ. ಪ್ರಸಂಗ ಬಾಂಬೆಯಲ್ಲಿ ನಡೆಯಿತೋ? ಬೆಂಗಳೂರಿನಲ್ಲಿ ನಡೆಯಿತೋ? ಪೂನಾದಲ್ಲಿ ನಡಿತೋ? ಬಿಜೆಪಿ ಸರ್ಕಾರ ಇತ್ತೋ? ಶಿವಸೇನೆ ಸರ್ಕಾರ ಇತ್ತೋ? ಯಾರು, ಏನು, ಎತ್ತಾ ಅಂತಾ ಅವರೇ ಹೇಳಬೇಕು? ಇದರಲ್ಲಿ ತಿರುಚುವುದು ಏನಿದೆ? ಒಂದೋ ಎರಡೋ ತಿರುಚಬಹುದು. 19 ಸಿ.ಡಿ.ಗಳನ್ನೂ ತಿರುಚಲು ಆಗುತ್ತಾ?” ಎಂದು ಡಿಕೆಶಿ ಕೇಳಿದ್ದಾರೆ.

ಸಿ.ಡಿ.ಯನ್ನು ಕಾಂಗ್ರೆಸ್‌‌ನವರು ಬಿಡುಗಡೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ,  “ಕಾಂಗ್ರೆಸ್‌ನವರು ಮಾಡಿದ್ದಾರೆ ಅಂದ್ರೆ, ಕಾಂಗ್ರೆಸ್ ಅವರು ಬಂದು ನಿಮ್ಮ ಶರ್ಟು, ಪ್ಯಾಂಟ್ ಬಿಚ್ಚಿ ಅಂತಾ ಹೇಳಿ ಕೊಟ್ಟಿದ್ರಾ? ಸಿಎಂ ಭ್ರಷ್ಟ ಎಂದು ಹೇಳಲು ಸ್ಕ್ರಿಪ್ಟ್ ಬರೆದು ಕೊಟ್ಟಿದ್ರಾ? ಕನ್ನಡಿಗರ ವಿರುದ್ಧ ಮಾತಾಡಿ ಎಂದು ಹೇಳಿಕೊಟ್ವಾ? ನಾವೇನು ಸ್ಕ್ರಿಪ್ಟ್ ಕೊಟ್ವಾ? ಇದೇನು ಸಿನಿಮಾನಾ? ಇವೆಲ್ಲಾ ಅವರ ಬಾಯಿಲ್ಲಿ ಬಂದಂತಹ ನುಡಿಮುತ್ತುಗಳು..!” ಎಂದು ಹೇಳಿದ್ದಾರೆ.

ಯಾವ ತನಿಖೆ ಬೇಕಾದರೂ ಮಾಡಲಿ, ಯಾವ ಪಕ್ಷದ ಮೇಲಾದರೂ ಹೇಳಲಿ. ವಿರೋಧ ಪಕ್ಷವಾಗಿ ನಾವು ಭ್ರಷ್ಟಾಚಾರ ಆರೋಪ ಮಾಡುವುದು ಬೇರೆ ವಿಚಾರ. ಆದರೆ ಹಾಲಿ ಮಂತ್ರಿ ಅವರು ಮುಖ್ಯಮಂತ್ರಿ ಭ್ರಷ್ಟ ಎಂದಾಗ ಈ ಬಗ್ಗೆ ತನಿಖೆ ನಡೆಯಬೇಕು ಅಲ್ಲವೇ? ಇದನ್ನು ಮುಖ್ಯಮಂತ್ರಿಗಳು ಹೇಗೆ ಸಹಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಹಾಲು ಕುಡಿಸಿ, ಇಂತಹ ಮಾತು ಹೇಳಿಸಲು ಅವರೇನು ಚಿಕ್ಕ ಮಕ್ಕಳಾ? ಇದನ್ನೆಲ್ಲಾ ಹೇಗೆ ನಿಭಾಯಿಸಬೇಕು ಅಂತಾ ಕಾಂಗ್ರೆಸ್‌ಗೆ ಗೊತ್ತಿದೆ. ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...