Homeನಿಜವೋ ಸುಳ್ಳೋFact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

Fact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

- Advertisement -
- Advertisement -

ಲಂಡನ್ ಮೂಲದ ಎಕ್ಸ್‌ಪ್ರೆಸ್.ಕೊ.ಯುಕೆ ಎಂಬ ಪತ್ರಿಕೆ ಏಪ್ರಿಲ್ 20 ರಂದು ವಿವಾದಾತ್ಮಕ ಶೀರ್ಷಿಕೆಯೊಂದಿಗೆ ವರದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ಕೊರೊನಾ ಹಾನಿಗೆ ಪರಿಹಾರವಾಗಿ ಚೀನಾ ದೇಶವು ಜರ್ಮನಿಗೆ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಬರೆಯಲಾಗಿತ್ತು.ಅದಲ್ಲದೆ ಇದರ ನಂತರ ಹಲವಾರು ಮಾಧ್ಯಮಗಳು ಇದೇ ರೀತಿಯ ಶೀರ್ಷಿಕೆಯೊಂದಿಗೆ ವರದಿಯನ್ನು ಪ್ರಕಟಿಸಿದ್ದವು. ಇಂಡಿಯಾ ಟಿವಿ ನ್ಯೂಸ್, ದಿ ಔಟ್‌ಲುಕ್, ಒರಿಸ್ಸಾ ಪೋಸ್ಟ್, ಅಮರ್ ಉಜಲಾ, ಪಂಜಾಬ್ ಕೇಸರಿ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಯನ್ನು ಪ್ರಕಟಿಸಿದ ಪ್ರಮುಖ ಪತ್ರಿಕೆಗಳಾಗಿವೆ. ಆದರೆ ದಿ ಔಟ್‌ಲುಕ್ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಗಳು ಮಾತ್ರ ವರದಿ ಮೂಲವನ್ನು ಐಎಎನ್‌ಎಸ್ ಎಂದು ಉಲ್ಲೇಖಿಸಿದೆ.

ಬಲಪಂಥೀಯ ಪ್ರಚಾರ ವೆಬ್‌ಸೈಟ್ ಒಪಿ ಇಂಡಿಯಾಕ್ಕಾಗಿ ಬರೆಯುವ ಅಶುತೋಷ್ ಮುಗ್ಲಿಕರ್ (ಆರ್ಕೈವ್ ಲಿಂಕ್) ಮತ್ತು ಡೆಮಾಕ್ರಸಿ ನ್ಯೂಸ್ ಲೈವ್‌ನಲ್ಲಿ ಮುಖ್ಯ ಸಂಪಾದಕ ರೋಹಿತ್ ಗಾಂಧಿ (ಆರ್ಕೈವ್ ಲಿಂಕ್) ಅವರು ಏಪ್ರಿಲ್ 20 ರಂದು ದಿ ಎಕ್ಸ್‌ಪ್ರೆಸ್ ವರದಿಯಲ್ಲಿನ ಇದೇ ವಿಷಯವನ್ನು ಹಂಚಿಕೊಂಡಿದ್ದಾರೆ. ಮುಗ್ಲಿಕರ್ ಅವರ ಟ್ವೀಟ್ ಅನ್ನು ಇದುವರೆಗೆ 850 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಲಾಗಿದೆ.ಫ್ಯಾಕ್ಟ್-ಚೆಕ್

ದಿ ಎಕ್ಸ್‌ಪ್ರೆಸ್‌ನ ಶೀರ್ಷಿಕೆಯೂ ಓದುಗರನ್ನು ತಪ್ಪುದಾರಿಗೆಳೆಯುವಂತಿದೆ. ಲೇಖನದ ಮೊದಲ ಸಾಲು ಹೀಗಿದೆ, “ಕೊರೊನಾ ಸಾಂಕ್ರಾಮಿಕದಿಂದಾಗಿ ಚೀನಾದ ವಿರುದ್ಧ ಜರ್ಮನಿ ಸಿಟ್ಟಿಗೆದ್ದಿದೆ. ಹಾನಿಯ ನಷ್ಟ ಪರಿಹಾರವಾಗಿ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಟ್ಯಾಬ್ಲಾಡ್‌ ಪತ್ರಿಕೆಯೊಂದು ವರದಿ ಮಾಡಿದೆ. ಆದರೆ ಅಂತಹ ಬಿಲ್‌ ಅನ್ನು ಜರ್ಮನಿ ಕಳಿಸಿಲ್ಲ ಎಂದು ಕೊನೆಯಲ್ಲಿ ಬರೆದಿದೆ.

25 ಗಂಟೆಗಳ ನಂತರ ದಿ ಎಕ್ಸ್‌ಪ್ರೆಸ್ ತಪ್ಪಾದ ಶೀರ್ಷಿಕೆಯನ್ನು ಬದಲಾಯಿಸಿತು. ವೆಬ್‌ಸೈಟ್‌ನ ಪ್ರಕಾರ, ಈ ಲೇಖನವು ‘ವಿಶ್ವ’ ವಿಭಾಗದಲ್ಲಿ ಹೆಚ್ಚು ಓದಿದ ಲೇಖನವಾಗಿತ್ತು ಎಂಬುದನ್ನು ಗಮನಿಸಬೇಕು.

ಈ ವಿಷಯದ ಕುರಿತು ಫ್ಯಾಕ್‌ ಚೆಕೆ ನಡೆಸಿದಾಗ ಥಾಯ್ಬಾವೊ ಎಂಬ ವಿಯೆಟ್ನಾಮಿ ಬ್ಲಾಗ್ ಒಂದು ಲೇಖನವನ್ನು ಪ್ರಕಟಿಸಿರುವುದನ್ನು ಕಂಡುಬಂದಿದೆ. ಇದು ಚೀನಾಕ್ಕೆ ರಶೀತಿಯನ್ನು ಮಾಡಿರುವ ‘ಬಿಲ್ಡ್’ ಪತ್ರಿಕೆಯ ವರದಿಯ ಸ್ಕ್ರೀನ್‌ಶಾಟ್ (ಕೆಳಗೆ ಚಿತ್ರವಿದೆ) ಒಳಗೊಂಡಿತ್ತು. ಏಪ್ರಿಲ್ 15 ರಂದು ಬಿಲ್ಡ್ ಕೆಳಗಿನ ಸ್ಕ್ರೀನ್‌ಶಾಟ್‌ನಲ್ಲಿ ಕಂಡುಬರುವ ಅದೇ ಶೀರ್ಷಿಕೆಯೊಂದಿಗೆ ಒಂದು ಲೇಖನವನ್ನು ಪ್ರಕಟಿಸಿತ್ತು, ಅದರಲ್ಲಿ ‘ಚೀನಾ ಈಗಾಗಲೇ ನಮಗೆ ನೀಡಬೇಕಾಗಿರುವುದು’ ಎಂದು ಬರೆದಿತ್ತು.

ಏಪ್ರಿಲ್ 18 ರಂದು, ಜರ್ಮನಿ ಮೂಲದ ನ್ಯೂಸ್ ಚಾನೆಲ್ ಡಿಡಬ್ಲ್ಯೂ, ಬಿಲ್ಡ್ ವರದಿಯ ರಶೀತಿಯನ್ನು ಪ್ರದರ್ಶಿಸುವ ಯೂಟ್ಯೂಬ್ ವರದಿಯನ್ನು ಪ್ರಕಟಿಸಿತು. ವರದಿಯ ಪ್ರಕಾರ ಲೇಖನವನ್ನು ಏಪ್ರಿಲ್ 15 ರಂದು (ಬುಧವಾರ) ಪ್ರಕಟಿಸಲಾಗಿದೆ.

ರಶೀತಿಯಲ್ಲಿನ ಕೆಲವು ವಿಷಯಗಳನ್ನು ಡಿಡಬ್ಲ್ಯೂ ವರದಿ ಮಾಡಿದೆ – ಪ್ರವಾಸೋದ್ಯಮದಲ್ಲಿ 24 ಬಿಲಿಯನ್ ಪೌಂಡ್ ಆದಾಯ ನಷ್ಟ, ಚಲನಚಿತ್ರೋದ್ಯಮಕ್ಕೆ 27.2 ಬಿಲಿಯನ್ ಪೌಂಡ್ ಆದಾಯ ನಷ್ಟ, ಜರ್ಮನ್ ವಿಮಾನಯಾನ ಲುಫ್ಥಾನ್ಸ ಗಂಟೆಗೆ 1 ಮಿಲಿಯನ್ ಪೌಂಡ್ ನಷ್ಟ ಮತ್ತು ಸಣ್ಣ ಉದ್ಯಮಗಳಿಗೆ 50 ಬಿಲಿಯನ್ ಪೌಂಡ್ ನಷ್ಟ ಎಂದು ಸೂಚಿಸಿದೆ.

ಇದಲ್ಲದೆ, ಯುಕೆ ಮೂಲದ ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಫುಲ್ ಫ್ಯಾಕ್ಟ್ ಏಪ್ರಿಲ್ 20 ರಂದು ಜರ್ಮನಿಯ ವಿದೇಶಾಂಗ ಸಚಿವ ಹೆಕೊ ಮಾಸ್ ಸಂದರ್ಶನದಲ್ಲಿ ಬಿಲ್ಡ್ ಚೀನಾದಿಂದ ಹಣಕ್ಕೆ ಬೇಡಿಕೆಯೂ ಭ್ರಮೆ ಎಂದಿದ್ದಾರೆ ಎಂದು ವರದಿ ಮಾಡಿದೆ.

ಏಪ್ರಿಲ್ 15 ರಂದು, ಬರ್ಲಿನ್‌ನ ಚೀನೀ ರಾಯಭಾರ ಕಚೇರಿಯು ಮಾಧ್ಯಮಗಳ ಆರೋಪಗಳಿಗೆ ಬಿಲ್ಡ್‌ನ ಸಂಪಾದಕ ಮುಖ್ಯಸ್ಥ ಜೂಲಿಯನ್ ರೀಚೆಲ್ಟ್‌ಗೆ ಬಹಿರಂಗ ಪತ್ರ ಬರೆದು ಪ್ರತಿಕ್ರಿಯಿಸಿತು. ಚೀನಾದ ರಾಯಭಾರ ಕಚೇರಿಯ ವಕ್ತಾರ ಟಾವೊ ಲಿಲಿ ಮಾತನಾಡಿ ಚೀನಾದ ನಾಯಕತ್ವವು ಪ್ರಮುಖ ಮಾಹಿತಿಯನ್ನು ವಾರಗಳವರೆಗೆ ಮುಚ್ಚಿಟ್ಟಿತ್ತು ಎಂಬ ಆರೋಪವನ್ನು ಅಲ್ಲಗೆಲೆದಿದ್ದಾರೆ.

ಚೀನಾ ಮಾಹಿತಿಯನ್ನು ಮರೆಮಾಡಲಿಲ್ಲ ಎಂದು ಪ್ರತಿಪಾದಿಸಲು ಲಿಲಿ ವಿಶ್ವ ಆರೋಗ್ಯ ಸಂಸ್ಥೆಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ, ಇದು ಕೊರೊನಾ ವೈರಸ್‌ಗೆ ಸಂಬಂಧಿಸಿದ ಪ್ರಮುಖ ಘಟನೆಗಳ ಸಮಯವನ್ನು ತೋರಿಸುತ್ತದೆ. ಈ ಬಗ್ಗೆ ಲಿಲಿ ಬಿಲ್ಡ್ ಪತ್ರಿಕೋದ್ಯಮದ ಬದ್ದತೆಯನ್ನು ಪ್ರಶ್ನಿಸಿ, ಅದು ರಾಷ್ಟ್ರೀಯತೆ, ಪೂರ್ವಾಗ್ರಹ ಮತ್ತು ಸೆನೋಫೋಬಿಯಾವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದರು.

ಎರಡು ದಿನಗಳ ನಂತರ ಬಿಲ್ಡ್ ಸಂಪಾದಕ ರೀಚೆಲ್ಟ್ ಅವರು ಲಿಲಿಯ ಬರೆದ ಬಹಿರಂಗ ಪತ್ರಕ್ಕೆ ಮೌಖಿಕವಾಗಿ 3 ನಿಮಿಷಗಳ ವೀಡಿಯೊದಲ್ಲಿ ಪ್ರತಿಕ್ರಿಯಿಸಿ, ವೀಡಿಯೊದಲ್ಲಿ, ಅವರು ಚೀನಾದ ಆಂತರಿಕ ನೀತಿಗಳಾದ ಕಣ್ಗಾವಲು ಮತ್ತು ಸೆನ್ಸಾರ್ಶಿಪ್ ಅನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ “ನಿಮ್ಮ ನಿಯಮವನ್ನು ಟೀಕಿಸುವ ಪ್ರತಿಯೊಂದು ಪತ್ರಿಕೆ ಮತ್ತು ವೆಬ್‌ಸೈಟ್‌ಗಳನ್ನು ನೀವು ಮುಚ್ಚುತ್ತೀರಿ, ಆದರೆ ಬಾವಲಿ ಸೂಪ್ ಮಾರಾಟವಾಗುವ ಸ್ಟಾಲ್‌ಗಳನ್ನಲ್ಲ. ನಿಮ್ಮ ಜನರನ್ನು ನೀವು ಮೇಲ್ವಿಚಾರಣೆ ಮಾಡುತ್ತಿಲ್ಲ, ಆದರೆ ಅವರಿಗೆ ನೀವು ಅಪಾಯವನ್ನುಂಟುಮಾಡುತ್ತಿರುವಿರಿ ಜೊತೆಗೆ ಪ್ರಪಂಚದ ಉಳಿದ ಭಾಗಗಳಿಗೂ” ಎಂದಿದ್ದಾರೆ.

China‘s embassy in Berlin wrote me an open letter because they weren‘t too happy with our Corona coverage. I responded.

Posted by Julian Reichelt on Saturday, April 18, 2020

ಆದ್ದರಿಂದ, ಲಂಡನ್ ಮೂಲದ ದಿ ಎಕ್ಸ್‌ಪ್ರೆಸ್ ವರದಿಯ ನಂತರ ಹಲವಾರು ಭಾರತೀಯ ಮಾಧ್ಯಮಗಳು ಜನರನ್ನು ದಾರಿತಪ್ಪಿಸುವ ವರದಿಯನ್ನು ಮಾಡಿವೆ. ಇದು ಕೊರೊನಾದಿಂದಾಗಿ ಜರ್ಮನಿಯೂ ಚೀನಾದಿಂದ ಪರಿಹಾರವನ್ನು ಬಯಸುತ್ತಿದೆ ಎಂದು ಸೂಚಿಸುತ್ತದೆ. ಸತ್ಯವೇನೆಂದರೆ, ಜರ್ಮನ್ ಟ್ಯಾಬ್ಲಾಯ್ಡ್ ಪತ್ರಿಕೆ ಬಿಲ್ಡ್ ಒಂದು ತನ್ನ ಅಭಿಪ್ರಾಯದ ತುಣುಕನ್ನು ಪ್ರಕಟಿಸಿ, ಕೊರೊನಾ ವೈರಸ್‌ನಿಂದ ಉಂಟಾದ ಹಾನಿಗಳಿಗೆ ಚೀನಾವನ್ನು ಹೊಣೆಗಾರನ್ನಾಗಿಸುವ ಒಂದು ವಿಚಾರವನ್ನು ಒಳಗೊಂಡಿದೆ. ಅದು ಸುಳ್ಳಾಗಿದ್ದು ಅಂತಹ ಸಾಕ್ಷ್ಯಗಳು ಸಿಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...