Homeನಿಜವೋ ಸುಳ್ಳೋFact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

Fact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

- Advertisement -
- Advertisement -

ಲಂಡನ್ ಮೂಲದ ಎಕ್ಸ್‌ಪ್ರೆಸ್.ಕೊ.ಯುಕೆ ಎಂಬ ಪತ್ರಿಕೆ ಏಪ್ರಿಲ್ 20 ರಂದು ವಿವಾದಾತ್ಮಕ ಶೀರ್ಷಿಕೆಯೊಂದಿಗೆ ವರದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ಕೊರೊನಾ ಹಾನಿಗೆ ಪರಿಹಾರವಾಗಿ ಚೀನಾ ದೇಶವು ಜರ್ಮನಿಗೆ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಬರೆಯಲಾಗಿತ್ತು.ಅದಲ್ಲದೆ ಇದರ ನಂತರ ಹಲವಾರು ಮಾಧ್ಯಮಗಳು ಇದೇ ರೀತಿಯ ಶೀರ್ಷಿಕೆಯೊಂದಿಗೆ ವರದಿಯನ್ನು ಪ್ರಕಟಿಸಿದ್ದವು. ಇಂಡಿಯಾ ಟಿವಿ ನ್ಯೂಸ್, ದಿ ಔಟ್‌ಲುಕ್, ಒರಿಸ್ಸಾ ಪೋಸ್ಟ್, ಅಮರ್ ಉಜಲಾ, ಪಂಜಾಬ್ ಕೇಸರಿ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಯನ್ನು ಪ್ರಕಟಿಸಿದ ಪ್ರಮುಖ ಪತ್ರಿಕೆಗಳಾಗಿವೆ. ಆದರೆ ದಿ ಔಟ್‌ಲುಕ್ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಗಳು ಮಾತ್ರ ವರದಿ ಮೂಲವನ್ನು ಐಎಎನ್‌ಎಸ್ ಎಂದು ಉಲ್ಲೇಖಿಸಿದೆ.

ಬಲಪಂಥೀಯ ಪ್ರಚಾರ ವೆಬ್‌ಸೈಟ್ ಒಪಿ ಇಂಡಿಯಾಕ್ಕಾಗಿ ಬರೆಯುವ ಅಶುತೋಷ್ ಮುಗ್ಲಿಕರ್ (ಆರ್ಕೈವ್ ಲಿಂಕ್) ಮತ್ತು ಡೆಮಾಕ್ರಸಿ ನ್ಯೂಸ್ ಲೈವ್‌ನಲ್ಲಿ ಮುಖ್ಯ ಸಂಪಾದಕ ರೋಹಿತ್ ಗಾಂಧಿ (ಆರ್ಕೈವ್ ಲಿಂಕ್) ಅವರು ಏಪ್ರಿಲ್ 20 ರಂದು ದಿ ಎಕ್ಸ್‌ಪ್ರೆಸ್ ವರದಿಯಲ್ಲಿನ ಇದೇ ವಿಷಯವನ್ನು ಹಂಚಿಕೊಂಡಿದ್ದಾರೆ. ಮುಗ್ಲಿಕರ್ ಅವರ ಟ್ವೀಟ್ ಅನ್ನು ಇದುವರೆಗೆ 850 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಲಾಗಿದೆ.ಫ್ಯಾಕ್ಟ್-ಚೆಕ್

ದಿ ಎಕ್ಸ್‌ಪ್ರೆಸ್‌ನ ಶೀರ್ಷಿಕೆಯೂ ಓದುಗರನ್ನು ತಪ್ಪುದಾರಿಗೆಳೆಯುವಂತಿದೆ. ಲೇಖನದ ಮೊದಲ ಸಾಲು ಹೀಗಿದೆ, “ಕೊರೊನಾ ಸಾಂಕ್ರಾಮಿಕದಿಂದಾಗಿ ಚೀನಾದ ವಿರುದ್ಧ ಜರ್ಮನಿ ಸಿಟ್ಟಿಗೆದ್ದಿದೆ. ಹಾನಿಯ ನಷ್ಟ ಪರಿಹಾರವಾಗಿ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಟ್ಯಾಬ್ಲಾಡ್‌ ಪತ್ರಿಕೆಯೊಂದು ವರದಿ ಮಾಡಿದೆ. ಆದರೆ ಅಂತಹ ಬಿಲ್‌ ಅನ್ನು ಜರ್ಮನಿ ಕಳಿಸಿಲ್ಲ ಎಂದು ಕೊನೆಯಲ್ಲಿ ಬರೆದಿದೆ.

25 ಗಂಟೆಗಳ ನಂತರ ದಿ ಎಕ್ಸ್‌ಪ್ರೆಸ್ ತಪ್ಪಾದ ಶೀರ್ಷಿಕೆಯನ್ನು ಬದಲಾಯಿಸಿತು. ವೆಬ್‌ಸೈಟ್‌ನ ಪ್ರಕಾರ, ಈ ಲೇಖನವು ‘ವಿಶ್ವ’ ವಿಭಾಗದಲ್ಲಿ ಹೆಚ್ಚು ಓದಿದ ಲೇಖನವಾಗಿತ್ತು ಎಂಬುದನ್ನು ಗಮನಿಸಬೇಕು.

ಈ ವಿಷಯದ ಕುರಿತು ಫ್ಯಾಕ್‌ ಚೆಕೆ ನಡೆಸಿದಾಗ ಥಾಯ್ಬಾವೊ ಎಂಬ ವಿಯೆಟ್ನಾಮಿ ಬ್ಲಾಗ್ ಒಂದು ಲೇಖನವನ್ನು ಪ್ರಕಟಿಸಿರುವುದನ್ನು ಕಂಡುಬಂದಿದೆ. ಇದು ಚೀನಾಕ್ಕೆ ರಶೀತಿಯನ್ನು ಮಾಡಿರುವ ‘ಬಿಲ್ಡ್’ ಪತ್ರಿಕೆಯ ವರದಿಯ ಸ್ಕ್ರೀನ್‌ಶಾಟ್ (ಕೆಳಗೆ ಚಿತ್ರವಿದೆ) ಒಳಗೊಂಡಿತ್ತು. ಏಪ್ರಿಲ್ 15 ರಂದು ಬಿಲ್ಡ್ ಕೆಳಗಿನ ಸ್ಕ್ರೀನ್‌ಶಾಟ್‌ನಲ್ಲಿ ಕಂಡುಬರುವ ಅದೇ ಶೀರ್ಷಿಕೆಯೊಂದಿಗೆ ಒಂದು ಲೇಖನವನ್ನು ಪ್ರಕಟಿಸಿತ್ತು, ಅದರಲ್ಲಿ ‘ಚೀನಾ ಈಗಾಗಲೇ ನಮಗೆ ನೀಡಬೇಕಾಗಿರುವುದು’ ಎಂದು ಬರೆದಿತ್ತು.

ಏಪ್ರಿಲ್ 18 ರಂದು, ಜರ್ಮನಿ ಮೂಲದ ನ್ಯೂಸ್ ಚಾನೆಲ್ ಡಿಡಬ್ಲ್ಯೂ, ಬಿಲ್ಡ್ ವರದಿಯ ರಶೀತಿಯನ್ನು ಪ್ರದರ್ಶಿಸುವ ಯೂಟ್ಯೂಬ್ ವರದಿಯನ್ನು ಪ್ರಕಟಿಸಿತು. ವರದಿಯ ಪ್ರಕಾರ ಲೇಖನವನ್ನು ಏಪ್ರಿಲ್ 15 ರಂದು (ಬುಧವಾರ) ಪ್ರಕಟಿಸಲಾಗಿದೆ.

ರಶೀತಿಯಲ್ಲಿನ ಕೆಲವು ವಿಷಯಗಳನ್ನು ಡಿಡಬ್ಲ್ಯೂ ವರದಿ ಮಾಡಿದೆ – ಪ್ರವಾಸೋದ್ಯಮದಲ್ಲಿ 24 ಬಿಲಿಯನ್ ಪೌಂಡ್ ಆದಾಯ ನಷ್ಟ, ಚಲನಚಿತ್ರೋದ್ಯಮಕ್ಕೆ 27.2 ಬಿಲಿಯನ್ ಪೌಂಡ್ ಆದಾಯ ನಷ್ಟ, ಜರ್ಮನ್ ವಿಮಾನಯಾನ ಲುಫ್ಥಾನ್ಸ ಗಂಟೆಗೆ 1 ಮಿಲಿಯನ್ ಪೌಂಡ್ ನಷ್ಟ ಮತ್ತು ಸಣ್ಣ ಉದ್ಯಮಗಳಿಗೆ 50 ಬಿಲಿಯನ್ ಪೌಂಡ್ ನಷ್ಟ ಎಂದು ಸೂಚಿಸಿದೆ.

ಇದಲ್ಲದೆ, ಯುಕೆ ಮೂಲದ ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಫುಲ್ ಫ್ಯಾಕ್ಟ್ ಏಪ್ರಿಲ್ 20 ರಂದು ಜರ್ಮನಿಯ ವಿದೇಶಾಂಗ ಸಚಿವ ಹೆಕೊ ಮಾಸ್ ಸಂದರ್ಶನದಲ್ಲಿ ಬಿಲ್ಡ್ ಚೀನಾದಿಂದ ಹಣಕ್ಕೆ ಬೇಡಿಕೆಯೂ ಭ್ರಮೆ ಎಂದಿದ್ದಾರೆ ಎಂದು ವರದಿ ಮಾಡಿದೆ.

ಏಪ್ರಿಲ್ 15 ರಂದು, ಬರ್ಲಿನ್‌ನ ಚೀನೀ ರಾಯಭಾರ ಕಚೇರಿಯು ಮಾಧ್ಯಮಗಳ ಆರೋಪಗಳಿಗೆ ಬಿಲ್ಡ್‌ನ ಸಂಪಾದಕ ಮುಖ್ಯಸ್ಥ ಜೂಲಿಯನ್ ರೀಚೆಲ್ಟ್‌ಗೆ ಬಹಿರಂಗ ಪತ್ರ ಬರೆದು ಪ್ರತಿಕ್ರಿಯಿಸಿತು. ಚೀನಾದ ರಾಯಭಾರ ಕಚೇರಿಯ ವಕ್ತಾರ ಟಾವೊ ಲಿಲಿ ಮಾತನಾಡಿ ಚೀನಾದ ನಾಯಕತ್ವವು ಪ್ರಮುಖ ಮಾಹಿತಿಯನ್ನು ವಾರಗಳವರೆಗೆ ಮುಚ್ಚಿಟ್ಟಿತ್ತು ಎಂಬ ಆರೋಪವನ್ನು ಅಲ್ಲಗೆಲೆದಿದ್ದಾರೆ.

ಚೀನಾ ಮಾಹಿತಿಯನ್ನು ಮರೆಮಾಡಲಿಲ್ಲ ಎಂದು ಪ್ರತಿಪಾದಿಸಲು ಲಿಲಿ ವಿಶ್ವ ಆರೋಗ್ಯ ಸಂಸ್ಥೆಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ, ಇದು ಕೊರೊನಾ ವೈರಸ್‌ಗೆ ಸಂಬಂಧಿಸಿದ ಪ್ರಮುಖ ಘಟನೆಗಳ ಸಮಯವನ್ನು ತೋರಿಸುತ್ತದೆ. ಈ ಬಗ್ಗೆ ಲಿಲಿ ಬಿಲ್ಡ್ ಪತ್ರಿಕೋದ್ಯಮದ ಬದ್ದತೆಯನ್ನು ಪ್ರಶ್ನಿಸಿ, ಅದು ರಾಷ್ಟ್ರೀಯತೆ, ಪೂರ್ವಾಗ್ರಹ ಮತ್ತು ಸೆನೋಫೋಬಿಯಾವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದರು.

ಎರಡು ದಿನಗಳ ನಂತರ ಬಿಲ್ಡ್ ಸಂಪಾದಕ ರೀಚೆಲ್ಟ್ ಅವರು ಲಿಲಿಯ ಬರೆದ ಬಹಿರಂಗ ಪತ್ರಕ್ಕೆ ಮೌಖಿಕವಾಗಿ 3 ನಿಮಿಷಗಳ ವೀಡಿಯೊದಲ್ಲಿ ಪ್ರತಿಕ್ರಿಯಿಸಿ, ವೀಡಿಯೊದಲ್ಲಿ, ಅವರು ಚೀನಾದ ಆಂತರಿಕ ನೀತಿಗಳಾದ ಕಣ್ಗಾವಲು ಮತ್ತು ಸೆನ್ಸಾರ್ಶಿಪ್ ಅನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ “ನಿಮ್ಮ ನಿಯಮವನ್ನು ಟೀಕಿಸುವ ಪ್ರತಿಯೊಂದು ಪತ್ರಿಕೆ ಮತ್ತು ವೆಬ್‌ಸೈಟ್‌ಗಳನ್ನು ನೀವು ಮುಚ್ಚುತ್ತೀರಿ, ಆದರೆ ಬಾವಲಿ ಸೂಪ್ ಮಾರಾಟವಾಗುವ ಸ್ಟಾಲ್‌ಗಳನ್ನಲ್ಲ. ನಿಮ್ಮ ಜನರನ್ನು ನೀವು ಮೇಲ್ವಿಚಾರಣೆ ಮಾಡುತ್ತಿಲ್ಲ, ಆದರೆ ಅವರಿಗೆ ನೀವು ಅಪಾಯವನ್ನುಂಟುಮಾಡುತ್ತಿರುವಿರಿ ಜೊತೆಗೆ ಪ್ರಪಂಚದ ಉಳಿದ ಭಾಗಗಳಿಗೂ” ಎಂದಿದ್ದಾರೆ.

China‘s embassy in Berlin wrote me an open letter because they weren‘t too happy with our Corona coverage. I responded.

Posted by Julian Reichelt on Saturday, April 18, 2020

ಆದ್ದರಿಂದ, ಲಂಡನ್ ಮೂಲದ ದಿ ಎಕ್ಸ್‌ಪ್ರೆಸ್ ವರದಿಯ ನಂತರ ಹಲವಾರು ಭಾರತೀಯ ಮಾಧ್ಯಮಗಳು ಜನರನ್ನು ದಾರಿತಪ್ಪಿಸುವ ವರದಿಯನ್ನು ಮಾಡಿವೆ. ಇದು ಕೊರೊನಾದಿಂದಾಗಿ ಜರ್ಮನಿಯೂ ಚೀನಾದಿಂದ ಪರಿಹಾರವನ್ನು ಬಯಸುತ್ತಿದೆ ಎಂದು ಸೂಚಿಸುತ್ತದೆ. ಸತ್ಯವೇನೆಂದರೆ, ಜರ್ಮನ್ ಟ್ಯಾಬ್ಲಾಯ್ಡ್ ಪತ್ರಿಕೆ ಬಿಲ್ಡ್ ಒಂದು ತನ್ನ ಅಭಿಪ್ರಾಯದ ತುಣುಕನ್ನು ಪ್ರಕಟಿಸಿ, ಕೊರೊನಾ ವೈರಸ್‌ನಿಂದ ಉಂಟಾದ ಹಾನಿಗಳಿಗೆ ಚೀನಾವನ್ನು ಹೊಣೆಗಾರನ್ನಾಗಿಸುವ ಒಂದು ವಿಚಾರವನ್ನು ಒಳಗೊಂಡಿದೆ. ಅದು ಸುಳ್ಳಾಗಿದ್ದು ಅಂತಹ ಸಾಕ್ಷ್ಯಗಳು ಸಿಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...