Homeನಿಜವೋ ಸುಳ್ಳೋFact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

Fact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

- Advertisement -
- Advertisement -

ಲಂಡನ್ ಮೂಲದ ಎಕ್ಸ್‌ಪ್ರೆಸ್.ಕೊ.ಯುಕೆ ಎಂಬ ಪತ್ರಿಕೆ ಏಪ್ರಿಲ್ 20 ರಂದು ವಿವಾದಾತ್ಮಕ ಶೀರ್ಷಿಕೆಯೊಂದಿಗೆ ವರದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ಕೊರೊನಾ ಹಾನಿಗೆ ಪರಿಹಾರವಾಗಿ ಚೀನಾ ದೇಶವು ಜರ್ಮನಿಗೆ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಬರೆಯಲಾಗಿತ್ತು.ಅದಲ್ಲದೆ ಇದರ ನಂತರ ಹಲವಾರು ಮಾಧ್ಯಮಗಳು ಇದೇ ರೀತಿಯ ಶೀರ್ಷಿಕೆಯೊಂದಿಗೆ ವರದಿಯನ್ನು ಪ್ರಕಟಿಸಿದ್ದವು. ಇಂಡಿಯಾ ಟಿವಿ ನ್ಯೂಸ್, ದಿ ಔಟ್‌ಲುಕ್, ಒರಿಸ್ಸಾ ಪೋಸ್ಟ್, ಅಮರ್ ಉಜಲಾ, ಪಂಜಾಬ್ ಕೇಸರಿ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಯನ್ನು ಪ್ರಕಟಿಸಿದ ಪ್ರಮುಖ ಪತ್ರಿಕೆಗಳಾಗಿವೆ. ಆದರೆ ದಿ ಔಟ್‌ಲುಕ್ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಗಳು ಮಾತ್ರ ವರದಿ ಮೂಲವನ್ನು ಐಎಎನ್‌ಎಸ್ ಎಂದು ಉಲ್ಲೇಖಿಸಿದೆ.

ಬಲಪಂಥೀಯ ಪ್ರಚಾರ ವೆಬ್‌ಸೈಟ್ ಒಪಿ ಇಂಡಿಯಾಕ್ಕಾಗಿ ಬರೆಯುವ ಅಶುತೋಷ್ ಮುಗ್ಲಿಕರ್ (ಆರ್ಕೈವ್ ಲಿಂಕ್) ಮತ್ತು ಡೆಮಾಕ್ರಸಿ ನ್ಯೂಸ್ ಲೈವ್‌ನಲ್ಲಿ ಮುಖ್ಯ ಸಂಪಾದಕ ರೋಹಿತ್ ಗಾಂಧಿ (ಆರ್ಕೈವ್ ಲಿಂಕ್) ಅವರು ಏಪ್ರಿಲ್ 20 ರಂದು ದಿ ಎಕ್ಸ್‌ಪ್ರೆಸ್ ವರದಿಯಲ್ಲಿನ ಇದೇ ವಿಷಯವನ್ನು ಹಂಚಿಕೊಂಡಿದ್ದಾರೆ. ಮುಗ್ಲಿಕರ್ ಅವರ ಟ್ವೀಟ್ ಅನ್ನು ಇದುವರೆಗೆ 850 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಲಾಗಿದೆ.ಫ್ಯಾಕ್ಟ್-ಚೆಕ್

ದಿ ಎಕ್ಸ್‌ಪ್ರೆಸ್‌ನ ಶೀರ್ಷಿಕೆಯೂ ಓದುಗರನ್ನು ತಪ್ಪುದಾರಿಗೆಳೆಯುವಂತಿದೆ. ಲೇಖನದ ಮೊದಲ ಸಾಲು ಹೀಗಿದೆ, “ಕೊರೊನಾ ಸಾಂಕ್ರಾಮಿಕದಿಂದಾಗಿ ಚೀನಾದ ವಿರುದ್ಧ ಜರ್ಮನಿ ಸಿಟ್ಟಿಗೆದ್ದಿದೆ. ಹಾನಿಯ ನಷ್ಟ ಪರಿಹಾರವಾಗಿ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಟ್ಯಾಬ್ಲಾಡ್‌ ಪತ್ರಿಕೆಯೊಂದು ವರದಿ ಮಾಡಿದೆ. ಆದರೆ ಅಂತಹ ಬಿಲ್‌ ಅನ್ನು ಜರ್ಮನಿ ಕಳಿಸಿಲ್ಲ ಎಂದು ಕೊನೆಯಲ್ಲಿ ಬರೆದಿದೆ.

25 ಗಂಟೆಗಳ ನಂತರ ದಿ ಎಕ್ಸ್‌ಪ್ರೆಸ್ ತಪ್ಪಾದ ಶೀರ್ಷಿಕೆಯನ್ನು ಬದಲಾಯಿಸಿತು. ವೆಬ್‌ಸೈಟ್‌ನ ಪ್ರಕಾರ, ಈ ಲೇಖನವು ‘ವಿಶ್ವ’ ವಿಭಾಗದಲ್ಲಿ ಹೆಚ್ಚು ಓದಿದ ಲೇಖನವಾಗಿತ್ತು ಎಂಬುದನ್ನು ಗಮನಿಸಬೇಕು.

ಈ ವಿಷಯದ ಕುರಿತು ಫ್ಯಾಕ್‌ ಚೆಕೆ ನಡೆಸಿದಾಗ ಥಾಯ್ಬಾವೊ ಎಂಬ ವಿಯೆಟ್ನಾಮಿ ಬ್ಲಾಗ್ ಒಂದು ಲೇಖನವನ್ನು ಪ್ರಕಟಿಸಿರುವುದನ್ನು ಕಂಡುಬಂದಿದೆ. ಇದು ಚೀನಾಕ್ಕೆ ರಶೀತಿಯನ್ನು ಮಾಡಿರುವ ‘ಬಿಲ್ಡ್’ ಪತ್ರಿಕೆಯ ವರದಿಯ ಸ್ಕ್ರೀನ್‌ಶಾಟ್ (ಕೆಳಗೆ ಚಿತ್ರವಿದೆ) ಒಳಗೊಂಡಿತ್ತು. ಏಪ್ರಿಲ್ 15 ರಂದು ಬಿಲ್ಡ್ ಕೆಳಗಿನ ಸ್ಕ್ರೀನ್‌ಶಾಟ್‌ನಲ್ಲಿ ಕಂಡುಬರುವ ಅದೇ ಶೀರ್ಷಿಕೆಯೊಂದಿಗೆ ಒಂದು ಲೇಖನವನ್ನು ಪ್ರಕಟಿಸಿತ್ತು, ಅದರಲ್ಲಿ ‘ಚೀನಾ ಈಗಾಗಲೇ ನಮಗೆ ನೀಡಬೇಕಾಗಿರುವುದು’ ಎಂದು ಬರೆದಿತ್ತು.

ಏಪ್ರಿಲ್ 18 ರಂದು, ಜರ್ಮನಿ ಮೂಲದ ನ್ಯೂಸ್ ಚಾನೆಲ್ ಡಿಡಬ್ಲ್ಯೂ, ಬಿಲ್ಡ್ ವರದಿಯ ರಶೀತಿಯನ್ನು ಪ್ರದರ್ಶಿಸುವ ಯೂಟ್ಯೂಬ್ ವರದಿಯನ್ನು ಪ್ರಕಟಿಸಿತು. ವರದಿಯ ಪ್ರಕಾರ ಲೇಖನವನ್ನು ಏಪ್ರಿಲ್ 15 ರಂದು (ಬುಧವಾರ) ಪ್ರಕಟಿಸಲಾಗಿದೆ.

ರಶೀತಿಯಲ್ಲಿನ ಕೆಲವು ವಿಷಯಗಳನ್ನು ಡಿಡಬ್ಲ್ಯೂ ವರದಿ ಮಾಡಿದೆ – ಪ್ರವಾಸೋದ್ಯಮದಲ್ಲಿ 24 ಬಿಲಿಯನ್ ಪೌಂಡ್ ಆದಾಯ ನಷ್ಟ, ಚಲನಚಿತ್ರೋದ್ಯಮಕ್ಕೆ 27.2 ಬಿಲಿಯನ್ ಪೌಂಡ್ ಆದಾಯ ನಷ್ಟ, ಜರ್ಮನ್ ವಿಮಾನಯಾನ ಲುಫ್ಥಾನ್ಸ ಗಂಟೆಗೆ 1 ಮಿಲಿಯನ್ ಪೌಂಡ್ ನಷ್ಟ ಮತ್ತು ಸಣ್ಣ ಉದ್ಯಮಗಳಿಗೆ 50 ಬಿಲಿಯನ್ ಪೌಂಡ್ ನಷ್ಟ ಎಂದು ಸೂಚಿಸಿದೆ.

ಇದಲ್ಲದೆ, ಯುಕೆ ಮೂಲದ ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಫುಲ್ ಫ್ಯಾಕ್ಟ್ ಏಪ್ರಿಲ್ 20 ರಂದು ಜರ್ಮನಿಯ ವಿದೇಶಾಂಗ ಸಚಿವ ಹೆಕೊ ಮಾಸ್ ಸಂದರ್ಶನದಲ್ಲಿ ಬಿಲ್ಡ್ ಚೀನಾದಿಂದ ಹಣಕ್ಕೆ ಬೇಡಿಕೆಯೂ ಭ್ರಮೆ ಎಂದಿದ್ದಾರೆ ಎಂದು ವರದಿ ಮಾಡಿದೆ.

ಏಪ್ರಿಲ್ 15 ರಂದು, ಬರ್ಲಿನ್‌ನ ಚೀನೀ ರಾಯಭಾರ ಕಚೇರಿಯು ಮಾಧ್ಯಮಗಳ ಆರೋಪಗಳಿಗೆ ಬಿಲ್ಡ್‌ನ ಸಂಪಾದಕ ಮುಖ್ಯಸ್ಥ ಜೂಲಿಯನ್ ರೀಚೆಲ್ಟ್‌ಗೆ ಬಹಿರಂಗ ಪತ್ರ ಬರೆದು ಪ್ರತಿಕ್ರಿಯಿಸಿತು. ಚೀನಾದ ರಾಯಭಾರ ಕಚೇರಿಯ ವಕ್ತಾರ ಟಾವೊ ಲಿಲಿ ಮಾತನಾಡಿ ಚೀನಾದ ನಾಯಕತ್ವವು ಪ್ರಮುಖ ಮಾಹಿತಿಯನ್ನು ವಾರಗಳವರೆಗೆ ಮುಚ್ಚಿಟ್ಟಿತ್ತು ಎಂಬ ಆರೋಪವನ್ನು ಅಲ್ಲಗೆಲೆದಿದ್ದಾರೆ.

ಚೀನಾ ಮಾಹಿತಿಯನ್ನು ಮರೆಮಾಡಲಿಲ್ಲ ಎಂದು ಪ್ರತಿಪಾದಿಸಲು ಲಿಲಿ ವಿಶ್ವ ಆರೋಗ್ಯ ಸಂಸ್ಥೆಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ, ಇದು ಕೊರೊನಾ ವೈರಸ್‌ಗೆ ಸಂಬಂಧಿಸಿದ ಪ್ರಮುಖ ಘಟನೆಗಳ ಸಮಯವನ್ನು ತೋರಿಸುತ್ತದೆ. ಈ ಬಗ್ಗೆ ಲಿಲಿ ಬಿಲ್ಡ್ ಪತ್ರಿಕೋದ್ಯಮದ ಬದ್ದತೆಯನ್ನು ಪ್ರಶ್ನಿಸಿ, ಅದು ರಾಷ್ಟ್ರೀಯತೆ, ಪೂರ್ವಾಗ್ರಹ ಮತ್ತು ಸೆನೋಫೋಬಿಯಾವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದರು.

ಎರಡು ದಿನಗಳ ನಂತರ ಬಿಲ್ಡ್ ಸಂಪಾದಕ ರೀಚೆಲ್ಟ್ ಅವರು ಲಿಲಿಯ ಬರೆದ ಬಹಿರಂಗ ಪತ್ರಕ್ಕೆ ಮೌಖಿಕವಾಗಿ 3 ನಿಮಿಷಗಳ ವೀಡಿಯೊದಲ್ಲಿ ಪ್ರತಿಕ್ರಿಯಿಸಿ, ವೀಡಿಯೊದಲ್ಲಿ, ಅವರು ಚೀನಾದ ಆಂತರಿಕ ನೀತಿಗಳಾದ ಕಣ್ಗಾವಲು ಮತ್ತು ಸೆನ್ಸಾರ್ಶಿಪ್ ಅನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ “ನಿಮ್ಮ ನಿಯಮವನ್ನು ಟೀಕಿಸುವ ಪ್ರತಿಯೊಂದು ಪತ್ರಿಕೆ ಮತ್ತು ವೆಬ್‌ಸೈಟ್‌ಗಳನ್ನು ನೀವು ಮುಚ್ಚುತ್ತೀರಿ, ಆದರೆ ಬಾವಲಿ ಸೂಪ್ ಮಾರಾಟವಾಗುವ ಸ್ಟಾಲ್‌ಗಳನ್ನಲ್ಲ. ನಿಮ್ಮ ಜನರನ್ನು ನೀವು ಮೇಲ್ವಿಚಾರಣೆ ಮಾಡುತ್ತಿಲ್ಲ, ಆದರೆ ಅವರಿಗೆ ನೀವು ಅಪಾಯವನ್ನುಂಟುಮಾಡುತ್ತಿರುವಿರಿ ಜೊತೆಗೆ ಪ್ರಪಂಚದ ಉಳಿದ ಭಾಗಗಳಿಗೂ” ಎಂದಿದ್ದಾರೆ.

China‘s embassy in Berlin wrote me an open letter because they weren‘t too happy with our Corona coverage. I responded.

Posted by Julian Reichelt on Saturday, April 18, 2020

ಆದ್ದರಿಂದ, ಲಂಡನ್ ಮೂಲದ ದಿ ಎಕ್ಸ್‌ಪ್ರೆಸ್ ವರದಿಯ ನಂತರ ಹಲವಾರು ಭಾರತೀಯ ಮಾಧ್ಯಮಗಳು ಜನರನ್ನು ದಾರಿತಪ್ಪಿಸುವ ವರದಿಯನ್ನು ಮಾಡಿವೆ. ಇದು ಕೊರೊನಾದಿಂದಾಗಿ ಜರ್ಮನಿಯೂ ಚೀನಾದಿಂದ ಪರಿಹಾರವನ್ನು ಬಯಸುತ್ತಿದೆ ಎಂದು ಸೂಚಿಸುತ್ತದೆ. ಸತ್ಯವೇನೆಂದರೆ, ಜರ್ಮನ್ ಟ್ಯಾಬ್ಲಾಯ್ಡ್ ಪತ್ರಿಕೆ ಬಿಲ್ಡ್ ಒಂದು ತನ್ನ ಅಭಿಪ್ರಾಯದ ತುಣುಕನ್ನು ಪ್ರಕಟಿಸಿ, ಕೊರೊನಾ ವೈರಸ್‌ನಿಂದ ಉಂಟಾದ ಹಾನಿಗಳಿಗೆ ಚೀನಾವನ್ನು ಹೊಣೆಗಾರನ್ನಾಗಿಸುವ ಒಂದು ವಿಚಾರವನ್ನು ಒಳಗೊಂಡಿದೆ. ಅದು ಸುಳ್ಳಾಗಿದ್ದು ಅಂತಹ ಸಾಕ್ಷ್ಯಗಳು ಸಿಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...