Homeನಿಜವೋ ಸುಳ್ಳೋFact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

Fact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

- Advertisement -
- Advertisement -

ಲಂಡನ್ ಮೂಲದ ಎಕ್ಸ್‌ಪ್ರೆಸ್.ಕೊ.ಯುಕೆ ಎಂಬ ಪತ್ರಿಕೆ ಏಪ್ರಿಲ್ 20 ರಂದು ವಿವಾದಾತ್ಮಕ ಶೀರ್ಷಿಕೆಯೊಂದಿಗೆ ವರದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ಕೊರೊನಾ ಹಾನಿಗೆ ಪರಿಹಾರವಾಗಿ ಚೀನಾ ದೇಶವು ಜರ್ಮನಿಗೆ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಬರೆಯಲಾಗಿತ್ತು.ಅದಲ್ಲದೆ ಇದರ ನಂತರ ಹಲವಾರು ಮಾಧ್ಯಮಗಳು ಇದೇ ರೀತಿಯ ಶೀರ್ಷಿಕೆಯೊಂದಿಗೆ ವರದಿಯನ್ನು ಪ್ರಕಟಿಸಿದ್ದವು. ಇಂಡಿಯಾ ಟಿವಿ ನ್ಯೂಸ್, ದಿ ಔಟ್‌ಲುಕ್, ಒರಿಸ್ಸಾ ಪೋಸ್ಟ್, ಅಮರ್ ಉಜಲಾ, ಪಂಜಾಬ್ ಕೇಸರಿ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಯನ್ನು ಪ್ರಕಟಿಸಿದ ಪ್ರಮುಖ ಪತ್ರಿಕೆಗಳಾಗಿವೆ. ಆದರೆ ದಿ ಔಟ್‌ಲುಕ್ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಗಳು ಮಾತ್ರ ವರದಿ ಮೂಲವನ್ನು ಐಎಎನ್‌ಎಸ್ ಎಂದು ಉಲ್ಲೇಖಿಸಿದೆ.

ಬಲಪಂಥೀಯ ಪ್ರಚಾರ ವೆಬ್‌ಸೈಟ್ ಒಪಿ ಇಂಡಿಯಾಕ್ಕಾಗಿ ಬರೆಯುವ ಅಶುತೋಷ್ ಮುಗ್ಲಿಕರ್ (ಆರ್ಕೈವ್ ಲಿಂಕ್) ಮತ್ತು ಡೆಮಾಕ್ರಸಿ ನ್ಯೂಸ್ ಲೈವ್‌ನಲ್ಲಿ ಮುಖ್ಯ ಸಂಪಾದಕ ರೋಹಿತ್ ಗಾಂಧಿ (ಆರ್ಕೈವ್ ಲಿಂಕ್) ಅವರು ಏಪ್ರಿಲ್ 20 ರಂದು ದಿ ಎಕ್ಸ್‌ಪ್ರೆಸ್ ವರದಿಯಲ್ಲಿನ ಇದೇ ವಿಷಯವನ್ನು ಹಂಚಿಕೊಂಡಿದ್ದಾರೆ. ಮುಗ್ಲಿಕರ್ ಅವರ ಟ್ವೀಟ್ ಅನ್ನು ಇದುವರೆಗೆ 850 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಲಾಗಿದೆ.ಫ್ಯಾಕ್ಟ್-ಚೆಕ್

ದಿ ಎಕ್ಸ್‌ಪ್ರೆಸ್‌ನ ಶೀರ್ಷಿಕೆಯೂ ಓದುಗರನ್ನು ತಪ್ಪುದಾರಿಗೆಳೆಯುವಂತಿದೆ. ಲೇಖನದ ಮೊದಲ ಸಾಲು ಹೀಗಿದೆ, “ಕೊರೊನಾ ಸಾಂಕ್ರಾಮಿಕದಿಂದಾಗಿ ಚೀನಾದ ವಿರುದ್ಧ ಜರ್ಮನಿ ಸಿಟ್ಟಿಗೆದ್ದಿದೆ. ಹಾನಿಯ ನಷ್ಟ ಪರಿಹಾರವಾಗಿ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಟ್ಯಾಬ್ಲಾಡ್‌ ಪತ್ರಿಕೆಯೊಂದು ವರದಿ ಮಾಡಿದೆ. ಆದರೆ ಅಂತಹ ಬಿಲ್‌ ಅನ್ನು ಜರ್ಮನಿ ಕಳಿಸಿಲ್ಲ ಎಂದು ಕೊನೆಯಲ್ಲಿ ಬರೆದಿದೆ.

25 ಗಂಟೆಗಳ ನಂತರ ದಿ ಎಕ್ಸ್‌ಪ್ರೆಸ್ ತಪ್ಪಾದ ಶೀರ್ಷಿಕೆಯನ್ನು ಬದಲಾಯಿಸಿತು. ವೆಬ್‌ಸೈಟ್‌ನ ಪ್ರಕಾರ, ಈ ಲೇಖನವು ‘ವಿಶ್ವ’ ವಿಭಾಗದಲ್ಲಿ ಹೆಚ್ಚು ಓದಿದ ಲೇಖನವಾಗಿತ್ತು ಎಂಬುದನ್ನು ಗಮನಿಸಬೇಕು.

ಈ ವಿಷಯದ ಕುರಿತು ಫ್ಯಾಕ್‌ ಚೆಕೆ ನಡೆಸಿದಾಗ ಥಾಯ್ಬಾವೊ ಎಂಬ ವಿಯೆಟ್ನಾಮಿ ಬ್ಲಾಗ್ ಒಂದು ಲೇಖನವನ್ನು ಪ್ರಕಟಿಸಿರುವುದನ್ನು ಕಂಡುಬಂದಿದೆ. ಇದು ಚೀನಾಕ್ಕೆ ರಶೀತಿಯನ್ನು ಮಾಡಿರುವ ‘ಬಿಲ್ಡ್’ ಪತ್ರಿಕೆಯ ವರದಿಯ ಸ್ಕ್ರೀನ್‌ಶಾಟ್ (ಕೆಳಗೆ ಚಿತ್ರವಿದೆ) ಒಳಗೊಂಡಿತ್ತು. ಏಪ್ರಿಲ್ 15 ರಂದು ಬಿಲ್ಡ್ ಕೆಳಗಿನ ಸ್ಕ್ರೀನ್‌ಶಾಟ್‌ನಲ್ಲಿ ಕಂಡುಬರುವ ಅದೇ ಶೀರ್ಷಿಕೆಯೊಂದಿಗೆ ಒಂದು ಲೇಖನವನ್ನು ಪ್ರಕಟಿಸಿತ್ತು, ಅದರಲ್ಲಿ ‘ಚೀನಾ ಈಗಾಗಲೇ ನಮಗೆ ನೀಡಬೇಕಾಗಿರುವುದು’ ಎಂದು ಬರೆದಿತ್ತು.

ಏಪ್ರಿಲ್ 18 ರಂದು, ಜರ್ಮನಿ ಮೂಲದ ನ್ಯೂಸ್ ಚಾನೆಲ್ ಡಿಡಬ್ಲ್ಯೂ, ಬಿಲ್ಡ್ ವರದಿಯ ರಶೀತಿಯನ್ನು ಪ್ರದರ್ಶಿಸುವ ಯೂಟ್ಯೂಬ್ ವರದಿಯನ್ನು ಪ್ರಕಟಿಸಿತು. ವರದಿಯ ಪ್ರಕಾರ ಲೇಖನವನ್ನು ಏಪ್ರಿಲ್ 15 ರಂದು (ಬುಧವಾರ) ಪ್ರಕಟಿಸಲಾಗಿದೆ.

ರಶೀತಿಯಲ್ಲಿನ ಕೆಲವು ವಿಷಯಗಳನ್ನು ಡಿಡಬ್ಲ್ಯೂ ವರದಿ ಮಾಡಿದೆ – ಪ್ರವಾಸೋದ್ಯಮದಲ್ಲಿ 24 ಬಿಲಿಯನ್ ಪೌಂಡ್ ಆದಾಯ ನಷ್ಟ, ಚಲನಚಿತ್ರೋದ್ಯಮಕ್ಕೆ 27.2 ಬಿಲಿಯನ್ ಪೌಂಡ್ ಆದಾಯ ನಷ್ಟ, ಜರ್ಮನ್ ವಿಮಾನಯಾನ ಲುಫ್ಥಾನ್ಸ ಗಂಟೆಗೆ 1 ಮಿಲಿಯನ್ ಪೌಂಡ್ ನಷ್ಟ ಮತ್ತು ಸಣ್ಣ ಉದ್ಯಮಗಳಿಗೆ 50 ಬಿಲಿಯನ್ ಪೌಂಡ್ ನಷ್ಟ ಎಂದು ಸೂಚಿಸಿದೆ.

ಇದಲ್ಲದೆ, ಯುಕೆ ಮೂಲದ ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಫುಲ್ ಫ್ಯಾಕ್ಟ್ ಏಪ್ರಿಲ್ 20 ರಂದು ಜರ್ಮನಿಯ ವಿದೇಶಾಂಗ ಸಚಿವ ಹೆಕೊ ಮಾಸ್ ಸಂದರ್ಶನದಲ್ಲಿ ಬಿಲ್ಡ್ ಚೀನಾದಿಂದ ಹಣಕ್ಕೆ ಬೇಡಿಕೆಯೂ ಭ್ರಮೆ ಎಂದಿದ್ದಾರೆ ಎಂದು ವರದಿ ಮಾಡಿದೆ.

ಏಪ್ರಿಲ್ 15 ರಂದು, ಬರ್ಲಿನ್‌ನ ಚೀನೀ ರಾಯಭಾರ ಕಚೇರಿಯು ಮಾಧ್ಯಮಗಳ ಆರೋಪಗಳಿಗೆ ಬಿಲ್ಡ್‌ನ ಸಂಪಾದಕ ಮುಖ್ಯಸ್ಥ ಜೂಲಿಯನ್ ರೀಚೆಲ್ಟ್‌ಗೆ ಬಹಿರಂಗ ಪತ್ರ ಬರೆದು ಪ್ರತಿಕ್ರಿಯಿಸಿತು. ಚೀನಾದ ರಾಯಭಾರ ಕಚೇರಿಯ ವಕ್ತಾರ ಟಾವೊ ಲಿಲಿ ಮಾತನಾಡಿ ಚೀನಾದ ನಾಯಕತ್ವವು ಪ್ರಮುಖ ಮಾಹಿತಿಯನ್ನು ವಾರಗಳವರೆಗೆ ಮುಚ್ಚಿಟ್ಟಿತ್ತು ಎಂಬ ಆರೋಪವನ್ನು ಅಲ್ಲಗೆಲೆದಿದ್ದಾರೆ.

ಚೀನಾ ಮಾಹಿತಿಯನ್ನು ಮರೆಮಾಡಲಿಲ್ಲ ಎಂದು ಪ್ರತಿಪಾದಿಸಲು ಲಿಲಿ ವಿಶ್ವ ಆರೋಗ್ಯ ಸಂಸ್ಥೆಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ, ಇದು ಕೊರೊನಾ ವೈರಸ್‌ಗೆ ಸಂಬಂಧಿಸಿದ ಪ್ರಮುಖ ಘಟನೆಗಳ ಸಮಯವನ್ನು ತೋರಿಸುತ್ತದೆ. ಈ ಬಗ್ಗೆ ಲಿಲಿ ಬಿಲ್ಡ್ ಪತ್ರಿಕೋದ್ಯಮದ ಬದ್ದತೆಯನ್ನು ಪ್ರಶ್ನಿಸಿ, ಅದು ರಾಷ್ಟ್ರೀಯತೆ, ಪೂರ್ವಾಗ್ರಹ ಮತ್ತು ಸೆನೋಫೋಬಿಯಾವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದರು.

ಎರಡು ದಿನಗಳ ನಂತರ ಬಿಲ್ಡ್ ಸಂಪಾದಕ ರೀಚೆಲ್ಟ್ ಅವರು ಲಿಲಿಯ ಬರೆದ ಬಹಿರಂಗ ಪತ್ರಕ್ಕೆ ಮೌಖಿಕವಾಗಿ 3 ನಿಮಿಷಗಳ ವೀಡಿಯೊದಲ್ಲಿ ಪ್ರತಿಕ್ರಿಯಿಸಿ, ವೀಡಿಯೊದಲ್ಲಿ, ಅವರು ಚೀನಾದ ಆಂತರಿಕ ನೀತಿಗಳಾದ ಕಣ್ಗಾವಲು ಮತ್ತು ಸೆನ್ಸಾರ್ಶಿಪ್ ಅನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ “ನಿಮ್ಮ ನಿಯಮವನ್ನು ಟೀಕಿಸುವ ಪ್ರತಿಯೊಂದು ಪತ್ರಿಕೆ ಮತ್ತು ವೆಬ್‌ಸೈಟ್‌ಗಳನ್ನು ನೀವು ಮುಚ್ಚುತ್ತೀರಿ, ಆದರೆ ಬಾವಲಿ ಸೂಪ್ ಮಾರಾಟವಾಗುವ ಸ್ಟಾಲ್‌ಗಳನ್ನಲ್ಲ. ನಿಮ್ಮ ಜನರನ್ನು ನೀವು ಮೇಲ್ವಿಚಾರಣೆ ಮಾಡುತ್ತಿಲ್ಲ, ಆದರೆ ಅವರಿಗೆ ನೀವು ಅಪಾಯವನ್ನುಂಟುಮಾಡುತ್ತಿರುವಿರಿ ಜೊತೆಗೆ ಪ್ರಪಂಚದ ಉಳಿದ ಭಾಗಗಳಿಗೂ” ಎಂದಿದ್ದಾರೆ.

China‘s embassy in Berlin wrote me an open letter because they weren‘t too happy with our Corona coverage. I responded.

Posted by Julian Reichelt on Saturday, April 18, 2020

ಆದ್ದರಿಂದ, ಲಂಡನ್ ಮೂಲದ ದಿ ಎಕ್ಸ್‌ಪ್ರೆಸ್ ವರದಿಯ ನಂತರ ಹಲವಾರು ಭಾರತೀಯ ಮಾಧ್ಯಮಗಳು ಜನರನ್ನು ದಾರಿತಪ್ಪಿಸುವ ವರದಿಯನ್ನು ಮಾಡಿವೆ. ಇದು ಕೊರೊನಾದಿಂದಾಗಿ ಜರ್ಮನಿಯೂ ಚೀನಾದಿಂದ ಪರಿಹಾರವನ್ನು ಬಯಸುತ್ತಿದೆ ಎಂದು ಸೂಚಿಸುತ್ತದೆ. ಸತ್ಯವೇನೆಂದರೆ, ಜರ್ಮನ್ ಟ್ಯಾಬ್ಲಾಯ್ಡ್ ಪತ್ರಿಕೆ ಬಿಲ್ಡ್ ಒಂದು ತನ್ನ ಅಭಿಪ್ರಾಯದ ತುಣುಕನ್ನು ಪ್ರಕಟಿಸಿ, ಕೊರೊನಾ ವೈರಸ್‌ನಿಂದ ಉಂಟಾದ ಹಾನಿಗಳಿಗೆ ಚೀನಾವನ್ನು ಹೊಣೆಗಾರನ್ನಾಗಿಸುವ ಒಂದು ವಿಚಾರವನ್ನು ಒಳಗೊಂಡಿದೆ. ಅದು ಸುಳ್ಳಾಗಿದ್ದು ಅಂತಹ ಸಾಕ್ಷ್ಯಗಳು ಸಿಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...