Homeನಿಜವೋ ಸುಳ್ಳೋFact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

Fact check: ಕೊರೊನಾದಿಂದಾದ ಹಾನಿ ಭರಿಸುವಂತೆ ಚೀನಾಕ್ಕೆ ಜರ್ಮನಿ ತಾಕೀತು?

- Advertisement -
- Advertisement -

ಲಂಡನ್ ಮೂಲದ ಎಕ್ಸ್‌ಪ್ರೆಸ್.ಕೊ.ಯುಕೆ ಎಂಬ ಪತ್ರಿಕೆ ಏಪ್ರಿಲ್ 20 ರಂದು ವಿವಾದಾತ್ಮಕ ಶೀರ್ಷಿಕೆಯೊಂದಿಗೆ ವರದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ಕೊರೊನಾ ಹಾನಿಗೆ ಪರಿಹಾರವಾಗಿ ಚೀನಾ ದೇಶವು ಜರ್ಮನಿಗೆ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಬರೆಯಲಾಗಿತ್ತು.ಅದಲ್ಲದೆ ಇದರ ನಂತರ ಹಲವಾರು ಮಾಧ್ಯಮಗಳು ಇದೇ ರೀತಿಯ ಶೀರ್ಷಿಕೆಯೊಂದಿಗೆ ವರದಿಯನ್ನು ಪ್ರಕಟಿಸಿದ್ದವು. ಇಂಡಿಯಾ ಟಿವಿ ನ್ಯೂಸ್, ದಿ ಔಟ್‌ಲುಕ್, ಒರಿಸ್ಸಾ ಪೋಸ್ಟ್, ಅಮರ್ ಉಜಲಾ, ಪಂಜಾಬ್ ಕೇಸರಿ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಯನ್ನು ಪ್ರಕಟಿಸಿದ ಪ್ರಮುಖ ಪತ್ರಿಕೆಗಳಾಗಿವೆ. ಆದರೆ ದಿ ಔಟ್‌ಲುಕ್ ಮತ್ತು ದಿ ಎಕನಾಮಿಕ್ ಟೈಮ್ಸ್ ವರದಿಗಳು ಮಾತ್ರ ವರದಿ ಮೂಲವನ್ನು ಐಎಎನ್‌ಎಸ್ ಎಂದು ಉಲ್ಲೇಖಿಸಿದೆ.

ಬಲಪಂಥೀಯ ಪ್ರಚಾರ ವೆಬ್‌ಸೈಟ್ ಒಪಿ ಇಂಡಿಯಾಕ್ಕಾಗಿ ಬರೆಯುವ ಅಶುತೋಷ್ ಮುಗ್ಲಿಕರ್ (ಆರ್ಕೈವ್ ಲಿಂಕ್) ಮತ್ತು ಡೆಮಾಕ್ರಸಿ ನ್ಯೂಸ್ ಲೈವ್‌ನಲ್ಲಿ ಮುಖ್ಯ ಸಂಪಾದಕ ರೋಹಿತ್ ಗಾಂಧಿ (ಆರ್ಕೈವ್ ಲಿಂಕ್) ಅವರು ಏಪ್ರಿಲ್ 20 ರಂದು ದಿ ಎಕ್ಸ್‌ಪ್ರೆಸ್ ವರದಿಯಲ್ಲಿನ ಇದೇ ವಿಷಯವನ್ನು ಹಂಚಿಕೊಂಡಿದ್ದಾರೆ. ಮುಗ್ಲಿಕರ್ ಅವರ ಟ್ವೀಟ್ ಅನ್ನು ಇದುವರೆಗೆ 850 ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಲಾಗಿದೆ.ಫ್ಯಾಕ್ಟ್-ಚೆಕ್

ದಿ ಎಕ್ಸ್‌ಪ್ರೆಸ್‌ನ ಶೀರ್ಷಿಕೆಯೂ ಓದುಗರನ್ನು ತಪ್ಪುದಾರಿಗೆಳೆಯುವಂತಿದೆ. ಲೇಖನದ ಮೊದಲ ಸಾಲು ಹೀಗಿದೆ, “ಕೊರೊನಾ ಸಾಂಕ್ರಾಮಿಕದಿಂದಾಗಿ ಚೀನಾದ ವಿರುದ್ಧ ಜರ್ಮನಿ ಸಿಟ್ಟಿಗೆದ್ದಿದೆ. ಹಾನಿಯ ನಷ್ಟ ಪರಿಹಾರವಾಗಿ 130 ಬಿಲಿಯನ್ ಪೌಂಡ್ ಬಿಲ್ ಅನ್ನು ಕಟ್ಟಬೇಕೆಂದು ಜರ್ಮನಿಯು ಬಿಲ್‌ ಕಳಿಸಿದೆ ಎಂದು ಟ್ಯಾಬ್ಲಾಡ್‌ ಪತ್ರಿಕೆಯೊಂದು ವರದಿ ಮಾಡಿದೆ. ಆದರೆ ಅಂತಹ ಬಿಲ್‌ ಅನ್ನು ಜರ್ಮನಿ ಕಳಿಸಿಲ್ಲ ಎಂದು ಕೊನೆಯಲ್ಲಿ ಬರೆದಿದೆ.

25 ಗಂಟೆಗಳ ನಂತರ ದಿ ಎಕ್ಸ್‌ಪ್ರೆಸ್ ತಪ್ಪಾದ ಶೀರ್ಷಿಕೆಯನ್ನು ಬದಲಾಯಿಸಿತು. ವೆಬ್‌ಸೈಟ್‌ನ ಪ್ರಕಾರ, ಈ ಲೇಖನವು ‘ವಿಶ್ವ’ ವಿಭಾಗದಲ್ಲಿ ಹೆಚ್ಚು ಓದಿದ ಲೇಖನವಾಗಿತ್ತು ಎಂಬುದನ್ನು ಗಮನಿಸಬೇಕು.

ಈ ವಿಷಯದ ಕುರಿತು ಫ್ಯಾಕ್‌ ಚೆಕೆ ನಡೆಸಿದಾಗ ಥಾಯ್ಬಾವೊ ಎಂಬ ವಿಯೆಟ್ನಾಮಿ ಬ್ಲಾಗ್ ಒಂದು ಲೇಖನವನ್ನು ಪ್ರಕಟಿಸಿರುವುದನ್ನು ಕಂಡುಬಂದಿದೆ. ಇದು ಚೀನಾಕ್ಕೆ ರಶೀತಿಯನ್ನು ಮಾಡಿರುವ ‘ಬಿಲ್ಡ್’ ಪತ್ರಿಕೆಯ ವರದಿಯ ಸ್ಕ್ರೀನ್‌ಶಾಟ್ (ಕೆಳಗೆ ಚಿತ್ರವಿದೆ) ಒಳಗೊಂಡಿತ್ತು. ಏಪ್ರಿಲ್ 15 ರಂದು ಬಿಲ್ಡ್ ಕೆಳಗಿನ ಸ್ಕ್ರೀನ್‌ಶಾಟ್‌ನಲ್ಲಿ ಕಂಡುಬರುವ ಅದೇ ಶೀರ್ಷಿಕೆಯೊಂದಿಗೆ ಒಂದು ಲೇಖನವನ್ನು ಪ್ರಕಟಿಸಿತ್ತು, ಅದರಲ್ಲಿ ‘ಚೀನಾ ಈಗಾಗಲೇ ನಮಗೆ ನೀಡಬೇಕಾಗಿರುವುದು’ ಎಂದು ಬರೆದಿತ್ತು.

ಏಪ್ರಿಲ್ 18 ರಂದು, ಜರ್ಮನಿ ಮೂಲದ ನ್ಯೂಸ್ ಚಾನೆಲ್ ಡಿಡಬ್ಲ್ಯೂ, ಬಿಲ್ಡ್ ವರದಿಯ ರಶೀತಿಯನ್ನು ಪ್ರದರ್ಶಿಸುವ ಯೂಟ್ಯೂಬ್ ವರದಿಯನ್ನು ಪ್ರಕಟಿಸಿತು. ವರದಿಯ ಪ್ರಕಾರ ಲೇಖನವನ್ನು ಏಪ್ರಿಲ್ 15 ರಂದು (ಬುಧವಾರ) ಪ್ರಕಟಿಸಲಾಗಿದೆ.

ರಶೀತಿಯಲ್ಲಿನ ಕೆಲವು ವಿಷಯಗಳನ್ನು ಡಿಡಬ್ಲ್ಯೂ ವರದಿ ಮಾಡಿದೆ – ಪ್ರವಾಸೋದ್ಯಮದಲ್ಲಿ 24 ಬಿಲಿಯನ್ ಪೌಂಡ್ ಆದಾಯ ನಷ್ಟ, ಚಲನಚಿತ್ರೋದ್ಯಮಕ್ಕೆ 27.2 ಬಿಲಿಯನ್ ಪೌಂಡ್ ಆದಾಯ ನಷ್ಟ, ಜರ್ಮನ್ ವಿಮಾನಯಾನ ಲುಫ್ಥಾನ್ಸ ಗಂಟೆಗೆ 1 ಮಿಲಿಯನ್ ಪೌಂಡ್ ನಷ್ಟ ಮತ್ತು ಸಣ್ಣ ಉದ್ಯಮಗಳಿಗೆ 50 ಬಿಲಿಯನ್ ಪೌಂಡ್ ನಷ್ಟ ಎಂದು ಸೂಚಿಸಿದೆ.

ಇದಲ್ಲದೆ, ಯುಕೆ ಮೂಲದ ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಫುಲ್ ಫ್ಯಾಕ್ಟ್ ಏಪ್ರಿಲ್ 20 ರಂದು ಜರ್ಮನಿಯ ವಿದೇಶಾಂಗ ಸಚಿವ ಹೆಕೊ ಮಾಸ್ ಸಂದರ್ಶನದಲ್ಲಿ ಬಿಲ್ಡ್ ಚೀನಾದಿಂದ ಹಣಕ್ಕೆ ಬೇಡಿಕೆಯೂ ಭ್ರಮೆ ಎಂದಿದ್ದಾರೆ ಎಂದು ವರದಿ ಮಾಡಿದೆ.

ಏಪ್ರಿಲ್ 15 ರಂದು, ಬರ್ಲಿನ್‌ನ ಚೀನೀ ರಾಯಭಾರ ಕಚೇರಿಯು ಮಾಧ್ಯಮಗಳ ಆರೋಪಗಳಿಗೆ ಬಿಲ್ಡ್‌ನ ಸಂಪಾದಕ ಮುಖ್ಯಸ್ಥ ಜೂಲಿಯನ್ ರೀಚೆಲ್ಟ್‌ಗೆ ಬಹಿರಂಗ ಪತ್ರ ಬರೆದು ಪ್ರತಿಕ್ರಿಯಿಸಿತು. ಚೀನಾದ ರಾಯಭಾರ ಕಚೇರಿಯ ವಕ್ತಾರ ಟಾವೊ ಲಿಲಿ ಮಾತನಾಡಿ ಚೀನಾದ ನಾಯಕತ್ವವು ಪ್ರಮುಖ ಮಾಹಿತಿಯನ್ನು ವಾರಗಳವರೆಗೆ ಮುಚ್ಚಿಟ್ಟಿತ್ತು ಎಂಬ ಆರೋಪವನ್ನು ಅಲ್ಲಗೆಲೆದಿದ್ದಾರೆ.

ಚೀನಾ ಮಾಹಿತಿಯನ್ನು ಮರೆಮಾಡಲಿಲ್ಲ ಎಂದು ಪ್ರತಿಪಾದಿಸಲು ಲಿಲಿ ವಿಶ್ವ ಆರೋಗ್ಯ ಸಂಸ್ಥೆಯ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ, ಇದು ಕೊರೊನಾ ವೈರಸ್‌ಗೆ ಸಂಬಂಧಿಸಿದ ಪ್ರಮುಖ ಘಟನೆಗಳ ಸಮಯವನ್ನು ತೋರಿಸುತ್ತದೆ. ಈ ಬಗ್ಗೆ ಲಿಲಿ ಬಿಲ್ಡ್ ಪತ್ರಿಕೋದ್ಯಮದ ಬದ್ದತೆಯನ್ನು ಪ್ರಶ್ನಿಸಿ, ಅದು ರಾಷ್ಟ್ರೀಯತೆ, ಪೂರ್ವಾಗ್ರಹ ಮತ್ತು ಸೆನೋಫೋಬಿಯಾವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದರು.

ಎರಡು ದಿನಗಳ ನಂತರ ಬಿಲ್ಡ್ ಸಂಪಾದಕ ರೀಚೆಲ್ಟ್ ಅವರು ಲಿಲಿಯ ಬರೆದ ಬಹಿರಂಗ ಪತ್ರಕ್ಕೆ ಮೌಖಿಕವಾಗಿ 3 ನಿಮಿಷಗಳ ವೀಡಿಯೊದಲ್ಲಿ ಪ್ರತಿಕ್ರಿಯಿಸಿ, ವೀಡಿಯೊದಲ್ಲಿ, ಅವರು ಚೀನಾದ ಆಂತರಿಕ ನೀತಿಗಳಾದ ಕಣ್ಗಾವಲು ಮತ್ತು ಸೆನ್ಸಾರ್ಶಿಪ್ ಅನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ “ನಿಮ್ಮ ನಿಯಮವನ್ನು ಟೀಕಿಸುವ ಪ್ರತಿಯೊಂದು ಪತ್ರಿಕೆ ಮತ್ತು ವೆಬ್‌ಸೈಟ್‌ಗಳನ್ನು ನೀವು ಮುಚ್ಚುತ್ತೀರಿ, ಆದರೆ ಬಾವಲಿ ಸೂಪ್ ಮಾರಾಟವಾಗುವ ಸ್ಟಾಲ್‌ಗಳನ್ನಲ್ಲ. ನಿಮ್ಮ ಜನರನ್ನು ನೀವು ಮೇಲ್ವಿಚಾರಣೆ ಮಾಡುತ್ತಿಲ್ಲ, ಆದರೆ ಅವರಿಗೆ ನೀವು ಅಪಾಯವನ್ನುಂಟುಮಾಡುತ್ತಿರುವಿರಿ ಜೊತೆಗೆ ಪ್ರಪಂಚದ ಉಳಿದ ಭಾಗಗಳಿಗೂ” ಎಂದಿದ್ದಾರೆ.

China‘s embassy in Berlin wrote me an open letter because they weren‘t too happy with our Corona coverage. I responded.

Posted by Julian Reichelt on Saturday, April 18, 2020

ಆದ್ದರಿಂದ, ಲಂಡನ್ ಮೂಲದ ದಿ ಎಕ್ಸ್‌ಪ್ರೆಸ್ ವರದಿಯ ನಂತರ ಹಲವಾರು ಭಾರತೀಯ ಮಾಧ್ಯಮಗಳು ಜನರನ್ನು ದಾರಿತಪ್ಪಿಸುವ ವರದಿಯನ್ನು ಮಾಡಿವೆ. ಇದು ಕೊರೊನಾದಿಂದಾಗಿ ಜರ್ಮನಿಯೂ ಚೀನಾದಿಂದ ಪರಿಹಾರವನ್ನು ಬಯಸುತ್ತಿದೆ ಎಂದು ಸೂಚಿಸುತ್ತದೆ. ಸತ್ಯವೇನೆಂದರೆ, ಜರ್ಮನ್ ಟ್ಯಾಬ್ಲಾಯ್ಡ್ ಪತ್ರಿಕೆ ಬಿಲ್ಡ್ ಒಂದು ತನ್ನ ಅಭಿಪ್ರಾಯದ ತುಣುಕನ್ನು ಪ್ರಕಟಿಸಿ, ಕೊರೊನಾ ವೈರಸ್‌ನಿಂದ ಉಂಟಾದ ಹಾನಿಗಳಿಗೆ ಚೀನಾವನ್ನು ಹೊಣೆಗಾರನ್ನಾಗಿಸುವ ಒಂದು ವಿಚಾರವನ್ನು ಒಳಗೊಂಡಿದೆ. ಅದು ಸುಳ್ಳಾಗಿದ್ದು ಅಂತಹ ಸಾಕ್ಷ್ಯಗಳು ಸಿಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...