Homeಮುಖಪುಟರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

ರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

“ಮೈಸೂರಿನ ಬಿಜೆಪಿ ಮುಖಂಡರ ನಡುವಿನ ಒಳಸಮರ ಗುಂಬಜ್‌ ಮಾದರಿ ಬಸ್‌ ನಿಲ್ದಾಣದ ನೆಪದಲ್ಲಿ ಮತ್ತೆ ಸ್ಫೋಟಗೊಂಡಿದೆ”

- Advertisement -
- Advertisement -

ಮೈಸೂರು ನಗರದ ಊಟಿ‌ ರಸ್ತೆಯ‌ ಜೆಎಸ್ಎಸ್ ಕಾಲೇಜು ಬಳಿ ನಿರ್ಮಿಸಿರುವ ಬಸ್ ನಿಲ್ದಾಣದ ಮೇಲಿನ ಗುಮ್ಮಟ(ಗುಂಬಜ್)ದ ಮಾದರಿಯ ವಿನ್ಯಾಸವನ್ನು ಕೆಡವುತ್ತೇನೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ರಂಗಾಯಣದಲ್ಲಿ ಭಾನುವಾರ ನಡೆದ ‘ಟಿಪ್ಪು ನಿಜಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್‌ ಸಿಂಹ, “ಗುತ್ತಿಗೆದಾರರೊಬ್ಬರು ಮಸೀದಿ ಗುಂಬಜ್‌ ಹೋಲುವ ಬಸ್‌ ನಿಲ್ದಾಣ ನಿರ್ಮಿಸಿದ್ದಾರೆ. ಇದನ್ನು ಬದಲಿಸಲು 3 ದಿನಗಳ ಗಡುವು ನೀಡಿದ್ದೇನೆ. ಬದಲಿಸದಿದ್ದರೆ, ಜೆಸಿಬಿ ತರಿಸಿ ಕೆಡವಿಸುತ್ತೇನೆ” ಎಂದಿದ್ದರು.

“ತದನಂತರ ರಾತ್ರೋರಾತ್ರಿ ಗುಮ್ಮಟದ ವಿನ್ಯಾಸದ ಮೇಲೆ ಕಳಶಗಳನ್ನು ಜೋಡಿಸಿ, ಹಿಂದೂ ಧಾರ್ಮಿಕತೆ ಪ್ರದರ್ಶಿಸಲಾಗಿದೆ. ತಂಗುದಾಣದ ಒಳಗೆ ಅರಮನೆ ಚಿತ್ರ, ಶಾಸಕ ಎಸ್‌.ಎ.ರಾಮದಾಸ್ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ಫೋಟೋಗಳನ್ನು ಹಾಕಲಾಗಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಗುಂಬಜ್‌ ಮಾದರಿಯ ಕಟ್ಟಡವಲ್ಲ, ಅರಮನೆ ಶೈಲಿಯ ಕಟ್ಟಡ” ಎಂಬ ಸಮರ್ಥನೆಗಳನ್ನು ರಾಮದಾಸ್ ಬೆಂಬಲಿಗರು ನೀಡುತ್ತಿದ್ದಾರೆ. “ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ನಿರ್ಮಿಸಿರುವುದು ಅರಮನೆಯ ಮಾದರಿಯ ಗೋಪುರವೇ ಹೊರತು, ಗುಂಬಜ್ ಅಲ್ಲ‌. ಶಾಸಕರೇ ಮುತುವರ್ಜಿ ವಹಿಸಿ ಈ ಮಾದರಿ ನಿರ್ಮಾಣಕ್ಕೆ ಕ್ರಮ ವಹಿಸಿದ್ದಾರೆ” ಎಂದು ಬಸ್‌ ನಿಲ್ದಾಣ ನಿರ್ಮಿಸಿದ ಕೆಆರ್‌ಡಿಎಲ್‌ ಎಂಜಿನಿಯರ್ ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

“ಶಾಸಕರ ಅನುದಾನದಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೂಲ ವಿನ್ಯಾಸದಲ್ಲಿ ಚಾವಣಿಯ ಮೇಲೆ ಯಾವುದೇ ಆಕೃತಿ ರಚಿಸುವ ಯೋಜನೆ ಇರಲಿಲ್ಲ. ಶಾಸಕರು ಪರಿಚಿತ ಗುತ್ತಿಗೆದಾರರಿಂದ ಅರಮನೆಯಂತೆ ಗೋಪುರ ನಿರ್ಮಿಸಿದ್ದಾರೆ. ಇದಕ್ಕೂ‌ ನಮಗೂ ಸಂಬಂಧವಿಲ್ಲ” ಎಂದಿದ್ದಾರೆ.

ಅಕ್ಟೋಬರ್‌ನಲ್ಲಿ ನಿಲ್ದಾಣದ ಕಾಮಗಾರಿ ಮುಗಿದಿದ್ದು, ಇನ್ನೂ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ. ಆದರೆ ಈ ವಿವಾದದ ಸುತ್ತ ಬೇರೆಯೇ ರಾಜಕೀಯ ಕೆಲಸ ಮಾಡುತ್ತಿದೆ. ಮೈಸೂರು ಭಾಗದ ಬಿಜೆಪಿಯೊಳಗಿನ ನಾಯಕತ್ವ ಸಮರವೇ ಈ ವಿವಾದದ ಕೇಂದ್ರಬಿಂದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

“ಈ ಪ್ರಕರಣವನ್ನು ಮೇಲುನೋಟಕ್ಕೆ ನೋಡಿದರೆ- ಹಿಂದೂ ಮುಸ್ಲಿಂ ಕೇಂದ್ರಿತ ರಾಜಕಾರಣವಾಗಿ ಕಾಣುತ್ತದೆ. ಅದಕ್ಕಿಂತ ಮುಖ್ಯವಾಗಿ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮದಾಸ್‌ ಮತ್ತು ಸಂಸದ ಪ್ರತಾಪಸಿಂಹ ನಡುವಿನ ಜಟಾಪಟಿಯೇ ಈ ವಿವಾದಕ್ಕೆ ಕಾರಣ” ಎನ್ನುತ್ತಾರೆ ಸ್ಥಳೀಯರು.

ಈ ಇಬ್ಬರ ನಡುವೆ ಮೈಸೂರು ಭಾಗದಲ್ಲಿ ಆಗಾಗ್ಗೆ ವೈಮಸ್ಸುಗಳು ತಲೆದೋರಿವೆ. ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ, ಈ ಭಾಗದಲ್ಲಿ ಬಿಜೆಪಿಯೊಳಗೆ ನಿರಂತರ ಸಮರ ನಡೆಯುತ್ತಿದೆ.

ಪ್ರತಾಪ್‌ಸಿಂಹ ಹಾಗೂ ರಾಮದಾಸ್ ನಡುವಿನ ಜಟಾಪಟಿ ಇತಿಹಾಸವು ಸುಯೇಜ್ ಫಾರಂ ವಿವಾದದಲ್ಲಿ ಸ್ಫೋಟಗೊಳ್ಳುತ್ತದೆ. ಎರಡು ವರ್ಷಗಳ ಹಿಂದೆ ಸೂಯೇಜ್‌ ಫಾರಂ ವಿಚಾರಕ್ಕೆ ಪ್ರತಾಪ್ ಸಿಂಹ ಕೈಹಾಕಿದ್ದಕ್ಕೆ ರಾಮದಾಸ್ ಸಿಡಿಮಿಡಿಗೊಂಡಿದ್ದರು. ತನ್ನ ಕ್ಷೇತ್ರದ ವಿಚಾರದಲ್ಲಿ ಸಂಸದರು ತಲೆಹಾಕುತ್ತಿರುವುದು ಶಾಸಕರಿಗೆ ಇರಸುಮುರುಸು ಉಂಟು ಮಾಡಿತು.

ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು ಅಧ್ಯಕ್ಷತೆಯಲ್ಲಿ 2020ರ ಮೇನಲ್ಲಿ ನಡೆದಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಸಂಸದ ಮತ್ತು ಶಾಸಕರ ನಡುವಿನ ಭಿನ್ನಮತ ಸ್ಫೋಟಗೊಂಡಿತ್ತು. ಸಚಿವ ಎಸ್.ಟಿ.ಸೋಮಶೇಖರ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.

“ಸುಯೇಜ್‌ ಫಾರಂ ಕಸ ವಿಲೇವಾರಿ ಸಂಬಂಧ ವರ್ಕ್ ಆರ್ಡರ್‌ ನೀಡಲಾಗಿದೆ” ಎಂದು ಪ್ರತಾಪ ಸಿಂಹ ಹೇಳಿದರೆ, “ಈ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ” ಎಂದು ರಾಮದಾಸ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಈ ಯೋಜನೆ ನನ್ನ ಗಮನಕ್ಕೂ ಬಂದಿಲ್ಲ. ಆದರೂ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ. ಕತ್ತಲಿನಲ್ಲಿ ಕೆಲಸ ಮಾಡುವಂತೆ ಮಾಡಿದ್ದಾರೆ. ನಾಗ್ಪುರ ಮಾದರಿಯಲ್ಲಿಯೇ ಕಸ ವಿಂಗಡಣೆ ಮಾಡಿ. ಆದರೆ ಸುಯೇಜ್ ಫಾರಂನಲ್ಲಿ ಮಾಡುವುದಕ್ಕಿಂತ ರಾಯನಕೆರೆಯಲ್ಲಿ ನಿಗದಿಪಡಿಸಿರುವ 110 ಎಕರೆ ಪ್ರದೇಶದಲ್ಲಿ ಮಾಡಬೇಕು” ಎಂದು ಆಗ್ರಹಿಸಿದ್ದರು.

“ಸುಯೇಜ್ ಫಾರಂನಲ್ಲಿ 5 ಘಟಕಗಳನ್ನು ಸ್ಥಾಪಿಸಿ, 15 ಯಂತ್ರಗಳಿಂದ ಗೊಬ್ಬರ ತಯಾರಿಕೆ ಯೋಜನೆ ಮಾಡುವುದಕ್ಕೆ ನನ್ನ ವಿರೋಧವಿದೆ. ಇದಕ್ಕೆ ರೂಪುರೇಷೆಗಳನ್ನು ರಚಿಸಿ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು. 25 ವರ್ಷದಿಂದ ಇಲ್ಲಿನ ಸಾರ್ವಜನಿಕರು ಅನಾರೋಗ್ಯಕ್ಕೊಳಗಾಗಿದ್ದಾರೆ. ಇದನ್ನು ಮೊದಲು ಕೊನೆಗಾಣಿಸಿ. ಸಂಸದ ಪ್ರತಾಪ್ ಸಿಂಹ ಅವರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ. ಅವರು ರಾಷ್ಟ್ರೀಯ ನಾಯಕರು. ನಾನು ಸ್ಥಳೀಯ ಕಾರ್ಯಕರ್ತ. 25 ವರ್ಷದಿಂದ ಮೈಸೂರು ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರು ಏನೂ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ದೂರದೃಷ್ಟಿತ್ವದ ಬಗ್ಗೆ ನಾನು ಹೇಳುತ್ತಿದ್ದೇನೆ ಅಷ್ಟೇ” ಎಂದು ರಾಮದಾಸ್ ತಿರುಗೇಟು ನೀಡಿದ್ದರು.

ramdas tweet

ಕೆಲವು ತಿಂಗಳ ಹಿಂದೆ ಇಬ್ಬರ ನಡುವೆ ಪೈಪೋಟಿ ಮತ್ತೆ ಮುನ್ನೆಲೆಗೆ ಬಂದಿತು. ನಗರದಲ್ಲಿ ರಸ್ತೆಗಳನ್ನು ಅಗೆದು ಗ್ಯಾಸ್ ಪೈಪ್‌ಲೈನ್‌ಗಳನ್ನು ಹಾಕುವ ಯೋಜನೆಯನ್ನು ರಾಮದಾಸ್‌ ಕೆಲವು ತಿಂಗಳ ಹಿಂದಷ್ಟೇ ವಿರೋಧಿಸಿದ್ದರು. ಇದಕ್ಕೆ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್‌.ನಾಗೇಂದ್ರ ಅವರೂ ರಾಮದಾಸ್‌ ನಿಲುವನ್ನು ಬೆಂಬಲಿಸಿದ್ದರು.

ರಸ್ತೆಯನ್ನು ಅಗೆಯುವ ಯೋಜನೆಯನ್ನು ಬೆಂಬಲಿಸಬಾರದು ಎಂದು ಮೈಸೂರು ಪಾಲಿಕೆಗೆ ರಾಮದಾಸ್ ಕೋರಿದ್ದರು. ಅದಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿ, “ಗ್ಯಾಸ್ ಪೈಪ್‌ಲೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲವಿದೆ” ಎಂದಿದ್ದರು. ಈ ಭಿನ್ನಮತವು ಯೋಗ ದಿನಾಚರಣೆಯ ಹೊಸ್ತಿಲಲ್ಲೂ ತಲೆದೋರಿತ್ತು.

ಪ್ರಧಾನಿ ಮೋದಿಯವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಬರಲಿದ್ದರು. ಇದರಲ್ಲಿ ಮೈಲೇಜ್‌ ಪಡೆಯುವುದಕ್ಕಾಗಿ ಸಂಸದರು, ಶಾಸಕರು ಪ್ರಯತ್ನಿಸಿದ್ದರು. ಎಷ್ಟು ಜನರನ್ನು ಕಾರ್ಯಕ್ರಮಕ್ಕೆ ಸೇರಿಸಲಾಗುತ್ತದೆ ಎಂಬ ವಿಚಾರವಾಗಿಯೂ ಮಾಧ್ಯಮಗಳೆದುರು ಈ ಇಬ್ಬರು ಬಿಜೆಪಿಗರು ಕಿತಾಪತಿ ಮಾಡಿಕೊಂಡಿದ್ದರು.

ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಪ್ರತಾಪ್‌ ಸಿಂಹ, “ಮೈಸೂರು ಅರಮನೆ ಮೈದಾನದಲ್ಲಿ ಒಬ್ಬರು ಯೋಗ ಮಾಡಬೇಕಾದರೆ 6*6 ಜಾಗಬೇಕಾಗುತ್ತದೆ. ಅದರನ್ವಯ ಅರಮನೆ ಮೈದಾನದಲ್ಲಿ ಏಳರಿಂದ ಎಂಟು ಸಾವಿರ ಜನ ಸೇರಬಹುದು” ಎಂದು ಹೇಳಿದ್ದರು. ಸಂಸದರು ಮಾತನಾಡುತ್ತಿರುವಾಗಲೇ ರಾಮದಾಸ್‌ ಮಾತಿಗೆ ಮುಂದಾಗಿ, “ಹದಿನೈದು ಸಾವಿರ ಜನ ಈಗಾಗಲೇ ಆರ್ಡರ್‌ ಮಾಡಿದ್ದಾರೆ” ಎಂದಿದ್ದರು. ಅದಕ್ಕೆ ಪ್ರತಾಪ್‌, “ನಾನು ಮಾತನಾಡುತ್ತಿದ್ದೇನೆ. ರಾಮದಾಸ್ ಅವರು ಸಮಾಧಾನದಿಂದ ಇರಬೇಕು” ಎಂದಿದ್ದು ವಿಡಿಯೊದಲ್ಲಿ ರೆಕಾರ್ಡ್ ಆಗಿತ್ತು. ನಂತರ ಪ್ರತಿಕ್ರಿಯಿಸಿದ್ದ ರಾಮದಾಸ್‌, “ಸಂಸದರಿಗೆ ಮಾಹಿತಿ ಇರಲಿಲ್ಲ. ಅದಕ್ಕಾಗಿ ಮಾತನಾಡಿದೆ. ಈಗಾಗಲೇ ನಮಗೆ ಕ್ಲಿಯರೆನ್ಸ್ ಮಾಡಿಕೊಟ್ಟಿರುವುದು ಸಂಸದರಿಗೆ ಗೊತ್ತಿರಲಿಲ್ಲ. ನಿಮಗೆ ಗೊಂದಲವಾಗಬಾರದು ಎಂದು ಮಾತಿನ ಮಧ್ಯೆ ಸ್ಪಷ್ಟನೆ ನೀಡಿದೆ” ಎಂದು ಸಮರ್ಥಿಸಿದ್ದರು.

ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ‘ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ಈಗ ‘ಗುಂಬಜ್‌’ ವಿವಾದ…

ರಾಮದಾಸ್ ಕ್ಷೇತ್ರದಲ್ಲಿನ ಬಸ್ ನಿಲ್ದಾಣದ ಕುರಿತು ಪ್ರತಾಪ್ ಸಿಂಹ ಬೇಕಂತಲೇ ಕಿತಾಪತಿ ಮಾಡಿದ್ದಾರೆಂದು ಸ್ಥಳೀಯ ಮೂಲಗಳು ಹೇಳುತ್ತವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮೈಸೂರನ್ನು ಯಾರು ಹಿಡಿತದಲ್ಲಿ ಇಟ್ಟುಕೊಳ್ಳಬೇಕೆಂಬ ಪೈಪೋಟಿಯ ಭಾಗವೇ ಈ ಗುಂಬಜ್‌ ವಿವಾದ. ಕಾಮಗಾರಿ ಮುಗಿಯುವ ಹಂತದಲ್ಲಿದೆ. ಅಷ್ಟರಲ್ಲಿಯೇ ಈ ಜಟಾಪಟಿ ನಡೆಸಿದ್ದಾರೆ. ಕಾಮಗಾರಿ ಮಾಡುತ್ತಿರುವುದು ಸರ್ಕಾರಿ ಹಣದಲ್ಲಿ, ರೂಪುರೇಷೆ ಮಾಡಿದ್ದು ಬಿಜೆಪಿ ಎಂಎಲ್‌ಎ ರಾಮದಾಸ್. ಅವರದ್ದೇ ಸರ್ಕಾರದ ಶಾಸಕರು ಕಟ್ಟಿಸಿದ್ದನ್ನು ಒಡೆದು ಹಾಕುವುದಾಗಿ ಪ್ರತಾಪ್‌ ಹೇಳುತ್ತಿದ್ದಾರೆ” ಎಂದು ವಿವರಿಸಿದರು.

“ಮೈಸೂರು ಅರಮನೆ ಮೇಲೆ ಗೊಮ್ಮಟಗಳಿವೆ. ಕಾರಂಜಿ ಮಹಲ್‌, ಜಗನ್ಮೋಹನ ಪಾಲೇಸ್‌, ಲಲಿತ ಮಹಲ್‌, ಮೈಸೂರು ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಗುಂಬಜ್‌ಗಳಿವೆ. ಆ ಎಲ್ಲವೂ ಮಸೀದಿ ರೀತಿ ಕಾಣುವುದಾದರೆ, ಪ್ರತಾಪ್‌ಸಿಂಹ ಅಲ್ಲಿಗೆ ಕಾಲಿಡುವುದಿಲ್ಲವೇ? ಅವುಗಳನ್ನು ಒಡೆದು ಹಾಕುತ್ತಾರೆಯೇ?” ಎಂದು ಮುಖಂಡರೊಬ್ಬರು ಪ್ರಶ್ನಿಸಿದರು.

“ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ತಪ್ಪಿಸಬೇಕೆಂದು ರಾಮದಾಸ್‌ ಪ್ರಯತ್ನಪಡುತ್ತಿದ್ದರೆ, ರಾಮದಾಸ್‌ಗೆ ಟಿಕೆಟ್ ತಪ್ಪಿಸಬೇಕೆಂದು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ” ಎಂದು ಸ್ಥಳೀಯ ಪತ್ರಕರ್ತರು ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೋ ಫಿಟ್ಟಿಂಗ್ ಇಟ್ಟಿರ್ಬೇಕು, ಕೋಮುಗಲಭೆ ಸ್ಟಾರ್ಟ್ ಆಗ್ಲಿ ಅಂತ ಆದರೆ ಇವರಿಗೆ ಸ್ವಂತಿಕೆ ಬುದ್ಧಿಯೇ ಇಲ್ಲ ಎಂಬಂತೆ ಕಾಣುತ್ತಿದೆ ಆದರೆ ಈ ಕೊಳಕು ಕೋಮುವಾದ ಇಷ್ಟೊಂದು ರೀತಿಯಲ್ಲಿ ಕಿಚ್ಚು ಮನಸ್ಸಿಂದ ಕಕ್ಕಬಾರದು ರಾಜಕೀಯದವರಿಗೆ ಯಾವಾಗಲೂ ಪ್ರಾಮಾಣಿಕತೆ ಸಹನೆ ಸಹಬಾಳುವೆ ಪ್ರೀತಿ ಮನೋಭಾವ ಇರಬೇಕು ……ಸ್ಥಳದಲ್ಲಿ ಜಡ್ಜ್ಮೆಂಟ್ ಕೊಡುವಂತಹ ನಾಯ ಕತ್ವ ಇರಬೇಕು

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...