Homeಮುಖಪುಟರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

ರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

“ಮೈಸೂರಿನ ಬಿಜೆಪಿ ಮುಖಂಡರ ನಡುವಿನ ಒಳಸಮರ ಗುಂಬಜ್‌ ಮಾದರಿ ಬಸ್‌ ನಿಲ್ದಾಣದ ನೆಪದಲ್ಲಿ ಮತ್ತೆ ಸ್ಫೋಟಗೊಂಡಿದೆ”

- Advertisement -
- Advertisement -

ಮೈಸೂರು ನಗರದ ಊಟಿ‌ ರಸ್ತೆಯ‌ ಜೆಎಸ್ಎಸ್ ಕಾಲೇಜು ಬಳಿ ನಿರ್ಮಿಸಿರುವ ಬಸ್ ನಿಲ್ದಾಣದ ಮೇಲಿನ ಗುಮ್ಮಟ(ಗುಂಬಜ್)ದ ಮಾದರಿಯ ವಿನ್ಯಾಸವನ್ನು ಕೆಡವುತ್ತೇನೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ರಂಗಾಯಣದಲ್ಲಿ ಭಾನುವಾರ ನಡೆದ ‘ಟಿಪ್ಪು ನಿಜಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್‌ ಸಿಂಹ, “ಗುತ್ತಿಗೆದಾರರೊಬ್ಬರು ಮಸೀದಿ ಗುಂಬಜ್‌ ಹೋಲುವ ಬಸ್‌ ನಿಲ್ದಾಣ ನಿರ್ಮಿಸಿದ್ದಾರೆ. ಇದನ್ನು ಬದಲಿಸಲು 3 ದಿನಗಳ ಗಡುವು ನೀಡಿದ್ದೇನೆ. ಬದಲಿಸದಿದ್ದರೆ, ಜೆಸಿಬಿ ತರಿಸಿ ಕೆಡವಿಸುತ್ತೇನೆ” ಎಂದಿದ್ದರು.

“ತದನಂತರ ರಾತ್ರೋರಾತ್ರಿ ಗುಮ್ಮಟದ ವಿನ್ಯಾಸದ ಮೇಲೆ ಕಳಶಗಳನ್ನು ಜೋಡಿಸಿ, ಹಿಂದೂ ಧಾರ್ಮಿಕತೆ ಪ್ರದರ್ಶಿಸಲಾಗಿದೆ. ತಂಗುದಾಣದ ಒಳಗೆ ಅರಮನೆ ಚಿತ್ರ, ಶಾಸಕ ಎಸ್‌.ಎ.ರಾಮದಾಸ್ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ಫೋಟೋಗಳನ್ನು ಹಾಕಲಾಗಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಗುಂಬಜ್‌ ಮಾದರಿಯ ಕಟ್ಟಡವಲ್ಲ, ಅರಮನೆ ಶೈಲಿಯ ಕಟ್ಟಡ” ಎಂಬ ಸಮರ್ಥನೆಗಳನ್ನು ರಾಮದಾಸ್ ಬೆಂಬಲಿಗರು ನೀಡುತ್ತಿದ್ದಾರೆ. “ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ನಿರ್ಮಿಸಿರುವುದು ಅರಮನೆಯ ಮಾದರಿಯ ಗೋಪುರವೇ ಹೊರತು, ಗುಂಬಜ್ ಅಲ್ಲ‌. ಶಾಸಕರೇ ಮುತುವರ್ಜಿ ವಹಿಸಿ ಈ ಮಾದರಿ ನಿರ್ಮಾಣಕ್ಕೆ ಕ್ರಮ ವಹಿಸಿದ್ದಾರೆ” ಎಂದು ಬಸ್‌ ನಿಲ್ದಾಣ ನಿರ್ಮಿಸಿದ ಕೆಆರ್‌ಡಿಎಲ್‌ ಎಂಜಿನಿಯರ್ ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

“ಶಾಸಕರ ಅನುದಾನದಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೂಲ ವಿನ್ಯಾಸದಲ್ಲಿ ಚಾವಣಿಯ ಮೇಲೆ ಯಾವುದೇ ಆಕೃತಿ ರಚಿಸುವ ಯೋಜನೆ ಇರಲಿಲ್ಲ. ಶಾಸಕರು ಪರಿಚಿತ ಗುತ್ತಿಗೆದಾರರಿಂದ ಅರಮನೆಯಂತೆ ಗೋಪುರ ನಿರ್ಮಿಸಿದ್ದಾರೆ. ಇದಕ್ಕೂ‌ ನಮಗೂ ಸಂಬಂಧವಿಲ್ಲ” ಎಂದಿದ್ದಾರೆ.

ಅಕ್ಟೋಬರ್‌ನಲ್ಲಿ ನಿಲ್ದಾಣದ ಕಾಮಗಾರಿ ಮುಗಿದಿದ್ದು, ಇನ್ನೂ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ. ಆದರೆ ಈ ವಿವಾದದ ಸುತ್ತ ಬೇರೆಯೇ ರಾಜಕೀಯ ಕೆಲಸ ಮಾಡುತ್ತಿದೆ. ಮೈಸೂರು ಭಾಗದ ಬಿಜೆಪಿಯೊಳಗಿನ ನಾಯಕತ್ವ ಸಮರವೇ ಈ ವಿವಾದದ ಕೇಂದ್ರಬಿಂದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

“ಈ ಪ್ರಕರಣವನ್ನು ಮೇಲುನೋಟಕ್ಕೆ ನೋಡಿದರೆ- ಹಿಂದೂ ಮುಸ್ಲಿಂ ಕೇಂದ್ರಿತ ರಾಜಕಾರಣವಾಗಿ ಕಾಣುತ್ತದೆ. ಅದಕ್ಕಿಂತ ಮುಖ್ಯವಾಗಿ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮದಾಸ್‌ ಮತ್ತು ಸಂಸದ ಪ್ರತಾಪಸಿಂಹ ನಡುವಿನ ಜಟಾಪಟಿಯೇ ಈ ವಿವಾದಕ್ಕೆ ಕಾರಣ” ಎನ್ನುತ್ತಾರೆ ಸ್ಥಳೀಯರು.

ಈ ಇಬ್ಬರ ನಡುವೆ ಮೈಸೂರು ಭಾಗದಲ್ಲಿ ಆಗಾಗ್ಗೆ ವೈಮಸ್ಸುಗಳು ತಲೆದೋರಿವೆ. ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ, ಈ ಭಾಗದಲ್ಲಿ ಬಿಜೆಪಿಯೊಳಗೆ ನಿರಂತರ ಸಮರ ನಡೆಯುತ್ತಿದೆ.

ಪ್ರತಾಪ್‌ಸಿಂಹ ಹಾಗೂ ರಾಮದಾಸ್ ನಡುವಿನ ಜಟಾಪಟಿ ಇತಿಹಾಸವು ಸುಯೇಜ್ ಫಾರಂ ವಿವಾದದಲ್ಲಿ ಸ್ಫೋಟಗೊಳ್ಳುತ್ತದೆ. ಎರಡು ವರ್ಷಗಳ ಹಿಂದೆ ಸೂಯೇಜ್‌ ಫಾರಂ ವಿಚಾರಕ್ಕೆ ಪ್ರತಾಪ್ ಸಿಂಹ ಕೈಹಾಕಿದ್ದಕ್ಕೆ ರಾಮದಾಸ್ ಸಿಡಿಮಿಡಿಗೊಂಡಿದ್ದರು. ತನ್ನ ಕ್ಷೇತ್ರದ ವಿಚಾರದಲ್ಲಿ ಸಂಸದರು ತಲೆಹಾಕುತ್ತಿರುವುದು ಶಾಸಕರಿಗೆ ಇರಸುಮುರುಸು ಉಂಟು ಮಾಡಿತು.

ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು ಅಧ್ಯಕ್ಷತೆಯಲ್ಲಿ 2020ರ ಮೇನಲ್ಲಿ ನಡೆದಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಸಂಸದ ಮತ್ತು ಶಾಸಕರ ನಡುವಿನ ಭಿನ್ನಮತ ಸ್ಫೋಟಗೊಂಡಿತ್ತು. ಸಚಿವ ಎಸ್.ಟಿ.ಸೋಮಶೇಖರ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.

“ಸುಯೇಜ್‌ ಫಾರಂ ಕಸ ವಿಲೇವಾರಿ ಸಂಬಂಧ ವರ್ಕ್ ಆರ್ಡರ್‌ ನೀಡಲಾಗಿದೆ” ಎಂದು ಪ್ರತಾಪ ಸಿಂಹ ಹೇಳಿದರೆ, “ಈ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ” ಎಂದು ರಾಮದಾಸ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಈ ಯೋಜನೆ ನನ್ನ ಗಮನಕ್ಕೂ ಬಂದಿಲ್ಲ. ಆದರೂ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ. ಕತ್ತಲಿನಲ್ಲಿ ಕೆಲಸ ಮಾಡುವಂತೆ ಮಾಡಿದ್ದಾರೆ. ನಾಗ್ಪುರ ಮಾದರಿಯಲ್ಲಿಯೇ ಕಸ ವಿಂಗಡಣೆ ಮಾಡಿ. ಆದರೆ ಸುಯೇಜ್ ಫಾರಂನಲ್ಲಿ ಮಾಡುವುದಕ್ಕಿಂತ ರಾಯನಕೆರೆಯಲ್ಲಿ ನಿಗದಿಪಡಿಸಿರುವ 110 ಎಕರೆ ಪ್ರದೇಶದಲ್ಲಿ ಮಾಡಬೇಕು” ಎಂದು ಆಗ್ರಹಿಸಿದ್ದರು.

“ಸುಯೇಜ್ ಫಾರಂನಲ್ಲಿ 5 ಘಟಕಗಳನ್ನು ಸ್ಥಾಪಿಸಿ, 15 ಯಂತ್ರಗಳಿಂದ ಗೊಬ್ಬರ ತಯಾರಿಕೆ ಯೋಜನೆ ಮಾಡುವುದಕ್ಕೆ ನನ್ನ ವಿರೋಧವಿದೆ. ಇದಕ್ಕೆ ರೂಪುರೇಷೆಗಳನ್ನು ರಚಿಸಿ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು. 25 ವರ್ಷದಿಂದ ಇಲ್ಲಿನ ಸಾರ್ವಜನಿಕರು ಅನಾರೋಗ್ಯಕ್ಕೊಳಗಾಗಿದ್ದಾರೆ. ಇದನ್ನು ಮೊದಲು ಕೊನೆಗಾಣಿಸಿ. ಸಂಸದ ಪ್ರತಾಪ್ ಸಿಂಹ ಅವರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ. ಅವರು ರಾಷ್ಟ್ರೀಯ ನಾಯಕರು. ನಾನು ಸ್ಥಳೀಯ ಕಾರ್ಯಕರ್ತ. 25 ವರ್ಷದಿಂದ ಮೈಸೂರು ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರು ಏನೂ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ದೂರದೃಷ್ಟಿತ್ವದ ಬಗ್ಗೆ ನಾನು ಹೇಳುತ್ತಿದ್ದೇನೆ ಅಷ್ಟೇ” ಎಂದು ರಾಮದಾಸ್ ತಿರುಗೇಟು ನೀಡಿದ್ದರು.

ramdas tweet

ಕೆಲವು ತಿಂಗಳ ಹಿಂದೆ ಇಬ್ಬರ ನಡುವೆ ಪೈಪೋಟಿ ಮತ್ತೆ ಮುನ್ನೆಲೆಗೆ ಬಂದಿತು. ನಗರದಲ್ಲಿ ರಸ್ತೆಗಳನ್ನು ಅಗೆದು ಗ್ಯಾಸ್ ಪೈಪ್‌ಲೈನ್‌ಗಳನ್ನು ಹಾಕುವ ಯೋಜನೆಯನ್ನು ರಾಮದಾಸ್‌ ಕೆಲವು ತಿಂಗಳ ಹಿಂದಷ್ಟೇ ವಿರೋಧಿಸಿದ್ದರು. ಇದಕ್ಕೆ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್‌.ನಾಗೇಂದ್ರ ಅವರೂ ರಾಮದಾಸ್‌ ನಿಲುವನ್ನು ಬೆಂಬಲಿಸಿದ್ದರು.

ರಸ್ತೆಯನ್ನು ಅಗೆಯುವ ಯೋಜನೆಯನ್ನು ಬೆಂಬಲಿಸಬಾರದು ಎಂದು ಮೈಸೂರು ಪಾಲಿಕೆಗೆ ರಾಮದಾಸ್ ಕೋರಿದ್ದರು. ಅದಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿ, “ಗ್ಯಾಸ್ ಪೈಪ್‌ಲೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲವಿದೆ” ಎಂದಿದ್ದರು. ಈ ಭಿನ್ನಮತವು ಯೋಗ ದಿನಾಚರಣೆಯ ಹೊಸ್ತಿಲಲ್ಲೂ ತಲೆದೋರಿತ್ತು.

ಪ್ರಧಾನಿ ಮೋದಿಯವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಬರಲಿದ್ದರು. ಇದರಲ್ಲಿ ಮೈಲೇಜ್‌ ಪಡೆಯುವುದಕ್ಕಾಗಿ ಸಂಸದರು, ಶಾಸಕರು ಪ್ರಯತ್ನಿಸಿದ್ದರು. ಎಷ್ಟು ಜನರನ್ನು ಕಾರ್ಯಕ್ರಮಕ್ಕೆ ಸೇರಿಸಲಾಗುತ್ತದೆ ಎಂಬ ವಿಚಾರವಾಗಿಯೂ ಮಾಧ್ಯಮಗಳೆದುರು ಈ ಇಬ್ಬರು ಬಿಜೆಪಿಗರು ಕಿತಾಪತಿ ಮಾಡಿಕೊಂಡಿದ್ದರು.

ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಪ್ರತಾಪ್‌ ಸಿಂಹ, “ಮೈಸೂರು ಅರಮನೆ ಮೈದಾನದಲ್ಲಿ ಒಬ್ಬರು ಯೋಗ ಮಾಡಬೇಕಾದರೆ 6*6 ಜಾಗಬೇಕಾಗುತ್ತದೆ. ಅದರನ್ವಯ ಅರಮನೆ ಮೈದಾನದಲ್ಲಿ ಏಳರಿಂದ ಎಂಟು ಸಾವಿರ ಜನ ಸೇರಬಹುದು” ಎಂದು ಹೇಳಿದ್ದರು. ಸಂಸದರು ಮಾತನಾಡುತ್ತಿರುವಾಗಲೇ ರಾಮದಾಸ್‌ ಮಾತಿಗೆ ಮುಂದಾಗಿ, “ಹದಿನೈದು ಸಾವಿರ ಜನ ಈಗಾಗಲೇ ಆರ್ಡರ್‌ ಮಾಡಿದ್ದಾರೆ” ಎಂದಿದ್ದರು. ಅದಕ್ಕೆ ಪ್ರತಾಪ್‌, “ನಾನು ಮಾತನಾಡುತ್ತಿದ್ದೇನೆ. ರಾಮದಾಸ್ ಅವರು ಸಮಾಧಾನದಿಂದ ಇರಬೇಕು” ಎಂದಿದ್ದು ವಿಡಿಯೊದಲ್ಲಿ ರೆಕಾರ್ಡ್ ಆಗಿತ್ತು. ನಂತರ ಪ್ರತಿಕ್ರಿಯಿಸಿದ್ದ ರಾಮದಾಸ್‌, “ಸಂಸದರಿಗೆ ಮಾಹಿತಿ ಇರಲಿಲ್ಲ. ಅದಕ್ಕಾಗಿ ಮಾತನಾಡಿದೆ. ಈಗಾಗಲೇ ನಮಗೆ ಕ್ಲಿಯರೆನ್ಸ್ ಮಾಡಿಕೊಟ್ಟಿರುವುದು ಸಂಸದರಿಗೆ ಗೊತ್ತಿರಲಿಲ್ಲ. ನಿಮಗೆ ಗೊಂದಲವಾಗಬಾರದು ಎಂದು ಮಾತಿನ ಮಧ್ಯೆ ಸ್ಪಷ್ಟನೆ ನೀಡಿದೆ” ಎಂದು ಸಮರ್ಥಿಸಿದ್ದರು.

ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ‘ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ಈಗ ‘ಗುಂಬಜ್‌’ ವಿವಾದ…

ರಾಮದಾಸ್ ಕ್ಷೇತ್ರದಲ್ಲಿನ ಬಸ್ ನಿಲ್ದಾಣದ ಕುರಿತು ಪ್ರತಾಪ್ ಸಿಂಹ ಬೇಕಂತಲೇ ಕಿತಾಪತಿ ಮಾಡಿದ್ದಾರೆಂದು ಸ್ಥಳೀಯ ಮೂಲಗಳು ಹೇಳುತ್ತವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮೈಸೂರನ್ನು ಯಾರು ಹಿಡಿತದಲ್ಲಿ ಇಟ್ಟುಕೊಳ್ಳಬೇಕೆಂಬ ಪೈಪೋಟಿಯ ಭಾಗವೇ ಈ ಗುಂಬಜ್‌ ವಿವಾದ. ಕಾಮಗಾರಿ ಮುಗಿಯುವ ಹಂತದಲ್ಲಿದೆ. ಅಷ್ಟರಲ್ಲಿಯೇ ಈ ಜಟಾಪಟಿ ನಡೆಸಿದ್ದಾರೆ. ಕಾಮಗಾರಿ ಮಾಡುತ್ತಿರುವುದು ಸರ್ಕಾರಿ ಹಣದಲ್ಲಿ, ರೂಪುರೇಷೆ ಮಾಡಿದ್ದು ಬಿಜೆಪಿ ಎಂಎಲ್‌ಎ ರಾಮದಾಸ್. ಅವರದ್ದೇ ಸರ್ಕಾರದ ಶಾಸಕರು ಕಟ್ಟಿಸಿದ್ದನ್ನು ಒಡೆದು ಹಾಕುವುದಾಗಿ ಪ್ರತಾಪ್‌ ಹೇಳುತ್ತಿದ್ದಾರೆ” ಎಂದು ವಿವರಿಸಿದರು.

“ಮೈಸೂರು ಅರಮನೆ ಮೇಲೆ ಗೊಮ್ಮಟಗಳಿವೆ. ಕಾರಂಜಿ ಮಹಲ್‌, ಜಗನ್ಮೋಹನ ಪಾಲೇಸ್‌, ಲಲಿತ ಮಹಲ್‌, ಮೈಸೂರು ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಗುಂಬಜ್‌ಗಳಿವೆ. ಆ ಎಲ್ಲವೂ ಮಸೀದಿ ರೀತಿ ಕಾಣುವುದಾದರೆ, ಪ್ರತಾಪ್‌ಸಿಂಹ ಅಲ್ಲಿಗೆ ಕಾಲಿಡುವುದಿಲ್ಲವೇ? ಅವುಗಳನ್ನು ಒಡೆದು ಹಾಕುತ್ತಾರೆಯೇ?” ಎಂದು ಮುಖಂಡರೊಬ್ಬರು ಪ್ರಶ್ನಿಸಿದರು.

“ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ತಪ್ಪಿಸಬೇಕೆಂದು ರಾಮದಾಸ್‌ ಪ್ರಯತ್ನಪಡುತ್ತಿದ್ದರೆ, ರಾಮದಾಸ್‌ಗೆ ಟಿಕೆಟ್ ತಪ್ಪಿಸಬೇಕೆಂದು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ” ಎಂದು ಸ್ಥಳೀಯ ಪತ್ರಕರ್ತರು ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೋ ಫಿಟ್ಟಿಂಗ್ ಇಟ್ಟಿರ್ಬೇಕು, ಕೋಮುಗಲಭೆ ಸ್ಟಾರ್ಟ್ ಆಗ್ಲಿ ಅಂತ ಆದರೆ ಇವರಿಗೆ ಸ್ವಂತಿಕೆ ಬುದ್ಧಿಯೇ ಇಲ್ಲ ಎಂಬಂತೆ ಕಾಣುತ್ತಿದೆ ಆದರೆ ಈ ಕೊಳಕು ಕೋಮುವಾದ ಇಷ್ಟೊಂದು ರೀತಿಯಲ್ಲಿ ಕಿಚ್ಚು ಮನಸ್ಸಿಂದ ಕಕ್ಕಬಾರದು ರಾಜಕೀಯದವರಿಗೆ ಯಾವಾಗಲೂ ಪ್ರಾಮಾಣಿಕತೆ ಸಹನೆ ಸಹಬಾಳುವೆ ಪ್ರೀತಿ ಮನೋಭಾವ ಇರಬೇಕು ……ಸ್ಥಳದಲ್ಲಿ ಜಡ್ಜ್ಮೆಂಟ್ ಕೊಡುವಂತಹ ನಾಯ ಕತ್ವ ಇರಬೇಕು

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...