Homeಮುಖಪುಟರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

ರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

“ಮೈಸೂರಿನ ಬಿಜೆಪಿ ಮುಖಂಡರ ನಡುವಿನ ಒಳಸಮರ ಗುಂಬಜ್‌ ಮಾದರಿ ಬಸ್‌ ನಿಲ್ದಾಣದ ನೆಪದಲ್ಲಿ ಮತ್ತೆ ಸ್ಫೋಟಗೊಂಡಿದೆ”

- Advertisement -
- Advertisement -

ಮೈಸೂರು ನಗರದ ಊಟಿ‌ ರಸ್ತೆಯ‌ ಜೆಎಸ್ಎಸ್ ಕಾಲೇಜು ಬಳಿ ನಿರ್ಮಿಸಿರುವ ಬಸ್ ನಿಲ್ದಾಣದ ಮೇಲಿನ ಗುಮ್ಮಟ(ಗುಂಬಜ್)ದ ಮಾದರಿಯ ವಿನ್ಯಾಸವನ್ನು ಕೆಡವುತ್ತೇನೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ರಂಗಾಯಣದಲ್ಲಿ ಭಾನುವಾರ ನಡೆದ ‘ಟಿಪ್ಪು ನಿಜಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್‌ ಸಿಂಹ, “ಗುತ್ತಿಗೆದಾರರೊಬ್ಬರು ಮಸೀದಿ ಗುಂಬಜ್‌ ಹೋಲುವ ಬಸ್‌ ನಿಲ್ದಾಣ ನಿರ್ಮಿಸಿದ್ದಾರೆ. ಇದನ್ನು ಬದಲಿಸಲು 3 ದಿನಗಳ ಗಡುವು ನೀಡಿದ್ದೇನೆ. ಬದಲಿಸದಿದ್ದರೆ, ಜೆಸಿಬಿ ತರಿಸಿ ಕೆಡವಿಸುತ್ತೇನೆ” ಎಂದಿದ್ದರು.

“ತದನಂತರ ರಾತ್ರೋರಾತ್ರಿ ಗುಮ್ಮಟದ ವಿನ್ಯಾಸದ ಮೇಲೆ ಕಳಶಗಳನ್ನು ಜೋಡಿಸಿ, ಹಿಂದೂ ಧಾರ್ಮಿಕತೆ ಪ್ರದರ್ಶಿಸಲಾಗಿದೆ. ತಂಗುದಾಣದ ಒಳಗೆ ಅರಮನೆ ಚಿತ್ರ, ಶಾಸಕ ಎಸ್‌.ಎ.ರಾಮದಾಸ್ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ಫೋಟೋಗಳನ್ನು ಹಾಕಲಾಗಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಗುಂಬಜ್‌ ಮಾದರಿಯ ಕಟ್ಟಡವಲ್ಲ, ಅರಮನೆ ಶೈಲಿಯ ಕಟ್ಟಡ” ಎಂಬ ಸಮರ್ಥನೆಗಳನ್ನು ರಾಮದಾಸ್ ಬೆಂಬಲಿಗರು ನೀಡುತ್ತಿದ್ದಾರೆ. “ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ನಿರ್ಮಿಸಿರುವುದು ಅರಮನೆಯ ಮಾದರಿಯ ಗೋಪುರವೇ ಹೊರತು, ಗುಂಬಜ್ ಅಲ್ಲ‌. ಶಾಸಕರೇ ಮುತುವರ್ಜಿ ವಹಿಸಿ ಈ ಮಾದರಿ ನಿರ್ಮಾಣಕ್ಕೆ ಕ್ರಮ ವಹಿಸಿದ್ದಾರೆ” ಎಂದು ಬಸ್‌ ನಿಲ್ದಾಣ ನಿರ್ಮಿಸಿದ ಕೆಆರ್‌ಡಿಎಲ್‌ ಎಂಜಿನಿಯರ್ ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

“ಶಾಸಕರ ಅನುದಾನದಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೂಲ ವಿನ್ಯಾಸದಲ್ಲಿ ಚಾವಣಿಯ ಮೇಲೆ ಯಾವುದೇ ಆಕೃತಿ ರಚಿಸುವ ಯೋಜನೆ ಇರಲಿಲ್ಲ. ಶಾಸಕರು ಪರಿಚಿತ ಗುತ್ತಿಗೆದಾರರಿಂದ ಅರಮನೆಯಂತೆ ಗೋಪುರ ನಿರ್ಮಿಸಿದ್ದಾರೆ. ಇದಕ್ಕೂ‌ ನಮಗೂ ಸಂಬಂಧವಿಲ್ಲ” ಎಂದಿದ್ದಾರೆ.

ಅಕ್ಟೋಬರ್‌ನಲ್ಲಿ ನಿಲ್ದಾಣದ ಕಾಮಗಾರಿ ಮುಗಿದಿದ್ದು, ಇನ್ನೂ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ. ಆದರೆ ಈ ವಿವಾದದ ಸುತ್ತ ಬೇರೆಯೇ ರಾಜಕೀಯ ಕೆಲಸ ಮಾಡುತ್ತಿದೆ. ಮೈಸೂರು ಭಾಗದ ಬಿಜೆಪಿಯೊಳಗಿನ ನಾಯಕತ್ವ ಸಮರವೇ ಈ ವಿವಾದದ ಕೇಂದ್ರಬಿಂದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

“ಈ ಪ್ರಕರಣವನ್ನು ಮೇಲುನೋಟಕ್ಕೆ ನೋಡಿದರೆ- ಹಿಂದೂ ಮುಸ್ಲಿಂ ಕೇಂದ್ರಿತ ರಾಜಕಾರಣವಾಗಿ ಕಾಣುತ್ತದೆ. ಅದಕ್ಕಿಂತ ಮುಖ್ಯವಾಗಿ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮದಾಸ್‌ ಮತ್ತು ಸಂಸದ ಪ್ರತಾಪಸಿಂಹ ನಡುವಿನ ಜಟಾಪಟಿಯೇ ಈ ವಿವಾದಕ್ಕೆ ಕಾರಣ” ಎನ್ನುತ್ತಾರೆ ಸ್ಥಳೀಯರು.

ಈ ಇಬ್ಬರ ನಡುವೆ ಮೈಸೂರು ಭಾಗದಲ್ಲಿ ಆಗಾಗ್ಗೆ ವೈಮಸ್ಸುಗಳು ತಲೆದೋರಿವೆ. ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ, ಈ ಭಾಗದಲ್ಲಿ ಬಿಜೆಪಿಯೊಳಗೆ ನಿರಂತರ ಸಮರ ನಡೆಯುತ್ತಿದೆ.

ಪ್ರತಾಪ್‌ಸಿಂಹ ಹಾಗೂ ರಾಮದಾಸ್ ನಡುವಿನ ಜಟಾಪಟಿ ಇತಿಹಾಸವು ಸುಯೇಜ್ ಫಾರಂ ವಿವಾದದಲ್ಲಿ ಸ್ಫೋಟಗೊಳ್ಳುತ್ತದೆ. ಎರಡು ವರ್ಷಗಳ ಹಿಂದೆ ಸೂಯೇಜ್‌ ಫಾರಂ ವಿಚಾರಕ್ಕೆ ಪ್ರತಾಪ್ ಸಿಂಹ ಕೈಹಾಕಿದ್ದಕ್ಕೆ ರಾಮದಾಸ್ ಸಿಡಿಮಿಡಿಗೊಂಡಿದ್ದರು. ತನ್ನ ಕ್ಷೇತ್ರದ ವಿಚಾರದಲ್ಲಿ ಸಂಸದರು ತಲೆಹಾಕುತ್ತಿರುವುದು ಶಾಸಕರಿಗೆ ಇರಸುಮುರುಸು ಉಂಟು ಮಾಡಿತು.

ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು ಅಧ್ಯಕ್ಷತೆಯಲ್ಲಿ 2020ರ ಮೇನಲ್ಲಿ ನಡೆದಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಸಂಸದ ಮತ್ತು ಶಾಸಕರ ನಡುವಿನ ಭಿನ್ನಮತ ಸ್ಫೋಟಗೊಂಡಿತ್ತು. ಸಚಿವ ಎಸ್.ಟಿ.ಸೋಮಶೇಖರ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.

“ಸುಯೇಜ್‌ ಫಾರಂ ಕಸ ವಿಲೇವಾರಿ ಸಂಬಂಧ ವರ್ಕ್ ಆರ್ಡರ್‌ ನೀಡಲಾಗಿದೆ” ಎಂದು ಪ್ರತಾಪ ಸಿಂಹ ಹೇಳಿದರೆ, “ಈ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ” ಎಂದು ರಾಮದಾಸ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಈ ಯೋಜನೆ ನನ್ನ ಗಮನಕ್ಕೂ ಬಂದಿಲ್ಲ. ಆದರೂ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ. ಕತ್ತಲಿನಲ್ಲಿ ಕೆಲಸ ಮಾಡುವಂತೆ ಮಾಡಿದ್ದಾರೆ. ನಾಗ್ಪುರ ಮಾದರಿಯಲ್ಲಿಯೇ ಕಸ ವಿಂಗಡಣೆ ಮಾಡಿ. ಆದರೆ ಸುಯೇಜ್ ಫಾರಂನಲ್ಲಿ ಮಾಡುವುದಕ್ಕಿಂತ ರಾಯನಕೆರೆಯಲ್ಲಿ ನಿಗದಿಪಡಿಸಿರುವ 110 ಎಕರೆ ಪ್ರದೇಶದಲ್ಲಿ ಮಾಡಬೇಕು” ಎಂದು ಆಗ್ರಹಿಸಿದ್ದರು.

“ಸುಯೇಜ್ ಫಾರಂನಲ್ಲಿ 5 ಘಟಕಗಳನ್ನು ಸ್ಥಾಪಿಸಿ, 15 ಯಂತ್ರಗಳಿಂದ ಗೊಬ್ಬರ ತಯಾರಿಕೆ ಯೋಜನೆ ಮಾಡುವುದಕ್ಕೆ ನನ್ನ ವಿರೋಧವಿದೆ. ಇದಕ್ಕೆ ರೂಪುರೇಷೆಗಳನ್ನು ರಚಿಸಿ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು. 25 ವರ್ಷದಿಂದ ಇಲ್ಲಿನ ಸಾರ್ವಜನಿಕರು ಅನಾರೋಗ್ಯಕ್ಕೊಳಗಾಗಿದ್ದಾರೆ. ಇದನ್ನು ಮೊದಲು ಕೊನೆಗಾಣಿಸಿ. ಸಂಸದ ಪ್ರತಾಪ್ ಸಿಂಹ ಅವರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ. ಅವರು ರಾಷ್ಟ್ರೀಯ ನಾಯಕರು. ನಾನು ಸ್ಥಳೀಯ ಕಾರ್ಯಕರ್ತ. 25 ವರ್ಷದಿಂದ ಮೈಸೂರು ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರು ಏನೂ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ದೂರದೃಷ್ಟಿತ್ವದ ಬಗ್ಗೆ ನಾನು ಹೇಳುತ್ತಿದ್ದೇನೆ ಅಷ್ಟೇ” ಎಂದು ರಾಮದಾಸ್ ತಿರುಗೇಟು ನೀಡಿದ್ದರು.

ramdas tweet

ಕೆಲವು ತಿಂಗಳ ಹಿಂದೆ ಇಬ್ಬರ ನಡುವೆ ಪೈಪೋಟಿ ಮತ್ತೆ ಮುನ್ನೆಲೆಗೆ ಬಂದಿತು. ನಗರದಲ್ಲಿ ರಸ್ತೆಗಳನ್ನು ಅಗೆದು ಗ್ಯಾಸ್ ಪೈಪ್‌ಲೈನ್‌ಗಳನ್ನು ಹಾಕುವ ಯೋಜನೆಯನ್ನು ರಾಮದಾಸ್‌ ಕೆಲವು ತಿಂಗಳ ಹಿಂದಷ್ಟೇ ವಿರೋಧಿಸಿದ್ದರು. ಇದಕ್ಕೆ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್‌.ನಾಗೇಂದ್ರ ಅವರೂ ರಾಮದಾಸ್‌ ನಿಲುವನ್ನು ಬೆಂಬಲಿಸಿದ್ದರು.

ರಸ್ತೆಯನ್ನು ಅಗೆಯುವ ಯೋಜನೆಯನ್ನು ಬೆಂಬಲಿಸಬಾರದು ಎಂದು ಮೈಸೂರು ಪಾಲಿಕೆಗೆ ರಾಮದಾಸ್ ಕೋರಿದ್ದರು. ಅದಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿ, “ಗ್ಯಾಸ್ ಪೈಪ್‌ಲೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲವಿದೆ” ಎಂದಿದ್ದರು. ಈ ಭಿನ್ನಮತವು ಯೋಗ ದಿನಾಚರಣೆಯ ಹೊಸ್ತಿಲಲ್ಲೂ ತಲೆದೋರಿತ್ತು.

ಪ್ರಧಾನಿ ಮೋದಿಯವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಬರಲಿದ್ದರು. ಇದರಲ್ಲಿ ಮೈಲೇಜ್‌ ಪಡೆಯುವುದಕ್ಕಾಗಿ ಸಂಸದರು, ಶಾಸಕರು ಪ್ರಯತ್ನಿಸಿದ್ದರು. ಎಷ್ಟು ಜನರನ್ನು ಕಾರ್ಯಕ್ರಮಕ್ಕೆ ಸೇರಿಸಲಾಗುತ್ತದೆ ಎಂಬ ವಿಚಾರವಾಗಿಯೂ ಮಾಧ್ಯಮಗಳೆದುರು ಈ ಇಬ್ಬರು ಬಿಜೆಪಿಗರು ಕಿತಾಪತಿ ಮಾಡಿಕೊಂಡಿದ್ದರು.

ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಪ್ರತಾಪ್‌ ಸಿಂಹ, “ಮೈಸೂರು ಅರಮನೆ ಮೈದಾನದಲ್ಲಿ ಒಬ್ಬರು ಯೋಗ ಮಾಡಬೇಕಾದರೆ 6*6 ಜಾಗಬೇಕಾಗುತ್ತದೆ. ಅದರನ್ವಯ ಅರಮನೆ ಮೈದಾನದಲ್ಲಿ ಏಳರಿಂದ ಎಂಟು ಸಾವಿರ ಜನ ಸೇರಬಹುದು” ಎಂದು ಹೇಳಿದ್ದರು. ಸಂಸದರು ಮಾತನಾಡುತ್ತಿರುವಾಗಲೇ ರಾಮದಾಸ್‌ ಮಾತಿಗೆ ಮುಂದಾಗಿ, “ಹದಿನೈದು ಸಾವಿರ ಜನ ಈಗಾಗಲೇ ಆರ್ಡರ್‌ ಮಾಡಿದ್ದಾರೆ” ಎಂದಿದ್ದರು. ಅದಕ್ಕೆ ಪ್ರತಾಪ್‌, “ನಾನು ಮಾತನಾಡುತ್ತಿದ್ದೇನೆ. ರಾಮದಾಸ್ ಅವರು ಸಮಾಧಾನದಿಂದ ಇರಬೇಕು” ಎಂದಿದ್ದು ವಿಡಿಯೊದಲ್ಲಿ ರೆಕಾರ್ಡ್ ಆಗಿತ್ತು. ನಂತರ ಪ್ರತಿಕ್ರಿಯಿಸಿದ್ದ ರಾಮದಾಸ್‌, “ಸಂಸದರಿಗೆ ಮಾಹಿತಿ ಇರಲಿಲ್ಲ. ಅದಕ್ಕಾಗಿ ಮಾತನಾಡಿದೆ. ಈಗಾಗಲೇ ನಮಗೆ ಕ್ಲಿಯರೆನ್ಸ್ ಮಾಡಿಕೊಟ್ಟಿರುವುದು ಸಂಸದರಿಗೆ ಗೊತ್ತಿರಲಿಲ್ಲ. ನಿಮಗೆ ಗೊಂದಲವಾಗಬಾರದು ಎಂದು ಮಾತಿನ ಮಧ್ಯೆ ಸ್ಪಷ್ಟನೆ ನೀಡಿದೆ” ಎಂದು ಸಮರ್ಥಿಸಿದ್ದರು.

ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ‘ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ಈಗ ‘ಗುಂಬಜ್‌’ ವಿವಾದ…

ರಾಮದಾಸ್ ಕ್ಷೇತ್ರದಲ್ಲಿನ ಬಸ್ ನಿಲ್ದಾಣದ ಕುರಿತು ಪ್ರತಾಪ್ ಸಿಂಹ ಬೇಕಂತಲೇ ಕಿತಾಪತಿ ಮಾಡಿದ್ದಾರೆಂದು ಸ್ಥಳೀಯ ಮೂಲಗಳು ಹೇಳುತ್ತವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮೈಸೂರನ್ನು ಯಾರು ಹಿಡಿತದಲ್ಲಿ ಇಟ್ಟುಕೊಳ್ಳಬೇಕೆಂಬ ಪೈಪೋಟಿಯ ಭಾಗವೇ ಈ ಗುಂಬಜ್‌ ವಿವಾದ. ಕಾಮಗಾರಿ ಮುಗಿಯುವ ಹಂತದಲ್ಲಿದೆ. ಅಷ್ಟರಲ್ಲಿಯೇ ಈ ಜಟಾಪಟಿ ನಡೆಸಿದ್ದಾರೆ. ಕಾಮಗಾರಿ ಮಾಡುತ್ತಿರುವುದು ಸರ್ಕಾರಿ ಹಣದಲ್ಲಿ, ರೂಪುರೇಷೆ ಮಾಡಿದ್ದು ಬಿಜೆಪಿ ಎಂಎಲ್‌ಎ ರಾಮದಾಸ್. ಅವರದ್ದೇ ಸರ್ಕಾರದ ಶಾಸಕರು ಕಟ್ಟಿಸಿದ್ದನ್ನು ಒಡೆದು ಹಾಕುವುದಾಗಿ ಪ್ರತಾಪ್‌ ಹೇಳುತ್ತಿದ್ದಾರೆ” ಎಂದು ವಿವರಿಸಿದರು.

“ಮೈಸೂರು ಅರಮನೆ ಮೇಲೆ ಗೊಮ್ಮಟಗಳಿವೆ. ಕಾರಂಜಿ ಮಹಲ್‌, ಜಗನ್ಮೋಹನ ಪಾಲೇಸ್‌, ಲಲಿತ ಮಹಲ್‌, ಮೈಸೂರು ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಗುಂಬಜ್‌ಗಳಿವೆ. ಆ ಎಲ್ಲವೂ ಮಸೀದಿ ರೀತಿ ಕಾಣುವುದಾದರೆ, ಪ್ರತಾಪ್‌ಸಿಂಹ ಅಲ್ಲಿಗೆ ಕಾಲಿಡುವುದಿಲ್ಲವೇ? ಅವುಗಳನ್ನು ಒಡೆದು ಹಾಕುತ್ತಾರೆಯೇ?” ಎಂದು ಮುಖಂಡರೊಬ್ಬರು ಪ್ರಶ್ನಿಸಿದರು.

“ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ತಪ್ಪಿಸಬೇಕೆಂದು ರಾಮದಾಸ್‌ ಪ್ರಯತ್ನಪಡುತ್ತಿದ್ದರೆ, ರಾಮದಾಸ್‌ಗೆ ಟಿಕೆಟ್ ತಪ್ಪಿಸಬೇಕೆಂದು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ” ಎಂದು ಸ್ಥಳೀಯ ಪತ್ರಕರ್ತರು ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೋ ಫಿಟ್ಟಿಂಗ್ ಇಟ್ಟಿರ್ಬೇಕು, ಕೋಮುಗಲಭೆ ಸ್ಟಾರ್ಟ್ ಆಗ್ಲಿ ಅಂತ ಆದರೆ ಇವರಿಗೆ ಸ್ವಂತಿಕೆ ಬುದ್ಧಿಯೇ ಇಲ್ಲ ಎಂಬಂತೆ ಕಾಣುತ್ತಿದೆ ಆದರೆ ಈ ಕೊಳಕು ಕೋಮುವಾದ ಇಷ್ಟೊಂದು ರೀತಿಯಲ್ಲಿ ಕಿಚ್ಚು ಮನಸ್ಸಿಂದ ಕಕ್ಕಬಾರದು ರಾಜಕೀಯದವರಿಗೆ ಯಾವಾಗಲೂ ಪ್ರಾಮಾಣಿಕತೆ ಸಹನೆ ಸಹಬಾಳುವೆ ಪ್ರೀತಿ ಮನೋಭಾವ ಇರಬೇಕು ……ಸ್ಥಳದಲ್ಲಿ ಜಡ್ಜ್ಮೆಂಟ್ ಕೊಡುವಂತಹ ನಾಯ ಕತ್ವ ಇರಬೇಕು

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...