Homeಮುಖಪುಟರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

ರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

“ಮೈಸೂರಿನ ಬಿಜೆಪಿ ಮುಖಂಡರ ನಡುವಿನ ಒಳಸಮರ ಗುಂಬಜ್‌ ಮಾದರಿ ಬಸ್‌ ನಿಲ್ದಾಣದ ನೆಪದಲ್ಲಿ ಮತ್ತೆ ಸ್ಫೋಟಗೊಂಡಿದೆ”

- Advertisement -
- Advertisement -

ಮೈಸೂರು ನಗರದ ಊಟಿ‌ ರಸ್ತೆಯ‌ ಜೆಎಸ್ಎಸ್ ಕಾಲೇಜು ಬಳಿ ನಿರ್ಮಿಸಿರುವ ಬಸ್ ನಿಲ್ದಾಣದ ಮೇಲಿನ ಗುಮ್ಮಟ(ಗುಂಬಜ್)ದ ಮಾದರಿಯ ವಿನ್ಯಾಸವನ್ನು ಕೆಡವುತ್ತೇನೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ರಂಗಾಯಣದಲ್ಲಿ ಭಾನುವಾರ ನಡೆದ ‘ಟಿಪ್ಪು ನಿಜಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್‌ ಸಿಂಹ, “ಗುತ್ತಿಗೆದಾರರೊಬ್ಬರು ಮಸೀದಿ ಗುಂಬಜ್‌ ಹೋಲುವ ಬಸ್‌ ನಿಲ್ದಾಣ ನಿರ್ಮಿಸಿದ್ದಾರೆ. ಇದನ್ನು ಬದಲಿಸಲು 3 ದಿನಗಳ ಗಡುವು ನೀಡಿದ್ದೇನೆ. ಬದಲಿಸದಿದ್ದರೆ, ಜೆಸಿಬಿ ತರಿಸಿ ಕೆಡವಿಸುತ್ತೇನೆ” ಎಂದಿದ್ದರು.

“ತದನಂತರ ರಾತ್ರೋರಾತ್ರಿ ಗುಮ್ಮಟದ ವಿನ್ಯಾಸದ ಮೇಲೆ ಕಳಶಗಳನ್ನು ಜೋಡಿಸಿ, ಹಿಂದೂ ಧಾರ್ಮಿಕತೆ ಪ್ರದರ್ಶಿಸಲಾಗಿದೆ. ತಂಗುದಾಣದ ಒಳಗೆ ಅರಮನೆ ಚಿತ್ರ, ಶಾಸಕ ಎಸ್‌.ಎ.ರಾಮದಾಸ್ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ಫೋಟೋಗಳನ್ನು ಹಾಕಲಾಗಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಗುಂಬಜ್‌ ಮಾದರಿಯ ಕಟ್ಟಡವಲ್ಲ, ಅರಮನೆ ಶೈಲಿಯ ಕಟ್ಟಡ” ಎಂಬ ಸಮರ್ಥನೆಗಳನ್ನು ರಾಮದಾಸ್ ಬೆಂಬಲಿಗರು ನೀಡುತ್ತಿದ್ದಾರೆ. “ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ನಿರ್ಮಿಸಿರುವುದು ಅರಮನೆಯ ಮಾದರಿಯ ಗೋಪುರವೇ ಹೊರತು, ಗುಂಬಜ್ ಅಲ್ಲ‌. ಶಾಸಕರೇ ಮುತುವರ್ಜಿ ವಹಿಸಿ ಈ ಮಾದರಿ ನಿರ್ಮಾಣಕ್ಕೆ ಕ್ರಮ ವಹಿಸಿದ್ದಾರೆ” ಎಂದು ಬಸ್‌ ನಿಲ್ದಾಣ ನಿರ್ಮಿಸಿದ ಕೆಆರ್‌ಡಿಎಲ್‌ ಎಂಜಿನಿಯರ್ ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

“ಶಾಸಕರ ಅನುದಾನದಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೂಲ ವಿನ್ಯಾಸದಲ್ಲಿ ಚಾವಣಿಯ ಮೇಲೆ ಯಾವುದೇ ಆಕೃತಿ ರಚಿಸುವ ಯೋಜನೆ ಇರಲಿಲ್ಲ. ಶಾಸಕರು ಪರಿಚಿತ ಗುತ್ತಿಗೆದಾರರಿಂದ ಅರಮನೆಯಂತೆ ಗೋಪುರ ನಿರ್ಮಿಸಿದ್ದಾರೆ. ಇದಕ್ಕೂ‌ ನಮಗೂ ಸಂಬಂಧವಿಲ್ಲ” ಎಂದಿದ್ದಾರೆ.

ಅಕ್ಟೋಬರ್‌ನಲ್ಲಿ ನಿಲ್ದಾಣದ ಕಾಮಗಾರಿ ಮುಗಿದಿದ್ದು, ಇನ್ನೂ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ. ಆದರೆ ಈ ವಿವಾದದ ಸುತ್ತ ಬೇರೆಯೇ ರಾಜಕೀಯ ಕೆಲಸ ಮಾಡುತ್ತಿದೆ. ಮೈಸೂರು ಭಾಗದ ಬಿಜೆಪಿಯೊಳಗಿನ ನಾಯಕತ್ವ ಸಮರವೇ ಈ ವಿವಾದದ ಕೇಂದ್ರಬಿಂದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

“ಈ ಪ್ರಕರಣವನ್ನು ಮೇಲುನೋಟಕ್ಕೆ ನೋಡಿದರೆ- ಹಿಂದೂ ಮುಸ್ಲಿಂ ಕೇಂದ್ರಿತ ರಾಜಕಾರಣವಾಗಿ ಕಾಣುತ್ತದೆ. ಅದಕ್ಕಿಂತ ಮುಖ್ಯವಾಗಿ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮದಾಸ್‌ ಮತ್ತು ಸಂಸದ ಪ್ರತಾಪಸಿಂಹ ನಡುವಿನ ಜಟಾಪಟಿಯೇ ಈ ವಿವಾದಕ್ಕೆ ಕಾರಣ” ಎನ್ನುತ್ತಾರೆ ಸ್ಥಳೀಯರು.

ಈ ಇಬ್ಬರ ನಡುವೆ ಮೈಸೂರು ಭಾಗದಲ್ಲಿ ಆಗಾಗ್ಗೆ ವೈಮಸ್ಸುಗಳು ತಲೆದೋರಿವೆ. ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ, ಈ ಭಾಗದಲ್ಲಿ ಬಿಜೆಪಿಯೊಳಗೆ ನಿರಂತರ ಸಮರ ನಡೆಯುತ್ತಿದೆ.

ಪ್ರತಾಪ್‌ಸಿಂಹ ಹಾಗೂ ರಾಮದಾಸ್ ನಡುವಿನ ಜಟಾಪಟಿ ಇತಿಹಾಸವು ಸುಯೇಜ್ ಫಾರಂ ವಿವಾದದಲ್ಲಿ ಸ್ಫೋಟಗೊಳ್ಳುತ್ತದೆ. ಎರಡು ವರ್ಷಗಳ ಹಿಂದೆ ಸೂಯೇಜ್‌ ಫಾರಂ ವಿಚಾರಕ್ಕೆ ಪ್ರತಾಪ್ ಸಿಂಹ ಕೈಹಾಕಿದ್ದಕ್ಕೆ ರಾಮದಾಸ್ ಸಿಡಿಮಿಡಿಗೊಂಡಿದ್ದರು. ತನ್ನ ಕ್ಷೇತ್ರದ ವಿಚಾರದಲ್ಲಿ ಸಂಸದರು ತಲೆಹಾಕುತ್ತಿರುವುದು ಶಾಸಕರಿಗೆ ಇರಸುಮುರುಸು ಉಂಟು ಮಾಡಿತು.

ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು ಅಧ್ಯಕ್ಷತೆಯಲ್ಲಿ 2020ರ ಮೇನಲ್ಲಿ ನಡೆದಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಸಂಸದ ಮತ್ತು ಶಾಸಕರ ನಡುವಿನ ಭಿನ್ನಮತ ಸ್ಫೋಟಗೊಂಡಿತ್ತು. ಸಚಿವ ಎಸ್.ಟಿ.ಸೋಮಶೇಖರ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.

“ಸುಯೇಜ್‌ ಫಾರಂ ಕಸ ವಿಲೇವಾರಿ ಸಂಬಂಧ ವರ್ಕ್ ಆರ್ಡರ್‌ ನೀಡಲಾಗಿದೆ” ಎಂದು ಪ್ರತಾಪ ಸಿಂಹ ಹೇಳಿದರೆ, “ಈ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ” ಎಂದು ರಾಮದಾಸ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಈ ಯೋಜನೆ ನನ್ನ ಗಮನಕ್ಕೂ ಬಂದಿಲ್ಲ. ಆದರೂ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ. ಕತ್ತಲಿನಲ್ಲಿ ಕೆಲಸ ಮಾಡುವಂತೆ ಮಾಡಿದ್ದಾರೆ. ನಾಗ್ಪುರ ಮಾದರಿಯಲ್ಲಿಯೇ ಕಸ ವಿಂಗಡಣೆ ಮಾಡಿ. ಆದರೆ ಸುಯೇಜ್ ಫಾರಂನಲ್ಲಿ ಮಾಡುವುದಕ್ಕಿಂತ ರಾಯನಕೆರೆಯಲ್ಲಿ ನಿಗದಿಪಡಿಸಿರುವ 110 ಎಕರೆ ಪ್ರದೇಶದಲ್ಲಿ ಮಾಡಬೇಕು” ಎಂದು ಆಗ್ರಹಿಸಿದ್ದರು.

“ಸುಯೇಜ್ ಫಾರಂನಲ್ಲಿ 5 ಘಟಕಗಳನ್ನು ಸ್ಥಾಪಿಸಿ, 15 ಯಂತ್ರಗಳಿಂದ ಗೊಬ್ಬರ ತಯಾರಿಕೆ ಯೋಜನೆ ಮಾಡುವುದಕ್ಕೆ ನನ್ನ ವಿರೋಧವಿದೆ. ಇದಕ್ಕೆ ರೂಪುರೇಷೆಗಳನ್ನು ರಚಿಸಿ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು. 25 ವರ್ಷದಿಂದ ಇಲ್ಲಿನ ಸಾರ್ವಜನಿಕರು ಅನಾರೋಗ್ಯಕ್ಕೊಳಗಾಗಿದ್ದಾರೆ. ಇದನ್ನು ಮೊದಲು ಕೊನೆಗಾಣಿಸಿ. ಸಂಸದ ಪ್ರತಾಪ್ ಸಿಂಹ ಅವರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ. ಅವರು ರಾಷ್ಟ್ರೀಯ ನಾಯಕರು. ನಾನು ಸ್ಥಳೀಯ ಕಾರ್ಯಕರ್ತ. 25 ವರ್ಷದಿಂದ ಮೈಸೂರು ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರು ಏನೂ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ದೂರದೃಷ್ಟಿತ್ವದ ಬಗ್ಗೆ ನಾನು ಹೇಳುತ್ತಿದ್ದೇನೆ ಅಷ್ಟೇ” ಎಂದು ರಾಮದಾಸ್ ತಿರುಗೇಟು ನೀಡಿದ್ದರು.

ramdas tweet

ಕೆಲವು ತಿಂಗಳ ಹಿಂದೆ ಇಬ್ಬರ ನಡುವೆ ಪೈಪೋಟಿ ಮತ್ತೆ ಮುನ್ನೆಲೆಗೆ ಬಂದಿತು. ನಗರದಲ್ಲಿ ರಸ್ತೆಗಳನ್ನು ಅಗೆದು ಗ್ಯಾಸ್ ಪೈಪ್‌ಲೈನ್‌ಗಳನ್ನು ಹಾಕುವ ಯೋಜನೆಯನ್ನು ರಾಮದಾಸ್‌ ಕೆಲವು ತಿಂಗಳ ಹಿಂದಷ್ಟೇ ವಿರೋಧಿಸಿದ್ದರು. ಇದಕ್ಕೆ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್‌.ನಾಗೇಂದ್ರ ಅವರೂ ರಾಮದಾಸ್‌ ನಿಲುವನ್ನು ಬೆಂಬಲಿಸಿದ್ದರು.

ರಸ್ತೆಯನ್ನು ಅಗೆಯುವ ಯೋಜನೆಯನ್ನು ಬೆಂಬಲಿಸಬಾರದು ಎಂದು ಮೈಸೂರು ಪಾಲಿಕೆಗೆ ರಾಮದಾಸ್ ಕೋರಿದ್ದರು. ಅದಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿ, “ಗ್ಯಾಸ್ ಪೈಪ್‌ಲೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲವಿದೆ” ಎಂದಿದ್ದರು. ಈ ಭಿನ್ನಮತವು ಯೋಗ ದಿನಾಚರಣೆಯ ಹೊಸ್ತಿಲಲ್ಲೂ ತಲೆದೋರಿತ್ತು.

ಪ್ರಧಾನಿ ಮೋದಿಯವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಬರಲಿದ್ದರು. ಇದರಲ್ಲಿ ಮೈಲೇಜ್‌ ಪಡೆಯುವುದಕ್ಕಾಗಿ ಸಂಸದರು, ಶಾಸಕರು ಪ್ರಯತ್ನಿಸಿದ್ದರು. ಎಷ್ಟು ಜನರನ್ನು ಕಾರ್ಯಕ್ರಮಕ್ಕೆ ಸೇರಿಸಲಾಗುತ್ತದೆ ಎಂಬ ವಿಚಾರವಾಗಿಯೂ ಮಾಧ್ಯಮಗಳೆದುರು ಈ ಇಬ್ಬರು ಬಿಜೆಪಿಗರು ಕಿತಾಪತಿ ಮಾಡಿಕೊಂಡಿದ್ದರು.

ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಪ್ರತಾಪ್‌ ಸಿಂಹ, “ಮೈಸೂರು ಅರಮನೆ ಮೈದಾನದಲ್ಲಿ ಒಬ್ಬರು ಯೋಗ ಮಾಡಬೇಕಾದರೆ 6*6 ಜಾಗಬೇಕಾಗುತ್ತದೆ. ಅದರನ್ವಯ ಅರಮನೆ ಮೈದಾನದಲ್ಲಿ ಏಳರಿಂದ ಎಂಟು ಸಾವಿರ ಜನ ಸೇರಬಹುದು” ಎಂದು ಹೇಳಿದ್ದರು. ಸಂಸದರು ಮಾತನಾಡುತ್ತಿರುವಾಗಲೇ ರಾಮದಾಸ್‌ ಮಾತಿಗೆ ಮುಂದಾಗಿ, “ಹದಿನೈದು ಸಾವಿರ ಜನ ಈಗಾಗಲೇ ಆರ್ಡರ್‌ ಮಾಡಿದ್ದಾರೆ” ಎಂದಿದ್ದರು. ಅದಕ್ಕೆ ಪ್ರತಾಪ್‌, “ನಾನು ಮಾತನಾಡುತ್ತಿದ್ದೇನೆ. ರಾಮದಾಸ್ ಅವರು ಸಮಾಧಾನದಿಂದ ಇರಬೇಕು” ಎಂದಿದ್ದು ವಿಡಿಯೊದಲ್ಲಿ ರೆಕಾರ್ಡ್ ಆಗಿತ್ತು. ನಂತರ ಪ್ರತಿಕ್ರಿಯಿಸಿದ್ದ ರಾಮದಾಸ್‌, “ಸಂಸದರಿಗೆ ಮಾಹಿತಿ ಇರಲಿಲ್ಲ. ಅದಕ್ಕಾಗಿ ಮಾತನಾಡಿದೆ. ಈಗಾಗಲೇ ನಮಗೆ ಕ್ಲಿಯರೆನ್ಸ್ ಮಾಡಿಕೊಟ್ಟಿರುವುದು ಸಂಸದರಿಗೆ ಗೊತ್ತಿರಲಿಲ್ಲ. ನಿಮಗೆ ಗೊಂದಲವಾಗಬಾರದು ಎಂದು ಮಾತಿನ ಮಧ್ಯೆ ಸ್ಪಷ್ಟನೆ ನೀಡಿದೆ” ಎಂದು ಸಮರ್ಥಿಸಿದ್ದರು.

ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ‘ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ಈಗ ‘ಗುಂಬಜ್‌’ ವಿವಾದ…

ರಾಮದಾಸ್ ಕ್ಷೇತ್ರದಲ್ಲಿನ ಬಸ್ ನಿಲ್ದಾಣದ ಕುರಿತು ಪ್ರತಾಪ್ ಸಿಂಹ ಬೇಕಂತಲೇ ಕಿತಾಪತಿ ಮಾಡಿದ್ದಾರೆಂದು ಸ್ಥಳೀಯ ಮೂಲಗಳು ಹೇಳುತ್ತವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮೈಸೂರನ್ನು ಯಾರು ಹಿಡಿತದಲ್ಲಿ ಇಟ್ಟುಕೊಳ್ಳಬೇಕೆಂಬ ಪೈಪೋಟಿಯ ಭಾಗವೇ ಈ ಗುಂಬಜ್‌ ವಿವಾದ. ಕಾಮಗಾರಿ ಮುಗಿಯುವ ಹಂತದಲ್ಲಿದೆ. ಅಷ್ಟರಲ್ಲಿಯೇ ಈ ಜಟಾಪಟಿ ನಡೆಸಿದ್ದಾರೆ. ಕಾಮಗಾರಿ ಮಾಡುತ್ತಿರುವುದು ಸರ್ಕಾರಿ ಹಣದಲ್ಲಿ, ರೂಪುರೇಷೆ ಮಾಡಿದ್ದು ಬಿಜೆಪಿ ಎಂಎಲ್‌ಎ ರಾಮದಾಸ್. ಅವರದ್ದೇ ಸರ್ಕಾರದ ಶಾಸಕರು ಕಟ್ಟಿಸಿದ್ದನ್ನು ಒಡೆದು ಹಾಕುವುದಾಗಿ ಪ್ರತಾಪ್‌ ಹೇಳುತ್ತಿದ್ದಾರೆ” ಎಂದು ವಿವರಿಸಿದರು.

“ಮೈಸೂರು ಅರಮನೆ ಮೇಲೆ ಗೊಮ್ಮಟಗಳಿವೆ. ಕಾರಂಜಿ ಮಹಲ್‌, ಜಗನ್ಮೋಹನ ಪಾಲೇಸ್‌, ಲಲಿತ ಮಹಲ್‌, ಮೈಸೂರು ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಗುಂಬಜ್‌ಗಳಿವೆ. ಆ ಎಲ್ಲವೂ ಮಸೀದಿ ರೀತಿ ಕಾಣುವುದಾದರೆ, ಪ್ರತಾಪ್‌ಸಿಂಹ ಅಲ್ಲಿಗೆ ಕಾಲಿಡುವುದಿಲ್ಲವೇ? ಅವುಗಳನ್ನು ಒಡೆದು ಹಾಕುತ್ತಾರೆಯೇ?” ಎಂದು ಮುಖಂಡರೊಬ್ಬರು ಪ್ರಶ್ನಿಸಿದರು.

“ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ತಪ್ಪಿಸಬೇಕೆಂದು ರಾಮದಾಸ್‌ ಪ್ರಯತ್ನಪಡುತ್ತಿದ್ದರೆ, ರಾಮದಾಸ್‌ಗೆ ಟಿಕೆಟ್ ತಪ್ಪಿಸಬೇಕೆಂದು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ” ಎಂದು ಸ್ಥಳೀಯ ಪತ್ರಕರ್ತರು ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೋ ಫಿಟ್ಟಿಂಗ್ ಇಟ್ಟಿರ್ಬೇಕು, ಕೋಮುಗಲಭೆ ಸ್ಟಾರ್ಟ್ ಆಗ್ಲಿ ಅಂತ ಆದರೆ ಇವರಿಗೆ ಸ್ವಂತಿಕೆ ಬುದ್ಧಿಯೇ ಇಲ್ಲ ಎಂಬಂತೆ ಕಾಣುತ್ತಿದೆ ಆದರೆ ಈ ಕೊಳಕು ಕೋಮುವಾದ ಇಷ್ಟೊಂದು ರೀತಿಯಲ್ಲಿ ಕಿಚ್ಚು ಮನಸ್ಸಿಂದ ಕಕ್ಕಬಾರದು ರಾಜಕೀಯದವರಿಗೆ ಯಾವಾಗಲೂ ಪ್ರಾಮಾಣಿಕತೆ ಸಹನೆ ಸಹಬಾಳುವೆ ಪ್ರೀತಿ ಮನೋಭಾವ ಇರಬೇಕು ……ಸ್ಥಳದಲ್ಲಿ ಜಡ್ಜ್ಮೆಂಟ್ ಕೊಡುವಂತಹ ನಾಯ ಕತ್ವ ಇರಬೇಕು

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...