Homeಕರ್ನಾಟಕ‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಮಹಿಳೆ ವಿರುದ್ಧ ತಾನು ದರ್ಪ ಎಸಗಿದ್ದನ್ನು ಸಮರ್ಥಿಸಿಕೊಂಡ ಬಿಜೆಪಿ ನಾಯಕ

- Advertisement -
- Advertisement -

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ತಮಗೆ ಅಹವಾಲು ಸಲ್ಲಿಸಲು ಬಂದಿದ್ದ ಮಹಿಳೆಯ ಮೇಲೆ ದರ್ಪ ತೊರಿದ್ದಲ್ಲದೆ, ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ತನ್ನ ನಡೆಗೆ ದೇಶದಾದ್ಯಂತ ವಿರೋಧ ವ್ಯಕ್ತವಾದ ನಂತರ ಅದರ ಖಾಸಗಿ ಚಾನೆಲ್ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಮಹಿಳೆಯನ್ನು ನಾನು ರೇಪ್ ಮಾಡಿದ್ದೇನೆಯೆ?” ಎಂದು ಪ್ರಶ್ನಿಸಿ ಮತ್ತೆ ತನ್ನ ನಾಲಗೆ ಹರಿಬಿಟ್ಟಿದ್ದಾರೆ.

ಮಹಿಳೆಯೊಂದಿಗೆ ಲಿಂಬಾವಳಿ ಅವರು ಕಿರುಚಾಡಿ, ಮಹಿಳೆ ಎಂಬುವುದನ್ನು ನೋಡದೆ ಕೆಟ್ಟದಾಗಿ ನಡೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿತ್ತು. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ದೇಶದಾದ್ಯಂತ ಅಕ್ರೋಶವೂ ವ್ಯಕ್ತವಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡುವ ವೇಳೆ ಲಿಂಬಾವಳಿ ಅವರು ಮತ್ತೆ ತನ್ನ ನಾಲಗೆಯನ್ನು ಹರಿ ಬಿಟ್ಟಿದ್ದಾರೆ. ಚಾನೆಲ್‌ನ ಪತ್ರಕರ್ತನೊಂದಿಗೆ ಮಾಡನಾಡುತ್ತಾ,“ಜನರ ಪರ ಮಾತನಾಡ್ರಿ, ಅವರು ಒತ್ತುವರಿ ಮಾಡಿದ್ದಾರೆ. ಅದನ್ನು ಬಿಟ್ಟು ಮಹಿಳೆಗೆ ಹಾಗೆ ಮಾಡಿದ್ದೀರಿ ಅಂತಿದ್ದೀರಿ. ಏನು ಮಾಡಿದ್ದೇನೆ ನಾನು, ರೇಪ್‌ ಮಾಡಿದ್ದೀನಾ ಅವಳಿಗೆ? ಏನ್ರಿ ಮಾತನಾಡುತ್ತಿದ್ದೀರಾ ನೀವು? ಮಹಿಳೆ ಪರವಾಗಿ ಮಾತನಾಡಲು ಕರೆಸಿದ್ದೇನಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಮಾಜಿ ಸಚಿವ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತಷ್ಟು ಆಕ್ರೋಶ ಉಂಟಾಗಿದೆ. ರಾಜ್ಯ ಕಾಂಗ್ರೆಸ್, “ಮಾಧ್ಯಮಗಳು ಮಹಿಳೆಯರ ಘನತೆಯ ಪರ ಮಾತಾಡಬಾರದೇ? ಮಹಿಳೆಯರು ತಮ್ಮ ಅಹವಾಲು ಹೇಳಬಾರದೇ? ಮಹಿಳೆಯರ ಮೇಲಷ್ಟೇ ಅಲ್ಲ, ಮಾಧ್ಯಮಗಳ ಮೇಲೂ ದಬ್ಬಾಳಿಕೆ ನಡೆಸಿದ್ದಾರೆ ಅರವಿಂದ್ ಲಿಂಬಾವಳಿ. ಇಂತಹ ದರ್ಪ ದೌರ್ಜನ್ಯಕ್ಕೆ, ಕೀಳು ವರ್ತನೆಗೆ ರಾಜ್ಯದ ಜನರು ಪಾಠ ಕಲಿಸುವುದು ನಿಶ್ಚಿತ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಈ ವರ್ತನೆಗೆ, ಕೀಳು ಮಾತಿಗೆ ನಿಮ್ಮ ಬೆಂಬಲವಿದೆಯೇ?” ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ನಾಯಕಿ ರಾಧಾ ಅವಿನಾಶ್ ಅವರು,‘‘ಮಿಸ್ಟರ್ ಲಿಂಬಾವಳಿಯವರೇ ಮಹಿಳೆಯರಿಗೆ ಗೌರವ ಕೊಡೋ ಸಂಸ್ಕೃತಿ ಕಳಿಸಿಲ್ಲವ ನಿಮ್ಮ ಬಿಜೆಪಿ. ಇದೇನಾ ನಿಮ್ಮ ಹಿಂದುತ್ವ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:  ‘ಮಹಿಳೆಯ ವಿರುದ್ಧ ಕೂಗಾಡದೆ ಆರತಿ ಎತ್ತಬೇಕಿತ್ತೆ?’: BJP ಶಾಸಕ ಲಿಂಬಾವಳಿ ನಡೆ ಸಮರ್ಥಿಸಿಕೊಂಡ ವೈಟ್‌‌ಫೀಲ್ಡ್‌‌ ಎಸಿಪಿ!

ಅರ್ಜಿಯೊಂದನ್ನು ತಂದು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಪ್ರಯತ್ನಿಸಿದ ಮಹಿಳೆಯಿಂದ ಮಹದೇವಪುರ ಬಿಜೆಪಿ ಶಾಸಕರೂ ಆಗಿರುವ ಲಿಂಬಾವಳಿ ಅವರು ಅರ್ಜಿಯನ್ನು ಕಿತ್ತುಕೊಂಡಿದ್ದಾರೆ. ಮಹಿಳೆಯ ವಿರುದ್ಧ ಆಕ್ರೋಶದಿಂದ ಕಿರುಚಿದ್ದಾರೆ. ನಂತರ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಶಾಸಕರ ಈ ನಡೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ವರ್ತೂರು ಕೆರೆಯ ಕೋಡಿ ಬಿದ್ದು ನೆರೆ ಉಂಟಾಗಿತ್ತು. ಹೀಗಾಗಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಅರವಿಂದ್ ಲಿಂಬಾವಳಿ ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಅರವಿಂದ್ ಲಿಂಬಾವಳಿ ಮುಂದೆ ಅರ್ಜಿ ಹಿಡಿದುಕೊಂಡು ಬರುವ ಮಹಿಳೆ, ತನ್ನ ಮಾತನನ್ನು ಕೇಳುವಂತೆ ವಿನಂತಿಸುತ್ತಾರೆ. ಆದರೆ ಶಾಸಕ ಅದನ್ನು ಹೇಳದೆ ಅರ್ಜಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತಾರೆ. ಆದ್ರೆ ಮಹಿಳೆ ಪತ್ರ ನೀಡದೇ ತಮ್ಮ ಮಾತು ಕೇಳಿ ಎಂದು ಒತ್ತಾಯಿಸಿದಾಗ ಶಾಸಕ ಕೋಪಗೊಂಡು, “ಏ ಇವರನ್ನು ಕರ್ಕೊಂಡು ಹೋಗಿ. ಪೊಲೀಸ್ ಠಾಣೆಯಲ್ಲಿ ಕೂರಿಸಿ” ಎಂದು ಕೂಗಿ ಹೇಳುತ್ತಾರೆ.

ಇದನ್ನೂ ಓದಿ:  2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ತುಸು ಮುಂದೆ ಹೋಗಿ ಮತ್ತೆ ವಾಪಾಸು ಬಂದು ಮಹಿಳೆಯ ಕೈಯಲ್ಲಿದ್ದ ಅರ್ಜಿಯನ್ನು ಬಲವಂತವಾಗಿ ಕಸಿದುಕೊಳ್ಳುತ್ತಾರೆ. ಒತ್ತುವರಿ ಮಾಡ್ಕೊಂಡು ಬರ್ತಿರಾ, ನಾಚಿಕೆ ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾರೆ. “ಏಯ್ ಸುಮ್ನಿರು, ಇಲ್ಲವೆಂದರೆ ಬೇರೆ ಭಾಷೆ ಬರುತ್ತೆ. ಏನ್ ಮಾತನಾಡಬೇಕು, ಸುಮ್ನೆ ಬಿಡಲ್ಲ ನಿನ್ನ. ನ್ಯಾಯ ಕೇಳಲು ಬಂದಿದ್ದೀನಿ ಅಂತ ಹೇಳಲು ನಾಚಿಕೆ ಆಗಲ್ವಾ ನಿನಗೆ?” ಎಂದು ಮಹಿಳೆಯೊಂದಿಗೆ ಏಕವಚನದಲ್ಲೇ ಮಾತನಾಡುತ್ತಾರೆ.

ಈ ವೇಳೆ ಮಹಿಳೆ ಕೂಡಾ ಶಾಸಕನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ಬಳಿ ದಾಖಲೆಗಳಿದ್ದು, ನಾನು ನಮ್ಮ ಶಾಸಕರ ಬಳಿಗೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. “ಮಹಿಳೆ ಜೊತೆಗೆ ಹೇಗೆ ಮಾತನಾಡುತ್ತಾರೆ, ಮಾನ ಮರ್ಯಾದೆ ಇಲ್ಲವೆ. ನಾನು ನ್ಯಾಯ ಕೇಳಲು ಬಂದಿದ್ದು, ಒಬ್ಬ ಮಹಿಳೆ ಅನ್ನೋದನ್ನು ಕೂಡಾ ನೋಡದೆ ಈ ರೀತಿ ಮಾತನಾಡಿದರೆ ಹೇಗೆ” ಎಂದು ಹೇಳಿದ್ದಾರೆ.

ಇದರ ನಂತರ ಮಹಿಳಾ ಪೊಲೀಸರೊಬ್ಬರು ಬಂದು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ ಪೊಲೀಸರು ಮಹಿಳೆಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಕೂಗಾಡದೆ ಆರತಿ ಎತ್ತಬೇಕಿತ್ತೆ?: ಶಾಸಕನ ನಡೆ ಸಮರ್ಥಿಸಿಕೊಂಡ ವೈಟ್‌ಫೀಲ್ಡ್‌‌ ಎಸಿಪಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವೈಟ್‌ಫೀಲ್ಡ್‌ ಎಸಿಪಿ, “ಮಹಿಳೆಯ ಮೇಲೆ ಎಫ್‌ಐಆರ್‌ ಆಗಿರುವುದು ನಿಜ. ರಾಜಕಾಲುವೆಯನ್ನು ಒತ್ತುವರಿ ಮಾಡಿ ಕಾಂಪೋಂಡ್‌ ಕಟ್ಟಿದ್ದರಿಂದ ನೀರು ಸರಾಗವಾಗಿ ಹರಿಯದೆ 300 ಮನೆಗಳಿಗೆ ನೀರು ನುಗ್ಗಿದೆ. ಸಂತ್ರಸ್ತ ಜನರು ಊಟ ತಿಂಡಿಗಾಗಿ ಒದ್ದಾಡ್ತಾ ಇದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ದೂರು ಕೊಟ್ಟಿದ್ದರಿಂದ ಎಫ್‌ಐಆರ್‌ ದಾಖಲಾಗಿದೆ” ಎಂದು ಹೇಳಿದ್ದಾರೆ.

ಶಾಸಕನ ಜೊತೆಗೆ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಎಫ್‌ಐಆರ್‌ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಸಿಪಿ,“ಬಿಬಿಎಂಪಿ ಕಂದಾಯ ಅಧಿಕಾರಿಗಳ ದೂರಿನ ಆಧಾರದಲ್ಲಿ ಎಫ್‌ಐಆರ್‌‌ ಆಗಿದೆ. ಶಾಸಕರು ಮಾತನಾಡಿರುವುದು ಸಾರ್ವಜನಿಕರ ಪರವಾಗಿ, ಆದರೆ ಅದನ್ನು ಯಾರೂ ಹೇಳುತ್ತಿಲ್ಲ” ಎಂದು ಹೇಳಿದ್ದಾರೆ.

“ಶಾಸಕರು ಕೂಗಾಡದೆ ಏನ್‌ ಮಾಡಬೇಕಿತ್ತು? ಆರತಿ ಎತ್ತಬೇಕಿತ್ತೆ ಅವರಿಗೆ? ಈ ಮಹಿಳೆ ರಾಜಕಾಲುವೆ ಮೇಲೆ ಕಾಂಪೋಂಡ್‌ ಹಾಕಿದ್ದರಿಂದ, ಮುನ್ನೂರು ಮನೆಗಳಿಗೆ ಊಟ-ತಿಂಡಿ ಇಲ್ಲದೆ ಒದ್ದಾಡ್ತಾ ಇದ್ದಾರೆ. ಅವರ ವಸ್ತುಗಳೆಲ್ಲವೂ ನೆನೆದು ಹೋಗಿವೆ. ಅಲ್ಲಿ ಆಗಿರುವುದನ್ನು ಬಂದು ನೋಡಿ, ನಂತರ ಮಾತನಾಡಿ. ಬರಿ ಶಾಸಕರು ಕೂಗಾಡಿರುವುದನ್ನು ಹೇಳುವುದಲ್ಲ” ಎಂದು ಎಸಿಪಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

ಸಾಮಾಜಿಕ ಮಾಧ್ಯಮಗಳಲ್ಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಕಾನೂನು ಬಾಹಿರವಾಗಿ ಕಾಂಪೌಂಡ್ ಕಟ್ಟಿದ್ದರೂ, ಶಾಸಕರು ಈ ರೀತಿ ಕೂಗಾಡಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತವಾಗಿದೆ. “ಜನಪ್ರತಿನಿಧಿಯೊಬ್ಬ ತಟಸ್ಥವಾಗಿದ್ದು ಮಹಿಳೆಯ ಅಹವಾಲನ್ನು ಕೂಡಾ ಕೇಳಬೇಕಾತ್ತು. ಮಹಿಳೆ ಕೂಡಾ ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ. ಅದನ್ನು ಪರಿಶೀಲಿಸಬೇಕಿತ್ತು” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...