Homeಅಂತರಾಷ್ಟ್ರೀಯ7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

- Advertisement -
- Advertisement -

ದಿನ ಬೆಳಗಾದರೆ ನಮ್ಮ ಕನ್ನಡ ಟಿ.ವಿ. ಚಾನೆಲ್‌ಗಳು ನರೇಂದ್ರ ಮೋದಿಯ ಗುಣಗಾನ ಮಾಡುತ್ತ ಚೀನಾವನ್ನು ಬಗ್ಗು ಬಡಿಯುವ ಧೀರ, ಶೂರ ಎಂಬೆಲ್ಲ ಉಪಮೆಗಳನ್ನು ಬಳಸುತ್ತಿರುವ ಈ ಪ್ರಸ್ತುತ ಸಂದರ್ಭದಲ್ಲಿ ಜೂನ್ 21ರ The Week ನಿಯತ ಕಾಲಿಕೆಯ ಒಂದು ಲೇಖನ ಓದುಗರನ್ನು ಬೆಚ್ಚಿಬೀಳುಸುತ್ತಿದೆ. ಗಾಲ್ವಾನ್ ನದಿ ಕಣಿವೆ ಮತ್ತು ಪಾನ್‌ಗಾಂಗ್ ಸರೋವರದ ಪ್ರದೇಶದೊಳಗಡೆಗೆ ಚೀನಾದ PLA (People Libration Army) ನುಗ್ಗಿ ಭಾರತದ ಸುಮಾರು 60 ಚ.ಕಿ.ಮೀ. ಪ್ರದೇಶ ಆಕ್ರಮಿಸಿಕೊಂಡಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಹೆಚ್.ಎಸ್. ಪನಾಗ್ ಹೇಳಿರುವರು. ಅಂತೆಯೇ ಮಾಜಿ ವಿದೇಶಾಂಗ ಕಾರ್‍ಯದರ್ಶಿ ಶ್ಯಾಮ್‌ಸರಣ್ ಹೇಳಿಕೆಯಂತೆ 2013ರ ವೇಳೆಗೆ ಭಾರತ, ಚೀನಾಕ್ಕೆ ಕಳೆದುಕೊಂಡ ತನ್ನ ಭೂಪ್ರದೇಶ ಸುಮಾರು 640 ಚ.ಕಿ.ಮೀ. ಈಗಿದು 1300 ಚ.ಕಿ.ಮೀ.ನಷ್ಟಾಗಿದೆ ಎನ್ನುತ್ತಾರೆ ಶ್ಯಾಮ್‌ಸರಣ್.

ಇದು ಭಾರತ ಸರ್ಕಾರಕ್ಕೆ ಹಾಗೂ ಭಾರತೀಯ ಸೇನೆಗೆ ನಿಬ್ಬೆರಗುಗೊಳಿಸುವ ಸಂಗತಿ. ಉಪಗ್ರಹಗಳ ಮೂಲಕ ಭೂಚಿತ್ರಣದ ದೃಶ್ಯ ನಮ್ಮ ಬೆರಳ ತುದಿಯಲ್ಲೇ ಲಭ್ಯವಿರುವ ಸಂದರ್ಭದಲ್ಲಿ! ಹೀಗೇಕಾಯಿತು ಎಂಬುದೇ ನಿಗೂಢ. ಕನ್ನಡ ಟಿ.ವಿ. ಮಾಧ್ಯಮಗಳ ಬಹು ಆಪ್ತಮಿತ್ರ ನಮ್ಮ ನರೇಂದ್ರ ಮೋದಿಯವರು 2019 ಅಕ್ಟೋಬರ್ 11,12ರಂದು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಮ್ಮಲಪುರಂಗೆ ಆಹ್ವಾನಿಸಿ ಬಹುಪಚಾರದ ಮಾತುಕತೆ ಆಡಿದ ಸಂದರ್ಭದಲ್ಲಿ ಆತ ಭಾರತ ಸದರಿ ಕಣಿವೆಯಲ್ಲಿ ಕೈಗೊಂಡಿದ್ದ ಮೂಲಭೂತ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಓದುಗರಿಗೆ ನೆನಪಿರಬಹುದು. ಸಿಯಾಚಿನ್ ನಿರ್ಗಲ್ಲು ತಲುಪಲು ಸೇನಾ ಸರಬರಾಜಿಗೆ ಅನುಕೂಲವಾಗಲೆಂದು ಭಾರತ, ದೌಲತ್ ಬೇಗ್ ಓಲ್ಡಿ ಮತ್ತು ದುರ್ಬುಕ್‌ಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಶೈಯೋಕ್ ನದಿಗೆ ಸೇತುವೆ ನಿರ್ಮಿಸಿದ್ದು ಚೀನಾದ ಕಣ್ಣು ಕುಕ್ಕಿಸಿತು.

ಈಗೇನು ಚೀನಾ ಬಂದಿಳಿದಿದೆಯೋ ಆ ಪ್ರದೇಶಕ್ಕೆ ಅವರಿಗಿಂತ ಮುಂಚೆ ಪೂರ್ವಭಾವಿಯಾಗಿ ಬೇಸಿಗೆ ಆರಂಭಕ್ಕೂ ಮುನ್ನ ಬೇಕಾದ ಮಿಲಿಟರಿ ಸಲಕರಣೆಗಳೊಂದಿಗೆ ಹೋಗಿ ತಲುಪಲು ಭಾರತಕ್ಕೆ ಆರು ತಿಂಗಳ ಕಾಲಾವಕಾಶ ಲಭ್ಯವಿತ್ತು. ಆದರೆ ಅದು ಆಯಿತೆ? ಚೀನಾದ ಆಕ್ರಮಣಕ್ಕೆ ಎದುರಾಡುವ ಸಾಮರ್ಥ್ಯ ಇಂಡಿಯಾಕ್ಕೆ…?

ಕೇವಲ ಸಹಿಸಿಕೊಂಡು ಹೋಗುವ ಚಿತ್ತವುಳ್ಳ ಭಾರತ ಸರ್ಕಾರ ರಾಜತಾಂತ್ರಿಕತೆಯನ್ನಷ್ಟೇ ನಂಬಿ ಕುಳಿತಿದೆ. ನಮ್ಮ ಸೇನೆಗೆ ಶತೃವಿನ ಮೇಲೆ ಆಕ್ರಮಣವೆಸಗುವ ಮನೋಭಾವವಾಗಲಿ, ಯುದ್ಧೋಪ ಸಾಧನಗಳಾಗಲಿ, ಸಹಿಷ್ಣುತೆಯಾಗಲಿ ಇಲ್ಲ. ಈ ಸ್ಥಿತಿ ಚೀನಿಯರಿಗೆ ವರದಾನವೆನಿಸಿದ್ದು ಅದು ನಿರ್ಧಯತೆಯಿಂದ ವಾಸ್ತವಿಕ ಗಡಿ ರೇಖೆಯನ್ನು ದಿನದಿಂದ ದಿನಕ್ಕೆ ಭಾರತದ ಒಳಕ್ಕೆ ತಳ್ಳುತ್ತ ಬಂದಿದೆ. ಚೀನಾದ ದುರಾಸೆಗೆ, ಅದರ ಹೊಸ ಹೊಸ ವಾಸ್ತವಿಕ ಗಡಿರೇಖೆಗೆ, ಭಾರತ ಆಸ್ಪದವೀಯ್ಯುತ್ತಿದೆ. ಇದು ಚೀನಾದ ರಾಜಕೀಯ ನೀತಿಯೂ ಹೌದು! ತಮ್ಮ ದುರ್ಬುದ್ಧಿ ಸಮರ್ಥಿಸಿಕೊಳ್ಳಲು ಚೀನಾ ಪ್ರತಿಸಲವು ಮಾತುಕತೆಯ ದಿನಾಂಕವನ್ನು ಮುಂದು ಮುಂದಕ್ಕೆ ತಳ್ಳುತ್ತಾ ಮತ್ತಷ್ಟು ಭಾರತ ಭೂಭಾಗಕ್ಕೆ ಬೇಲಿ ಹಾಕುತ್ತ ಬರುತ್ತಿದೆ. ಭಾರತವೂ ಈ ಹಗ್ಗ ಜಗ್ಗಾಟಕ್ಕೆ ಬಲಿಯಾಗುತ್ತಿದ್ದು ಪ್ರತಿ ಮಾತುಕತೆಯ ನಂತರ ‘ಭಾರತ-ಚೀನಾ ಗಡಿ ಮಾತುಕತೆ ಫಲಪ್ರದ’ವೆಂದು ಹೇಳುತ್ತ ತನ್ನ ನೂರಾರು ಚ.ಕಿ.ಮೀ. ಭೂಪ್ರದೇಶವನ್ನು ನಿಷ್ಕರುಣೆ ಚೀನಾಕ್ಕೆ ಬಿಟ್ಟುಕೊಡುತ್ತ ಬಂದಿದೆ. ಈ ವಂಚನೆಯನ್ನು ಆದಷ್ಟು ಬೇಗ ಪ್ರಸ್ತುತ ಮೋದಿ ಸರ್ಕಾರ ಅರ್ಥ ಮಾಡಿಕೊಂಡರೆ ಒಳಿತು. ಈಗಲಾದರೂ ಭಾರತ ಸಕಲ ಯುದ್ಧೋಪಕರಣಗಳನ್ನು ವಾಸ್ತವಿಕ ಗಡಿರೇಖೆಯಲ್ಲಿ ಶಾಶ್ವತವಾಗಿರುವಂತೆ ಸ್ಥಾಪಿಸಿ ಚೀನಾಕ್ಕೆ ಬುದ್ಧಿ ಕಲಿಸುವ ಸದಾವಕಾಶ ಎದುರಾಗಿದೆ.

-ಸೊಂದಲಗೆರೆ ಲಕ್ಷ್ಮೀಪತಿ

(ಲೇಖಕರು ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಮಾತುಕತೆ ನಂತರ ಚೀನೀ ಸೈನ್ಯದಿಂದ 4 ಅಧಿಕಾರಿಗಳು ಸೇರಿ 10 ಸೈನಿಕರ ಬಿಡುಗಡೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...