Homeಅಂತರಾಷ್ಟ್ರೀಯ7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

- Advertisement -
- Advertisement -

ದಿನ ಬೆಳಗಾದರೆ ನಮ್ಮ ಕನ್ನಡ ಟಿ.ವಿ. ಚಾನೆಲ್‌ಗಳು ನರೇಂದ್ರ ಮೋದಿಯ ಗುಣಗಾನ ಮಾಡುತ್ತ ಚೀನಾವನ್ನು ಬಗ್ಗು ಬಡಿಯುವ ಧೀರ, ಶೂರ ಎಂಬೆಲ್ಲ ಉಪಮೆಗಳನ್ನು ಬಳಸುತ್ತಿರುವ ಈ ಪ್ರಸ್ತುತ ಸಂದರ್ಭದಲ್ಲಿ ಜೂನ್ 21ರ The Week ನಿಯತ ಕಾಲಿಕೆಯ ಒಂದು ಲೇಖನ ಓದುಗರನ್ನು ಬೆಚ್ಚಿಬೀಳುಸುತ್ತಿದೆ. ಗಾಲ್ವಾನ್ ನದಿ ಕಣಿವೆ ಮತ್ತು ಪಾನ್‌ಗಾಂಗ್ ಸರೋವರದ ಪ್ರದೇಶದೊಳಗಡೆಗೆ ಚೀನಾದ PLA (People Libration Army) ನುಗ್ಗಿ ಭಾರತದ ಸುಮಾರು 60 ಚ.ಕಿ.ಮೀ. ಪ್ರದೇಶ ಆಕ್ರಮಿಸಿಕೊಂಡಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಹೆಚ್.ಎಸ್. ಪನಾಗ್ ಹೇಳಿರುವರು. ಅಂತೆಯೇ ಮಾಜಿ ವಿದೇಶಾಂಗ ಕಾರ್‍ಯದರ್ಶಿ ಶ್ಯಾಮ್‌ಸರಣ್ ಹೇಳಿಕೆಯಂತೆ 2013ರ ವೇಳೆಗೆ ಭಾರತ, ಚೀನಾಕ್ಕೆ ಕಳೆದುಕೊಂಡ ತನ್ನ ಭೂಪ್ರದೇಶ ಸುಮಾರು 640 ಚ.ಕಿ.ಮೀ. ಈಗಿದು 1300 ಚ.ಕಿ.ಮೀ.ನಷ್ಟಾಗಿದೆ ಎನ್ನುತ್ತಾರೆ ಶ್ಯಾಮ್‌ಸರಣ್.

ಇದು ಭಾರತ ಸರ್ಕಾರಕ್ಕೆ ಹಾಗೂ ಭಾರತೀಯ ಸೇನೆಗೆ ನಿಬ್ಬೆರಗುಗೊಳಿಸುವ ಸಂಗತಿ. ಉಪಗ್ರಹಗಳ ಮೂಲಕ ಭೂಚಿತ್ರಣದ ದೃಶ್ಯ ನಮ್ಮ ಬೆರಳ ತುದಿಯಲ್ಲೇ ಲಭ್ಯವಿರುವ ಸಂದರ್ಭದಲ್ಲಿ! ಹೀಗೇಕಾಯಿತು ಎಂಬುದೇ ನಿಗೂಢ. ಕನ್ನಡ ಟಿ.ವಿ. ಮಾಧ್ಯಮಗಳ ಬಹು ಆಪ್ತಮಿತ್ರ ನಮ್ಮ ನರೇಂದ್ರ ಮೋದಿಯವರು 2019 ಅಕ್ಟೋಬರ್ 11,12ರಂದು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಮ್ಮಲಪುರಂಗೆ ಆಹ್ವಾನಿಸಿ ಬಹುಪಚಾರದ ಮಾತುಕತೆ ಆಡಿದ ಸಂದರ್ಭದಲ್ಲಿ ಆತ ಭಾರತ ಸದರಿ ಕಣಿವೆಯಲ್ಲಿ ಕೈಗೊಂಡಿದ್ದ ಮೂಲಭೂತ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಓದುಗರಿಗೆ ನೆನಪಿರಬಹುದು. ಸಿಯಾಚಿನ್ ನಿರ್ಗಲ್ಲು ತಲುಪಲು ಸೇನಾ ಸರಬರಾಜಿಗೆ ಅನುಕೂಲವಾಗಲೆಂದು ಭಾರತ, ದೌಲತ್ ಬೇಗ್ ಓಲ್ಡಿ ಮತ್ತು ದುರ್ಬುಕ್‌ಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಶೈಯೋಕ್ ನದಿಗೆ ಸೇತುವೆ ನಿರ್ಮಿಸಿದ್ದು ಚೀನಾದ ಕಣ್ಣು ಕುಕ್ಕಿಸಿತು.

ಈಗೇನು ಚೀನಾ ಬಂದಿಳಿದಿದೆಯೋ ಆ ಪ್ರದೇಶಕ್ಕೆ ಅವರಿಗಿಂತ ಮುಂಚೆ ಪೂರ್ವಭಾವಿಯಾಗಿ ಬೇಸಿಗೆ ಆರಂಭಕ್ಕೂ ಮುನ್ನ ಬೇಕಾದ ಮಿಲಿಟರಿ ಸಲಕರಣೆಗಳೊಂದಿಗೆ ಹೋಗಿ ತಲುಪಲು ಭಾರತಕ್ಕೆ ಆರು ತಿಂಗಳ ಕಾಲಾವಕಾಶ ಲಭ್ಯವಿತ್ತು. ಆದರೆ ಅದು ಆಯಿತೆ? ಚೀನಾದ ಆಕ್ರಮಣಕ್ಕೆ ಎದುರಾಡುವ ಸಾಮರ್ಥ್ಯ ಇಂಡಿಯಾಕ್ಕೆ…?

ಕೇವಲ ಸಹಿಸಿಕೊಂಡು ಹೋಗುವ ಚಿತ್ತವುಳ್ಳ ಭಾರತ ಸರ್ಕಾರ ರಾಜತಾಂತ್ರಿಕತೆಯನ್ನಷ್ಟೇ ನಂಬಿ ಕುಳಿತಿದೆ. ನಮ್ಮ ಸೇನೆಗೆ ಶತೃವಿನ ಮೇಲೆ ಆಕ್ರಮಣವೆಸಗುವ ಮನೋಭಾವವಾಗಲಿ, ಯುದ್ಧೋಪ ಸಾಧನಗಳಾಗಲಿ, ಸಹಿಷ್ಣುತೆಯಾಗಲಿ ಇಲ್ಲ. ಈ ಸ್ಥಿತಿ ಚೀನಿಯರಿಗೆ ವರದಾನವೆನಿಸಿದ್ದು ಅದು ನಿರ್ಧಯತೆಯಿಂದ ವಾಸ್ತವಿಕ ಗಡಿ ರೇಖೆಯನ್ನು ದಿನದಿಂದ ದಿನಕ್ಕೆ ಭಾರತದ ಒಳಕ್ಕೆ ತಳ್ಳುತ್ತ ಬಂದಿದೆ. ಚೀನಾದ ದುರಾಸೆಗೆ, ಅದರ ಹೊಸ ಹೊಸ ವಾಸ್ತವಿಕ ಗಡಿರೇಖೆಗೆ, ಭಾರತ ಆಸ್ಪದವೀಯ್ಯುತ್ತಿದೆ. ಇದು ಚೀನಾದ ರಾಜಕೀಯ ನೀತಿಯೂ ಹೌದು! ತಮ್ಮ ದುರ್ಬುದ್ಧಿ ಸಮರ್ಥಿಸಿಕೊಳ್ಳಲು ಚೀನಾ ಪ್ರತಿಸಲವು ಮಾತುಕತೆಯ ದಿನಾಂಕವನ್ನು ಮುಂದು ಮುಂದಕ್ಕೆ ತಳ್ಳುತ್ತಾ ಮತ್ತಷ್ಟು ಭಾರತ ಭೂಭಾಗಕ್ಕೆ ಬೇಲಿ ಹಾಕುತ್ತ ಬರುತ್ತಿದೆ. ಭಾರತವೂ ಈ ಹಗ್ಗ ಜಗ್ಗಾಟಕ್ಕೆ ಬಲಿಯಾಗುತ್ತಿದ್ದು ಪ್ರತಿ ಮಾತುಕತೆಯ ನಂತರ ‘ಭಾರತ-ಚೀನಾ ಗಡಿ ಮಾತುಕತೆ ಫಲಪ್ರದ’ವೆಂದು ಹೇಳುತ್ತ ತನ್ನ ನೂರಾರು ಚ.ಕಿ.ಮೀ. ಭೂಪ್ರದೇಶವನ್ನು ನಿಷ್ಕರುಣೆ ಚೀನಾಕ್ಕೆ ಬಿಟ್ಟುಕೊಡುತ್ತ ಬಂದಿದೆ. ಈ ವಂಚನೆಯನ್ನು ಆದಷ್ಟು ಬೇಗ ಪ್ರಸ್ತುತ ಮೋದಿ ಸರ್ಕಾರ ಅರ್ಥ ಮಾಡಿಕೊಂಡರೆ ಒಳಿತು. ಈಗಲಾದರೂ ಭಾರತ ಸಕಲ ಯುದ್ಧೋಪಕರಣಗಳನ್ನು ವಾಸ್ತವಿಕ ಗಡಿರೇಖೆಯಲ್ಲಿ ಶಾಶ್ವತವಾಗಿರುವಂತೆ ಸ್ಥಾಪಿಸಿ ಚೀನಾಕ್ಕೆ ಬುದ್ಧಿ ಕಲಿಸುವ ಸದಾವಕಾಶ ಎದುರಾಗಿದೆ.

-ಸೊಂದಲಗೆರೆ ಲಕ್ಷ್ಮೀಪತಿ

(ಲೇಖಕರು ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಮಾತುಕತೆ ನಂತರ ಚೀನೀ ಸೈನ್ಯದಿಂದ 4 ಅಧಿಕಾರಿಗಳು ಸೇರಿ 10 ಸೈನಿಕರ ಬಿಡುಗಡೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...