Homeಅಂತರಾಷ್ಟ್ರೀಯ7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

- Advertisement -
- Advertisement -

ದಿನ ಬೆಳಗಾದರೆ ನಮ್ಮ ಕನ್ನಡ ಟಿ.ವಿ. ಚಾನೆಲ್‌ಗಳು ನರೇಂದ್ರ ಮೋದಿಯ ಗುಣಗಾನ ಮಾಡುತ್ತ ಚೀನಾವನ್ನು ಬಗ್ಗು ಬಡಿಯುವ ಧೀರ, ಶೂರ ಎಂಬೆಲ್ಲ ಉಪಮೆಗಳನ್ನು ಬಳಸುತ್ತಿರುವ ಈ ಪ್ರಸ್ತುತ ಸಂದರ್ಭದಲ್ಲಿ ಜೂನ್ 21ರ The Week ನಿಯತ ಕಾಲಿಕೆಯ ಒಂದು ಲೇಖನ ಓದುಗರನ್ನು ಬೆಚ್ಚಿಬೀಳುಸುತ್ತಿದೆ. ಗಾಲ್ವಾನ್ ನದಿ ಕಣಿವೆ ಮತ್ತು ಪಾನ್‌ಗಾಂಗ್ ಸರೋವರದ ಪ್ರದೇಶದೊಳಗಡೆಗೆ ಚೀನಾದ PLA (People Libration Army) ನುಗ್ಗಿ ಭಾರತದ ಸುಮಾರು 60 ಚ.ಕಿ.ಮೀ. ಪ್ರದೇಶ ಆಕ್ರಮಿಸಿಕೊಂಡಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಹೆಚ್.ಎಸ್. ಪನಾಗ್ ಹೇಳಿರುವರು. ಅಂತೆಯೇ ಮಾಜಿ ವಿದೇಶಾಂಗ ಕಾರ್‍ಯದರ್ಶಿ ಶ್ಯಾಮ್‌ಸರಣ್ ಹೇಳಿಕೆಯಂತೆ 2013ರ ವೇಳೆಗೆ ಭಾರತ, ಚೀನಾಕ್ಕೆ ಕಳೆದುಕೊಂಡ ತನ್ನ ಭೂಪ್ರದೇಶ ಸುಮಾರು 640 ಚ.ಕಿ.ಮೀ. ಈಗಿದು 1300 ಚ.ಕಿ.ಮೀ.ನಷ್ಟಾಗಿದೆ ಎನ್ನುತ್ತಾರೆ ಶ್ಯಾಮ್‌ಸರಣ್.

ಇದು ಭಾರತ ಸರ್ಕಾರಕ್ಕೆ ಹಾಗೂ ಭಾರತೀಯ ಸೇನೆಗೆ ನಿಬ್ಬೆರಗುಗೊಳಿಸುವ ಸಂಗತಿ. ಉಪಗ್ರಹಗಳ ಮೂಲಕ ಭೂಚಿತ್ರಣದ ದೃಶ್ಯ ನಮ್ಮ ಬೆರಳ ತುದಿಯಲ್ಲೇ ಲಭ್ಯವಿರುವ ಸಂದರ್ಭದಲ್ಲಿ! ಹೀಗೇಕಾಯಿತು ಎಂಬುದೇ ನಿಗೂಢ. ಕನ್ನಡ ಟಿ.ವಿ. ಮಾಧ್ಯಮಗಳ ಬಹು ಆಪ್ತಮಿತ್ರ ನಮ್ಮ ನರೇಂದ್ರ ಮೋದಿಯವರು 2019 ಅಕ್ಟೋಬರ್ 11,12ರಂದು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಮ್ಮಲಪುರಂಗೆ ಆಹ್ವಾನಿಸಿ ಬಹುಪಚಾರದ ಮಾತುಕತೆ ಆಡಿದ ಸಂದರ್ಭದಲ್ಲಿ ಆತ ಭಾರತ ಸದರಿ ಕಣಿವೆಯಲ್ಲಿ ಕೈಗೊಂಡಿದ್ದ ಮೂಲಭೂತ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಓದುಗರಿಗೆ ನೆನಪಿರಬಹುದು. ಸಿಯಾಚಿನ್ ನಿರ್ಗಲ್ಲು ತಲುಪಲು ಸೇನಾ ಸರಬರಾಜಿಗೆ ಅನುಕೂಲವಾಗಲೆಂದು ಭಾರತ, ದೌಲತ್ ಬೇಗ್ ಓಲ್ಡಿ ಮತ್ತು ದುರ್ಬುಕ್‌ಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಶೈಯೋಕ್ ನದಿಗೆ ಸೇತುವೆ ನಿರ್ಮಿಸಿದ್ದು ಚೀನಾದ ಕಣ್ಣು ಕುಕ್ಕಿಸಿತು.

ಈಗೇನು ಚೀನಾ ಬಂದಿಳಿದಿದೆಯೋ ಆ ಪ್ರದೇಶಕ್ಕೆ ಅವರಿಗಿಂತ ಮುಂಚೆ ಪೂರ್ವಭಾವಿಯಾಗಿ ಬೇಸಿಗೆ ಆರಂಭಕ್ಕೂ ಮುನ್ನ ಬೇಕಾದ ಮಿಲಿಟರಿ ಸಲಕರಣೆಗಳೊಂದಿಗೆ ಹೋಗಿ ತಲುಪಲು ಭಾರತಕ್ಕೆ ಆರು ತಿಂಗಳ ಕಾಲಾವಕಾಶ ಲಭ್ಯವಿತ್ತು. ಆದರೆ ಅದು ಆಯಿತೆ? ಚೀನಾದ ಆಕ್ರಮಣಕ್ಕೆ ಎದುರಾಡುವ ಸಾಮರ್ಥ್ಯ ಇಂಡಿಯಾಕ್ಕೆ…?

ಕೇವಲ ಸಹಿಸಿಕೊಂಡು ಹೋಗುವ ಚಿತ್ತವುಳ್ಳ ಭಾರತ ಸರ್ಕಾರ ರಾಜತಾಂತ್ರಿಕತೆಯನ್ನಷ್ಟೇ ನಂಬಿ ಕುಳಿತಿದೆ. ನಮ್ಮ ಸೇನೆಗೆ ಶತೃವಿನ ಮೇಲೆ ಆಕ್ರಮಣವೆಸಗುವ ಮನೋಭಾವವಾಗಲಿ, ಯುದ್ಧೋಪ ಸಾಧನಗಳಾಗಲಿ, ಸಹಿಷ್ಣುತೆಯಾಗಲಿ ಇಲ್ಲ. ಈ ಸ್ಥಿತಿ ಚೀನಿಯರಿಗೆ ವರದಾನವೆನಿಸಿದ್ದು ಅದು ನಿರ್ಧಯತೆಯಿಂದ ವಾಸ್ತವಿಕ ಗಡಿ ರೇಖೆಯನ್ನು ದಿನದಿಂದ ದಿನಕ್ಕೆ ಭಾರತದ ಒಳಕ್ಕೆ ತಳ್ಳುತ್ತ ಬಂದಿದೆ. ಚೀನಾದ ದುರಾಸೆಗೆ, ಅದರ ಹೊಸ ಹೊಸ ವಾಸ್ತವಿಕ ಗಡಿರೇಖೆಗೆ, ಭಾರತ ಆಸ್ಪದವೀಯ್ಯುತ್ತಿದೆ. ಇದು ಚೀನಾದ ರಾಜಕೀಯ ನೀತಿಯೂ ಹೌದು! ತಮ್ಮ ದುರ್ಬುದ್ಧಿ ಸಮರ್ಥಿಸಿಕೊಳ್ಳಲು ಚೀನಾ ಪ್ರತಿಸಲವು ಮಾತುಕತೆಯ ದಿನಾಂಕವನ್ನು ಮುಂದು ಮುಂದಕ್ಕೆ ತಳ್ಳುತ್ತಾ ಮತ್ತಷ್ಟು ಭಾರತ ಭೂಭಾಗಕ್ಕೆ ಬೇಲಿ ಹಾಕುತ್ತ ಬರುತ್ತಿದೆ. ಭಾರತವೂ ಈ ಹಗ್ಗ ಜಗ್ಗಾಟಕ್ಕೆ ಬಲಿಯಾಗುತ್ತಿದ್ದು ಪ್ರತಿ ಮಾತುಕತೆಯ ನಂತರ ‘ಭಾರತ-ಚೀನಾ ಗಡಿ ಮಾತುಕತೆ ಫಲಪ್ರದ’ವೆಂದು ಹೇಳುತ್ತ ತನ್ನ ನೂರಾರು ಚ.ಕಿ.ಮೀ. ಭೂಪ್ರದೇಶವನ್ನು ನಿಷ್ಕರುಣೆ ಚೀನಾಕ್ಕೆ ಬಿಟ್ಟುಕೊಡುತ್ತ ಬಂದಿದೆ. ಈ ವಂಚನೆಯನ್ನು ಆದಷ್ಟು ಬೇಗ ಪ್ರಸ್ತುತ ಮೋದಿ ಸರ್ಕಾರ ಅರ್ಥ ಮಾಡಿಕೊಂಡರೆ ಒಳಿತು. ಈಗಲಾದರೂ ಭಾರತ ಸಕಲ ಯುದ್ಧೋಪಕರಣಗಳನ್ನು ವಾಸ್ತವಿಕ ಗಡಿರೇಖೆಯಲ್ಲಿ ಶಾಶ್ವತವಾಗಿರುವಂತೆ ಸ್ಥಾಪಿಸಿ ಚೀನಾಕ್ಕೆ ಬುದ್ಧಿ ಕಲಿಸುವ ಸದಾವಕಾಶ ಎದುರಾಗಿದೆ.

-ಸೊಂದಲಗೆರೆ ಲಕ್ಷ್ಮೀಪತಿ

(ಲೇಖಕರು ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಮಾತುಕತೆ ನಂತರ ಚೀನೀ ಸೈನ್ಯದಿಂದ 4 ಅಧಿಕಾರಿಗಳು ಸೇರಿ 10 ಸೈನಿಕರ ಬಿಡುಗಡೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...