Homeಅಂತರಾಷ್ಟ್ರೀಯ7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

- Advertisement -
- Advertisement -

ದಿನ ಬೆಳಗಾದರೆ ನಮ್ಮ ಕನ್ನಡ ಟಿ.ವಿ. ಚಾನೆಲ್‌ಗಳು ನರೇಂದ್ರ ಮೋದಿಯ ಗುಣಗಾನ ಮಾಡುತ್ತ ಚೀನಾವನ್ನು ಬಗ್ಗು ಬಡಿಯುವ ಧೀರ, ಶೂರ ಎಂಬೆಲ್ಲ ಉಪಮೆಗಳನ್ನು ಬಳಸುತ್ತಿರುವ ಈ ಪ್ರಸ್ತುತ ಸಂದರ್ಭದಲ್ಲಿ ಜೂನ್ 21ರ The Week ನಿಯತ ಕಾಲಿಕೆಯ ಒಂದು ಲೇಖನ ಓದುಗರನ್ನು ಬೆಚ್ಚಿಬೀಳುಸುತ್ತಿದೆ. ಗಾಲ್ವಾನ್ ನದಿ ಕಣಿವೆ ಮತ್ತು ಪಾನ್‌ಗಾಂಗ್ ಸರೋವರದ ಪ್ರದೇಶದೊಳಗಡೆಗೆ ಚೀನಾದ PLA (People Libration Army) ನುಗ್ಗಿ ಭಾರತದ ಸುಮಾರು 60 ಚ.ಕಿ.ಮೀ. ಪ್ರದೇಶ ಆಕ್ರಮಿಸಿಕೊಂಡಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಹೆಚ್.ಎಸ್. ಪನಾಗ್ ಹೇಳಿರುವರು. ಅಂತೆಯೇ ಮಾಜಿ ವಿದೇಶಾಂಗ ಕಾರ್‍ಯದರ್ಶಿ ಶ್ಯಾಮ್‌ಸರಣ್ ಹೇಳಿಕೆಯಂತೆ 2013ರ ವೇಳೆಗೆ ಭಾರತ, ಚೀನಾಕ್ಕೆ ಕಳೆದುಕೊಂಡ ತನ್ನ ಭೂಪ್ರದೇಶ ಸುಮಾರು 640 ಚ.ಕಿ.ಮೀ. ಈಗಿದು 1300 ಚ.ಕಿ.ಮೀ.ನಷ್ಟಾಗಿದೆ ಎನ್ನುತ್ತಾರೆ ಶ್ಯಾಮ್‌ಸರಣ್.

ಇದು ಭಾರತ ಸರ್ಕಾರಕ್ಕೆ ಹಾಗೂ ಭಾರತೀಯ ಸೇನೆಗೆ ನಿಬ್ಬೆರಗುಗೊಳಿಸುವ ಸಂಗತಿ. ಉಪಗ್ರಹಗಳ ಮೂಲಕ ಭೂಚಿತ್ರಣದ ದೃಶ್ಯ ನಮ್ಮ ಬೆರಳ ತುದಿಯಲ್ಲೇ ಲಭ್ಯವಿರುವ ಸಂದರ್ಭದಲ್ಲಿ! ಹೀಗೇಕಾಯಿತು ಎಂಬುದೇ ನಿಗೂಢ. ಕನ್ನಡ ಟಿ.ವಿ. ಮಾಧ್ಯಮಗಳ ಬಹು ಆಪ್ತಮಿತ್ರ ನಮ್ಮ ನರೇಂದ್ರ ಮೋದಿಯವರು 2019 ಅಕ್ಟೋಬರ್ 11,12ರಂದು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಮ್ಮಲಪುರಂಗೆ ಆಹ್ವಾನಿಸಿ ಬಹುಪಚಾರದ ಮಾತುಕತೆ ಆಡಿದ ಸಂದರ್ಭದಲ್ಲಿ ಆತ ಭಾರತ ಸದರಿ ಕಣಿವೆಯಲ್ಲಿ ಕೈಗೊಂಡಿದ್ದ ಮೂಲಭೂತ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಓದುಗರಿಗೆ ನೆನಪಿರಬಹುದು. ಸಿಯಾಚಿನ್ ನಿರ್ಗಲ್ಲು ತಲುಪಲು ಸೇನಾ ಸರಬರಾಜಿಗೆ ಅನುಕೂಲವಾಗಲೆಂದು ಭಾರತ, ದೌಲತ್ ಬೇಗ್ ಓಲ್ಡಿ ಮತ್ತು ದುರ್ಬುಕ್‌ಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಶೈಯೋಕ್ ನದಿಗೆ ಸೇತುವೆ ನಿರ್ಮಿಸಿದ್ದು ಚೀನಾದ ಕಣ್ಣು ಕುಕ್ಕಿಸಿತು.

ಈಗೇನು ಚೀನಾ ಬಂದಿಳಿದಿದೆಯೋ ಆ ಪ್ರದೇಶಕ್ಕೆ ಅವರಿಗಿಂತ ಮುಂಚೆ ಪೂರ್ವಭಾವಿಯಾಗಿ ಬೇಸಿಗೆ ಆರಂಭಕ್ಕೂ ಮುನ್ನ ಬೇಕಾದ ಮಿಲಿಟರಿ ಸಲಕರಣೆಗಳೊಂದಿಗೆ ಹೋಗಿ ತಲುಪಲು ಭಾರತಕ್ಕೆ ಆರು ತಿಂಗಳ ಕಾಲಾವಕಾಶ ಲಭ್ಯವಿತ್ತು. ಆದರೆ ಅದು ಆಯಿತೆ? ಚೀನಾದ ಆಕ್ರಮಣಕ್ಕೆ ಎದುರಾಡುವ ಸಾಮರ್ಥ್ಯ ಇಂಡಿಯಾಕ್ಕೆ…?

ಕೇವಲ ಸಹಿಸಿಕೊಂಡು ಹೋಗುವ ಚಿತ್ತವುಳ್ಳ ಭಾರತ ಸರ್ಕಾರ ರಾಜತಾಂತ್ರಿಕತೆಯನ್ನಷ್ಟೇ ನಂಬಿ ಕುಳಿತಿದೆ. ನಮ್ಮ ಸೇನೆಗೆ ಶತೃವಿನ ಮೇಲೆ ಆಕ್ರಮಣವೆಸಗುವ ಮನೋಭಾವವಾಗಲಿ, ಯುದ್ಧೋಪ ಸಾಧನಗಳಾಗಲಿ, ಸಹಿಷ್ಣುತೆಯಾಗಲಿ ಇಲ್ಲ. ಈ ಸ್ಥಿತಿ ಚೀನಿಯರಿಗೆ ವರದಾನವೆನಿಸಿದ್ದು ಅದು ನಿರ್ಧಯತೆಯಿಂದ ವಾಸ್ತವಿಕ ಗಡಿ ರೇಖೆಯನ್ನು ದಿನದಿಂದ ದಿನಕ್ಕೆ ಭಾರತದ ಒಳಕ್ಕೆ ತಳ್ಳುತ್ತ ಬಂದಿದೆ. ಚೀನಾದ ದುರಾಸೆಗೆ, ಅದರ ಹೊಸ ಹೊಸ ವಾಸ್ತವಿಕ ಗಡಿರೇಖೆಗೆ, ಭಾರತ ಆಸ್ಪದವೀಯ್ಯುತ್ತಿದೆ. ಇದು ಚೀನಾದ ರಾಜಕೀಯ ನೀತಿಯೂ ಹೌದು! ತಮ್ಮ ದುರ್ಬುದ್ಧಿ ಸಮರ್ಥಿಸಿಕೊಳ್ಳಲು ಚೀನಾ ಪ್ರತಿಸಲವು ಮಾತುಕತೆಯ ದಿನಾಂಕವನ್ನು ಮುಂದು ಮುಂದಕ್ಕೆ ತಳ್ಳುತ್ತಾ ಮತ್ತಷ್ಟು ಭಾರತ ಭೂಭಾಗಕ್ಕೆ ಬೇಲಿ ಹಾಕುತ್ತ ಬರುತ್ತಿದೆ. ಭಾರತವೂ ಈ ಹಗ್ಗ ಜಗ್ಗಾಟಕ್ಕೆ ಬಲಿಯಾಗುತ್ತಿದ್ದು ಪ್ರತಿ ಮಾತುಕತೆಯ ನಂತರ ‘ಭಾರತ-ಚೀನಾ ಗಡಿ ಮಾತುಕತೆ ಫಲಪ್ರದ’ವೆಂದು ಹೇಳುತ್ತ ತನ್ನ ನೂರಾರು ಚ.ಕಿ.ಮೀ. ಭೂಪ್ರದೇಶವನ್ನು ನಿಷ್ಕರುಣೆ ಚೀನಾಕ್ಕೆ ಬಿಟ್ಟುಕೊಡುತ್ತ ಬಂದಿದೆ. ಈ ವಂಚನೆಯನ್ನು ಆದಷ್ಟು ಬೇಗ ಪ್ರಸ್ತುತ ಮೋದಿ ಸರ್ಕಾರ ಅರ್ಥ ಮಾಡಿಕೊಂಡರೆ ಒಳಿತು. ಈಗಲಾದರೂ ಭಾರತ ಸಕಲ ಯುದ್ಧೋಪಕರಣಗಳನ್ನು ವಾಸ್ತವಿಕ ಗಡಿರೇಖೆಯಲ್ಲಿ ಶಾಶ್ವತವಾಗಿರುವಂತೆ ಸ್ಥಾಪಿಸಿ ಚೀನಾಕ್ಕೆ ಬುದ್ಧಿ ಕಲಿಸುವ ಸದಾವಕಾಶ ಎದುರಾಗಿದೆ.

-ಸೊಂದಲಗೆರೆ ಲಕ್ಷ್ಮೀಪತಿ

(ಲೇಖಕರು ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಮಾತುಕತೆ ನಂತರ ಚೀನೀ ಸೈನ್ಯದಿಂದ 4 ಅಧಿಕಾರಿಗಳು ಸೇರಿ 10 ಸೈನಿಕರ ಬಿಡುಗಡೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...