Homeಅಂತರಾಷ್ಟ್ರೀಯ7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

- Advertisement -
- Advertisement -

ದಿನ ಬೆಳಗಾದರೆ ನಮ್ಮ ಕನ್ನಡ ಟಿ.ವಿ. ಚಾನೆಲ್‌ಗಳು ನರೇಂದ್ರ ಮೋದಿಯ ಗುಣಗಾನ ಮಾಡುತ್ತ ಚೀನಾವನ್ನು ಬಗ್ಗು ಬಡಿಯುವ ಧೀರ, ಶೂರ ಎಂಬೆಲ್ಲ ಉಪಮೆಗಳನ್ನು ಬಳಸುತ್ತಿರುವ ಈ ಪ್ರಸ್ತುತ ಸಂದರ್ಭದಲ್ಲಿ ಜೂನ್ 21ರ The Week ನಿಯತ ಕಾಲಿಕೆಯ ಒಂದು ಲೇಖನ ಓದುಗರನ್ನು ಬೆಚ್ಚಿಬೀಳುಸುತ್ತಿದೆ. ಗಾಲ್ವಾನ್ ನದಿ ಕಣಿವೆ ಮತ್ತು ಪಾನ್‌ಗಾಂಗ್ ಸರೋವರದ ಪ್ರದೇಶದೊಳಗಡೆಗೆ ಚೀನಾದ PLA (People Libration Army) ನುಗ್ಗಿ ಭಾರತದ ಸುಮಾರು 60 ಚ.ಕಿ.ಮೀ. ಪ್ರದೇಶ ಆಕ್ರಮಿಸಿಕೊಂಡಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಹೆಚ್.ಎಸ್. ಪನಾಗ್ ಹೇಳಿರುವರು. ಅಂತೆಯೇ ಮಾಜಿ ವಿದೇಶಾಂಗ ಕಾರ್‍ಯದರ್ಶಿ ಶ್ಯಾಮ್‌ಸರಣ್ ಹೇಳಿಕೆಯಂತೆ 2013ರ ವೇಳೆಗೆ ಭಾರತ, ಚೀನಾಕ್ಕೆ ಕಳೆದುಕೊಂಡ ತನ್ನ ಭೂಪ್ರದೇಶ ಸುಮಾರು 640 ಚ.ಕಿ.ಮೀ. ಈಗಿದು 1300 ಚ.ಕಿ.ಮೀ.ನಷ್ಟಾಗಿದೆ ಎನ್ನುತ್ತಾರೆ ಶ್ಯಾಮ್‌ಸರಣ್.

ಇದು ಭಾರತ ಸರ್ಕಾರಕ್ಕೆ ಹಾಗೂ ಭಾರತೀಯ ಸೇನೆಗೆ ನಿಬ್ಬೆರಗುಗೊಳಿಸುವ ಸಂಗತಿ. ಉಪಗ್ರಹಗಳ ಮೂಲಕ ಭೂಚಿತ್ರಣದ ದೃಶ್ಯ ನಮ್ಮ ಬೆರಳ ತುದಿಯಲ್ಲೇ ಲಭ್ಯವಿರುವ ಸಂದರ್ಭದಲ್ಲಿ! ಹೀಗೇಕಾಯಿತು ಎಂಬುದೇ ನಿಗೂಢ. ಕನ್ನಡ ಟಿ.ವಿ. ಮಾಧ್ಯಮಗಳ ಬಹು ಆಪ್ತಮಿತ್ರ ನಮ್ಮ ನರೇಂದ್ರ ಮೋದಿಯವರು 2019 ಅಕ್ಟೋಬರ್ 11,12ರಂದು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಮ್ಮಲಪುರಂಗೆ ಆಹ್ವಾನಿಸಿ ಬಹುಪಚಾರದ ಮಾತುಕತೆ ಆಡಿದ ಸಂದರ್ಭದಲ್ಲಿ ಆತ ಭಾರತ ಸದರಿ ಕಣಿವೆಯಲ್ಲಿ ಕೈಗೊಂಡಿದ್ದ ಮೂಲಭೂತ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಓದುಗರಿಗೆ ನೆನಪಿರಬಹುದು. ಸಿಯಾಚಿನ್ ನಿರ್ಗಲ್ಲು ತಲುಪಲು ಸೇನಾ ಸರಬರಾಜಿಗೆ ಅನುಕೂಲವಾಗಲೆಂದು ಭಾರತ, ದೌಲತ್ ಬೇಗ್ ಓಲ್ಡಿ ಮತ್ತು ದುರ್ಬುಕ್‌ಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಶೈಯೋಕ್ ನದಿಗೆ ಸೇತುವೆ ನಿರ್ಮಿಸಿದ್ದು ಚೀನಾದ ಕಣ್ಣು ಕುಕ್ಕಿಸಿತು.

ಈಗೇನು ಚೀನಾ ಬಂದಿಳಿದಿದೆಯೋ ಆ ಪ್ರದೇಶಕ್ಕೆ ಅವರಿಗಿಂತ ಮುಂಚೆ ಪೂರ್ವಭಾವಿಯಾಗಿ ಬೇಸಿಗೆ ಆರಂಭಕ್ಕೂ ಮುನ್ನ ಬೇಕಾದ ಮಿಲಿಟರಿ ಸಲಕರಣೆಗಳೊಂದಿಗೆ ಹೋಗಿ ತಲುಪಲು ಭಾರತಕ್ಕೆ ಆರು ತಿಂಗಳ ಕಾಲಾವಕಾಶ ಲಭ್ಯವಿತ್ತು. ಆದರೆ ಅದು ಆಯಿತೆ? ಚೀನಾದ ಆಕ್ರಮಣಕ್ಕೆ ಎದುರಾಡುವ ಸಾಮರ್ಥ್ಯ ಇಂಡಿಯಾಕ್ಕೆ…?

ಕೇವಲ ಸಹಿಸಿಕೊಂಡು ಹೋಗುವ ಚಿತ್ತವುಳ್ಳ ಭಾರತ ಸರ್ಕಾರ ರಾಜತಾಂತ್ರಿಕತೆಯನ್ನಷ್ಟೇ ನಂಬಿ ಕುಳಿತಿದೆ. ನಮ್ಮ ಸೇನೆಗೆ ಶತೃವಿನ ಮೇಲೆ ಆಕ್ರಮಣವೆಸಗುವ ಮನೋಭಾವವಾಗಲಿ, ಯುದ್ಧೋಪ ಸಾಧನಗಳಾಗಲಿ, ಸಹಿಷ್ಣುತೆಯಾಗಲಿ ಇಲ್ಲ. ಈ ಸ್ಥಿತಿ ಚೀನಿಯರಿಗೆ ವರದಾನವೆನಿಸಿದ್ದು ಅದು ನಿರ್ಧಯತೆಯಿಂದ ವಾಸ್ತವಿಕ ಗಡಿ ರೇಖೆಯನ್ನು ದಿನದಿಂದ ದಿನಕ್ಕೆ ಭಾರತದ ಒಳಕ್ಕೆ ತಳ್ಳುತ್ತ ಬಂದಿದೆ. ಚೀನಾದ ದುರಾಸೆಗೆ, ಅದರ ಹೊಸ ಹೊಸ ವಾಸ್ತವಿಕ ಗಡಿರೇಖೆಗೆ, ಭಾರತ ಆಸ್ಪದವೀಯ್ಯುತ್ತಿದೆ. ಇದು ಚೀನಾದ ರಾಜಕೀಯ ನೀತಿಯೂ ಹೌದು! ತಮ್ಮ ದುರ್ಬುದ್ಧಿ ಸಮರ್ಥಿಸಿಕೊಳ್ಳಲು ಚೀನಾ ಪ್ರತಿಸಲವು ಮಾತುಕತೆಯ ದಿನಾಂಕವನ್ನು ಮುಂದು ಮುಂದಕ್ಕೆ ತಳ್ಳುತ್ತಾ ಮತ್ತಷ್ಟು ಭಾರತ ಭೂಭಾಗಕ್ಕೆ ಬೇಲಿ ಹಾಕುತ್ತ ಬರುತ್ತಿದೆ. ಭಾರತವೂ ಈ ಹಗ್ಗ ಜಗ್ಗಾಟಕ್ಕೆ ಬಲಿಯಾಗುತ್ತಿದ್ದು ಪ್ರತಿ ಮಾತುಕತೆಯ ನಂತರ ‘ಭಾರತ-ಚೀನಾ ಗಡಿ ಮಾತುಕತೆ ಫಲಪ್ರದ’ವೆಂದು ಹೇಳುತ್ತ ತನ್ನ ನೂರಾರು ಚ.ಕಿ.ಮೀ. ಭೂಪ್ರದೇಶವನ್ನು ನಿಷ್ಕರುಣೆ ಚೀನಾಕ್ಕೆ ಬಿಟ್ಟುಕೊಡುತ್ತ ಬಂದಿದೆ. ಈ ವಂಚನೆಯನ್ನು ಆದಷ್ಟು ಬೇಗ ಪ್ರಸ್ತುತ ಮೋದಿ ಸರ್ಕಾರ ಅರ್ಥ ಮಾಡಿಕೊಂಡರೆ ಒಳಿತು. ಈಗಲಾದರೂ ಭಾರತ ಸಕಲ ಯುದ್ಧೋಪಕರಣಗಳನ್ನು ವಾಸ್ತವಿಕ ಗಡಿರೇಖೆಯಲ್ಲಿ ಶಾಶ್ವತವಾಗಿರುವಂತೆ ಸ್ಥಾಪಿಸಿ ಚೀನಾಕ್ಕೆ ಬುದ್ಧಿ ಕಲಿಸುವ ಸದಾವಕಾಶ ಎದುರಾಗಿದೆ.

-ಸೊಂದಲಗೆರೆ ಲಕ್ಷ್ಮೀಪತಿ

(ಲೇಖಕರು ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಮಾತುಕತೆ ನಂತರ ಚೀನೀ ಸೈನ್ಯದಿಂದ 4 ಅಧಿಕಾರಿಗಳು ಸೇರಿ 10 ಸೈನಿಕರ ಬಿಡುಗಡೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...