Homeಫ್ಯಾಕ್ಟ್‌ಚೆಕ್FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು “ಒಂದು ವರ್ಷ ಚಿನ್ನ ಖರೀದಿಸಬೇಡಿ” ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಕೂಡ ಇಂತಹುದೇ ಮನವಿ ಮಾಡಿದ್ದರು ಎಂಬರ್ಥದ ‘ದಿ ಹಿಂದೂ’ ಪತ್ರಿಕೆಯ ಮುಖಪುಟವೊಂದು ವೈರಲ್ ಆಗುತ್ತಿದೆ. ಬಿಜೆಪಿ ನಾಯಕರು ಮತ್ತು ಕೆಲವು ಮಾಧ್ಯಮಗಳು ಮೋದಿಯವರ ನಡೆಯನ್ನು ಸಮರ್ಥಿಸಿಕೊಳ್ಳಲು ಇದನ್ನು ಬಳಸುತ್ತಿವೆ.

ಪ್ರಧಾನಿ ಮೋದಿಯವರ ಇತ್ತೀಚಿನ ಮನವಿಯ ಬೆನ್ನಲ್ಲೇ, 1967ರ ಜೂನ್ 6ರ ‘ದಿ ಹಿಂದೂ’ ಪತ್ರಿಕೆಯ ತುಣುಕೊಂದು ವೈರಲ್ ಆಗುತ್ತಿದೆ. ಅದರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ವಿದೇಶಿ ವಿನಿಮಯದ ಬಿಕ್ಕಟ್ಟಿನ ಕಾರಣದಿಂದ ಜನರಲ್ಲಿ “ಚಿನ್ನ ಖರೀದಿಸಬೇಡಿ” ಎಂದು ಮನವಿ ಮಾಡಿದ್ದರು ಎಂಬ ಸುದ್ದಿಯ ತುಣುಕನ್ನು ಕಾಣಬಹುದು.

ಚಿಕ್ಕಬಳ್ಳಾಪುರದ ಸಂಸದ ಡಾ. ಕೆ ಸುಧಾಕರ್ ತಮ್ಮ ಎಕ್ಸ್‌ ಖಾತೆಯ ಮೂಲಕ ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಪ್ರಧಾನಿ ಮೋದಿ ಮಾಡಿರುವ ಮನವಿಯನ್ನು ಸಮರ್ಥಿಸಿಕೊಂಡಿದ್ದಾರೆ.

“1967ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ನಮ್ಮ ವಿದೇಶಿ ವಿನಿಮಯ ಮೀಸಲನ್ನು ರಕ್ಷಿಸಲು ಚಿನ್ನ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತೀಯರಲ್ಲಿ ‘ರಾಷ್ಟ್ರೀಯ ಶಿಸ್ತಿಗಾಗಿ’ (National Discipline) ಕಳಕಳಿಯ ಮನವಿ ಮಾಡಿದ್ದರು.

2013ರಲ್ಲಿ ಅಂದಿನ ಹಣಕಾಸು ಸಚಿವ ಶ್ರೀ ಪಿ. ಚಿದಂಬರಂ ಅವರು ಹೆಚ್ಚಾಗುತ್ತಿರುವ ಚಾಲ್ತಿ ಖಾತೆ ಕೊರತೆಯನ್ನು (Current Account Deficit) ತಡೆಯಲು “ಚಿನ್ನ ಖರೀದಿಸುವ ಆಸೆಯನ್ನು ತಡೆಹಿಡಿಯಿರಿ” ಎಂದು ನಾಗರಿಕರಲ್ಲಿ ಪದೇ ಪದೇ ವಿನಂತಿಸಿದ್ದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಅದೇ ಆರ್ಥಿಕ ತರ್ಕದ ಅಡಿಯಲ್ಲಿ ಅಂತಹದ್ದೇ ಮನವಿಯನ್ನು ಮಾಡಿದಾಗ, ಕಾಂಗ್ರೆಸ್ ಪಕ್ಷವು ಅದನ್ನು ಅಣಕಿಸಲು ಧಾವಿಸುತ್ತಿದೆ.

ಇದು ವಿರೋಧವಲ್ಲ, ಇದು ಅವಕಾಶವಾದ. ಇತಿಹಾಸ ಅಥವಾ ಆರ್ಥಿಕ ತಾರ್ಕಿಕತೆಯ ತಿಳುವಳಿಕೆಯಿಲ್ಲದೆ, ಕೇವಲ ವಿರೋಧಿಸಬೇಕೆಂಬ ಕಾರಣಕ್ಕಾಗಿ ವಿರೋಧಿಸುವುದು ಕೇವಲ ಕೆಟ್ಟ ರಾಜಕಾರಣವಲ್ಲ, ಇದು ರಾಷ್ಟ್ರಕ್ಕೆ ಮಾಡುವ ದ್ರೋಹವಾಗಿದೆ.

ಪಕ್ಷದ ಹಿತಕ್ಕಿಂತ ರಾಷ್ಟ್ರದ ಹಿತಾಸಕ್ತಿ ಮುಖ್ಯವಾಗಿರುವ ಇಂತಹ ಸಮಯದಲ್ಲಿ, ಕಾಂಗ್ರೆಸ್ ನಾಯಕರು ಕ್ಷುಲ್ಲಕ ರಾಜಕಾರಣದಿಂದ ಮೇಲೆದ್ದು ರಾಷ್ಟ್ರದ ಬಗ್ಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ ಎಂದು ನಿರೀಕ್ಷಿಸುವುದು ತಪ್ಪೇ?”

Don’t buy gold said Indira Gandhi while asking for “national discipline” in 1967 pic.twitter.com/LslKCJUADQ

— Shashank Shekhar Jha (@shashank_ssj) May 12, 2026

ಬಿಜೆಪಿ ಹಲವು ಬೆಂಬಲಿಗರು ಇದೇ ಪೋಸ್ಟ್‌ಅನ್ನು ಪ್ರಧಾನಿ ಮೋದಿಯವರ ಮನವಿಯನ್ನು ಸಮರ್ಥಿಸಿ, ಕಾಂಗ್ರೆಸ್‌ ಪಕ್ಷ ಪ್ರಧಾನಿ ಮೋದಿಯ ಮಾತುಗಳನ್ನು ಅಣಕಿಸುತ್ತಿದ್ದು, ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಅವರೂ ದೇಶದ ಹಿತ ದೃಷ್ಟಿಯಿಂದ ಇಂತಹದ್ದೆ ಮನವಿ ಮಾಡಿದ್ದರು ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

 ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ BJP ಬೆಂಬಲಿಗರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಹಲವು ಪೋಸ್ಟ್‌ಗಳನ್ನ ನೀವು ಇಲ್ಲಿ ನೋಡಬಹುದು.

ಹಾಗಿದ್ದರೆ ಇಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಇರುವ ಪತ್ರಿಕಾ ತಣುಕು ಮತ್ತು ಬಿಜೆಪಿ ಬೆಂಬಲಿಗರು ಇಂದಿರಾ ಗಾಂಧಿ ಮೇಲೆ ಮಾಡಲಾಗುತ್ತಿರುವ ಪ್ರತಿಪಾದನೆಯಲ್ಲಿ ಸತ್ಯಾಂಶ ಇದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳನ್ನು ಪರಿಶೀಲಿಸಲು ಸರ್ಚ್ ಮಾಡಿದಾಗ, ಇಂದಿರಾ ಗಾಂಧಿ 1967ರಲ್ಲಿ ಹೇಳಿದ್ದಾರೆ ಎಂಬಂತೆ ಹಂಚಿಕೊಳ್ಳಲಾಗುತ್ತಿರುವ ಪತ್ರಿಕಾ ತುಣುಕು  ಸಂಪೂರ್ಣ ಸುಳ್ಳು ಮತ್ತು ಎಡಿಟ್ ಮಾಡಲಾದ (Fabricated) ಚಿತ್ರವಾಗಿದೆ.

ದಿ ಹಿಂದೂ’ ಪತ್ರಿಕೆಯ ಸ್ಪಷ್ಟನೆ:

ವೈರಲ್ ಚಿತ್ರದ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಿರುವ ‘ದಿ ಹಿಂದೂ’ ಸಂಸ್ಥೆ, “ಜೂನ್ 6, 1967ರ ಮುಖಪುಟ ಎಂದು ಹರಿದಾಡುತ್ತಿರುವ ಚಿತ್ರವು ಡಿಜಿಟಲ್ ಆಗಿ ಎಡಿಟ್ ಮಾಡಲಾಗಿದೆ. ಇದು ನಮ್ಮ ಪತ್ರಿಕೆಯ ಇತಿಹಾಸದಲ್ಲಿ ಪ್ರಕಟವಾಗಿಲ್ಲ. ಓದುಗರು ಇಂತಹ ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರದಿಂದಿರಿ” ಎಂದು ‘X‘ (ಟ್ವಿಟರ್) ಮೂಲಕ ಸ್ಪಷ್ಟಪಡಿಸಿದೆ.

ಅಸಲಿ ಮುಖಪುಟದ ಪರಿಶೀಲನೆ:

ಪತ್ರಿಕೆಯ ಹಳೆಯ ದಾಖಲೆಗಳನ್ನು (Archives) ಪರಿಶೀಲಿಸಿದಾಗ, ಜೂನ್ 6, 1967ರ ಅಸಲಿ ಮುಖಪುಟದಲ್ಲಿ ಇಂತಹ ಯಾವುದೇ ಸುದ್ದಿ ಇರಲಿಲ್ಲ ಎಂಬುದು ಸಾಬೀತಾಗಿದೆ. ಪತ್ರಕರ್ತ ಬಿ. ಕೋಲಪ್ಪನ್ ಅವರು ಅಂದಿನ ಅಸಲಿ ಮುಖಪುಟವನ್ನು ಹಂಚಿಕೊಂಡಿದ್ದಾರೆ.

1968ರಲ್ಲಿ ಇಂದಿರಾ ಗಾಂಧಿಯವರ ಸರ್ಕಾರದ ಅವಧಿಯಲ್ಲಿ, ಅಂದಿನ ಹಣಕಾಸು ಸಚಿವ ಮೊರಾರ್ಜಿ ದೇಸಾಯಿ ಅವರು ‘ಗೋಲ್ಡ್ ಕಂಟ್ರೋಲ್ ಆಕ್ಟ್’ (ಚಿನ್ನದ ನಿಯಂತ್ರಣ ಕಾಯ್ದೆ) ಅನ್ನು ಜಾರಿಗೆ ತಂದರು. ಈ ಕಾನೂನಿನ ಪ್ರಕಾರ ನಾಗರಿಕರು ಚಿನ್ನದ ಗಟ್ಟಿ ಅಥವಾ ನಾಣ್ಯಗಳನ್ನು ಹೊಂದುವುದನ್ನು ನಿಷೇಧಿಸಲಾಗಿತ್ತು. ಈ ಕಾಯ್ದೆಯನ್ನು 1990ರಲ್ಲಿ ರದ್ದುಗೊಳಿಸಲಾಯಿತು.

ಇಂದಿರಾ ಗಾಂಧಿಯವರು 1967ರಲ್ಲಿ ಜನರಲ್ಲಿ ಚಿನ್ನ ಖರೀದಿಸಬೇಡಿ ಎಂದು ಮನವಿ ಮಾಡಿದ್ದರು ಎನ್ನಲಾದ ಪತ್ರಿಕಾ ತುಣುಕು ನಕಲಿ. ಬಿಜೆಪಿಯ ಐಟಿ ಸೆಲ್ ಮತ್ತು ಕೆಲವು ಮಾಧ್ಯಮಗಳು ಹಳೆಯ ಇತಿಹಾಸವನ್ನು ತಿರುಚಿದ ಚಿತ್ರದ ಮೂಲಕ ಜನರ ಮುಂದೆ ಇಡುತ್ತಿವೆ.

ಇಂದಿರಾ ಗಾಂಧಿ ವಿದೇಶಿ ವಿನಿಮಯ ಬಿಕ್ಕಟ್ಟು ಎದುರಿಸಲು ‘ಕಾನೂನು’ ಜಾರಿ ಮಾಡಿದ್ದರು. ಆದರೆ ನರೇಂದ್ರ ಮೋದಿ ಸಾರ್ವಜನಿಕ ಸಭೆಯಲ್ಲಿ ‘ಮನವಿ’ ಮಾಡುತ್ತಿದ್ದಾರೆ. ಮೋದಿಯವರ ಇಂದಿನ ನಡೆಯನ್ನು ಸಮರ್ಥಿಸಲು ಹಳೆಯ ಪತ್ರಿಕೆಯ ಹೆಸರಿನಲ್ಲಿ ಸುಳ್ಳು ಚಿತ್ರವನ್ನು ಸೃಷ್ಟಿಸಲಾಗಿದೆ.

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದ ಆರ್ಥಿಕತೆಯನ್ನು ಕಾಪಾಡುವ ದೃಷ್ಟಿಯಿಂದ ಜನತೆ “ರೂಪಾಯಿಯ ರಕ್ಷಕರು” (Guardians of the Rupee) ಆಗಬೇಕು ಎಂದು ಕರೆ ನೀಡಿದ್ದರು. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ‘ವರ್ಕ್ ಫ್ರಮ್ ಹೋಮ್’ಗೆ ಆದ್ಯತೆ ನೀಡಿ, ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ತಡೆಯಿರಿ, ಪೆಟ್ರೋಲ್, ಡೀಸೆಲ್ ಬಳಕೆ ತಗ್ಗಿಸಲು ಮೆಟ್ರೋ ಮತ್ತು ಸಾರ್ವಜನಿಕ ಸಾರಿಗೆ ಬಳಸಿ, ಅಡುಗೆ ಎಣ್ಣೆ ಬಳಕೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ರಾಸಾಯನಿಕ ಗೊಬ್ಬರ ಅವಲಂಬನೆ ತಗ್ಗಿಸಿ, ನೈಸರ್ಗಿಕ ಕೃಷಿಯತ್ತ ಮುಖಮಾಡಿ, ವಿದೇಶಿ ಬ್ರ್ಯಾಂಡ್ ವಸ್ತುಗಳ ಬಳಕೆ ಕಡಿಮೆ ಮಾಡಿ, ‘ಸ್ವದೇಶಿ’ ಅಳವಡಿಸಿಕೊಳ್ಳಿ, ಒಂದು ವರ್ಷದವರೆಗೆ ಅನಗತ್ಯ ವಿದೇಶಿ ಪ್ರಯಾಣವನ್ನು ಕೈಬಿಡಿ ಎಂದು ಏಳು ಸಲಹೆಗಳನ್ನು ನೀಡಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿ ಹೇಳಿಕೆಗೆ ದೇಶದೆಲ್ಲಡೆ ಪರ ವಿರೋಧದ ಚರ್ಚೆಯಾಗುತ್ತಿರುವ ಹೊತ್ತಲ್ಲಿ ಅದನ್ನು ಸಮರ್ಥಿಸಲು ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಇಂದಿರಾ ಗಾಂಧಿ 1967ರಲ್ಲಿ ಇದನ್ನೆ ಹೇಳಿದ್ದರು ಎಂಬ ಫೇಕ್ ನೆರೇಷನ್ ರೂಪಿಸಲು ಸುಳ್ಳು ಪೋಸ್ಟ್‌ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...