Homeಫ್ಯಾಕ್ಟ್‌ಚೆಕ್FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು “ಒಂದು ವರ್ಷ ಚಿನ್ನ ಖರೀದಿಸಬೇಡಿ” ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಕೂಡ ಇಂತಹುದೇ ಮನವಿ ಮಾಡಿದ್ದರು ಎಂಬರ್ಥದ ‘ದಿ ಹಿಂದೂ’ ಪತ್ರಿಕೆಯ ಮುಖಪುಟವೊಂದು ವೈರಲ್ ಆಗುತ್ತಿದೆ. ಬಿಜೆಪಿ ನಾಯಕರು ಮತ್ತು ಕೆಲವು ಮಾಧ್ಯಮಗಳು ಮೋದಿಯವರ ನಡೆಯನ್ನು ಸಮರ್ಥಿಸಿಕೊಳ್ಳಲು ಇದನ್ನು ಬಳಸುತ್ತಿವೆ.

ಪ್ರಧಾನಿ ಮೋದಿಯವರ ಇತ್ತೀಚಿನ ಮನವಿಯ ಬೆನ್ನಲ್ಲೇ, 1967ರ ಜೂನ್ 6ರ ‘ದಿ ಹಿಂದೂ’ ಪತ್ರಿಕೆಯ ತುಣುಕೊಂದು ವೈರಲ್ ಆಗುತ್ತಿದೆ. ಅದರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ವಿದೇಶಿ ವಿನಿಮಯದ ಬಿಕ್ಕಟ್ಟಿನ ಕಾರಣದಿಂದ ಜನರಲ್ಲಿ “ಚಿನ್ನ ಖರೀದಿಸಬೇಡಿ” ಎಂದು ಮನವಿ ಮಾಡಿದ್ದರು ಎಂಬ ಸುದ್ದಿಯ ತುಣುಕನ್ನು ಕಾಣಬಹುದು.

ಚಿಕ್ಕಬಳ್ಳಾಪುರದ ಸಂಸದ ಡಾ. ಕೆ ಸುಧಾಕರ್ ತಮ್ಮ ಎಕ್ಸ್‌ ಖಾತೆಯ ಮೂಲಕ ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಪ್ರಧಾನಿ ಮೋದಿ ಮಾಡಿರುವ ಮನವಿಯನ್ನು ಸಮರ್ಥಿಸಿಕೊಂಡಿದ್ದಾರೆ.

“1967ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ನಮ್ಮ ವಿದೇಶಿ ವಿನಿಮಯ ಮೀಸಲನ್ನು ರಕ್ಷಿಸಲು ಚಿನ್ನ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತೀಯರಲ್ಲಿ ‘ರಾಷ್ಟ್ರೀಯ ಶಿಸ್ತಿಗಾಗಿ’ (National Discipline) ಕಳಕಳಿಯ ಮನವಿ ಮಾಡಿದ್ದರು.

2013ರಲ್ಲಿ ಅಂದಿನ ಹಣಕಾಸು ಸಚಿವ ಶ್ರೀ ಪಿ. ಚಿದಂಬರಂ ಅವರು ಹೆಚ್ಚಾಗುತ್ತಿರುವ ಚಾಲ್ತಿ ಖಾತೆ ಕೊರತೆಯನ್ನು (Current Account Deficit) ತಡೆಯಲು “ಚಿನ್ನ ಖರೀದಿಸುವ ಆಸೆಯನ್ನು ತಡೆಹಿಡಿಯಿರಿ” ಎಂದು ನಾಗರಿಕರಲ್ಲಿ ಪದೇ ಪದೇ ವಿನಂತಿಸಿದ್ದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಅದೇ ಆರ್ಥಿಕ ತರ್ಕದ ಅಡಿಯಲ್ಲಿ ಅಂತಹದ್ದೇ ಮನವಿಯನ್ನು ಮಾಡಿದಾಗ, ಕಾಂಗ್ರೆಸ್ ಪಕ್ಷವು ಅದನ್ನು ಅಣಕಿಸಲು ಧಾವಿಸುತ್ತಿದೆ.

ಇದು ವಿರೋಧವಲ್ಲ, ಇದು ಅವಕಾಶವಾದ. ಇತಿಹಾಸ ಅಥವಾ ಆರ್ಥಿಕ ತಾರ್ಕಿಕತೆಯ ತಿಳುವಳಿಕೆಯಿಲ್ಲದೆ, ಕೇವಲ ವಿರೋಧಿಸಬೇಕೆಂಬ ಕಾರಣಕ್ಕಾಗಿ ವಿರೋಧಿಸುವುದು ಕೇವಲ ಕೆಟ್ಟ ರಾಜಕಾರಣವಲ್ಲ, ಇದು ರಾಷ್ಟ್ರಕ್ಕೆ ಮಾಡುವ ದ್ರೋಹವಾಗಿದೆ.

ಪಕ್ಷದ ಹಿತಕ್ಕಿಂತ ರಾಷ್ಟ್ರದ ಹಿತಾಸಕ್ತಿ ಮುಖ್ಯವಾಗಿರುವ ಇಂತಹ ಸಮಯದಲ್ಲಿ, ಕಾಂಗ್ರೆಸ್ ನಾಯಕರು ಕ್ಷುಲ್ಲಕ ರಾಜಕಾರಣದಿಂದ ಮೇಲೆದ್ದು ರಾಷ್ಟ್ರದ ಬಗ್ಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ ಎಂದು ನಿರೀಕ್ಷಿಸುವುದು ತಪ್ಪೇ?”

Don’t buy gold said Indira Gandhi while asking for “national discipline” in 1967 pic.twitter.com/LslKCJUADQ

— Shashank Shekhar Jha (@shashank_ssj) May 12, 2026

ಬಿಜೆಪಿ ಹಲವು ಬೆಂಬಲಿಗರು ಇದೇ ಪೋಸ್ಟ್‌ಅನ್ನು ಪ್ರಧಾನಿ ಮೋದಿಯವರ ಮನವಿಯನ್ನು ಸಮರ್ಥಿಸಿ, ಕಾಂಗ್ರೆಸ್‌ ಪಕ್ಷ ಪ್ರಧಾನಿ ಮೋದಿಯ ಮಾತುಗಳನ್ನು ಅಣಕಿಸುತ್ತಿದ್ದು, ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಅವರೂ ದೇಶದ ಹಿತ ದೃಷ್ಟಿಯಿಂದ ಇಂತಹದ್ದೆ ಮನವಿ ಮಾಡಿದ್ದರು ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

 ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ BJP ಬೆಂಬಲಿಗರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಹಲವು ಪೋಸ್ಟ್‌ಗಳನ್ನ ನೀವು ಇಲ್ಲಿ ನೋಡಬಹುದು.

ಹಾಗಿದ್ದರೆ ಇಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಇರುವ ಪತ್ರಿಕಾ ತಣುಕು ಮತ್ತು ಬಿಜೆಪಿ ಬೆಂಬಲಿಗರು ಇಂದಿರಾ ಗಾಂಧಿ ಮೇಲೆ ಮಾಡಲಾಗುತ್ತಿರುವ ಪ್ರತಿಪಾದನೆಯಲ್ಲಿ ಸತ್ಯಾಂಶ ಇದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳನ್ನು ಪರಿಶೀಲಿಸಲು ಸರ್ಚ್ ಮಾಡಿದಾಗ, ಇಂದಿರಾ ಗಾಂಧಿ 1967ರಲ್ಲಿ ಹೇಳಿದ್ದಾರೆ ಎಂಬಂತೆ ಹಂಚಿಕೊಳ್ಳಲಾಗುತ್ತಿರುವ ಪತ್ರಿಕಾ ತುಣುಕು  ಸಂಪೂರ್ಣ ಸುಳ್ಳು ಮತ್ತು ಎಡಿಟ್ ಮಾಡಲಾದ (Fabricated) ಚಿತ್ರವಾಗಿದೆ.

ದಿ ಹಿಂದೂ’ ಪತ್ರಿಕೆಯ ಸ್ಪಷ್ಟನೆ:

ವೈರಲ್ ಚಿತ್ರದ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಿರುವ ‘ದಿ ಹಿಂದೂ’ ಸಂಸ್ಥೆ, “ಜೂನ್ 6, 1967ರ ಮುಖಪುಟ ಎಂದು ಹರಿದಾಡುತ್ತಿರುವ ಚಿತ್ರವು ಡಿಜಿಟಲ್ ಆಗಿ ಎಡಿಟ್ ಮಾಡಲಾಗಿದೆ. ಇದು ನಮ್ಮ ಪತ್ರಿಕೆಯ ಇತಿಹಾಸದಲ್ಲಿ ಪ್ರಕಟವಾಗಿಲ್ಲ. ಓದುಗರು ಇಂತಹ ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರದಿಂದಿರಿ” ಎಂದು ‘X‘ (ಟ್ವಿಟರ್) ಮೂಲಕ ಸ್ಪಷ್ಟಪಡಿಸಿದೆ.

ಅಸಲಿ ಮುಖಪುಟದ ಪರಿಶೀಲನೆ:

ಪತ್ರಿಕೆಯ ಹಳೆಯ ದಾಖಲೆಗಳನ್ನು (Archives) ಪರಿಶೀಲಿಸಿದಾಗ, ಜೂನ್ 6, 1967ರ ಅಸಲಿ ಮುಖಪುಟದಲ್ಲಿ ಇಂತಹ ಯಾವುದೇ ಸುದ್ದಿ ಇರಲಿಲ್ಲ ಎಂಬುದು ಸಾಬೀತಾಗಿದೆ. ಪತ್ರಕರ್ತ ಬಿ. ಕೋಲಪ್ಪನ್ ಅವರು ಅಂದಿನ ಅಸಲಿ ಮುಖಪುಟವನ್ನು ಹಂಚಿಕೊಂಡಿದ್ದಾರೆ.

1968ರಲ್ಲಿ ಇಂದಿರಾ ಗಾಂಧಿಯವರ ಸರ್ಕಾರದ ಅವಧಿಯಲ್ಲಿ, ಅಂದಿನ ಹಣಕಾಸು ಸಚಿವ ಮೊರಾರ್ಜಿ ದೇಸಾಯಿ ಅವರು ‘ಗೋಲ್ಡ್ ಕಂಟ್ರೋಲ್ ಆಕ್ಟ್’ (ಚಿನ್ನದ ನಿಯಂತ್ರಣ ಕಾಯ್ದೆ) ಅನ್ನು ಜಾರಿಗೆ ತಂದರು. ಈ ಕಾನೂನಿನ ಪ್ರಕಾರ ನಾಗರಿಕರು ಚಿನ್ನದ ಗಟ್ಟಿ ಅಥವಾ ನಾಣ್ಯಗಳನ್ನು ಹೊಂದುವುದನ್ನು ನಿಷೇಧಿಸಲಾಗಿತ್ತು. ಈ ಕಾಯ್ದೆಯನ್ನು 1990ರಲ್ಲಿ ರದ್ದುಗೊಳಿಸಲಾಯಿತು.

ಇಂದಿರಾ ಗಾಂಧಿಯವರು 1967ರಲ್ಲಿ ಜನರಲ್ಲಿ ಚಿನ್ನ ಖರೀದಿಸಬೇಡಿ ಎಂದು ಮನವಿ ಮಾಡಿದ್ದರು ಎನ್ನಲಾದ ಪತ್ರಿಕಾ ತುಣುಕು ನಕಲಿ. ಬಿಜೆಪಿಯ ಐಟಿ ಸೆಲ್ ಮತ್ತು ಕೆಲವು ಮಾಧ್ಯಮಗಳು ಹಳೆಯ ಇತಿಹಾಸವನ್ನು ತಿರುಚಿದ ಚಿತ್ರದ ಮೂಲಕ ಜನರ ಮುಂದೆ ಇಡುತ್ತಿವೆ.

ಇಂದಿರಾ ಗಾಂಧಿ ವಿದೇಶಿ ವಿನಿಮಯ ಬಿಕ್ಕಟ್ಟು ಎದುರಿಸಲು ‘ಕಾನೂನು’ ಜಾರಿ ಮಾಡಿದ್ದರು. ಆದರೆ ನರೇಂದ್ರ ಮೋದಿ ಸಾರ್ವಜನಿಕ ಸಭೆಯಲ್ಲಿ ‘ಮನವಿ’ ಮಾಡುತ್ತಿದ್ದಾರೆ. ಮೋದಿಯವರ ಇಂದಿನ ನಡೆಯನ್ನು ಸಮರ್ಥಿಸಲು ಹಳೆಯ ಪತ್ರಿಕೆಯ ಹೆಸರಿನಲ್ಲಿ ಸುಳ್ಳು ಚಿತ್ರವನ್ನು ಸೃಷ್ಟಿಸಲಾಗಿದೆ.

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದ ಆರ್ಥಿಕತೆಯನ್ನು ಕಾಪಾಡುವ ದೃಷ್ಟಿಯಿಂದ ಜನತೆ “ರೂಪಾಯಿಯ ರಕ್ಷಕರು” (Guardians of the Rupee) ಆಗಬೇಕು ಎಂದು ಕರೆ ನೀಡಿದ್ದರು. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ‘ವರ್ಕ್ ಫ್ರಮ್ ಹೋಮ್’ಗೆ ಆದ್ಯತೆ ನೀಡಿ, ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ತಡೆಯಿರಿ, ಪೆಟ್ರೋಲ್, ಡೀಸೆಲ್ ಬಳಕೆ ತಗ್ಗಿಸಲು ಮೆಟ್ರೋ ಮತ್ತು ಸಾರ್ವಜನಿಕ ಸಾರಿಗೆ ಬಳಸಿ, ಅಡುಗೆ ಎಣ್ಣೆ ಬಳಕೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ರಾಸಾಯನಿಕ ಗೊಬ್ಬರ ಅವಲಂಬನೆ ತಗ್ಗಿಸಿ, ನೈಸರ್ಗಿಕ ಕೃಷಿಯತ್ತ ಮುಖಮಾಡಿ, ವಿದೇಶಿ ಬ್ರ್ಯಾಂಡ್ ವಸ್ತುಗಳ ಬಳಕೆ ಕಡಿಮೆ ಮಾಡಿ, ‘ಸ್ವದೇಶಿ’ ಅಳವಡಿಸಿಕೊಳ್ಳಿ, ಒಂದು ವರ್ಷದವರೆಗೆ ಅನಗತ್ಯ ವಿದೇಶಿ ಪ್ರಯಾಣವನ್ನು ಕೈಬಿಡಿ ಎಂದು ಏಳು ಸಲಹೆಗಳನ್ನು ನೀಡಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿ ಹೇಳಿಕೆಗೆ ದೇಶದೆಲ್ಲಡೆ ಪರ ವಿರೋಧದ ಚರ್ಚೆಯಾಗುತ್ತಿರುವ ಹೊತ್ತಲ್ಲಿ ಅದನ್ನು ಸಮರ್ಥಿಸಲು ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಇಂದಿರಾ ಗಾಂಧಿ 1967ರಲ್ಲಿ ಇದನ್ನೆ ಹೇಳಿದ್ದರು ಎಂಬ ಫೇಕ್ ನೆರೇಷನ್ ರೂಪಿಸಲು ಸುಳ್ಳು ಪೋಸ್ಟ್‌ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...