Homeಕರೋನಾ ತಲ್ಲಣಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಮೇ 2 ರಂದು ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

- Advertisement -
- Advertisement -

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ. ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ನಿರ್ದಿಷ್ಟವಾದ ವರದಿಯನ್ನೂ ಮಾಡಿಲ್ಲ ಎಂದು ಮಂಗಳವಾರ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಹೇಳಿದೆ.

ಆರೋಗ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು, ಆರೋಗ್ಯವು ರಾಜ್ಯ ಪಟ್ಟಿಯಲ್ಲಿರುವ ವಿಷಯವಾಗಿದೆ. ಆರೋಗ್ಯದ ಬಗ್ಗೆ ರಾಜ್ಯ ಸರ್ಕಾರಗಳು ಕಾಳಜಿವಹಿಸಬೇಕು ಎಂದು ಹೇಳಿದ್ದಾರೆ.

“2ನೇ ಅಲೆಯಲ್ಲಿ ಸಾವುಗಳ ಬಗ್ಗೆ ವರದಿ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ವಿವರವಾದ ಮಾರ್ಗಸೂಚಿಗಳನ್ನು ನೀಡಿತ್ತು. ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸಚಿವಾಲಯಕ್ಕೆ ಸಾವುಗಳ ಬಗ್ಗೆ ವರದಿಯನ್ನು ನೀಡಿವೆ. ಆದರೆ, ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಬಗ್ಗೆ ನಿರ್ದಿಷ್ಟ ವರದಿಯಿಲ್ಲ. ಹಾಗಾಗಿ ಆಮ್ಲಜನಕ ಕೊರತೆಯಿಂದ ಸಾವುಗಳು ಸಂಭವಿಸಿಲ್ಲ” ಎಂದು ಅವರು ಹೇಳಿದ್ದಾರೆ.

ಇದರೊಂದಿಗೆ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಬೇಡಿಕೆಯಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯ ಒಪ್ಪಿಕೊಂಡಿದೆ. ಹಾಗಿದ್ದ ಮೇಲೆ, ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಲಿಲ್ಲವೇ..? ಎಂಬ ಪ್ರಶ್ನೆಗಳು ಮತ್ತಷ್ಟು ಹುಟ್ಟಿಕೊಂಡಿವೆ.

ಇದನ್ನೂ ಓದಿ: ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ಕೊರೊನಾ ರೋಗಿಗಳ ಸಾವಿಗೆ ಆಮ್ಲಜನಕ ಕೊರತೆ ಒಂದು ಕಾರಣ ಎಂದು ಉಲ್ಲೇಖಿಸಿದ ಕೆಲವು ಆಸ್ಪತ್ರೆಗಳ ಪಟ್ಟಿ ಹೀಗಿವೆ.

ಚಾಮರಾಜನಗರ ಜಿಲ್ಲಾಸ್ಪತ್ರೆ, ಕರ್ನಾಟಕ: ಮೇ 2 ರಂದು ರಾತ್ರಿ 10.30 ರಿಂದ ನಾಲ್ಕು ಗಂಟೆಗಳ ಕಾಲ ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕರ ಸಮಿತಿಯನ್ನು ರಚಿಸಿತ್ತು. ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎ.ಎಸ್.ವೇಣುಗೋಪಾಲ್ ಗೌಡ ನೇತೃತ್ವದ ಸಮಿತಿಯು, ಆಕ್ಸಿಜನ್‌ ಕೊರತೆಯಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಪ್ರಾಥಮಿಕ ವರದಿಯಲ್ಲಿ ದೃಢಪಡಿಸಿತ್ತು.

ಬಾತ್ರಾ ಆಸ್ಪತ್ರೆ, ದೆಹಲಿ: ಆಮ್ಲಜನಕದ ಕೊರತೆಯಿಂದಾಗಿ ತಮ್ಮ ಆಸ್ಪತ್ರೆಯಲ್ಲಿ 11 ರೋಗಿಗಳು ಮತ್ತು ವೈದ್ಯರು ಸಾವನ್ನಪ್ಪಿದ್ದಾರೆ ಎಂದು ದೆಹಲಿಯ ಬಾತ್ರಾ ಆಸ್ಪತ್ರೆ ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಸ್ಪತ್ರೆಯಲ್ಲಿ ಭಾರಿ ಪ್ರಮಾಣದ ಆಮ್ಲಜನಕ ಕೊರತೆಯಿದೆ ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಂಶು ಬಂಕಟಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಜೈಪುರ ಗೋಲ್ಡನ್ ಆಸ್ಪತ್ರೆ, ದೆಹಲಿ: ಆಕ್ಸಿಜನ್ ಕೊರತೆಯಿಂದಾಗಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಕೂಡ ಏಪ್ರಿಲ್ 24 ರಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಮ್ಲಜನಕದ ಕೊರತೆಯಿಂದಾಗಿ ಸಂಭವಿಸಿದ ಸಾವುಗಳ ಬಗ್ಗೆ ತನಿಖೆ ನಡೆಸಲು ದೆಹಲಿ ಸರ್ಕಾರ ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಜೂನ್ 4 ರಂದು ವರದಿ ಮಾಡಿದೆ.

ಆದರೆ, ಸಮಿತಿಯನ್ನು ಸ್ಥಾಪಿಸಲು ಒಕ್ಕೂಟ ಸರ್ಕಾರ ಅನುಮೋದನೆ ನೀಡಲಿಲ್ಲ ಎಂದು ಸಿಸೋಡಿಯಾ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ದೆಹಲಿ ಘಟಕವು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಇದೇ ರೀತಿಯ ಸಮಿತಿಯನ್ನು ರಚಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೇಖನವೊಂದು ಉಲ್ಲೇಖಿಸಿದೆ.

ಆನಂದ್ ಆಸ್ಪತ್ರೆ ಮತ್ತು ಉತ್ತರ ಪ್ರದೇಶದ ಕೆಎಂಸಿ ಆಸ್ಪತ್ರೆ: ಏಪ್ರಿಲ್ 27 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ಕನಿಷ್ಠ ಏಳು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಮೂವರು ಆನಂದ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಉಳಿದವರು ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಯ ಅಧಿಕಾರಿಗಳು ಆಕ್ಸಿಜನ್ ಕೊರತೆಯಿಂದ ಸಂಭವಿಸಿದ ಸಾವುಗಳನ್ನು ದೃಢಪಡಿಸಿದ್ದರು. ಆದರೆ ಮೀರತ್‌ನ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಅವರು ಆಮ್ಲಜನಕದ ಕೊರತೆಯಿಂದಾಗಿ ಉಂಟಾದ ಸಾವುಗಳ ಬಗ್ಗೆ ಆಸ್ಪತ್ರೆಗಳು ಯಾವುದೇ ವರದಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ.

ನೀಲಕಂಠ ಆಸ್ಪತ್ರೆ, ಪಂಜಾಬ್: ವೈದ್ಯಕೀಯ ಆಮ್ಲಜನಕದ ಪೂರೈಕೆ ಕೊರತೆಯಿಂದಾಗಿ ಅಮೃತಸರದ ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಘಟನೆಗೆ ಆಸ್ಪತ್ರೆ ಅಧಿಕಾರಿಗಳು ಜಿಲ್ಲಾಡಳಿತವನ್ನು ಹೊಣೆಗಾರರನ್ನಾಗಿ ಮಾಡಿದ್ದರು. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಆದೇಶದ ಮೇರೆಗೆ ಇಬ್ಬರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿತ್ತು.

ರಾಜಸ್ಥಾನದ ಹೊಸ ವೈದ್ಯಕೀಯ ಕಾಲೇಜು ಆಸ್ಪತ್ರೆ: ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಜಸ್ಥಾನದ ಕೋಟಾದ ಹೊಸ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀಕ್ಷಕ ನಿಲೇಶ್ ಜೈನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಏಪ್ರಿಲ್ 21 ರಂದು ವರದಿ ಮಾಡಿದೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ಹರಿಯಾಣದ ಸೋನಿ ಬರ್ನ್ ಆಸ್ಪತ್ರೆ: ಹರಿಯಾಣದ ಹಿಸಾರ್‌ನ ಸೋನಿ ಬರ್ನ್ ಆಸ್ಪತ್ರೆಯಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಐದು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಸಾವುಗಳು ಆಕ್ಸಿಜನ್‌ ಕೊರತೆಯಿಂದಲೇ ಸಂಭವಿಸಿವೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಆಮ್ಲಜನಕದ ಪೂರೈಕೆಯ ಕೊರತೆಯ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದೇನೆ, ಆದರೆ “ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ಆರೋಪಗಳನ್ನು ನಿರಾಕರಿಸಿದ್ದರು. ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

ಆಕ್ಸಿಜನ್ ಕೊರತೆಯಿಂದ ಸಂಭವಿಸದ ಸಾವುಗಳ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ವರದಿ ಹೀಗಿದೆ.

ಆಮ್ಲಜನಕದ ಕೊರತೆ ಅಥವಾ ಆಮ್ಲಜನಕದ ದೊರೆಯದೇ ಇದ್ದಿದ್ದರಿಂದಾಗಿ ಸಂಭವಿಸಿದ ಸಾವುಗಳ ಸಂಖ್ಯೆಯ ಡೇಟಾಬೇಸ್ ಅನ್ನು ಸ್ವಯಂಸೇವಕರು, ಸಂಶೋಧಕರು, ವಕೀಲರು, ಜರ್ನಲಿಸ್ಟ್‌ಗಳು, ವಿದ್ಯಾರ್ಥಿಗಳು ಕಲೆಹಾಕಿದ್ದಾರೆ.  ಕೊನೆಯದಾಗಿ ಮೇ 27 ರಂದು ನವೀಕರಿಸಿದ ಡೇಟಾಬೇಸ್ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ದೇಶದಲ್ಲಿ 619 ಸಾವುಗಳು ದಾಖಲಾಗಿವೆ.


ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....