Homeಕರೋನಾ ತಲ್ಲಣಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಮೇ 2 ರಂದು ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

- Advertisement -
- Advertisement -

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ. ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ನಿರ್ದಿಷ್ಟವಾದ ವರದಿಯನ್ನೂ ಮಾಡಿಲ್ಲ ಎಂದು ಮಂಗಳವಾರ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಹೇಳಿದೆ.

ಆರೋಗ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರು, ಆರೋಗ್ಯವು ರಾಜ್ಯ ಪಟ್ಟಿಯಲ್ಲಿರುವ ವಿಷಯವಾಗಿದೆ. ಆರೋಗ್ಯದ ಬಗ್ಗೆ ರಾಜ್ಯ ಸರ್ಕಾರಗಳು ಕಾಳಜಿವಹಿಸಬೇಕು ಎಂದು ಹೇಳಿದ್ದಾರೆ.

“2ನೇ ಅಲೆಯಲ್ಲಿ ಸಾವುಗಳ ಬಗ್ಗೆ ವರದಿ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ವಿವರವಾದ ಮಾರ್ಗಸೂಚಿಗಳನ್ನು ನೀಡಿತ್ತು. ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸಚಿವಾಲಯಕ್ಕೆ ಸಾವುಗಳ ಬಗ್ಗೆ ವರದಿಯನ್ನು ನೀಡಿವೆ. ಆದರೆ, ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಬಗ್ಗೆ ನಿರ್ದಿಷ್ಟ ವರದಿಯಿಲ್ಲ. ಹಾಗಾಗಿ ಆಮ್ಲಜನಕ ಕೊರತೆಯಿಂದ ಸಾವುಗಳು ಸಂಭವಿಸಿಲ್ಲ” ಎಂದು ಅವರು ಹೇಳಿದ್ದಾರೆ.

ಇದರೊಂದಿಗೆ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಬೇಡಿಕೆಯಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯ ಒಪ್ಪಿಕೊಂಡಿದೆ. ಹಾಗಿದ್ದ ಮೇಲೆ, ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಲಿಲ್ಲವೇ..? ಎಂಬ ಪ್ರಶ್ನೆಗಳು ಮತ್ತಷ್ಟು ಹುಟ್ಟಿಕೊಂಡಿವೆ.

ಇದನ್ನೂ ಓದಿ: ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ಕೊರೊನಾ ರೋಗಿಗಳ ಸಾವಿಗೆ ಆಮ್ಲಜನಕ ಕೊರತೆ ಒಂದು ಕಾರಣ ಎಂದು ಉಲ್ಲೇಖಿಸಿದ ಕೆಲವು ಆಸ್ಪತ್ರೆಗಳ ಪಟ್ಟಿ ಹೀಗಿವೆ.

ಚಾಮರಾಜನಗರ ಜಿಲ್ಲಾಸ್ಪತ್ರೆ, ಕರ್ನಾಟಕ: ಮೇ 2 ರಂದು ರಾತ್ರಿ 10.30 ರಿಂದ ನಾಲ್ಕು ಗಂಟೆಗಳ ಕಾಲ ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕರ ಸಮಿತಿಯನ್ನು ರಚಿಸಿತ್ತು. ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎ.ಎಸ್.ವೇಣುಗೋಪಾಲ್ ಗೌಡ ನೇತೃತ್ವದ ಸಮಿತಿಯು, ಆಕ್ಸಿಜನ್‌ ಕೊರತೆಯಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಪ್ರಾಥಮಿಕ ವರದಿಯಲ್ಲಿ ದೃಢಪಡಿಸಿತ್ತು.

ಬಾತ್ರಾ ಆಸ್ಪತ್ರೆ, ದೆಹಲಿ: ಆಮ್ಲಜನಕದ ಕೊರತೆಯಿಂದಾಗಿ ತಮ್ಮ ಆಸ್ಪತ್ರೆಯಲ್ಲಿ 11 ರೋಗಿಗಳು ಮತ್ತು ವೈದ್ಯರು ಸಾವನ್ನಪ್ಪಿದ್ದಾರೆ ಎಂದು ದೆಹಲಿಯ ಬಾತ್ರಾ ಆಸ್ಪತ್ರೆ ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಸ್ಪತ್ರೆಯಲ್ಲಿ ಭಾರಿ ಪ್ರಮಾಣದ ಆಮ್ಲಜನಕ ಕೊರತೆಯಿದೆ ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಂಶು ಬಂಕಟಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಜೈಪುರ ಗೋಲ್ಡನ್ ಆಸ್ಪತ್ರೆ, ದೆಹಲಿ: ಆಕ್ಸಿಜನ್ ಕೊರತೆಯಿಂದಾಗಿ 25 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಕೂಡ ಏಪ್ರಿಲ್ 24 ರಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆಮ್ಲಜನಕದ ಕೊರತೆಯಿಂದಾಗಿ ಸಂಭವಿಸಿದ ಸಾವುಗಳ ಬಗ್ಗೆ ತನಿಖೆ ನಡೆಸಲು ದೆಹಲಿ ಸರ್ಕಾರ ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಜೂನ್ 4 ರಂದು ವರದಿ ಮಾಡಿದೆ.

ಆದರೆ, ಸಮಿತಿಯನ್ನು ಸ್ಥಾಪಿಸಲು ಒಕ್ಕೂಟ ಸರ್ಕಾರ ಅನುಮೋದನೆ ನೀಡಲಿಲ್ಲ ಎಂದು ಸಿಸೋಡಿಯಾ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ದೆಹಲಿ ಘಟಕವು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಇದೇ ರೀತಿಯ ಸಮಿತಿಯನ್ನು ರಚಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೇಖನವೊಂದು ಉಲ್ಲೇಖಿಸಿದೆ.

ಆನಂದ್ ಆಸ್ಪತ್ರೆ ಮತ್ತು ಉತ್ತರ ಪ್ರದೇಶದ ಕೆಎಂಸಿ ಆಸ್ಪತ್ರೆ: ಏಪ್ರಿಲ್ 27 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ಕನಿಷ್ಠ ಏಳು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಮೂವರು ಆನಂದ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಉಳಿದವರು ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಯ ಅಧಿಕಾರಿಗಳು ಆಕ್ಸಿಜನ್ ಕೊರತೆಯಿಂದ ಸಂಭವಿಸಿದ ಸಾವುಗಳನ್ನು ದೃಢಪಡಿಸಿದ್ದರು. ಆದರೆ ಮೀರತ್‌ನ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಅವರು ಆಮ್ಲಜನಕದ ಕೊರತೆಯಿಂದಾಗಿ ಉಂಟಾದ ಸಾವುಗಳ ಬಗ್ಗೆ ಆಸ್ಪತ್ರೆಗಳು ಯಾವುದೇ ವರದಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ.

ನೀಲಕಂಠ ಆಸ್ಪತ್ರೆ, ಪಂಜಾಬ್: ವೈದ್ಯಕೀಯ ಆಮ್ಲಜನಕದ ಪೂರೈಕೆ ಕೊರತೆಯಿಂದಾಗಿ ಅಮೃತಸರದ ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಘಟನೆಗೆ ಆಸ್ಪತ್ರೆ ಅಧಿಕಾರಿಗಳು ಜಿಲ್ಲಾಡಳಿತವನ್ನು ಹೊಣೆಗಾರರನ್ನಾಗಿ ಮಾಡಿದ್ದರು. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಆದೇಶದ ಮೇರೆಗೆ ಇಬ್ಬರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿತ್ತು.

ರಾಜಸ್ಥಾನದ ಹೊಸ ವೈದ್ಯಕೀಯ ಕಾಲೇಜು ಆಸ್ಪತ್ರೆ: ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಜಸ್ಥಾನದ ಕೋಟಾದ ಹೊಸ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀಕ್ಷಕ ನಿಲೇಶ್ ಜೈನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಏಪ್ರಿಲ್ 21 ರಂದು ವರದಿ ಮಾಡಿದೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ಹರಿಯಾಣದ ಸೋನಿ ಬರ್ನ್ ಆಸ್ಪತ್ರೆ: ಹರಿಯಾಣದ ಹಿಸಾರ್‌ನ ಸೋನಿ ಬರ್ನ್ ಆಸ್ಪತ್ರೆಯಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಐದು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಸಾವುಗಳು ಆಕ್ಸಿಜನ್‌ ಕೊರತೆಯಿಂದಲೇ ಸಂಭವಿಸಿವೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಆಮ್ಲಜನಕದ ಪೂರೈಕೆಯ ಕೊರತೆಯ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದೇನೆ, ಆದರೆ “ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ಆರೋಪಗಳನ್ನು ನಿರಾಕರಿಸಿದ್ದರು. ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.

ಆಕ್ಸಿಜನ್ ಕೊರತೆಯಿಂದ ಸಂಭವಿಸದ ಸಾವುಗಳ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ವರದಿ ಹೀಗಿದೆ.

ಆಮ್ಲಜನಕದ ಕೊರತೆ ಅಥವಾ ಆಮ್ಲಜನಕದ ದೊರೆಯದೇ ಇದ್ದಿದ್ದರಿಂದಾಗಿ ಸಂಭವಿಸಿದ ಸಾವುಗಳ ಸಂಖ್ಯೆಯ ಡೇಟಾಬೇಸ್ ಅನ್ನು ಸ್ವಯಂಸೇವಕರು, ಸಂಶೋಧಕರು, ವಕೀಲರು, ಜರ್ನಲಿಸ್ಟ್‌ಗಳು, ವಿದ್ಯಾರ್ಥಿಗಳು ಕಲೆಹಾಕಿದ್ದಾರೆ.  ಕೊನೆಯದಾಗಿ ಮೇ 27 ರಂದು ನವೀಕರಿಸಿದ ಡೇಟಾಬೇಸ್ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ದೇಶದಲ್ಲಿ 619 ಸಾವುಗಳು ದಾಖಲಾಗಿವೆ.


ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...