Homeಕರ್ನಾಟಕ‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ....

‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ

ಹೀಗೆ ಮಾಡುವುದಾದರೆ ಹೊರಗಿನ ಎಲ್ಲಾ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು

- Advertisement -
- Advertisement -

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಗದಗದ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿರುವ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ ಅವರು ವಿರೋಧಿಸಿದ್ದು, “ಅಮಾನತು ರೀತಿಯ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಗುರುವಾರ ಮಾತನಾಡಿದ ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ,“ಸರ್ವ ಧರ್ಮ ಸಮನ್ವಯತೆ ಎಂಬಂತೆ ಮಕ್ಕಳು ಎಲ್ಲರ ಬಗ್ಗೆಯೂ ತಿಳಿದುಕೊಳ್ಳುವುದರಲ್ಲಿ ತಪ್ಪೇನಿಲ್ಲ. ಆದರೆ ಈಗ ಅದನ್ನು ವ್ಯಾಖ್ಯಾನಿಸುವ ರೀತಿಯಲ್ಲಿ ತಪ್ಪುಗಳಾಗುತ್ತಿವೆ. ಎಲ್ಲವನ್ನೂ ತಮ್ಮದೆ ದೃಷ್ಟಿಕೋನದಿಂದ ನೋಡುತ್ತಿರುವುದರಿಂದ ಎಲ್ಲವೂ ತಪ್ಪಾಗಿ ಕಾಣುತ್ತದೆ. ಶಿಕ್ಷಣದ ಎಲ್ಲವನ್ನೂ ಕೋಮುವಾದೀಕರಣ ಮಾಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಧರ್ಮವನ್ನು ಪ್ರಚಾರ ಮಾಡುವ ಯಾವುದೆ ಆಲೋಚನೆ ನನಗೆ ಇಲ್ಲ ಎಂದು ಮುಖ್ಯೋಪಾಧ್ಯಾಯರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಒಂದು ಪುಸ್ತಕ ಕೊಟ್ಟ ಕೂಡಲೇ ಇಸ್ಲಾಂ ಪ್ರಚಾರ ಆಗುತ್ತದೆಯೆ?” ಎಂದು ಅವರು ಕೇಳಿದರು.

ಇದನ್ನೂ ಓದಿ: ಗದಗ: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಮುಖ್ಯ ಶಿಕ್ಷಕ ಅಮಾನತು

“ಮುಂದಕ್ಕೆ ಶಾಲೆಯಲ್ಲಿ ಭಗವದ್ಗೀತೆ ಕೊಟ್ಟರೆ ಅದರ ಅರ್ಥ ಹಿಂದೂ ಧರ್ಮಕ್ಕೆ ಮಕ್ಕಳನ್ನು ಮತಾಂತರ ಮಾಡುತ್ತಿದ್ದೇವೆ ಎಂದೇ? ಲಕ್ಷಾಂತರ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಕಾನ್ವೆಂಟ್‌ಗಳಲ್ಲಿ ಕಲಿಯುತ್ತಾ ಇದ್ದಾರೆ. ಅವರೆಲ್ಲರೂ ಮತಾಂತರವಾದರೆ?” ಎಂದು ಅವರು ಪ್ರಶ್ನಿಸಿದರು.

“ಇದು ಬಹಳ ವ್ಯವಸ್ಥಿತವಾಗಿ ಒಂದು ಧರ್ಮದ ಶಿಕ್ಷಕರನ್ನು ಗುರಿ ಮಾಡುತ್ತಿರುವ ತಂತ್ರ. ಅಲ್ಲದೆ ಈ ಪೊಲೀಸ್‌ಗಿರಿ ಬಹಳ ಅಪಾಯಕಾರಿಯಾಗಿದ್ದು, ಭಯದ ವಾತಾವರಣ ನಿರ್ಮಾಣ ಮಾಡುವ ಸ್ಥಿತಿ ಇದು. ಇದರ ಪರಿಣಾಮ ನಮ್ಮ ಮಕ್ಕಳು ಅನುಭವಿಸಬೇಕಾಗುತ್ತದೆ. ಶಿಕ್ಷಣದ ವಿಚಾರಗಳಲ್ಲಿ ಸರಿ ತಪ್ಪುಗಳನ್ನು ಶಾಲೆಗೆ ಬಿಟ್ಟು ಬಿಡಬೇಕು” ಎಂದು ಅವರು ಹೇಳಿದರು.

“ಅಕಸ್ಮಾತ್ ಶಿಕ್ಷಕ ಮಾಡಿದ್ದು ತಪ್ಪು ಎಂದಾದರೂ, ಅವರನ್ನು ಅಮಾನತು ರೀತಿ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ನಿರಂಜನಾರಾಧ್ಯ ಅವರು ತಿಳಿದರು.

ಇದನ್ನೂ ಓದಿ: ಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ತರಗತಿ: ಶಿಕ್ಷಣ ಸಚಿವ ಬಿಸಿ ನಾಗೇಶ್‌

“ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಈ ಹಿಂದಿನಿಂದಲೂ ಬೇರೆ ಬೇರೆ ಸಂಸ್ಥೆಗಳಿಂದ ಪುಸ್ತಕಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳನ್ನು ಮಾಡಿಸಿ ಅವರ ಸರ್ವಾಂಗೀಣ ಅಭಿವೃದ್ಧಿ ಆಗಲಿ ಎಂದು ನಾವು ಹೇಳುತ್ತೇವೆ. ಎಷ್ಟೊ ಸಂದರ್ಭದಲ್ಲಿ ಎಷ್ಟೊ ಹಿಂದೂ ಸಂಘಟನೆಗಳು ಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ, ಅವರಿಗೆ ಬಹುಮಾನ ನೀಡಿವೆ ಅಲ್ಲವೆ? ಹೀಗಿರುವಾಗ ಪ್ರವಾದಿ ಬಗ್ಗೆ ಪ್ರಬಂಧ ಬರೆದಿದ್ದನ್ನ ಮಾತ್ರ ಪ್ರತ್ಯೇಕವಾಗಿ ನೋಡುವಂತಹ ಅವಶ್ಯಕತೆ ಇರಲಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಒಂದು ಧರ್ಮಿಯರನ್ನು ನಿರ್ಧಿಷ್ಟವಾಗಿ ಗುರಿ ಮಾಡಿರುವುದರಿಂದ ಇದು ತಪ್ಪು ಎಂದು ಕಾಣುತ್ತದೆ. ಶಿಕ್ಷಣದಲ್ಲಿ ಈ ತರದ ಹಸ್ತಕ್ಷೇಪಗಳು ಸರಿಯಲ್ಲ. ಹೀಗೆ ಮಾಡುವುದಾದರೆ ಎಲ್ಲಾ ಹೊರಗಿನ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ” ಎಂದು ಡಾ.ವಿ.ಪಿ. ನಿರಂಜನಾರಾಧ್ಯ ಅವರು ಹೇಳಿದರು.

ಇಸ್ಲಾಂನ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗದಗ ಜಿಲ್ಲೆಯ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ, ಬಲಪಂಥೀಯ ಸಂಘಟನೆಯಾದ ಶ್ರೀರಾಮಸೇನೆಯ ಕಾರ್ಯಕರ್ತರು 172 ವಿದ್ಯಾರ್ಥಿಗಳಿರುವ ಶಾಲೆಗೆ ಅಕ್ರಮವಾಗಿ ನುಗ್ಗಿ ಮುಖ್ಯೋಪಾಧ್ಯಾಯ ಅಬ್ದುಲ್ ಮುನಾಫರ್ ಅವರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಖ್ಯೋಪಾಧ್ಯರನ್ನು ಅಮಾನತುಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ವಿದ್ಯಾರ್ಥಿಗಳ ಕೈಬರಹವನ್ನು ಸುಧಾರಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದೆ. ಪ್ರತಿ ತಿಂಗಳು ಕನಿಷ್ಠ ಒಂದೆರಡು ಸ್ಪರ್ಧೆಗಳನ್ನು ಶಾಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಈ ಹಿಂದೆಯೂ ಕನಕದಾಸ, ಪುರಂದರ ದಾಸ ಮತ್ತಿತರ ವ್ಯಕ್ತಿಗಳ ಕುರಿತು ಪ್ರಬಂಧ ಸ್ಪರ್ಧೆಗಳನ್ನು ನಡೆಸಿದ್ದೇವೆ. ಇಸ್ಲಾಂ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದು ಸುಳ್ಳು ಆರೋಪ” ಎಂದು ಅಬ್ದುಲ್ ಅವರು ತಿಳಿಸಿದ್ದಾರೆ.

“ಶಿಕ್ಷಕ ವೃತ್ತಿಯಲ್ಲಿ 28 ವರ್ಷಗಳ ಅನುಭವ ಹೊಂದಿರುವ ನಾನು ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿಂದೂ ವ್ಯಕ್ತಿಗಳು ಮತ್ತು ಇತರರಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಎಲ್ಲ ದಾಖಲೆಗಳನ್ನು ನಾನು ನಿರ್ವಹಿಸಿದ್ದೇನೆ. ನನ್ನೊಂದಿಗೆ ಕೆಲಸ ಮಾಡುವ ಏಳು ಶಿಕ್ಷಕರಿದ್ದು, ಅದೃಷ್ಟವಶಾತ್ ಅವರು ನನ್ನ ರಕ್ಷಣೆಗೆ ಬಂದರು” ಎಂದು ದಾಳಿಗೆ ಒಳಗಾಗಿರುವ ಅಬ್ದುಲ್ ಮುನಾಫರ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...