Homeಕರ್ನಾಟಕ‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ....

‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ

ಹೀಗೆ ಮಾಡುವುದಾದರೆ ಹೊರಗಿನ ಎಲ್ಲಾ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು

- Advertisement -
- Advertisement -

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಗದಗದ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿರುವ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ ಅವರು ವಿರೋಧಿಸಿದ್ದು, “ಅಮಾನತು ರೀತಿಯ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಗುರುವಾರ ಮಾತನಾಡಿದ ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ,“ಸರ್ವ ಧರ್ಮ ಸಮನ್ವಯತೆ ಎಂಬಂತೆ ಮಕ್ಕಳು ಎಲ್ಲರ ಬಗ್ಗೆಯೂ ತಿಳಿದುಕೊಳ್ಳುವುದರಲ್ಲಿ ತಪ್ಪೇನಿಲ್ಲ. ಆದರೆ ಈಗ ಅದನ್ನು ವ್ಯಾಖ್ಯಾನಿಸುವ ರೀತಿಯಲ್ಲಿ ತಪ್ಪುಗಳಾಗುತ್ತಿವೆ. ಎಲ್ಲವನ್ನೂ ತಮ್ಮದೆ ದೃಷ್ಟಿಕೋನದಿಂದ ನೋಡುತ್ತಿರುವುದರಿಂದ ಎಲ್ಲವೂ ತಪ್ಪಾಗಿ ಕಾಣುತ್ತದೆ. ಶಿಕ್ಷಣದ ಎಲ್ಲವನ್ನೂ ಕೋಮುವಾದೀಕರಣ ಮಾಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಧರ್ಮವನ್ನು ಪ್ರಚಾರ ಮಾಡುವ ಯಾವುದೆ ಆಲೋಚನೆ ನನಗೆ ಇಲ್ಲ ಎಂದು ಮುಖ್ಯೋಪಾಧ್ಯಾಯರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಒಂದು ಪುಸ್ತಕ ಕೊಟ್ಟ ಕೂಡಲೇ ಇಸ್ಲಾಂ ಪ್ರಚಾರ ಆಗುತ್ತದೆಯೆ?” ಎಂದು ಅವರು ಕೇಳಿದರು.

ಇದನ್ನೂ ಓದಿ: ಗದಗ: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಮುಖ್ಯ ಶಿಕ್ಷಕ ಅಮಾನತು

“ಮುಂದಕ್ಕೆ ಶಾಲೆಯಲ್ಲಿ ಭಗವದ್ಗೀತೆ ಕೊಟ್ಟರೆ ಅದರ ಅರ್ಥ ಹಿಂದೂ ಧರ್ಮಕ್ಕೆ ಮಕ್ಕಳನ್ನು ಮತಾಂತರ ಮಾಡುತ್ತಿದ್ದೇವೆ ಎಂದೇ? ಲಕ್ಷಾಂತರ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಕಾನ್ವೆಂಟ್‌ಗಳಲ್ಲಿ ಕಲಿಯುತ್ತಾ ಇದ್ದಾರೆ. ಅವರೆಲ್ಲರೂ ಮತಾಂತರವಾದರೆ?” ಎಂದು ಅವರು ಪ್ರಶ್ನಿಸಿದರು.

“ಇದು ಬಹಳ ವ್ಯವಸ್ಥಿತವಾಗಿ ಒಂದು ಧರ್ಮದ ಶಿಕ್ಷಕರನ್ನು ಗುರಿ ಮಾಡುತ್ತಿರುವ ತಂತ್ರ. ಅಲ್ಲದೆ ಈ ಪೊಲೀಸ್‌ಗಿರಿ ಬಹಳ ಅಪಾಯಕಾರಿಯಾಗಿದ್ದು, ಭಯದ ವಾತಾವರಣ ನಿರ್ಮಾಣ ಮಾಡುವ ಸ್ಥಿತಿ ಇದು. ಇದರ ಪರಿಣಾಮ ನಮ್ಮ ಮಕ್ಕಳು ಅನುಭವಿಸಬೇಕಾಗುತ್ತದೆ. ಶಿಕ್ಷಣದ ವಿಚಾರಗಳಲ್ಲಿ ಸರಿ ತಪ್ಪುಗಳನ್ನು ಶಾಲೆಗೆ ಬಿಟ್ಟು ಬಿಡಬೇಕು” ಎಂದು ಅವರು ಹೇಳಿದರು.

“ಅಕಸ್ಮಾತ್ ಶಿಕ್ಷಕ ಮಾಡಿದ್ದು ತಪ್ಪು ಎಂದಾದರೂ, ಅವರನ್ನು ಅಮಾನತು ರೀತಿ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ನಿರಂಜನಾರಾಧ್ಯ ಅವರು ತಿಳಿದರು.

ಇದನ್ನೂ ಓದಿ: ಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ತರಗತಿ: ಶಿಕ್ಷಣ ಸಚಿವ ಬಿಸಿ ನಾಗೇಶ್‌

“ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಈ ಹಿಂದಿನಿಂದಲೂ ಬೇರೆ ಬೇರೆ ಸಂಸ್ಥೆಗಳಿಂದ ಪುಸ್ತಕಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳನ್ನು ಮಾಡಿಸಿ ಅವರ ಸರ್ವಾಂಗೀಣ ಅಭಿವೃದ್ಧಿ ಆಗಲಿ ಎಂದು ನಾವು ಹೇಳುತ್ತೇವೆ. ಎಷ್ಟೊ ಸಂದರ್ಭದಲ್ಲಿ ಎಷ್ಟೊ ಹಿಂದೂ ಸಂಘಟನೆಗಳು ಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ, ಅವರಿಗೆ ಬಹುಮಾನ ನೀಡಿವೆ ಅಲ್ಲವೆ? ಹೀಗಿರುವಾಗ ಪ್ರವಾದಿ ಬಗ್ಗೆ ಪ್ರಬಂಧ ಬರೆದಿದ್ದನ್ನ ಮಾತ್ರ ಪ್ರತ್ಯೇಕವಾಗಿ ನೋಡುವಂತಹ ಅವಶ್ಯಕತೆ ಇರಲಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಒಂದು ಧರ್ಮಿಯರನ್ನು ನಿರ್ಧಿಷ್ಟವಾಗಿ ಗುರಿ ಮಾಡಿರುವುದರಿಂದ ಇದು ತಪ್ಪು ಎಂದು ಕಾಣುತ್ತದೆ. ಶಿಕ್ಷಣದಲ್ಲಿ ಈ ತರದ ಹಸ್ತಕ್ಷೇಪಗಳು ಸರಿಯಲ್ಲ. ಹೀಗೆ ಮಾಡುವುದಾದರೆ ಎಲ್ಲಾ ಹೊರಗಿನ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ” ಎಂದು ಡಾ.ವಿ.ಪಿ. ನಿರಂಜನಾರಾಧ್ಯ ಅವರು ಹೇಳಿದರು.

ಇಸ್ಲಾಂನ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗದಗ ಜಿಲ್ಲೆಯ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ, ಬಲಪಂಥೀಯ ಸಂಘಟನೆಯಾದ ಶ್ರೀರಾಮಸೇನೆಯ ಕಾರ್ಯಕರ್ತರು 172 ವಿದ್ಯಾರ್ಥಿಗಳಿರುವ ಶಾಲೆಗೆ ಅಕ್ರಮವಾಗಿ ನುಗ್ಗಿ ಮುಖ್ಯೋಪಾಧ್ಯಾಯ ಅಬ್ದುಲ್ ಮುನಾಫರ್ ಅವರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಖ್ಯೋಪಾಧ್ಯರನ್ನು ಅಮಾನತುಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ವಿದ್ಯಾರ್ಥಿಗಳ ಕೈಬರಹವನ್ನು ಸುಧಾರಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದೆ. ಪ್ರತಿ ತಿಂಗಳು ಕನಿಷ್ಠ ಒಂದೆರಡು ಸ್ಪರ್ಧೆಗಳನ್ನು ಶಾಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಈ ಹಿಂದೆಯೂ ಕನಕದಾಸ, ಪುರಂದರ ದಾಸ ಮತ್ತಿತರ ವ್ಯಕ್ತಿಗಳ ಕುರಿತು ಪ್ರಬಂಧ ಸ್ಪರ್ಧೆಗಳನ್ನು ನಡೆಸಿದ್ದೇವೆ. ಇಸ್ಲಾಂ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದು ಸುಳ್ಳು ಆರೋಪ” ಎಂದು ಅಬ್ದುಲ್ ಅವರು ತಿಳಿಸಿದ್ದಾರೆ.

“ಶಿಕ್ಷಕ ವೃತ್ತಿಯಲ್ಲಿ 28 ವರ್ಷಗಳ ಅನುಭವ ಹೊಂದಿರುವ ನಾನು ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿಂದೂ ವ್ಯಕ್ತಿಗಳು ಮತ್ತು ಇತರರಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಎಲ್ಲ ದಾಖಲೆಗಳನ್ನು ನಾನು ನಿರ್ವಹಿಸಿದ್ದೇನೆ. ನನ್ನೊಂದಿಗೆ ಕೆಲಸ ಮಾಡುವ ಏಳು ಶಿಕ್ಷಕರಿದ್ದು, ಅದೃಷ್ಟವಶಾತ್ ಅವರು ನನ್ನ ರಕ್ಷಣೆಗೆ ಬಂದರು” ಎಂದು ದಾಳಿಗೆ ಒಳಗಾಗಿರುವ ಅಬ್ದುಲ್ ಮುನಾಫರ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...