Homeಕರ್ನಾಟಕ‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ....

‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ

ಹೀಗೆ ಮಾಡುವುದಾದರೆ ಹೊರಗಿನ ಎಲ್ಲಾ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು

- Advertisement -
- Advertisement -

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಗದಗದ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿರುವ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ ಅವರು ವಿರೋಧಿಸಿದ್ದು, “ಅಮಾನತು ರೀತಿಯ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಗುರುವಾರ ಮಾತನಾಡಿದ ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ,“ಸರ್ವ ಧರ್ಮ ಸಮನ್ವಯತೆ ಎಂಬಂತೆ ಮಕ್ಕಳು ಎಲ್ಲರ ಬಗ್ಗೆಯೂ ತಿಳಿದುಕೊಳ್ಳುವುದರಲ್ಲಿ ತಪ್ಪೇನಿಲ್ಲ. ಆದರೆ ಈಗ ಅದನ್ನು ವ್ಯಾಖ್ಯಾನಿಸುವ ರೀತಿಯಲ್ಲಿ ತಪ್ಪುಗಳಾಗುತ್ತಿವೆ. ಎಲ್ಲವನ್ನೂ ತಮ್ಮದೆ ದೃಷ್ಟಿಕೋನದಿಂದ ನೋಡುತ್ತಿರುವುದರಿಂದ ಎಲ್ಲವೂ ತಪ್ಪಾಗಿ ಕಾಣುತ್ತದೆ. ಶಿಕ್ಷಣದ ಎಲ್ಲವನ್ನೂ ಕೋಮುವಾದೀಕರಣ ಮಾಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಧರ್ಮವನ್ನು ಪ್ರಚಾರ ಮಾಡುವ ಯಾವುದೆ ಆಲೋಚನೆ ನನಗೆ ಇಲ್ಲ ಎಂದು ಮುಖ್ಯೋಪಾಧ್ಯಾಯರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಒಂದು ಪುಸ್ತಕ ಕೊಟ್ಟ ಕೂಡಲೇ ಇಸ್ಲಾಂ ಪ್ರಚಾರ ಆಗುತ್ತದೆಯೆ?” ಎಂದು ಅವರು ಕೇಳಿದರು.

ಇದನ್ನೂ ಓದಿ: ಗದಗ: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಮುಖ್ಯ ಶಿಕ್ಷಕ ಅಮಾನತು

“ಮುಂದಕ್ಕೆ ಶಾಲೆಯಲ್ಲಿ ಭಗವದ್ಗೀತೆ ಕೊಟ್ಟರೆ ಅದರ ಅರ್ಥ ಹಿಂದೂ ಧರ್ಮಕ್ಕೆ ಮಕ್ಕಳನ್ನು ಮತಾಂತರ ಮಾಡುತ್ತಿದ್ದೇವೆ ಎಂದೇ? ಲಕ್ಷಾಂತರ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಕಾನ್ವೆಂಟ್‌ಗಳಲ್ಲಿ ಕಲಿಯುತ್ತಾ ಇದ್ದಾರೆ. ಅವರೆಲ್ಲರೂ ಮತಾಂತರವಾದರೆ?” ಎಂದು ಅವರು ಪ್ರಶ್ನಿಸಿದರು.

“ಇದು ಬಹಳ ವ್ಯವಸ್ಥಿತವಾಗಿ ಒಂದು ಧರ್ಮದ ಶಿಕ್ಷಕರನ್ನು ಗುರಿ ಮಾಡುತ್ತಿರುವ ತಂತ್ರ. ಅಲ್ಲದೆ ಈ ಪೊಲೀಸ್‌ಗಿರಿ ಬಹಳ ಅಪಾಯಕಾರಿಯಾಗಿದ್ದು, ಭಯದ ವಾತಾವರಣ ನಿರ್ಮಾಣ ಮಾಡುವ ಸ್ಥಿತಿ ಇದು. ಇದರ ಪರಿಣಾಮ ನಮ್ಮ ಮಕ್ಕಳು ಅನುಭವಿಸಬೇಕಾಗುತ್ತದೆ. ಶಿಕ್ಷಣದ ವಿಚಾರಗಳಲ್ಲಿ ಸರಿ ತಪ್ಪುಗಳನ್ನು ಶಾಲೆಗೆ ಬಿಟ್ಟು ಬಿಡಬೇಕು” ಎಂದು ಅವರು ಹೇಳಿದರು.

“ಅಕಸ್ಮಾತ್ ಶಿಕ್ಷಕ ಮಾಡಿದ್ದು ತಪ್ಪು ಎಂದಾದರೂ, ಅವರನ್ನು ಅಮಾನತು ರೀತಿ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ನಿರಂಜನಾರಾಧ್ಯ ಅವರು ತಿಳಿದರು.

ಇದನ್ನೂ ಓದಿ: ಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ತರಗತಿ: ಶಿಕ್ಷಣ ಸಚಿವ ಬಿಸಿ ನಾಗೇಶ್‌

“ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಈ ಹಿಂದಿನಿಂದಲೂ ಬೇರೆ ಬೇರೆ ಸಂಸ್ಥೆಗಳಿಂದ ಪುಸ್ತಕಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳನ್ನು ಮಾಡಿಸಿ ಅವರ ಸರ್ವಾಂಗೀಣ ಅಭಿವೃದ್ಧಿ ಆಗಲಿ ಎಂದು ನಾವು ಹೇಳುತ್ತೇವೆ. ಎಷ್ಟೊ ಸಂದರ್ಭದಲ್ಲಿ ಎಷ್ಟೊ ಹಿಂದೂ ಸಂಘಟನೆಗಳು ಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ, ಅವರಿಗೆ ಬಹುಮಾನ ನೀಡಿವೆ ಅಲ್ಲವೆ? ಹೀಗಿರುವಾಗ ಪ್ರವಾದಿ ಬಗ್ಗೆ ಪ್ರಬಂಧ ಬರೆದಿದ್ದನ್ನ ಮಾತ್ರ ಪ್ರತ್ಯೇಕವಾಗಿ ನೋಡುವಂತಹ ಅವಶ್ಯಕತೆ ಇರಲಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಒಂದು ಧರ್ಮಿಯರನ್ನು ನಿರ್ಧಿಷ್ಟವಾಗಿ ಗುರಿ ಮಾಡಿರುವುದರಿಂದ ಇದು ತಪ್ಪು ಎಂದು ಕಾಣುತ್ತದೆ. ಶಿಕ್ಷಣದಲ್ಲಿ ಈ ತರದ ಹಸ್ತಕ್ಷೇಪಗಳು ಸರಿಯಲ್ಲ. ಹೀಗೆ ಮಾಡುವುದಾದರೆ ಎಲ್ಲಾ ಹೊರಗಿನ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ” ಎಂದು ಡಾ.ವಿ.ಪಿ. ನಿರಂಜನಾರಾಧ್ಯ ಅವರು ಹೇಳಿದರು.

ಇಸ್ಲಾಂನ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗದಗ ಜಿಲ್ಲೆಯ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ, ಬಲಪಂಥೀಯ ಸಂಘಟನೆಯಾದ ಶ್ರೀರಾಮಸೇನೆಯ ಕಾರ್ಯಕರ್ತರು 172 ವಿದ್ಯಾರ್ಥಿಗಳಿರುವ ಶಾಲೆಗೆ ಅಕ್ರಮವಾಗಿ ನುಗ್ಗಿ ಮುಖ್ಯೋಪಾಧ್ಯಾಯ ಅಬ್ದುಲ್ ಮುನಾಫರ್ ಅವರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಖ್ಯೋಪಾಧ್ಯರನ್ನು ಅಮಾನತುಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ವಿದ್ಯಾರ್ಥಿಗಳ ಕೈಬರಹವನ್ನು ಸುಧಾರಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದೆ. ಪ್ರತಿ ತಿಂಗಳು ಕನಿಷ್ಠ ಒಂದೆರಡು ಸ್ಪರ್ಧೆಗಳನ್ನು ಶಾಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಈ ಹಿಂದೆಯೂ ಕನಕದಾಸ, ಪುರಂದರ ದಾಸ ಮತ್ತಿತರ ವ್ಯಕ್ತಿಗಳ ಕುರಿತು ಪ್ರಬಂಧ ಸ್ಪರ್ಧೆಗಳನ್ನು ನಡೆಸಿದ್ದೇವೆ. ಇಸ್ಲಾಂ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದು ಸುಳ್ಳು ಆರೋಪ” ಎಂದು ಅಬ್ದುಲ್ ಅವರು ತಿಳಿಸಿದ್ದಾರೆ.

“ಶಿಕ್ಷಕ ವೃತ್ತಿಯಲ್ಲಿ 28 ವರ್ಷಗಳ ಅನುಭವ ಹೊಂದಿರುವ ನಾನು ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿಂದೂ ವ್ಯಕ್ತಿಗಳು ಮತ್ತು ಇತರರಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಎಲ್ಲ ದಾಖಲೆಗಳನ್ನು ನಾನು ನಿರ್ವಹಿಸಿದ್ದೇನೆ. ನನ್ನೊಂದಿಗೆ ಕೆಲಸ ಮಾಡುವ ಏಳು ಶಿಕ್ಷಕರಿದ್ದು, ಅದೃಷ್ಟವಶಾತ್ ಅವರು ನನ್ನ ರಕ್ಷಣೆಗೆ ಬಂದರು” ಎಂದು ದಾಳಿಗೆ ಒಳಗಾಗಿರುವ ಅಬ್ದುಲ್ ಮುನಾಫರ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...