Homeಮುಖಪುಟಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ...ಪತ್ನಿ ಗೀತಾಂಜಲಿ ಹೇಳಿದ್ದೇನು?

ಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ…ಪತ್ನಿ ಗೀತಾಂಜಲಿ ಹೇಳಿದ್ದೇನು?

- Advertisement -
- Advertisement -

ಜೈಲಿನಲ್ಲಿರುವ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ‘ಪಾಕಿಸ್ತಾನದೊಂದಿಗೆ ಸಂಪರ್ಕ’ ಇದೆ, ‘ಆರ್ಥಿಕ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ’ ಎಂಬ ಆರೋಪಗಳನ್ನು ಅವರ ಪತ್ನಿ ಗೀತಾಂಜಲಿ ಆಂಗ್ಮೋ ತಳ್ಳಿ ಹಾಕಿದ್ದಾರೆ. ವಾಂಗ್ಚುಕ್ ಲೇಹ್‌ನಲ್ಲಿ ಹಿಂಸಾಚಾರ ಪ್ರಚೋದಿಸಿದ್ದಾರೆ ಎಂಬ ಆರೋಪ ಸುಳ್ಳು ಎಂದಿದ್ದಾರೆ.

ವಾಂಗ್ಚುಕ್ ಸಾಧ್ಯವಾದಷ್ಟು ಗಾಂಧಿ ಹಾದಿಯಲ್ಲಿ ಪ್ರತಿಭಟಿಸಿದ್ದಾರೆ. ಸೆಪ್ಟೆಂಬರ್ 24ರಂದು ಪರಿಸ್ಥಿತಿ ಉಲ್ಬಣಗೊಂಡಿದ್ದು ನನ್ನ ಪತಿಯಿಂದ ಅಲ್ಲ, ಸಿಆರ್‌ಪಿಎಫ್‌ನ ಕ್ರಮಗಳಿಂದಾಗಿ ಎಂದು ಆಂಗ್ಮೋ ಹೇಳಿದ್ದಾರೆ.

ವಾಂಗ್ಚುಕ್ ಅವರನ್ನು ಬಂಧಿಸಿದ್ದು ಏಕೆ?

ಲಡಾಖ್‌ನ ಹಕ್ಕುಗಳಿಗಾಗಿ ಕಳೆದ ಐದು ವರ್ಷಗಳಿಂದ ಸತತ ಹೋರಾಟ ನಡೆಸಿಕೊಂಡು ಬರುತಿದ್ದ ವಾಂಗ್ಚುಕ್ ಅವರನ್ನು ಶುಕ್ರವಾರ (ಸೆ.26) ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು, ಸಂವಿಧಾನದ ಆರನೇ ಪರಿಚ್ಛೇಧದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ನಡುವೆ ಸೆಪ್ಟೆಂಬರ್ 24ರಂದು ಯುವಜನರ ಗುಂಪೊಂದು ಲೇಹ್‌ನಲ್ಲಿ ಹಠಾತ್ ಬೀದಿಗಿಳಿದಿತ್ತು. ಇದರಿಂದ ಹೋರಾಟ ಹಿಂಸಾತ್ಮಕ ರೂಪ ಪಡೆದಿತ್ತು. ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡು, ಸುಮಾರು 90 ಜನರು ಗಾಯಗೊಂಡಿದ್ದರು.

ಯುವಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಲು ಪ್ರಚೋದಿಸಿದ್ದು ಸೋನಮ್ ವಾಂಗ್ಚುಕ್ ಎಂದು ಆರೋಪಿಸಿ ಅವರನ್ನು ಸೆಪ್ಟೆಂಬರ್ 26ರಂದು ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ಲಡಾಖ್‌ನಿಂದ ಸ್ಥಳಾಂತರಿಸಲಾಗಿದ್ದು, ರಾಜಸ್ಥಾನದ ಜೋಧ್‌ಪುರದ ಜೈಲಿನಲ್ಲಿ ಇರಿಸಲಾಗಿದೆ.

ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಲರ್ನಿಂಗ್ (ಹೆಚ್‌ಐಎಎಲ್‌) ನ ಸಹ-ಸಂಸ್ಥಾಪಕಿಯಾಗಿರುವ ಆಂಗ್ಮೋ, ತನ್ನ ಪತಿಯ ಬಂಧನದ ನಂತರ ಅವರೊಂದಿಗೆ ಸಂವಹನ ನಡೆಸಲು ಸಾಧ್ಯವಾಗಿಲ್ಲ ಮತ್ತು ಬಂಧನ ಆದೇಶದ ಪ್ರತಿಯನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಬಂಧನದ ಆದೇಶದ ಪ್ರತಿಯನ್ನು ಶುಕ್ರವಾರ ಕಳುಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇನ್ನೂ ಸಿಕ್ಕಿಲ್ಲ, ನಾವು ಕಾನೂನು ಮೊರೆ ಹೋಗುತ್ತೇವೆ ಎಂದು ಆಂಗ್ಮೋ ಹೇಳಿದ್ದಾರೆ.

ಆಪಾದಿತ ಪಾಕಿಸ್ತಾನ ಸಂಪರ್ಕ

ಸೋನಮ್ ವಾಂಗ್ಚುಕ್‌ ಅವರಿಗೆ ಪಾಕಿಸ್ತಾನದೊಂದಿಗೆ ಸಂಬಂಧ ಇದೆಯೇ? ಎಂದು ತನಿಖೆ ಮಾಡಲಾಗುತ್ತಿದೆ. ಕಳೆದ ತಿಂಗಳು ಒಬ್ಬ ಪಾಕಿಸ್ತಾನಿ ಗುಪ್ತಚರನನ್ನು ಬಂಧಿಸಲಾಗಿತ್ತು, ಆತ ಗಡಿಯಾಚೆಗಿನ ಪ್ರತಿಭಟನೆಗಳ ವಿಡಿಯೋ ಕಳುಹಿಸಿದ್ದ ಎಂದು ಆರೋಪವಿದೆ. ಇದರ ಜೊತೆಗೆ, ಸೋನಮ್ ವಾಂಗ್ಚುಕ್‌ ಅವರು ಪಾಕಿಸ್ತಾನಕ್ಕೆ ಒಂದು ಡಾನ್ ಮೀಡಿಯಾ ಕಾರ್ಯಕ್ರಮಕ್ಕೆ ಹೋಗಿದ್ದು, ಅಧಿಕಾರಿಗಳಿಗೆ ‘ಸಂದೇಹಾಸ್ಪದ’ ಎನಿಸಿದೆ. ಹೀಗಾಗಿ, ಈ ವಿಷಯಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಲಡಾಖ್‌ನ ಪೊಲೀಸ್ ಮುಖ್ಯಸ್ಥ ಎಸ್‌ಡಿ ಸಿಂಗ್ ಜಮ್ವಾಲ್ ತಿಳಿಸಿದ್ದಾರೆ.

ಆಂಗ್ಮೋ ಪೊಲೀಸರ ಆರೋಪಗಳನ್ನು ತಳ್ಳಿ ಹಾಕಿದ್ದು, ವಾಂಗ್ಚುಕ್ ಅವರ ಭೇಟಿಗಳು ವೃತ್ತಿಪರ ಮತ್ತು ಹವಾಮಾನ ಕೇಂದ್ರಿತವಾಗಿದ್ದವು ಎಂದಿದ್ದಾರೆ.

ಪಾಕಿಸ್ತಾನದಲ್ಲಿ ವಿಶ್ವಸಂಸ್ಥೆ ಆಯೋಜಿಸಿದ್ದ ಹವಾಮಾನ ಬದಲಾವಣೆಯ ಸಮ್ಮೇಳನದಲ್ಲಿ ವಾಂಗ್ಚುಕ್ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು. ನಾವು ವಿಶ್ವಸಂಸ್ಥೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಭಾಗವಹಿಸಿದ್ದೆವು, ಅದು ಹವಾಮಾನ ಬದಲಾವಣೆಯ ಕುರಿತಾಗಿತ್ತು. ಹಿಮಾಲಯದ ತುದಿಯಲ್ಲಿರುವ ಹಿಮನದಿ ನಾನು ಪಾಕಿಸ್ತಾನಕ್ಕೆ ಹರಿಯುತ್ತೇನೋ ಅಥವಾ ಭಾರತಕ್ಕೆ ಹರಿಯುತ್ತೇನೋ ಎಂದು ನೋಡುವುದಿಲ್ಲ” ಎಂದು ಆಂಗ್ಮೋ ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ‘ಬ್ರೀತ್ ಪಾಕಿಸ್ತಾನ್’ ಸಮ್ಮೇಳನವನ್ನು ವಿಶ್ವಸಂಸ್ಥೆಯ ಪಾಕಿಸ್ತಾನ ಮತ್ತು ಡಾನ್ ಮೀಡಿಯಾ ಆಯೋಜಿಸಿತ್ತು. ಬಹುರಾಷ್ಟ್ರೀಯ ಸಹಕಾರವನ್ನು ಅದು ಒಳಗೊಂಡಿತ್ತು. ಇಂಟರ್ನ್ಯಾಷನಲ್ ಸೆಂಟರ್ ಫಾರ್ ಇಂಟಿಗ್ರೇಟೆಡ್ ಮೌಂಟೇನ್ ಡೆವಲಪ್ಮೆಂಟ್ (ಐಸಿಐಎಂಒಡಿ) ನಂತಹ ಸಂಸ್ಥೆಗಳು ಅದರಲ್ಲಿ ಇತ್ತು. ಇದು ಎಂಟು ಹಿಂದೂ ಕುಶ್ ದೇಶಗಳನ್ನು ಒಟ್ಟುಗೂಡಿಸುತ್ತದೆ ಮತ್ತು ವಿಭಿನ್ನ ವಿಷಯಗಳ ಮೇಲೆ ಕೆಲಸ ಮಾಡುತ್ತದೆ. ನಾವು ಐಸಿಐಎಂಒಡಿಯ ಹಿಮಾಲಯನ್ ವಿಶ್ವವಿದ್ಯಾಲಯ ಒಕ್ಕೂಟದ ಭಾಗವಾಗಿದ್ದೆವು ಎಂದಿದ್ದಾರೆ.

ಐಸಿಐಎಂಒಡಿ 1983ರಲ್ಲಿ ಸ್ಥಾಪನೆಯಾದ ನೇಪಾಳ ಮೂಲದ ಸಂಸ್ಥೆಯಾಗಿದ್ದು, ಇದು ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ ಮತ್ತು ಪಾಕಿಸ್ತಾನ ಸೇರಿ ಹಿಂದೂ ಕುಶ್ ಹಿಮಾಲಯ ಪ್ರದೇಶದ ಎಂಟು ಪ್ರಾದೇಶಿಕ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.

ನೇಪಾಳ ಮತ್ತು ಬಾಂಗ್ಲಾದೇಶದ ಉಲ್ಲೇಖವನ್ನು ಸೋನಮ್ ಒಂದು ಉದಾಹರಣೆಯಾಗಿ ನೀಡಿದ್ದಾರೆ. ಅವರ ಹೇಳಿಕೆಯ ಮೂಲ ಉದ್ದೇಶವೆಂದರೆ, “ಸರ್ಕಾರಗಳು ಜನರ ಕೂಗಿಗೆ ಗಮನ ಕೊಡದಿದ್ದರೆ, ಅದು ಕ್ರಾಂತಿಗೆ ಕಾರಣವಾಗಬಹುದು” ಎಂಬುದು. ಆದ್ದರಿಂದ, ಈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರದು ಎಂದು ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ.

ಶಾಂತಿಯುತ ಪ್ರತಿಭಟನೆ ಮತ್ತು ಭದ್ರತಾ ಪಡೆಗಳ ಪ್ರತಿಕ್ರಿಯೆ

ಸೋನಮ್ ವಾಂಗ್ಚುಕ್‌ರ ಕಾರ್ಯಕ್ರಮಗಳು ಯಾವಾಗಲೂ ಅಹಿಂಸಾತ್ಮಕವಾಗಿರುತ್ತವೆ. ಲೇಹ್ ಏಪೆಕ್ಸ್ ಬಾಡಿಯ ಪ್ರತಿಭಟನೆ ಶಾಂತಿಯುತವಾಗಿತ್ತು ಮತ್ತು ವಿದ್ಯಾರ್ಥಿಗಳು ಹಾಗೂ ಯುವಕರು ಹಿಂಸಾಚಾರಕ್ಕೆ ಯೋಜನೆ ಮಾಡಿರಲಿಲ್ಲ. ಆದರೆ, ಸಿಆರ್‌ಪಿಎಫ್ ಸಿಬ್ಬಂದಿ ಟಿಯರ್ ಗ್ಯಾಸ್ ಸಿಡಿಸಿದಾಗ, ಯುವಕರು ಕಲ್ಲು ತೂರಾಟ ಮಾಡಿ ಪ್ರತಿಕ್ರಿಯಿಸಿದರು. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು ಎಂದು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ಗೆ ಗುಂಡು ಹಾರಿಸುವ ಹಕ್ಕು ನೀಡಿದ್ದು ಯಾರು? ನಮ್ಮ ಸ್ವಂತ ಜನರ ಮೇಲೆ, ನಮ್ಮ ಸ್ವಂತ ಯುವಕರ ಮೇಲೆ ಏಕೆ ಗುಂಡು ಹಾರಿಸಬೇಕು? ಎಂದು ಸಿಆರ್‌ಪಿಎಫ್‌ನ ಕ್ರಮಗಳನ್ನು ಅಂಗ್ಮೋ ಪ್ರಶ್ನಿಸಿದ್ದಾರೆ.

ಹಣಕಾಸಿನ ಆರೋಪಗಳು ಮತ್ತು ಸಂಸ್ಥೆಗಳು

ಗೀತಾಂಜಲಿ ಆಂಗ್ಮೋ ಅವರು ಸೋನಮ್ ವಾಂಗ್ಚುಕ್‌ರ ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್‌ನೇಟಿವ್ಸ್ (ಹೆಚ್‌ಐಎಎಲ್‌) ಮತ್ತು ಇತರ ಉಪಕ್ರಮಗಳ ಮೇಲಿನ ಆರ್ಥಿಕ ಅಕ್ರಮ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಹೆಚ್‌ಐಎಎಲ್‌ಗೆ ಬಂದ ವಿದೇಶಿ ಧನಸಹಾಯವು ದೇಣಿಗೆಯಲ್ಲ, ಅದು ಸಲಹಾ ಕಾರ್ಯಕ್ಕಾಗಿ ಬಂದ ಹಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮ ಸಂಸ್ಥೆಯು ತನ್ನ 400 ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಎಫ್‌ಸಿಆರ್‍ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಮತ್ತು ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ವಿಷಯಗಳ ಬಗ್ಗೆ ಅಂಗ್ಮೋ ಮಾತನಾಡಿದ್ದಾರೆ. ಈ ವಿಷಯಗಳಲ್ಲಿ ವಿಳಂಬವಾಗಿರುವುದು ಆಡಳಿತಾತ್ಮಕ ವರ್ಗೀಕರಣ ಮತ್ತು ತಡೆ ಹಿಡಿಯುವಿಕೆಯಿಂದ, ಯಾವುದೇ ತಪ್ಪು ಕೃತ್ಯದಿಂದ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್‌ಐಎಎಲ್‌ ಸಂಸ್ಥೆಯು ಐಸ್ ಸ್ತೂಪಗಳು ಮತ್ತು ನಿಷ್ಕ್ರಿಯ ಸೌರ ಕಟ್ಟಡಗಳಂತಹ ಆವಿಷ್ಕಾರಗಳನ್ನು ಬಳಸಿಕೊಂಡು ಸುಸ್ಥಿರ ಅಭಿವೃದ್ಧಿಯನ್ನು ಬೆಂಬಲಿಸುತ್ತದೆ ಎಂದಿದ್ದಾರೆ.

ಸೆಪ್ಟೆಂಬರ್ 4ರಂದು ನಡೆದ ಹಿಂಸಾಚಾರದ ನಂತರ, ಕೇಂದ್ರ ಗೃಹ ಸಚಿವಾಲಯವು ಸೋನಮ್ ವಾಂಗ್ಚುಕ್‌ ಅವರು ಸ್ಥಾಪಿಸಿದ ಎಸ್‌ಇಸಿಎಂಒಎಲ್‌ ಸಂಸ್ಥೆಯ ಎಫ್‌ಸಿಆರ್‍ಎ ಪರವಾನಗಿಯನ್ನು ಆರ್ಥಿಕ ಅಕ್ರಮಗಳ ಆರೋಪದ ಮೇಲೆ ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...