Homeಮುಖಪುಟಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ...ಪತ್ನಿ ಗೀತಾಂಜಲಿ ಹೇಳಿದ್ದೇನು?

ಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ…ಪತ್ನಿ ಗೀತಾಂಜಲಿ ಹೇಳಿದ್ದೇನು?

- Advertisement -
- Advertisement -

ಜೈಲಿನಲ್ಲಿರುವ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ‘ಪಾಕಿಸ್ತಾನದೊಂದಿಗೆ ಸಂಪರ್ಕ’ ಇದೆ, ‘ಆರ್ಥಿಕ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ’ ಎಂಬ ಆರೋಪಗಳನ್ನು ಅವರ ಪತ್ನಿ ಗೀತಾಂಜಲಿ ಆಂಗ್ಮೋ ತಳ್ಳಿ ಹಾಕಿದ್ದಾರೆ. ವಾಂಗ್ಚುಕ್ ಲೇಹ್‌ನಲ್ಲಿ ಹಿಂಸಾಚಾರ ಪ್ರಚೋದಿಸಿದ್ದಾರೆ ಎಂಬ ಆರೋಪ ಸುಳ್ಳು ಎಂದಿದ್ದಾರೆ.

ವಾಂಗ್ಚುಕ್ ಸಾಧ್ಯವಾದಷ್ಟು ಗಾಂಧಿ ಹಾದಿಯಲ್ಲಿ ಪ್ರತಿಭಟಿಸಿದ್ದಾರೆ. ಸೆಪ್ಟೆಂಬರ್ 24ರಂದು ಪರಿಸ್ಥಿತಿ ಉಲ್ಬಣಗೊಂಡಿದ್ದು ನನ್ನ ಪತಿಯಿಂದ ಅಲ್ಲ, ಸಿಆರ್‌ಪಿಎಫ್‌ನ ಕ್ರಮಗಳಿಂದಾಗಿ ಎಂದು ಆಂಗ್ಮೋ ಹೇಳಿದ್ದಾರೆ.

ವಾಂಗ್ಚುಕ್ ಅವರನ್ನು ಬಂಧಿಸಿದ್ದು ಏಕೆ?

ಲಡಾಖ್‌ನ ಹಕ್ಕುಗಳಿಗಾಗಿ ಕಳೆದ ಐದು ವರ್ಷಗಳಿಂದ ಸತತ ಹೋರಾಟ ನಡೆಸಿಕೊಂಡು ಬರುತಿದ್ದ ವಾಂಗ್ಚುಕ್ ಅವರನ್ನು ಶುಕ್ರವಾರ (ಸೆ.26) ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು, ಸಂವಿಧಾನದ ಆರನೇ ಪರಿಚ್ಛೇಧದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ನಡುವೆ ಸೆಪ್ಟೆಂಬರ್ 24ರಂದು ಯುವಜನರ ಗುಂಪೊಂದು ಲೇಹ್‌ನಲ್ಲಿ ಹಠಾತ್ ಬೀದಿಗಿಳಿದಿತ್ತು. ಇದರಿಂದ ಹೋರಾಟ ಹಿಂಸಾತ್ಮಕ ರೂಪ ಪಡೆದಿತ್ತು. ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡು, ಸುಮಾರು 90 ಜನರು ಗಾಯಗೊಂಡಿದ್ದರು.

ಯುವಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಲು ಪ್ರಚೋದಿಸಿದ್ದು ಸೋನಮ್ ವಾಂಗ್ಚುಕ್ ಎಂದು ಆರೋಪಿಸಿ ಅವರನ್ನು ಸೆಪ್ಟೆಂಬರ್ 26ರಂದು ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ಲಡಾಖ್‌ನಿಂದ ಸ್ಥಳಾಂತರಿಸಲಾಗಿದ್ದು, ರಾಜಸ್ಥಾನದ ಜೋಧ್‌ಪುರದ ಜೈಲಿನಲ್ಲಿ ಇರಿಸಲಾಗಿದೆ.

ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಲರ್ನಿಂಗ್ (ಹೆಚ್‌ಐಎಎಲ್‌) ನ ಸಹ-ಸಂಸ್ಥಾಪಕಿಯಾಗಿರುವ ಆಂಗ್ಮೋ, ತನ್ನ ಪತಿಯ ಬಂಧನದ ನಂತರ ಅವರೊಂದಿಗೆ ಸಂವಹನ ನಡೆಸಲು ಸಾಧ್ಯವಾಗಿಲ್ಲ ಮತ್ತು ಬಂಧನ ಆದೇಶದ ಪ್ರತಿಯನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಬಂಧನದ ಆದೇಶದ ಪ್ರತಿಯನ್ನು ಶುಕ್ರವಾರ ಕಳುಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇನ್ನೂ ಸಿಕ್ಕಿಲ್ಲ, ನಾವು ಕಾನೂನು ಮೊರೆ ಹೋಗುತ್ತೇವೆ ಎಂದು ಆಂಗ್ಮೋ ಹೇಳಿದ್ದಾರೆ.

ಆಪಾದಿತ ಪಾಕಿಸ್ತಾನ ಸಂಪರ್ಕ

ಸೋನಮ್ ವಾಂಗ್ಚುಕ್‌ ಅವರಿಗೆ ಪಾಕಿಸ್ತಾನದೊಂದಿಗೆ ಸಂಬಂಧ ಇದೆಯೇ? ಎಂದು ತನಿಖೆ ಮಾಡಲಾಗುತ್ತಿದೆ. ಕಳೆದ ತಿಂಗಳು ಒಬ್ಬ ಪಾಕಿಸ್ತಾನಿ ಗುಪ್ತಚರನನ್ನು ಬಂಧಿಸಲಾಗಿತ್ತು, ಆತ ಗಡಿಯಾಚೆಗಿನ ಪ್ರತಿಭಟನೆಗಳ ವಿಡಿಯೋ ಕಳುಹಿಸಿದ್ದ ಎಂದು ಆರೋಪವಿದೆ. ಇದರ ಜೊತೆಗೆ, ಸೋನಮ್ ವಾಂಗ್ಚುಕ್‌ ಅವರು ಪಾಕಿಸ್ತಾನಕ್ಕೆ ಒಂದು ಡಾನ್ ಮೀಡಿಯಾ ಕಾರ್ಯಕ್ರಮಕ್ಕೆ ಹೋಗಿದ್ದು, ಅಧಿಕಾರಿಗಳಿಗೆ ‘ಸಂದೇಹಾಸ್ಪದ’ ಎನಿಸಿದೆ. ಹೀಗಾಗಿ, ಈ ವಿಷಯಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಲಡಾಖ್‌ನ ಪೊಲೀಸ್ ಮುಖ್ಯಸ್ಥ ಎಸ್‌ಡಿ ಸಿಂಗ್ ಜಮ್ವಾಲ್ ತಿಳಿಸಿದ್ದಾರೆ.

ಆಂಗ್ಮೋ ಪೊಲೀಸರ ಆರೋಪಗಳನ್ನು ತಳ್ಳಿ ಹಾಕಿದ್ದು, ವಾಂಗ್ಚುಕ್ ಅವರ ಭೇಟಿಗಳು ವೃತ್ತಿಪರ ಮತ್ತು ಹವಾಮಾನ ಕೇಂದ್ರಿತವಾಗಿದ್ದವು ಎಂದಿದ್ದಾರೆ.

ಪಾಕಿಸ್ತಾನದಲ್ಲಿ ವಿಶ್ವಸಂಸ್ಥೆ ಆಯೋಜಿಸಿದ್ದ ಹವಾಮಾನ ಬದಲಾವಣೆಯ ಸಮ್ಮೇಳನದಲ್ಲಿ ವಾಂಗ್ಚುಕ್ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು. ನಾವು ವಿಶ್ವಸಂಸ್ಥೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಭಾಗವಹಿಸಿದ್ದೆವು, ಅದು ಹವಾಮಾನ ಬದಲಾವಣೆಯ ಕುರಿತಾಗಿತ್ತು. ಹಿಮಾಲಯದ ತುದಿಯಲ್ಲಿರುವ ಹಿಮನದಿ ನಾನು ಪಾಕಿಸ್ತಾನಕ್ಕೆ ಹರಿಯುತ್ತೇನೋ ಅಥವಾ ಭಾರತಕ್ಕೆ ಹರಿಯುತ್ತೇನೋ ಎಂದು ನೋಡುವುದಿಲ್ಲ” ಎಂದು ಆಂಗ್ಮೋ ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ‘ಬ್ರೀತ್ ಪಾಕಿಸ್ತಾನ್’ ಸಮ್ಮೇಳನವನ್ನು ವಿಶ್ವಸಂಸ್ಥೆಯ ಪಾಕಿಸ್ತಾನ ಮತ್ತು ಡಾನ್ ಮೀಡಿಯಾ ಆಯೋಜಿಸಿತ್ತು. ಬಹುರಾಷ್ಟ್ರೀಯ ಸಹಕಾರವನ್ನು ಅದು ಒಳಗೊಂಡಿತ್ತು. ಇಂಟರ್ನ್ಯಾಷನಲ್ ಸೆಂಟರ್ ಫಾರ್ ಇಂಟಿಗ್ರೇಟೆಡ್ ಮೌಂಟೇನ್ ಡೆವಲಪ್ಮೆಂಟ್ (ಐಸಿಐಎಂಒಡಿ) ನಂತಹ ಸಂಸ್ಥೆಗಳು ಅದರಲ್ಲಿ ಇತ್ತು. ಇದು ಎಂಟು ಹಿಂದೂ ಕುಶ್ ದೇಶಗಳನ್ನು ಒಟ್ಟುಗೂಡಿಸುತ್ತದೆ ಮತ್ತು ವಿಭಿನ್ನ ವಿಷಯಗಳ ಮೇಲೆ ಕೆಲಸ ಮಾಡುತ್ತದೆ. ನಾವು ಐಸಿಐಎಂಒಡಿಯ ಹಿಮಾಲಯನ್ ವಿಶ್ವವಿದ್ಯಾಲಯ ಒಕ್ಕೂಟದ ಭಾಗವಾಗಿದ್ದೆವು ಎಂದಿದ್ದಾರೆ.

ಐಸಿಐಎಂಒಡಿ 1983ರಲ್ಲಿ ಸ್ಥಾಪನೆಯಾದ ನೇಪಾಳ ಮೂಲದ ಸಂಸ್ಥೆಯಾಗಿದ್ದು, ಇದು ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ ಮತ್ತು ಪಾಕಿಸ್ತಾನ ಸೇರಿ ಹಿಂದೂ ಕುಶ್ ಹಿಮಾಲಯ ಪ್ರದೇಶದ ಎಂಟು ಪ್ರಾದೇಶಿಕ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.

ನೇಪಾಳ ಮತ್ತು ಬಾಂಗ್ಲಾದೇಶದ ಉಲ್ಲೇಖವನ್ನು ಸೋನಮ್ ಒಂದು ಉದಾಹರಣೆಯಾಗಿ ನೀಡಿದ್ದಾರೆ. ಅವರ ಹೇಳಿಕೆಯ ಮೂಲ ಉದ್ದೇಶವೆಂದರೆ, “ಸರ್ಕಾರಗಳು ಜನರ ಕೂಗಿಗೆ ಗಮನ ಕೊಡದಿದ್ದರೆ, ಅದು ಕ್ರಾಂತಿಗೆ ಕಾರಣವಾಗಬಹುದು” ಎಂಬುದು. ಆದ್ದರಿಂದ, ಈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರದು ಎಂದು ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ.

ಶಾಂತಿಯುತ ಪ್ರತಿಭಟನೆ ಮತ್ತು ಭದ್ರತಾ ಪಡೆಗಳ ಪ್ರತಿಕ್ರಿಯೆ

ಸೋನಮ್ ವಾಂಗ್ಚುಕ್‌ರ ಕಾರ್ಯಕ್ರಮಗಳು ಯಾವಾಗಲೂ ಅಹಿಂಸಾತ್ಮಕವಾಗಿರುತ್ತವೆ. ಲೇಹ್ ಏಪೆಕ್ಸ್ ಬಾಡಿಯ ಪ್ರತಿಭಟನೆ ಶಾಂತಿಯುತವಾಗಿತ್ತು ಮತ್ತು ವಿದ್ಯಾರ್ಥಿಗಳು ಹಾಗೂ ಯುವಕರು ಹಿಂಸಾಚಾರಕ್ಕೆ ಯೋಜನೆ ಮಾಡಿರಲಿಲ್ಲ. ಆದರೆ, ಸಿಆರ್‌ಪಿಎಫ್ ಸಿಬ್ಬಂದಿ ಟಿಯರ್ ಗ್ಯಾಸ್ ಸಿಡಿಸಿದಾಗ, ಯುವಕರು ಕಲ್ಲು ತೂರಾಟ ಮಾಡಿ ಪ್ರತಿಕ್ರಿಯಿಸಿದರು. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು ಎಂದು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ಗೆ ಗುಂಡು ಹಾರಿಸುವ ಹಕ್ಕು ನೀಡಿದ್ದು ಯಾರು? ನಮ್ಮ ಸ್ವಂತ ಜನರ ಮೇಲೆ, ನಮ್ಮ ಸ್ವಂತ ಯುವಕರ ಮೇಲೆ ಏಕೆ ಗುಂಡು ಹಾರಿಸಬೇಕು? ಎಂದು ಸಿಆರ್‌ಪಿಎಫ್‌ನ ಕ್ರಮಗಳನ್ನು ಅಂಗ್ಮೋ ಪ್ರಶ್ನಿಸಿದ್ದಾರೆ.

ಹಣಕಾಸಿನ ಆರೋಪಗಳು ಮತ್ತು ಸಂಸ್ಥೆಗಳು

ಗೀತಾಂಜಲಿ ಆಂಗ್ಮೋ ಅವರು ಸೋನಮ್ ವಾಂಗ್ಚುಕ್‌ರ ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್‌ನೇಟಿವ್ಸ್ (ಹೆಚ್‌ಐಎಎಲ್‌) ಮತ್ತು ಇತರ ಉಪಕ್ರಮಗಳ ಮೇಲಿನ ಆರ್ಥಿಕ ಅಕ್ರಮ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಹೆಚ್‌ಐಎಎಲ್‌ಗೆ ಬಂದ ವಿದೇಶಿ ಧನಸಹಾಯವು ದೇಣಿಗೆಯಲ್ಲ, ಅದು ಸಲಹಾ ಕಾರ್ಯಕ್ಕಾಗಿ ಬಂದ ಹಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮ ಸಂಸ್ಥೆಯು ತನ್ನ 400 ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಎಫ್‌ಸಿಆರ್‍ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಮತ್ತು ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ವಿಷಯಗಳ ಬಗ್ಗೆ ಅಂಗ್ಮೋ ಮಾತನಾಡಿದ್ದಾರೆ. ಈ ವಿಷಯಗಳಲ್ಲಿ ವಿಳಂಬವಾಗಿರುವುದು ಆಡಳಿತಾತ್ಮಕ ವರ್ಗೀಕರಣ ಮತ್ತು ತಡೆ ಹಿಡಿಯುವಿಕೆಯಿಂದ, ಯಾವುದೇ ತಪ್ಪು ಕೃತ್ಯದಿಂದ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್‌ಐಎಎಲ್‌ ಸಂಸ್ಥೆಯು ಐಸ್ ಸ್ತೂಪಗಳು ಮತ್ತು ನಿಷ್ಕ್ರಿಯ ಸೌರ ಕಟ್ಟಡಗಳಂತಹ ಆವಿಷ್ಕಾರಗಳನ್ನು ಬಳಸಿಕೊಂಡು ಸುಸ್ಥಿರ ಅಭಿವೃದ್ಧಿಯನ್ನು ಬೆಂಬಲಿಸುತ್ತದೆ ಎಂದಿದ್ದಾರೆ.

ಸೆಪ್ಟೆಂಬರ್ 4ರಂದು ನಡೆದ ಹಿಂಸಾಚಾರದ ನಂತರ, ಕೇಂದ್ರ ಗೃಹ ಸಚಿವಾಲಯವು ಸೋನಮ್ ವಾಂಗ್ಚುಕ್‌ ಅವರು ಸ್ಥಾಪಿಸಿದ ಎಸ್‌ಇಸಿಎಂಒಎಲ್‌ ಸಂಸ್ಥೆಯ ಎಫ್‌ಸಿಆರ್‍ಎ ಪರವಾನಗಿಯನ್ನು ಆರ್ಥಿಕ ಅಕ್ರಮಗಳ ಆರೋಪದ ಮೇಲೆ ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...