Homeಮುಖಪುಟಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಮಾನತೆಯ ಹರಿಕಾರ ಪೆರಿಯಾರ್‌ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಆಚರಿಸಿದೆ. ಆದರೆ ತಮಿಳುನಾಡು ನಿಜಕ್ಕೂ ಸಾಮಾಜಿಕ ನ್ಯಾಯವನ್ನು ಸಾಧಿಸಿದೆಯೇ?

- Advertisement -
- Advertisement -

ಸಮಾನತೆಯ ಹರಿಕಾರ, ದ್ರಾವಿಡ ಚಳವಳಿಯ ನೇತಾರ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಘೋಷಿಸಿದೆ. ಅದರಂತೆ ಅವರ ಜನ್ಮದಿನವನ್ನು ಈ ಬಾರಿ ಆಚರಿಸಲಾಗಿದೆ.

ಎಂ.ಕೆ.ಸ್ಟಾಲಿನ್‌ ನಾಯಕತ್ವದಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಹಲವು ಸುಧಾರಣೆಗಳನ್ನು ತರುತ್ತಿರುವುದು ಆಶಾದಾಯ ಬೆಳೆವಣಿಗೆ. ಆದರೆ ತಮಿಳುನಾಡಿನಲ್ಲಿ ಬೇರು ಬಿಟ್ಟಿರುವ ಮೌಢ್ಯ, ಜಾತಿ ವ್ಯವಸ್ಥೆ, ಲಿಂಗ ತಾರತಮ್ಯ ಮೊದಲಾದ ಸಾಮಾಜಿಕ ಸಂಗತಿಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಸಾಮಾಜಿಕ ನ್ಯಾಯದಿನದ ಹಿನ್ನೆಲೆಯಲ್ಲಿ ‘ದಿ ಕ್ವಿಂಟ್’ ಸುದ್ದಿ ಜಾಲತಾಣದಲ್ಲಿ ಪ್ರಕಟವಾಗಿರುವ ಸ್ಮಿತಾ ಟಿ.ಕೆ. ಅವರ ಲೇಖನವು, ತಮಿಳುನಾಡು ಎದುರಿಸುತ್ತಿರುವ ಸಾಮಾಜಿಕ ಅಸಮಾನತೆಗಳತ್ತ ಬೊಟ್ಟು ಮಾಡಿದೆ.

ಇದನ್ನೂ ಓದಿ: ಹೋರಾಟಗಾರರ ಮೇಲೆ ದಾಖಲಾಗಿದ್ದ 5,570 ಪ್ರಕರಣ ಹಿಂಪಡೆದ ತಮಿಳುನಾಡು ಸರ್ಕಾರ

ಜಾತಿ ಪ್ರೇರಿತ ಕೊಲೆಗಳ ಕುರಿತು ಕೆಲಸ ಮಾಡುತ್ತಿರುವ ಕಾತಿರ್ ಆಫ್ ಎವಿಡೆನ್ಸ್ ಸಂಘಟನೆಯ ಪ್ರಕಾರ, 2013ರಿಂದ 2017ರ ಅವಧಿಯಲ್ಲಿ ಒಟ್ಟು 187 ಮರ್ಯಾದೆ ಹೆಸರಲ್ಲಿ ಹತ್ಯೆಗಳು ನಡೆದಿವೆ. ಅದರಲ್ಲಿ ಸಾವಿಗೀಡಾದವರು ಶೇ. 80 ಮಂದಿ ಮಹಿಳೆಯರಾಗಿದ್ದಾರೆ. ಇದು ಅಧಿಕೃತವಾಗಿ ದಾಖಲಾಗಿರುವ ವರದಿಯಷ್ಟೇ. ಬಹುತೇಕ ಕೊಲೆಗಳು ಆತ್ಮಹತ್ಯೆ ಎಂದೋ, ಸಹಜ ಸಾವೆಂದೋ ವರದಿಯಾಗುತ್ತಿವೆ ಎನ್ನಲಾಗಿದೆ.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್ಸಿಆರ್ಬಿ) ನೀಡಿದ 2020ರ ವರದಿಯ ಪ್ರಕಾರ ತಮಿಳುನಾಡಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. 2019ರಲ್ಲಿ 15.6ರಷ್ಟಿದ್ದ ಈ ಪ್ರಮಾಣ 2020ರಲ್ಲಿ 17.4ರಷ್ಟಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ 2019ರಲ್ಲಿ 4,139 ಇದ್ದದ್ದು, 2020ರಲ್ಲಿ 4,338ರಷ್ಟಾಗಿದೆ.

“ಶೇ. 50ರಷ್ಟು ಮಹಿಳಾ ಪ್ರಾತಿನಿಧ್ಯ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಇರಬೇಕೆಂದು ಪೆರಿಯಾರ್ ಪ್ರತಿಪಾದಿಸಿದ್ದರು. ಮಹಿಳೆಯರನ್ನು ಅಡುಗೆ ಮನೆಯಿಂದ ಹೊರತಂದು ಸ್ವಾತಂತ್ರ್ಯ ನೀಡಬೇಕು ಎನ್ನುತ್ತಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಡಿಎಂಕೆ ನೇತೃತ್ವದ ಈಗಿನ ಸರ್ಕಾರದಲ್ಲಿನ 33 ಸಚಿವರಲ್ಲಿ ಇಬ್ಬರು ಮಾತ್ರ ಮಹಿಳೆಯರಿದ್ದಾರೆ” ಎಂದು ಸ್ಮಿತಾ ಉಲ್ಲೇಖಿಸಿದ್ದಾರೆ.

ಜಾತಿ ನಿರ್ಮೂಲನೆ ಮಾಡಬೇಕೆಂದು ಸರ್ಕಾರವೇನೋ ಹೆಜ್ಜೆ ಇರಿಸಿದೆ. ಆದರೆ ತಮಿಳುನಾಡಿನ ಜಾತಿ ವ್ಯವಸ್ಥೆ ಆತಂಕಕಾರಿಯಾದದ್ದು. ಎನ್‌‌ಸಿಆರ್‌ಬಿ ವರದಿಯ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗಗಳ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. 2019ರಲ್ಲಿ 1,144 ಪ್ರಕರಣಗಳಿದ್ದವು, 2020ರಲ್ಲಿ 1,274 ಪ್ರಕರಣಗಳು ವರದಿಯಾಗಿವೆ.

ವಣ್ಣಿಯಾರ್ಸ್ ಮೇಲ್ವರ್ಗಕ್ಕೆ ಸೇರಿದ 20 ಜನರ ಗುಂಪು ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ದಲಿತ ಯುವಕರನ್ನು ಕೊಂದಿರುವ ಘಟನೆ ಕಳೆದ ಅಂಬೇಡ್ಕರ್ ಜಯಂತಿಯಂದು ನಡೆದುಹೋಯಿತು. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿರ್ಮೂಲನೆಗೆ ಸರಿಯಾದ ಕ್ರಮ ಜರುಗಿಸದ ಕಾರಣ ಕಳೆದ ಒಂದು ದಶಕದಲ್ಲಿ ಅತಿ ಹೆಚ್ಚು ಸಫಾಯಿಗಳು ತಮಿಳುನಾಡಿನಲ್ಲೇ ಸಾವನ್ನಪ್ಪಿದ್ದಾರೆ ಎನ್ನುತ್ತದೆ ವರದಿ.

1993ರಿಂದ 2019ರವರೆಗೆ ದೇಶದ 18 ರಾಜ್ಯಗಳಲ್ಲಿ ಎಷ್ಟು ಸಫಾಯಿಗಳು ಸಾವನ್ನಪ್ಪಿದ್ದಾರೆಂದು ಸರ್ಕಾರ ಸಮೀಕ್ಷೆ ನಡೆಸಿದಾಗ 206 ಮಂದಿ ಸಫಾಯಿಗಳು ತಮಿಳುನಾಡಿನಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ಮೊದಲನೇ ಸ್ಥಾನದಲ್ಲಿದೆ ಎನ್ನಲಾಗಿದೆ.

ಜನಪರ ಕೆಲಸಗಳನ್ನು ಮಾಡುತ್ತಿರುವ ತಮಿಳುನಾಡು ಸರ್ಕಾರ, ಇಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಬೇಕು. ಪೆರಿಯಾರ್ ಥರದ ಮಹನೀಯರು ನೆಡೆದಾಡಿದ ನೆಲದಲ್ಲಿ ಮೌಢ್ಯಗಳು ತೊಗಲಬೇಕು. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸಮಾನ ಅವಕಾಶ ದೊರಕುವಂತಾಗಬೇಕು. ಡಿಎಂಕೆ, ಎಐಡಿಎಂಕೆ ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಥವಾ ವಿರೋಧ ಪಕ್ಷ ಸ್ಥಾನದಲ್ಲಿರಲಿ ರಾಜ್ಯವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಎಲ್ಲರಿಗೂ ಇರುತ್ತದೆ. ಹೀಗಾಗಿ ಇಲ್ಲಿನ ಬಹುತೇಕ ಅಂಕಿ-ಅಂಶಗಳು ಎಐಎಡಿಎಂ ಅವಧಿಗೆ ಸಂಬಂಧಿಸಿವೆ ಎಂದು ಸುಮ್ಮನಾಗಲು ಸಾಧ್ಯವಿಲ್ಲ.

ಈಗ ಅಧಿಕಾರ ಹಿಡಿದಿರುವ ಡಿಎಂಕೆ ಹೊಸ ಭರವಸೆಗಳನ್ನು ಹುಟ್ಟು ಹಾಕಿದೆ. ಜನಪ್ರಿಯ ಕಾರ್ಯಕ್ರಮಗಳ ಮೂಲಕ ಸದ್ಯಕ್ಕೆ ಜನಮಾನಸಕ್ಕೆ ಲಗ್ಗೆ ಇಡುತ್ತಿರುವ ಸ್ಟಾಲಿನ್, ತಮಿಳುನಾಡನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬೇಕಾದ ಎಲ್ಲ ಕ್ರಮಗಳನ್ನು ತಮ್ಮ ಕೈಲಾದ ಮಟ್ಟಿಗೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕ್ರಾಂತಿ ರಾತ್ರಿ ಬೆಳಗಾಗುವುದರೊಳಗೆ ಆಗುವುದು ಅಸಾಧ್ಯ. ಈ ಪೋಸ್ಟ್ ಟ್ರೂತ್ ಕಾಲದಲ್ಲಂತೂ ಬದಲಾವಣೆಗೆ ಹೆಚ್ಚಿನ ಶ್ರಮವಂತೂ ಅಗತ್ಯ ಎನ್ನುತ್ತಾರೆ ಪ್ರಜ್ಞಾವಂತರು.

(ಮಾಹಿತಿ ಕೃಪೆ: ಸ್ಮಿತಾ ಕೆ.ಎಸ್., ದಿ ಕ್ವಿಂಟ್‌‌)


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....