Homeಮುಖಪುಟಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಮಾನತೆಯ ಹರಿಕಾರ ಪೆರಿಯಾರ್‌ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಆಚರಿಸಿದೆ. ಆದರೆ ತಮಿಳುನಾಡು ನಿಜಕ್ಕೂ ಸಾಮಾಜಿಕ ನ್ಯಾಯವನ್ನು ಸಾಧಿಸಿದೆಯೇ?

- Advertisement -
- Advertisement -

ಸಮಾನತೆಯ ಹರಿಕಾರ, ದ್ರಾವಿಡ ಚಳವಳಿಯ ನೇತಾರ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಘೋಷಿಸಿದೆ. ಅದರಂತೆ ಅವರ ಜನ್ಮದಿನವನ್ನು ಈ ಬಾರಿ ಆಚರಿಸಲಾಗಿದೆ.

ಎಂ.ಕೆ.ಸ್ಟಾಲಿನ್‌ ನಾಯಕತ್ವದಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಹಲವು ಸುಧಾರಣೆಗಳನ್ನು ತರುತ್ತಿರುವುದು ಆಶಾದಾಯ ಬೆಳೆವಣಿಗೆ. ಆದರೆ ತಮಿಳುನಾಡಿನಲ್ಲಿ ಬೇರು ಬಿಟ್ಟಿರುವ ಮೌಢ್ಯ, ಜಾತಿ ವ್ಯವಸ್ಥೆ, ಲಿಂಗ ತಾರತಮ್ಯ ಮೊದಲಾದ ಸಾಮಾಜಿಕ ಸಂಗತಿಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಸಾಮಾಜಿಕ ನ್ಯಾಯದಿನದ ಹಿನ್ನೆಲೆಯಲ್ಲಿ ‘ದಿ ಕ್ವಿಂಟ್’ ಸುದ್ದಿ ಜಾಲತಾಣದಲ್ಲಿ ಪ್ರಕಟವಾಗಿರುವ ಸ್ಮಿತಾ ಟಿ.ಕೆ. ಅವರ ಲೇಖನವು, ತಮಿಳುನಾಡು ಎದುರಿಸುತ್ತಿರುವ ಸಾಮಾಜಿಕ ಅಸಮಾನತೆಗಳತ್ತ ಬೊಟ್ಟು ಮಾಡಿದೆ.

ಇದನ್ನೂ ಓದಿ: ಹೋರಾಟಗಾರರ ಮೇಲೆ ದಾಖಲಾಗಿದ್ದ 5,570 ಪ್ರಕರಣ ಹಿಂಪಡೆದ ತಮಿಳುನಾಡು ಸರ್ಕಾರ

ಜಾತಿ ಪ್ರೇರಿತ ಕೊಲೆಗಳ ಕುರಿತು ಕೆಲಸ ಮಾಡುತ್ತಿರುವ ಕಾತಿರ್ ಆಫ್ ಎವಿಡೆನ್ಸ್ ಸಂಘಟನೆಯ ಪ್ರಕಾರ, 2013ರಿಂದ 2017ರ ಅವಧಿಯಲ್ಲಿ ಒಟ್ಟು 187 ಮರ್ಯಾದೆ ಹೆಸರಲ್ಲಿ ಹತ್ಯೆಗಳು ನಡೆದಿವೆ. ಅದರಲ್ಲಿ ಸಾವಿಗೀಡಾದವರು ಶೇ. 80 ಮಂದಿ ಮಹಿಳೆಯರಾಗಿದ್ದಾರೆ. ಇದು ಅಧಿಕೃತವಾಗಿ ದಾಖಲಾಗಿರುವ ವರದಿಯಷ್ಟೇ. ಬಹುತೇಕ ಕೊಲೆಗಳು ಆತ್ಮಹತ್ಯೆ ಎಂದೋ, ಸಹಜ ಸಾವೆಂದೋ ವರದಿಯಾಗುತ್ತಿವೆ ಎನ್ನಲಾಗಿದೆ.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್ಸಿಆರ್ಬಿ) ನೀಡಿದ 2020ರ ವರದಿಯ ಪ್ರಕಾರ ತಮಿಳುನಾಡಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. 2019ರಲ್ಲಿ 15.6ರಷ್ಟಿದ್ದ ಈ ಪ್ರಮಾಣ 2020ರಲ್ಲಿ 17.4ರಷ್ಟಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ 2019ರಲ್ಲಿ 4,139 ಇದ್ದದ್ದು, 2020ರಲ್ಲಿ 4,338ರಷ್ಟಾಗಿದೆ.

“ಶೇ. 50ರಷ್ಟು ಮಹಿಳಾ ಪ್ರಾತಿನಿಧ್ಯ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಇರಬೇಕೆಂದು ಪೆರಿಯಾರ್ ಪ್ರತಿಪಾದಿಸಿದ್ದರು. ಮಹಿಳೆಯರನ್ನು ಅಡುಗೆ ಮನೆಯಿಂದ ಹೊರತಂದು ಸ್ವಾತಂತ್ರ್ಯ ನೀಡಬೇಕು ಎನ್ನುತ್ತಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಡಿಎಂಕೆ ನೇತೃತ್ವದ ಈಗಿನ ಸರ್ಕಾರದಲ್ಲಿನ 33 ಸಚಿವರಲ್ಲಿ ಇಬ್ಬರು ಮಾತ್ರ ಮಹಿಳೆಯರಿದ್ದಾರೆ” ಎಂದು ಸ್ಮಿತಾ ಉಲ್ಲೇಖಿಸಿದ್ದಾರೆ.

ಜಾತಿ ನಿರ್ಮೂಲನೆ ಮಾಡಬೇಕೆಂದು ಸರ್ಕಾರವೇನೋ ಹೆಜ್ಜೆ ಇರಿಸಿದೆ. ಆದರೆ ತಮಿಳುನಾಡಿನ ಜಾತಿ ವ್ಯವಸ್ಥೆ ಆತಂಕಕಾರಿಯಾದದ್ದು. ಎನ್‌‌ಸಿಆರ್‌ಬಿ ವರದಿಯ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗಗಳ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. 2019ರಲ್ಲಿ 1,144 ಪ್ರಕರಣಗಳಿದ್ದವು, 2020ರಲ್ಲಿ 1,274 ಪ್ರಕರಣಗಳು ವರದಿಯಾಗಿವೆ.

ವಣ್ಣಿಯಾರ್ಸ್ ಮೇಲ್ವರ್ಗಕ್ಕೆ ಸೇರಿದ 20 ಜನರ ಗುಂಪು ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ದಲಿತ ಯುವಕರನ್ನು ಕೊಂದಿರುವ ಘಟನೆ ಕಳೆದ ಅಂಬೇಡ್ಕರ್ ಜಯಂತಿಯಂದು ನಡೆದುಹೋಯಿತು. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿರ್ಮೂಲನೆಗೆ ಸರಿಯಾದ ಕ್ರಮ ಜರುಗಿಸದ ಕಾರಣ ಕಳೆದ ಒಂದು ದಶಕದಲ್ಲಿ ಅತಿ ಹೆಚ್ಚು ಸಫಾಯಿಗಳು ತಮಿಳುನಾಡಿನಲ್ಲೇ ಸಾವನ್ನಪ್ಪಿದ್ದಾರೆ ಎನ್ನುತ್ತದೆ ವರದಿ.

1993ರಿಂದ 2019ರವರೆಗೆ ದೇಶದ 18 ರಾಜ್ಯಗಳಲ್ಲಿ ಎಷ್ಟು ಸಫಾಯಿಗಳು ಸಾವನ್ನಪ್ಪಿದ್ದಾರೆಂದು ಸರ್ಕಾರ ಸಮೀಕ್ಷೆ ನಡೆಸಿದಾಗ 206 ಮಂದಿ ಸಫಾಯಿಗಳು ತಮಿಳುನಾಡಿನಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ಮೊದಲನೇ ಸ್ಥಾನದಲ್ಲಿದೆ ಎನ್ನಲಾಗಿದೆ.

ಜನಪರ ಕೆಲಸಗಳನ್ನು ಮಾಡುತ್ತಿರುವ ತಮಿಳುನಾಡು ಸರ್ಕಾರ, ಇಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಬೇಕು. ಪೆರಿಯಾರ್ ಥರದ ಮಹನೀಯರು ನೆಡೆದಾಡಿದ ನೆಲದಲ್ಲಿ ಮೌಢ್ಯಗಳು ತೊಗಲಬೇಕು. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸಮಾನ ಅವಕಾಶ ದೊರಕುವಂತಾಗಬೇಕು. ಡಿಎಂಕೆ, ಎಐಡಿಎಂಕೆ ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಥವಾ ವಿರೋಧ ಪಕ್ಷ ಸ್ಥಾನದಲ್ಲಿರಲಿ ರಾಜ್ಯವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಎಲ್ಲರಿಗೂ ಇರುತ್ತದೆ. ಹೀಗಾಗಿ ಇಲ್ಲಿನ ಬಹುತೇಕ ಅಂಕಿ-ಅಂಶಗಳು ಎಐಎಡಿಎಂ ಅವಧಿಗೆ ಸಂಬಂಧಿಸಿವೆ ಎಂದು ಸುಮ್ಮನಾಗಲು ಸಾಧ್ಯವಿಲ್ಲ.

ಈಗ ಅಧಿಕಾರ ಹಿಡಿದಿರುವ ಡಿಎಂಕೆ ಹೊಸ ಭರವಸೆಗಳನ್ನು ಹುಟ್ಟು ಹಾಕಿದೆ. ಜನಪ್ರಿಯ ಕಾರ್ಯಕ್ರಮಗಳ ಮೂಲಕ ಸದ್ಯಕ್ಕೆ ಜನಮಾನಸಕ್ಕೆ ಲಗ್ಗೆ ಇಡುತ್ತಿರುವ ಸ್ಟಾಲಿನ್, ತಮಿಳುನಾಡನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬೇಕಾದ ಎಲ್ಲ ಕ್ರಮಗಳನ್ನು ತಮ್ಮ ಕೈಲಾದ ಮಟ್ಟಿಗೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕ್ರಾಂತಿ ರಾತ್ರಿ ಬೆಳಗಾಗುವುದರೊಳಗೆ ಆಗುವುದು ಅಸಾಧ್ಯ. ಈ ಪೋಸ್ಟ್ ಟ್ರೂತ್ ಕಾಲದಲ್ಲಂತೂ ಬದಲಾವಣೆಗೆ ಹೆಚ್ಚಿನ ಶ್ರಮವಂತೂ ಅಗತ್ಯ ಎನ್ನುತ್ತಾರೆ ಪ್ರಜ್ಞಾವಂತರು.

(ಮಾಹಿತಿ ಕೃಪೆ: ಸ್ಮಿತಾ ಕೆ.ಎಸ್., ದಿ ಕ್ವಿಂಟ್‌‌)


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...