Homeಮುಖಪುಟಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಮಾನತೆಯ ಹರಿಕಾರ ಪೆರಿಯಾರ್‌ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಆಚರಿಸಿದೆ. ಆದರೆ ತಮಿಳುನಾಡು ನಿಜಕ್ಕೂ ಸಾಮಾಜಿಕ ನ್ಯಾಯವನ್ನು ಸಾಧಿಸಿದೆಯೇ?

- Advertisement -
- Advertisement -

ಸಮಾನತೆಯ ಹರಿಕಾರ, ದ್ರಾವಿಡ ಚಳವಳಿಯ ನೇತಾರ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಘೋಷಿಸಿದೆ. ಅದರಂತೆ ಅವರ ಜನ್ಮದಿನವನ್ನು ಈ ಬಾರಿ ಆಚರಿಸಲಾಗಿದೆ.

ಎಂ.ಕೆ.ಸ್ಟಾಲಿನ್‌ ನಾಯಕತ್ವದಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಹಲವು ಸುಧಾರಣೆಗಳನ್ನು ತರುತ್ತಿರುವುದು ಆಶಾದಾಯ ಬೆಳೆವಣಿಗೆ. ಆದರೆ ತಮಿಳುನಾಡಿನಲ್ಲಿ ಬೇರು ಬಿಟ್ಟಿರುವ ಮೌಢ್ಯ, ಜಾತಿ ವ್ಯವಸ್ಥೆ, ಲಿಂಗ ತಾರತಮ್ಯ ಮೊದಲಾದ ಸಾಮಾಜಿಕ ಸಂಗತಿಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಸಾಮಾಜಿಕ ನ್ಯಾಯದಿನದ ಹಿನ್ನೆಲೆಯಲ್ಲಿ ‘ದಿ ಕ್ವಿಂಟ್’ ಸುದ್ದಿ ಜಾಲತಾಣದಲ್ಲಿ ಪ್ರಕಟವಾಗಿರುವ ಸ್ಮಿತಾ ಟಿ.ಕೆ. ಅವರ ಲೇಖನವು, ತಮಿಳುನಾಡು ಎದುರಿಸುತ್ತಿರುವ ಸಾಮಾಜಿಕ ಅಸಮಾನತೆಗಳತ್ತ ಬೊಟ್ಟು ಮಾಡಿದೆ.

ಇದನ್ನೂ ಓದಿ: ಹೋರಾಟಗಾರರ ಮೇಲೆ ದಾಖಲಾಗಿದ್ದ 5,570 ಪ್ರಕರಣ ಹಿಂಪಡೆದ ತಮಿಳುನಾಡು ಸರ್ಕಾರ

ಜಾತಿ ಪ್ರೇರಿತ ಕೊಲೆಗಳ ಕುರಿತು ಕೆಲಸ ಮಾಡುತ್ತಿರುವ ಕಾತಿರ್ ಆಫ್ ಎವಿಡೆನ್ಸ್ ಸಂಘಟನೆಯ ಪ್ರಕಾರ, 2013ರಿಂದ 2017ರ ಅವಧಿಯಲ್ಲಿ ಒಟ್ಟು 187 ಮರ್ಯಾದೆ ಹೆಸರಲ್ಲಿ ಹತ್ಯೆಗಳು ನಡೆದಿವೆ. ಅದರಲ್ಲಿ ಸಾವಿಗೀಡಾದವರು ಶೇ. 80 ಮಂದಿ ಮಹಿಳೆಯರಾಗಿದ್ದಾರೆ. ಇದು ಅಧಿಕೃತವಾಗಿ ದಾಖಲಾಗಿರುವ ವರದಿಯಷ್ಟೇ. ಬಹುತೇಕ ಕೊಲೆಗಳು ಆತ್ಮಹತ್ಯೆ ಎಂದೋ, ಸಹಜ ಸಾವೆಂದೋ ವರದಿಯಾಗುತ್ತಿವೆ ಎನ್ನಲಾಗಿದೆ.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್ಸಿಆರ್ಬಿ) ನೀಡಿದ 2020ರ ವರದಿಯ ಪ್ರಕಾರ ತಮಿಳುನಾಡಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. 2019ರಲ್ಲಿ 15.6ರಷ್ಟಿದ್ದ ಈ ಪ್ರಮಾಣ 2020ರಲ್ಲಿ 17.4ರಷ್ಟಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ 2019ರಲ್ಲಿ 4,139 ಇದ್ದದ್ದು, 2020ರಲ್ಲಿ 4,338ರಷ್ಟಾಗಿದೆ.

“ಶೇ. 50ರಷ್ಟು ಮಹಿಳಾ ಪ್ರಾತಿನಿಧ್ಯ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಇರಬೇಕೆಂದು ಪೆರಿಯಾರ್ ಪ್ರತಿಪಾದಿಸಿದ್ದರು. ಮಹಿಳೆಯರನ್ನು ಅಡುಗೆ ಮನೆಯಿಂದ ಹೊರತಂದು ಸ್ವಾತಂತ್ರ್ಯ ನೀಡಬೇಕು ಎನ್ನುತ್ತಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಡಿಎಂಕೆ ನೇತೃತ್ವದ ಈಗಿನ ಸರ್ಕಾರದಲ್ಲಿನ 33 ಸಚಿವರಲ್ಲಿ ಇಬ್ಬರು ಮಾತ್ರ ಮಹಿಳೆಯರಿದ್ದಾರೆ” ಎಂದು ಸ್ಮಿತಾ ಉಲ್ಲೇಖಿಸಿದ್ದಾರೆ.

ಜಾತಿ ನಿರ್ಮೂಲನೆ ಮಾಡಬೇಕೆಂದು ಸರ್ಕಾರವೇನೋ ಹೆಜ್ಜೆ ಇರಿಸಿದೆ. ಆದರೆ ತಮಿಳುನಾಡಿನ ಜಾತಿ ವ್ಯವಸ್ಥೆ ಆತಂಕಕಾರಿಯಾದದ್ದು. ಎನ್‌‌ಸಿಆರ್‌ಬಿ ವರದಿಯ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗಗಳ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. 2019ರಲ್ಲಿ 1,144 ಪ್ರಕರಣಗಳಿದ್ದವು, 2020ರಲ್ಲಿ 1,274 ಪ್ರಕರಣಗಳು ವರದಿಯಾಗಿವೆ.

ವಣ್ಣಿಯಾರ್ಸ್ ಮೇಲ್ವರ್ಗಕ್ಕೆ ಸೇರಿದ 20 ಜನರ ಗುಂಪು ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ದಲಿತ ಯುವಕರನ್ನು ಕೊಂದಿರುವ ಘಟನೆ ಕಳೆದ ಅಂಬೇಡ್ಕರ್ ಜಯಂತಿಯಂದು ನಡೆದುಹೋಯಿತು. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿರ್ಮೂಲನೆಗೆ ಸರಿಯಾದ ಕ್ರಮ ಜರುಗಿಸದ ಕಾರಣ ಕಳೆದ ಒಂದು ದಶಕದಲ್ಲಿ ಅತಿ ಹೆಚ್ಚು ಸಫಾಯಿಗಳು ತಮಿಳುನಾಡಿನಲ್ಲೇ ಸಾವನ್ನಪ್ಪಿದ್ದಾರೆ ಎನ್ನುತ್ತದೆ ವರದಿ.

1993ರಿಂದ 2019ರವರೆಗೆ ದೇಶದ 18 ರಾಜ್ಯಗಳಲ್ಲಿ ಎಷ್ಟು ಸಫಾಯಿಗಳು ಸಾವನ್ನಪ್ಪಿದ್ದಾರೆಂದು ಸರ್ಕಾರ ಸಮೀಕ್ಷೆ ನಡೆಸಿದಾಗ 206 ಮಂದಿ ಸಫಾಯಿಗಳು ತಮಿಳುನಾಡಿನಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ಮೊದಲನೇ ಸ್ಥಾನದಲ್ಲಿದೆ ಎನ್ನಲಾಗಿದೆ.

ಜನಪರ ಕೆಲಸಗಳನ್ನು ಮಾಡುತ್ತಿರುವ ತಮಿಳುನಾಡು ಸರ್ಕಾರ, ಇಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಬೇಕು. ಪೆರಿಯಾರ್ ಥರದ ಮಹನೀಯರು ನೆಡೆದಾಡಿದ ನೆಲದಲ್ಲಿ ಮೌಢ್ಯಗಳು ತೊಗಲಬೇಕು. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸಮಾನ ಅವಕಾಶ ದೊರಕುವಂತಾಗಬೇಕು. ಡಿಎಂಕೆ, ಎಐಡಿಎಂಕೆ ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಥವಾ ವಿರೋಧ ಪಕ್ಷ ಸ್ಥಾನದಲ್ಲಿರಲಿ ರಾಜ್ಯವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಎಲ್ಲರಿಗೂ ಇರುತ್ತದೆ. ಹೀಗಾಗಿ ಇಲ್ಲಿನ ಬಹುತೇಕ ಅಂಕಿ-ಅಂಶಗಳು ಎಐಎಡಿಎಂ ಅವಧಿಗೆ ಸಂಬಂಧಿಸಿವೆ ಎಂದು ಸುಮ್ಮನಾಗಲು ಸಾಧ್ಯವಿಲ್ಲ.

ಈಗ ಅಧಿಕಾರ ಹಿಡಿದಿರುವ ಡಿಎಂಕೆ ಹೊಸ ಭರವಸೆಗಳನ್ನು ಹುಟ್ಟು ಹಾಕಿದೆ. ಜನಪ್ರಿಯ ಕಾರ್ಯಕ್ರಮಗಳ ಮೂಲಕ ಸದ್ಯಕ್ಕೆ ಜನಮಾನಸಕ್ಕೆ ಲಗ್ಗೆ ಇಡುತ್ತಿರುವ ಸ್ಟಾಲಿನ್, ತಮಿಳುನಾಡನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬೇಕಾದ ಎಲ್ಲ ಕ್ರಮಗಳನ್ನು ತಮ್ಮ ಕೈಲಾದ ಮಟ್ಟಿಗೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕ್ರಾಂತಿ ರಾತ್ರಿ ಬೆಳಗಾಗುವುದರೊಳಗೆ ಆಗುವುದು ಅಸಾಧ್ಯ. ಈ ಪೋಸ್ಟ್ ಟ್ರೂತ್ ಕಾಲದಲ್ಲಂತೂ ಬದಲಾವಣೆಗೆ ಹೆಚ್ಚಿನ ಶ್ರಮವಂತೂ ಅಗತ್ಯ ಎನ್ನುತ್ತಾರೆ ಪ್ರಜ್ಞಾವಂತರು.

(ಮಾಹಿತಿ ಕೃಪೆ: ಸ್ಮಿತಾ ಕೆ.ಎಸ್., ದಿ ಕ್ವಿಂಟ್‌‌)


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...