Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....