Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...