Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...