Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...