Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...