Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...