Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...