Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...