Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...