Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...